Homeಮುಖಪುಟರಾಯಚೂರಿನಲ್ಲಿ ಮೊದಲ ಏಕವ್ಯಕ್ತಿ ರಂಗಪ್ರಯೋಗ: ರೋಹಿತ್ ವೇಮುಲಾ ಬದುಕನ್ನಾಧರಿಸಿದ 'ನಕ್ಷತ್ರದ ಧೂಳು' ನಾಳೆ ಪ್ರದರ್ಶನ

ರಾಯಚೂರಿನಲ್ಲಿ ಮೊದಲ ಏಕವ್ಯಕ್ತಿ ರಂಗಪ್ರಯೋಗ: ರೋಹಿತ್ ವೇಮುಲಾ ಬದುಕನ್ನಾಧರಿಸಿದ ‘ನಕ್ಷತ್ರದ ಧೂಳು’ ನಾಳೆ ಪ್ರದರ್ಶನ

“ಆಕ್ಟಿವಿಸಂ, ಈ ಗ್ರಹದ ಮೇಲೆ ವಾಸಿಸಲು ನಾನು ಕೊಡುವ ಬಾಡಿಗೆ” ಎಂಬ ಆಲಿಸ್ ವಾಕರ್‌ರವರ ನುಡಿಗಳನ್ನು ರೋಹಿತ್ ತನ್ನ ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದರು.

- Advertisement -
- Advertisement -

“ನಾನು ವಿಜ್ಞಾನದ ಬರಹಗಾರ ಆಗಬೇಕೆಂದುಕೊಂಡಿದ್ದೆ, ವಿಜ್ಞಾನ ಲೇಖಕ ಕಾರ್ಲ್ ಸಗಾನನ ಹಾಗೆ. ಆದರೆ ಕೊನೆಗೆ, ಇದೊಂದು ಪತ್ರವನ್ನಷ್ಟೇ ಬರೆಯಲು ನನ್ನಿಂದಾದದ್ದು”… ಕ್ಯಾಂಪಸ್‌ಗಳಲ್ಲಿನ ಜಾತಿವಾದಿ ಮನಸ್ಥಿತಿ ವಿರೋಧಿಸಿ ಆತ್ಮಹತ್ಯೆ ಪತ್ರ ಬರೆದು ಜನವರಿ 16, 2016ರಂದು ಅಂದರೆ ಐದು ವರ್ಷಗಳ ಹಿಂದೆ ನಮ್ಮನ್ನಗಲಿದ ವಿದ್ಯಾರ್ಥಿ ಹೋರಾಟದ ಧೃವತಾರೆ ರೋಹಿತ್ ವೇಮುಲಾ ಬದುಕನ್ನಾಧರಿಸಿದ ‘ನಕ್ಷತ್ರದ ಧೂಳು’ ನಾಟಕ ಮತ್ತೆ ಪ್ರದರ್ಶನಕ್ಕೆ ಅಣಿಯಾಗಿದೆ.

ಸಾಮಾಜಿಕ ಕಾರ್ಯಕರ್ತರಾದ ಹರ್ಷಕುಮಾರ್ ಕುಗ್ವೆಯವರು ರಚಿಸಿರುವ ‘ನಕ್ಷತ್ರದ ಧೂಳು’ ಮಾರ್ಚ್ 27 ರ ಸಂಜೆ 6:30ಕ್ಕೆ ರಾಯಚೂರಿನ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿದೆ. ಇದು ಜಿಲ್ಲೆಯಲ್ಲಿನ ಮೊದಲ ಏಕವ್ಯಕ್ತಿ ರಂಗಪ್ರಯೋಗವಾಗಿದ್ದು ರಂಗಕಲಾವಿದ ಮತ್ತು ಸಾಮಾಜಿಕ ಹೋರಾಟಗಾರ ಲಕ್ಷ್ಮಣ್ ಮಂಡಲಗೇರ ಪ್ರಸ್ತುತಿಪಡಿಸಲಿದ್ದು, ಪ್ರವೀಣ್ ರೆಡ್ಡಿ ಗುಂಜಹಳ್ಳಿಯವರು ನಿರ್ದೇಶಿಸಿದ್ದಾರೆ. ‘ಸಮುದಾಯ ರಾಯಚೂರು’ ನಾಟಕ ಪ್ರದರ್ಶನ ಆಯೋಜಿಸುತ್ತಿದೆ.

