Homeಚಳವಳಿಭಾರತ್ ಬಂದ್: ಆಂಧ್ರಪ್ರದೇಶ, ಪಂಜಾಬ್ ಪೂರ್ಣ ಸ್ತಬ್ದ - ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ

ಭಾರತ್ ಬಂದ್: ಆಂಧ್ರಪ್ರದೇಶ, ಪಂಜಾಬ್ ಪೂರ್ಣ ಸ್ತಬ್ದ – ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಕಳೆದ ನಾಲ್ಕು ತಿಂಗಳುಗಳಿಂದ ಪ್ರತಿಭಟಿಸುತ್ತಿರುವ ರೈತರು ದೆಹಲಿಯ ಗಡಿಯಲ್ಲಿ ಹೋರಾಟವನ್ನು ತೀವ್ರಗೊಳಿಸಲು ಶುಕ್ರವಾರ (ಮಾರ್ಚ್ 26) ಸಂಪೂರ್ಣ ಭಾರತ್ ಬಂದ್ ನಡೆಸುತ್ತಿದ್ದಾರೆ.

ಬೆಳಗ್ಗೆ 6 ಗಂಟೆಗೆ ಆರಂಭವಾದ ಸಂಪೂರ್ಣ ಭಾರತ್ ಬಂದ್ ಕರೆಗೆ ದೇಶದ ಹಲವು ಭಾಗಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದೇಶಾದ್ಯಂತ ರೈತರು ಬಂದ್ ಭಾಗವಾಗಿ ಪ್ರತಿಭಟನೆಗೆ ಕರೆ ನೀಡಿದ್ದು, 12 ಗಂಟೆಗಳ ಕಾಲ ನಡೆಯಲಿರುವ ಬಂದ್ ಪರಿಣಾಮ ರೈಲು ಸಂಚಾರ ಅಸ್ತವ್ಯಸ್ಥವಾಗಿದೆ. ರಸ್ತೆ ಸಂಚಾರವನ್ನು ತಡೆ ಹಿಡಿಯಲಾಗಿದೆ.

ದೆಹಲಿಯಿಂದ ಚಂಡೀಗಢ, ಅಮೃತಸರ, ಕಲ್ಕಾಗೆ ಹೋಗುವ ಕೆಲವು ರೈಲುಗಳನ್ನು ಇಂದು ಬೆಳಿಗ್ಗೆಯೇ ರದ್ದುಪಡಿಸಲಾಗಿದೆ. ಹರಿಯಾಣ ರಾಜ್ಯದ ಅಂಬಾಲದ ಜಿಟಿ ರೋಡ್ ಮತ್ತು ಶಹಪುರ ರೈಲು ನಿಲ್ದಾಣದ ಹಳಿಗಳ ಮೇಲೆ ಕುಳಿತ ಪ್ರತಿಭಟನಾಕಾರರು ರೈಲುಗಳನ್ನು ತಡೆದಿದ್ದಾರೆ. ಅಮೃತಸರ ಸೇರಿದಂತೆ ಪಂಜಾಬ್‌ನ ಹಲವು ನಗರಗಳಲ್ಲಿ ರೈಲುಗಳ ಸಂಚಾರಕ್ಕೆ ತಡೆಯೊಡ್ಡಲಾಗಿದೆ.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ FIR: ಕೇಸು ರದ್ದು ಮಾಡಿ ಎಂದು ಕುಮಾರಸ್ವಾಮಿ

ದೆಹಲಿಯ ಗಾಜಿಪುರ ಮತ್ತು ಸಿಂಘು ಗಡಿಗಳಲ್ಲಿ ಹೋರಾಟ ನಡೆಸುತ್ತಿರುವ ರೈತರು ನೃತ್ಯ ಮಾಡುವ ಮೂಲಕ ವಿನೂತನ ಪ್ರತಿಭಟನೆ ಕೈಗೊಂಡಿದ್ದಾರೆ.

ಕೆಲವು ಭಾಗಗಳಲ್ಲಿ ರಸ್ತೆ ಸಂಚಾರಕ್ಕೂ ತೊಂದರೆಯಾಗಿದೆ. ರಾಷ್ಟ್ರ ರಾಜಧಾನಿ ಗಾಜಿಪುರ ಗಡಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ -9 ರಲ್ಲಿ ರಸ್ತೆ ತಡೆ ನಡೆದಿದೆ. ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ.

ಗುರುವಾರ ವಿಡಿಯೋ ಸಂದೇಶದಲ್ಲಿ ಮಾತನಾಡಿದ್ದ ರೈತ ಮುಖಂಡ ದರ್ಶನ್ ಪಾಲ್ “ಪ್ರತಿಭಟನಾ ನಿರತ ರೈತರು ತರಕಾರಿಗಳು ಮತ್ತು ಹಾಲಿನ ಸರಬರಾಜನ್ನು ನಿಲ್ಲಿಸುತ್ತಾರೆ. ಪ್ರತಿಭಟನಾ ನಿರತ ರೈತರು ಶಾಂತಿಯುತವಾಗಿರಬೇಕು ಮತ್ತು ಭಾರತ್ ಬಂದ್  ಸಮಯದಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಕೃತ್ಯ ಮತ್ತು ಸಂಘರ್ಷಗಳಲ್ಲಿ ಭಾಗಿಯಾಗದಂತೆ” ಮನವಿ ಮಾಡಿದರು.

