Homeಮುಖಪುಟರಾಯಚೂರಿನಲ್ಲಿ ಮೊದಲ ಏಕವ್ಯಕ್ತಿ ರಂಗಪ್ರಯೋಗ: ರೋಹಿತ್ ವೇಮುಲಾ ಬದುಕನ್ನಾಧರಿಸಿದ 'ನಕ್ಷತ್ರದ ಧೂಳು' ನಾಳೆ ಪ್ರದರ್ಶನ

ರಾಯಚೂರಿನಲ್ಲಿ ಮೊದಲ ಏಕವ್ಯಕ್ತಿ ರಂಗಪ್ರಯೋಗ: ರೋಹಿತ್ ವೇಮುಲಾ ಬದುಕನ್ನಾಧರಿಸಿದ ‘ನಕ್ಷತ್ರದ ಧೂಳು’ ನಾಳೆ ಪ್ರದರ್ಶನ

“ಆಕ್ಟಿವಿಸಂ, ಈ ಗ್ರಹದ ಮೇಲೆ ವಾಸಿಸಲು ನಾನು ಕೊಡುವ ಬಾಡಿಗೆ” ಎಂಬ ಆಲಿಸ್ ವಾಕರ್‌ರವರ ನುಡಿಗಳನ್ನು ರೋಹಿತ್ ತನ್ನ ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದರು.

- Advertisement -
- Advertisement -

“ನಾನು ವಿಜ್ಞಾನದ ಬರಹಗಾರ ಆಗಬೇಕೆಂದುಕೊಂಡಿದ್ದೆ, ವಿಜ್ಞಾನ ಲೇಖಕ ಕಾರ್ಲ್ ಸಗಾನನ ಹಾಗೆ. ಆದರೆ ಕೊನೆಗೆ, ಇದೊಂದು ಪತ್ರವನ್ನಷ್ಟೇ ಬರೆಯಲು ನನ್ನಿಂದಾದದ್ದು”… ಕ್ಯಾಂಪಸ್‌ಗಳಲ್ಲಿನ ಜಾತಿವಾದಿ ಮನಸ್ಥಿತಿ ವಿರೋಧಿಸಿ ಆತ್ಮಹತ್ಯೆ ಪತ್ರ ಬರೆದು ಜನವರಿ 16, 2016ರಂದು ಅಂದರೆ ಐದು ವರ್ಷಗಳ ಹಿಂದೆ ನಮ್ಮನ್ನಗಲಿದ ವಿದ್ಯಾರ್ಥಿ ಹೋರಾಟದ ಧೃವತಾರೆ ರೋಹಿತ್ ವೇಮುಲಾ ಬದುಕನ್ನಾಧರಿಸಿದ ‘ನಕ್ಷತ್ರದ ಧೂಳು’ ನಾಟಕ ಮತ್ತೆ ಪ್ರದರ್ಶನಕ್ಕೆ ಅಣಿಯಾಗಿದೆ.

ಸಾಮಾಜಿಕ ಕಾರ್ಯಕರ್ತರಾದ ಹರ್ಷಕುಮಾರ್ ಕುಗ್ವೆಯವರು ರಚಿಸಿರುವ ‘ನಕ್ಷತ್ರದ ಧೂಳು’ ಮಾರ್ಚ್ 27 ರ ಸಂಜೆ 6:30ಕ್ಕೆ ರಾಯಚೂರಿನ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದೆ. ಇದು ಜಿಲ್ಲೆಯಲ್ಲಿನ ಮೊದಲ ಏಕವ್ಯಕ್ತಿ ರಂಗಪ್ರಯೋಗವಾಗಿದ್ದು ರಂಗಕಲಾವಿದ ಮತ್ತು ಸಾಮಾಜಿಕ ಹೋರಾಟಗಾರ ಲಕ್ಷ್ಮಣ್ ಮಂಡಲಗೇರ ಪ್ರಸ್ತುತಿಪಡಿಸಲಿದ್ದು, ಪ್ರವೀಣ್ ರೆಡ್ಡಿ ಗುಂಜಹಳ್ಳಿಯವರು ನಿರ್ದೇಶಿಸಿದ್ದಾರೆ. ‘ಸಮುದಾಯ ರಾಯಚೂರು’ ನಾಟಕ ಪ್ರದರ್ಶನ ಆಯೋಜಿಸುತ್ತಿದೆ.