 

ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಷಿಯೆಷನ್ ಸಂಘಟನೆ ಮೂಲಕ ರೋಹಿತ್ ವೇಮುಲಾ ಯಾರೆಂದು ಪ್ರಪಂಚಕ್ಕೆ ಗೊತ್ತಾಗುವ ಮೊದಲೇ ಆತ ಕಾಶ್ಮೀರದ ಪ್ರಜೆಗಳ ಮೇಲಿನ ಹಲ್ಲೆಯನ್ನು ವಿರೋಧಿಸಿದ್ದ.. “ಕೆಲವರಿಗೆ ಬದುಕೇ ಶಾಪ. ನನಗೆ, ನನ್ನ ಹುಟ್ಟೇ ಮಾರಣಾಂತಿಕ ಆಘಾತ” ಎಂದು ಬರೆದುಕೊಂಡಿದ್ದ ರೋಹಿತ್ ವೇಮುಲಾ ಜಾತಿಯನ್ನು ಕಿತ್ತುಹಾಕಲು ಬಯಸಿದ್ದ. ಏಕೆಂದರೆ ಹುಟ್ಟಿನಿಂದಲೇ ಅವನ್ನನ್ನು ತೀವ್ರವಾಗಿ ಅದು ಕಾಡಿತ್ತು. ಜಾತಿವಿರುದ್ಧ ದನಿಯೆತ್ತಿದಾಗ ಆತನೊಂದಿಗೆ ಇದ್ದದ್ದು ಸಾವಿತ್ರಿಬಾಯಿ ಫುಲೆ ಮತ್ತು ಬಾಬಾಸಾಹೇಬರ ಚಿತ್ರ ಮಾತ್ರ..

ಅಂದು ರೋಹಿತ್ ವೇಮುಲಾನನ್ನು ಜಾತಿ ತೀವ್ರವಾಗಿ ಕಾಡಿತ್ತು. ಆತ ಪಿಎಚ್‌ಡಿ ಮಾಡುತ್ತಿದ್ದಾಗ ಎಬಿವಿಪಿ ಗೂಂಡಾಗಳು ಕಾಡಿದರು. ಬ್ರಾಹ್ಮಣವಾದಿ ವಿವಿಯ ಆಡಳಿತ ಮಂಡಳಿ 7 ತಿಂಗಳು ಆತನಿಗೆ ಫೆಲೋಶಿಪ್ ತಡೆ ಹಿಡಿದಿದ್ದಲ್ಲದೇ ಆತನನ್ನು ಕಾಲೇಜು ಮತ್ತು ಹಾಸ್ಟೆಲ್‌ನಿಂದ ಹೊರಹಾಕಿತ್ತು. ಆತ ಆತ ಅಂಬೇಡ್ಕರ್, ಸಾವಿತ್ರಿ ಬಾಫುಲೆ ಫೋಟೊ ಹಿಡಿದು ಕ್ಯಾಂಪಸ್ಸಿನ ’ವೆಲಿವಾಡ’ದಲ್ಲಿ ಹೋರಾಟ ಆರಂಭಿಸಿದ್ದ. ಆಗ ಬಹುತೇಕರು ಆತನ ಬೆಂಬಲಕ್ಕೆ ನಿಲ್ಲಲಿಲ್ಲ. ಕಾರಣ ಏನೇ ಇರಬಹುದು ಆತ ಒಂಟಿಯಾದ. ಕೊನೆಗೂ ಪ್ರಭುತ್ವ ಆತನನ್ನು ಬಲಿ ತೆಗೆದುಕೊಂಡಿತು.