“ರೈತರು ವಿವಿಧ ಸ್ಥಳಗಳಲ್ಲಿ ರೈಲು ಸಂಚಾರ ನಿರ್ಬಂಧಿಸುತ್ತಾರೆ. ಭಾರತ್ ಬಂದ್ ಸಮಯದಲ್ಲಿ ಮಾರುಕಟ್ಟೆಗಳು ಮತ್ತು ಸಾರಿಗೆ ಸೇವೆಗಳನ್ನು ನಿಲ್ಲಿಸಲಾಗುವುದು ಎಂದು ಹಿರಿಯ ರೈತ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ್ ತಿಳಿಸಿದ್ದರು.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾರತ್ ಬಂದ್ ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ. “ರೈತರ ಆಂದೋಲನ ದೇಶಹಿತವಾಗಿದ್ದು ಶಾಂತಿಪೂರ್ಣವಾಗಿರಲಿದೆ” ಎಂದಿದ್ದಾರೆ.

ಇದನ್ನೂ ಓದಿ: ದಶಕಗಳಿಂದ ದುಡಿದರೂ ಕನಿಷ್ಟ ಭದ್ರತೆಯಿಲ್ಲ: ಕೂಲಿ ನೇಕಾರ ಕಾರ್ಮಿಕರ ಗೋಳು ಕೇಳುವವರ್ಯಾರು?

Bharat Bandh: All the services come to standstill across Andhra Pradesh
PC:The Hans India

ರೈತರ ಕರೆಗೆ ಒಗ್ಗಟ್ಟು ಸೂಚಿಸಿರುವ ಆಂಧ್ರಪ್ರದೇಶದಲ್ಲಿ ಭಾರತ್ ಬಂದ್ ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದೆ. ಆಂಧ್ರಪ್ರದೇಶ ಸರ್ಕಾರ, ವೈಎಸ್‌ಆರ್‌ಸಿಪಿ, ಟಿಡಿಪಿ ಮತ್ತು ಎಡಪಕ್ಷಗಳು ಬಂದ್‌ಗೆ ಬೆಂಬಲ ನೀಡಿದ್ದು, ಎಲ್ಲಾ ಜಿಲ್ಲೆಗಳಲ್ಲಿನ ಆರ್‌ಟಿಸಿ ಬಸ್‌ಗಳು ಡಿಪೋಗಳಿಗೆ ಸೀಮಿತವಾಗಿವೆ ನಿಂತಿವೆ. ಕಾಯ್ದೆಗಳ ವಿರುದ್ಧ ಮತ್ತು ವೈಜಾಗ್ ಸ್ಟೀಲ್ ಪ್ಲಾಂಟ್ ಖಾಸಗೀಕರಣ ವಿರೋಧಿಸಿ ಕೇಂದ್ರದ ವಿರುದ್ಧ ಎಡ ಪಕ್ಷಗಳ ಸದಸ್ಯರು ಇಂದು ಮಡಿಲಪಲಂ ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಭಾರತ ಬಂದ್ ಬೆಂಬಲಿಸಿ ರಾಜ್ಯದಲ್ಲಿಯೂ ಮೂರು ಕಾಯ್ದೆಗಳ ಶವಯಾತ್ರೆಗೆ ಕರೆ ನೀಡಲಾಗಿತ್ತು. ಭಾರತ್ ಬಂದ್ ಬೆಂಬಲಿಸಿ ಬೆಂಗಳೂರಿನಲ್ಲಿ ಮೂರು ಕೃಷಿ ಕಾಯ್ದೆಗಳ ಶವಯಾತ್ರೆ ಮಾಡಲು ಟೌನ್ ಹಾಲ್ ಮುಂದೆ ಸಜ್ಜಾಗಿದ್ದ ಜನಶಕ್ತಿ ಯುವ ಹೋರಾಟಗಾರರಾದ ರವಿ ಮೋಹನ್, ಗಜೇಂದ್ರ, ರಾಜಶೇಖರ ಅಂಗಡಿ ಇವರನ್ನು ಪೊಲೀಸರು ಬಂಧಿಸಿದ್ದಾರೆ.

ನಂತರ ರೈತ ನಾಯಕಿ ಕವಿತ ಕುರುಗಂಟಿ ಸೇರಿದಂತೆ ಕರ್ನಾಟಕ ರಾಜ್ಯ ರೈತ ಸಂಘ, ಸ್ವರಾಜ್ ಇಂಡಿಯಾ ಮತ್ತು  ಕನ್ನಡಪರ ಸಂಘಟನೆಗಳ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಬೆಕು, ಎಂಎಸ್‌ಪಿ ಮತ್ತು ಬೆಳೆ ಸಂಗ್ರಹಣೆ ಕುರಿತು ಕಾನೂನು ಮಾಡಬೇಕು, ರೈತರ ವಿರುದ್ಧದ ಎಲ್ಲಾ ಪೊಲೀಸ್ ಪ್ರಕರಣಗಳನ್ನು ರದ್ದುಗೊಳಿಸಬೇಕು, ವಿದ್ಯುತ್ ಬಿಲ್ ಮತ್ತು ಮಾಲಿನ್ಯ ಮಸೂದೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಡೀಸೆಲ್, ಪೆಟ್ರೋಲ್ ಮತ್ತು ಅನಿಲದ ಬೆಲೆಯನ್ನು ಕಡಿಮೆ ಮಾಡಬೇಕು ಎನ್ನುವ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಭಾರತ್ ಬಂದ್ ಹಮ್ಮಿಕೊಳ್ಳಲಾಗಿದೆ ಎಂದು ರೈತ ಒಕ್ಕೂಟ ಹೇಳಿದೆ.


ಇದನ್ನೂ ಓದಿ: ‘ಭಾರತೀಯ ಸೇನೆಯಲ್ಲಿ ಲಿಂಗ ತಾರತಮ್ಯ’ – ಸರಿಪಡಿಸಲು ಸುಪ್ರೀಂ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....