 

ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಷಿಯೆಷನ್ ಸಂಘಟನೆ ಮೂಲಕ ರೋಹಿತ್ ವೇಮುಲಾ ಯಾರೆಂದು ಪ್ರಪಂಚಕ್ಕೆ ಗೊತ್ತಾಗುವ ಮೊದಲೇ ಆತ ಕಾಶ್ಮೀರದ ಪ್ರಜೆಗಳ ಮೇಲಿನ ಹಲ್ಲೆಯನ್ನು ವಿರೋಧಿಸಿದ್ದ.. “ಕೆಲವರಿಗೆ ಬದುಕೇ ಶಾಪ. ನನಗೆ, ನನ್ನ ಹುಟ್ಟೇ ಮಾರಣಾಂತಿಕ ಆಘಾತ” ಎಂದು ಬರೆದುಕೊಂಡಿದ್ದ ರೋಹಿತ್ ವೇಮುಲಾ ಜಾತಿಯನ್ನು ಕಿತ್ತುಹಾಕಲು ಬಯಸಿದ್ದ. ಏಕೆಂದರೆ ಹುಟ್ಟಿನಿಂದಲೇ ಅವನ್ನನ್ನು ತೀವ್ರವಾಗಿ ಅದು ಕಾಡಿತ್ತು. ಜಾತಿವಿರುದ್ಧ ದನಿಯೆತ್ತಿದಾಗ ಆತನೊಂದಿಗೆ ಇದ್ದದ್ದು ಸಾವಿತ್ರಿಬಾಯಿ ಫುಲೆ ಮತ್ತು ಬಾಬಾಸಾಹೇಬರ ಚಿತ್ರ ಮಾತ್ರ..

ಅಂದು ರೋಹಿತ್ ವೇಮುಲಾನನ್ನು ಜಾತಿ ತೀವ್ರವಾಗಿ ಕಾಡಿತ್ತು. ಆತ ಪಿಎಚ್‌ಡಿ ಮಾಡುತ್ತಿದ್ದಾಗ ಎಬಿವಿಪಿ ಗೂಂಡಾಗಳು ಕಾಡಿದರು. ಬ್ರಾಹ್ಮಣವಾದಿ ವಿವಿಯ ಆಡಳಿತ ಮಂಡಳಿ 7 ತಿಂಗಳು ಆತನಿಗೆ ಫೆಲೋಶಿಪ್ ತಡೆ ಹಿಡಿದಿದ್ದಲ್ಲದೇ ಆತನನ್ನು ಕಾಲೇಜು ಮತ್ತು ಹಾಸ್ಟೆಲ್‌ನಿಂದ ಹೊರಹಾಕಿತ್ತು. ಆತ ಆತ ಅಂಬೇಡ್ಕರ್, ಸಾವಿತ್ರಿ ಬಾಫುಲೆ ಫೋಟೊ ಹಿಡಿದು ಕ್ಯಾಂಪಸ್ಸಿನ ’ವೆಲಿವಾಡ’ದಲ್ಲಿ ಹೋರಾಟ ಆರಂಭಿಸಿದ್ದ. ಆಗ ಬಹುತೇಕರು ಆತನ ಬೆಂಬಲಕ್ಕೆ ನಿಲ್ಲಲಿಲ್ಲ. ಕಾರಣ ಏನೇ ಇರಬಹುದು ಆತ ಒಂಟಿಯಾದ. ಕೊನೆಗೂ ಪ್ರಭುತ್ವ ಆತನನ್ನು ಬಲಿ ತೆಗೆದುಕೊಂಡಿತು.