ತನ್ನ ಕ್ಯಾಂಪಸ್‌ನಲ್ಲಿನ ಡೆಮಾಕ್ರಸಿಯನ್ನಷ್ಟೇ ಬಯಸದ ರೋಹಿತ್ ಇಡೀ ಸಮಾಜದಲ್ಲಿ ಡೆಮಾಕ್ರಸಿಯನ್ನು ಹಂಬಲಿಸಿದ್ದರು. ಅದಕ್ಕಾಗಿಯೇ “ಆಕ್ಟಿವಿಸಂ, ಈ ಗ್ರಹದ ಮೇಲೆ ವಾಸಿಸಲು ನಾನು ಕೊಡುವ ಬಾಡಿಗೆ” ಎಂಬ ಆಲಿಸ್ ವಾಕರ್‌ರವರ ನುಡಿಗಳನ್ನು ತನ್ನ ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದರು. ಸಫ್ದಾರ್ ಹಶ್ಮಿ ಅವರು 1989 ರ ಜನವರಿ 2 ರಂದು ನಾಟಕವನ್ನು ಪ್ರದರ್ಶಿಸುತ್ತಿದ್ದಾಗಲೇ ಅಸಷ್ಣುತೆಯ ಪ್ರತಿಪಾದಕರಿಂದ ಕೊಲ್ಲಲ್ಪಟ್ಟರು. ಈ ಕುರಿತು “ಅಸಹಿಷ್ಣುತೆಯ ಕೋರೆಹಲ್ಲುಗಳಿಗೆ ನಾವು ಸುಂದರ ಕಲಾವಿದ ಮತ್ತು ಧೈರ್ಯಶಾಲಿ ಆತ್ಮವನ್ನು ಕಳೆದುಕೊಂಡಿದ್ದೇವೆ” ಎಂದು ಬರೆದುಕೊಂಡಿದ್ದ ರೋಹಿತ್‌ನನ್ನು ನಾವೀಗ ಕಳೆದುಕೊಂಡಿದ್ದೇವೆ.

ರೋಹಿತ್ ವೇಮುಲಾ ದೈಹಿಕವಾಗಿ ನಮ್ಮಿಂದ ದೂರವಾಗಿದ್ದರೂ ಆತನ ಚೈತನ್ಯವನ್ನು ನಾವು ಉಸಿರಾಡುತ್ತಿದ್ದೇವೆ. ಹಾಗಾಗಿಯೇ ಇಂದು ಅವರ ನಕ್ಷತ್ರದ ಧೂಳು ನಾಟಕ ಮತ್ತೆ ಸದ್ದು ಮಾಡುತ್ತಿದೆ. ಆತನ ವಿಚಾರಗಳೇನು? ಆತನ ಬದುಕಿನ ಗುರಿಯೇನು? ಆತ ವಿಜ್ಞಾನವನ್ನು ಅಷ್ಟರ ಮಟ್ಟಿಗೆ ಹಚ್ಚಿಕೊಂಡಿತ್ತಾದರೂ ಹೇಗೆ? ಈ ಕುರಿತು ತಿಳಿಯಲು ನೀವು ಸಹ ಈ ನಾಟಕ ನೋಡಿ. ರಾಯಚೂರು ಜಿಲ್ಲೆಯ ಪ್ರದರ್ಶನದ ನಂತರ ನಿಮ್ಮ ಜಿಲ್ಲೆ-ತಾಲ್ಲೂಕುಗಳಲ್ಲಿ ನಾಟಕ ಆಯೋಜಿಸಲು ಕಲಾವಿದರಾದ ಲಕ್ಷ್ಮಣ್ ಮಂಡಲಗೇರರವನ್ನು (8762718341) ಸಂಪರ್ಕಿಸಿ.


ಇದನ್ನೂ ಓದಿ: ‘ರೋಹಿತ್ ವೇಮುಲ ಇಂದು ಬದುಕಿದ್ದರೆ……’ : ಅಗಲಿದ ಯುವಚೈತನ್ಯದ ಸ್ಮರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...