ತನ್ನ ಕ್ಯಾಂಪಸ್‌ನಲ್ಲಿನ ಡೆಮಾಕ್ರಸಿಯನ್ನಷ್ಟೇ ಬಯಸದ ರೋಹಿತ್ ಇಡೀ ಸಮಾಜದಲ್ಲಿ ಡೆಮಾಕ್ರಸಿಯನ್ನು ಹಂಬಲಿಸಿದ್ದರು. ಅದಕ್ಕಾಗಿಯೇ “ಆಕ್ಟಿವಿಸಂ, ಈ ಗ್ರಹದ ಮೇಲೆ ವಾಸಿಸಲು ನಾನು ಕೊಡುವ ಬಾಡಿಗೆ” ಎಂಬ ಆಲಿಸ್ ವಾಕರ್‌ರವರ ನುಡಿಗಳನ್ನು ತನ್ನ ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದರು. ಸಫ್ದಾರ್ ಹಶ್ಮಿ ಅವರು 1989 ರ ಜನವರಿ 2 ರಂದು ನಾಟಕವನ್ನು ಪ್ರದರ್ಶಿಸುತ್ತಿದ್ದಾಗಲೇ ಅಸಷ್ಣುತೆಯ ಪ್ರತಿಪಾದಕರಿಂದ ಕೊಲ್ಲಲ್ಪಟ್ಟರು. ಈ ಕುರಿತು “ಅಸಹಿಷ್ಣುತೆಯ ಕೋರೆಹಲ್ಲುಗಳಿಗೆ ನಾವು ಸುಂದರ ಕಲಾವಿದ ಮತ್ತು ಧೈರ್ಯಶಾಲಿ ಆತ್ಮವನ್ನು ಕಳೆದುಕೊಂಡಿದ್ದೇವೆ” ಎಂದು ಬರೆದುಕೊಂಡಿದ್ದ ರೋಹಿತ್‌ನನ್ನು ನಾವೀಗ ಕಳೆದುಕೊಂಡಿದ್ದೇವೆ.

ರೋಹಿತ್ ವೇಮುಲಾ ದೈಹಿಕವಾಗಿ ನಮ್ಮಿಂದ ದೂರವಾಗಿದ್ದರೂ ಆತನ ಚೈತನ್ಯವನ್ನು ನಾವು ಉಸಿರಾಡುತ್ತಿದ್ದೇವೆ. ಹಾಗಾಗಿಯೇ ಇಂದು ಅವರ ನಕ್ಷತ್ರದ ಧೂಳು ನಾಟಕ ಮತ್ತೆ ಸದ್ದು ಮಾಡುತ್ತಿದೆ. ಆತನ ವಿಚಾರಗಳೇನು? ಆತನ ಬದುಕಿನ ಗುರಿಯೇನು? ಆತ ವಿಜ್ಞಾನವನ್ನು ಅಷ್ಟರ ಮಟ್ಟಿಗೆ ಹಚ್ಚಿಕೊಂಡಿತ್ತಾದರೂ ಹೇಗೆ? ಈ ಕುರಿತು ತಿಳಿಯಲು ನೀವು ಸಹ ಈ ನಾಟಕ ನೋಡಿ. ರಾಯಚೂರು ಜಿಲ್ಲೆಯ ಪ್ರದರ್ಶನದ ನಂತರ ನಿಮ್ಮ ಜಿಲ್ಲೆ-ತಾಲ್ಲೂಕುಗಳಲ್ಲಿ ನಾಟಕ ಆಯೋಜಿಸಲು ಕಲಾವಿದರಾದ ಲಕ್ಷ್ಮಣ್ ಮಂಡಲಗೇರರವನ್ನು (8762718341) ಸಂಪರ್ಕಿಸಿ.


ಇದನ್ನೂ ಓದಿ: ‘ರೋಹಿತ್ ವೇಮುಲ ಇಂದು ಬದುಕಿದ್ದರೆ……’ : ಅಗಲಿದ ಯುವಚೈತನ್ಯದ ಸ್ಮರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...