Homeಮುಖಪುಟಪಿಎಂ ವಸತಿ ಯೋಜನೆ: 2.6 ಲಕ್ಷ ಫೇಕ್ ಅಕೌಂಟ್, 14 ಸಾವಿರ ಕೋಟಿ ರೂ ಗುಳುಂ!

ಪಿಎಂ ವಸತಿ ಯೋಜನೆ: 2.6 ಲಕ್ಷ ಫೇಕ್ ಅಕೌಂಟ್, 14 ಸಾವಿರ ಕೋಟಿ ರೂ ಗುಳುಂ!

ಪ್ರಧಾನ್‌ಮಂತ್ರಿ ಆವಾಸ್ ಯೋಜನಾ ಹಲವು ಕುಖ್ಯಾತ ಕಳ್ಳರ ಪಾಲಿಗೆ ಹುಲ್ಲುಗಾವಲು ಆಗಿತ್ತು ಎಂಬುದಕ್ಕೆ ಈಗ ಬೆಳಕಿಗೆ ಬಂದಿರುವ 14 ಸಾವಿರ ಕೋಟಿ ರೂ ಹಗರಣವೇ ಸಾಕ್ಷಿಯಾಗಿದೆ.

- Advertisement -
- Advertisement -

ಇತ್ತೀಚೆಗೆ ಫೆಬ್ರುವರಿ 25ರಂದು ‘ಆತ್ಮನಿರ್ಭರ್ ಬಂಗಾಳ’ ಹೆಸರಿನಲ್ಲಿ ಪ್ರಕಟವಾದ ಜಾಹಿರಾತಿನಲ್ಲಿ ಪ್ರಧಾನಿ ಚಿತ್ರದೊಂದಿಗೆ ಕಾಣಿಸಿಕೊಂಡಿದ್ದ ಬಂಗಾಳದ ಮಹಿಳೆ ಲಕ್ಷ್ಮಿದೇವಿ ಎಂಬುವವರು, ‘ಪಿಎಂ ವಸತಿ ಯೋಜನೆಯಿಂದಾಗಿ ತಲೆ ಮೇಲೊಂದು ಸೂರು ಸಿಕ್ಕಿತು’ ಎಂದು ಹೇಳಿದ್ದರು. ಆದರೆ ವಾಸ್ತವವಾಗಿ ಅವರು ಇರುವುದು ಒಂದು ಸಾದಾ ಬಾಡಿಗೆ ಮನೆಯಲ್ಲಿ!
ಪ್ರಧಾನ್‌ಮಂತ್ರಿ ಆವಾಸ್ ಯೋಜನಾ ಹಲವು ಕುಖ್ಯಾತ ಕಳ್ಳರ ಪಾಲಿಗೆ ಹುಲ್ಲುಗಾವಲು ಆಗಿತ್ತು ಎಂಬುದಕ್ಕೆ ಈಗ ಬೆಳಕಿಗೆ ಬಂದಿರುವ 14 ಸಾವಿರ ಕೋಟಿ ರೂ ಹಗರಣವೇ ಸಾಕ್ಷಿಯಾಗಿದೆ.

ಪ್ರಧಾನ್ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ)ಗೆ ಸಂಬಂಧಿಸಿದ ಹಗರಣವನ್ನು ಸಿಬಿಐ ಬುಧವಾರ ಪತ್ತೆ ಹಚ್ಚಿದೆ. ಈಗಾಗಲೇ ಬಿಕ್ಕಟ್ಟಿನಲ್ಲಿರುವ ದಿವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (ಡಿಎಚ್‌ಎಫ್‌ಎಲ್) ನ ಪ್ರವರ್ತಕರು ಈ ಹಗರಣದ ಸೃಷ್ಟಿಕರ್ತರು ಮತ್ತು ಫಲಾನುಭವಿಗಳು ಎಂಬ ಸತ್ಯ ಹೊರಬಿದ್ದಿದೆ.

ವಂಚನೆ ಮತ್ತು ಹಣದ ಪ್ರಕರಣದಲ್ಲಿ ಜೈಲಿನಲ್ಲಿರುವ ಸಹೋದರರಾದ ಕಪಿಲ್ ಮತ್ತು ಧೀರಜ್ ವಾಧ್ವಾನ್ ವಸತಿ ಯೋಜನೆಯಲ್ಲಿ ’14 ಸಾವಿರ ಕೋಟಿ’ ನುಂಗಿದ ಫಲಾನುಭವಿಗಳಾಗಿದ್ದಾರೆ.

ಸಿಬಿಐ ಪ್ರಕಾರ, ಕಪಿಲ್ ಮತ್ತು ಧೀರಜ್ ವಾಧ್ವಾನ್ “ನಕಲಿ ಮತ್ತು ಕಾಲ್ಪನಿಕ” ಗೃಹ ಸಾಲ ಖಾತೆಗಳನ್ನು ಸೃಷ್ಟಿಸಿ ಭಾರತ ಸರ್ಕಾರದಿಂದ 1,880 ಕೋಟಿ ಬಡ್ಡಿ ಸಹಾಯಧನವನ್ನು ಪಡೆದಿದ್ದಾರೆ.

ಎಲ್ಲರಿಗೂ ವಸತಿ ಖಾತ್ರಿಪಡಿಸುವ ಕೇಂದ್ರ ಯೋಜನೆ ಪಿಎಂಎವೈ ಅನ್ನು ಅಕ್ಟೋಬರ್ 2015 ರಲ್ಲಿ ಘೋಷಿಸಲಾಯಿತು. ಯೋಜನೆಯಡಿಯಲ್ಲಿ ಆರ್ಥಿಕ ದುರ್ಬಲ ವಿಭಾಗಗಳ (ಇಡಬ್ಲ್ಯೂಎಸ್) ಮತ್ತು ಕಡಿಮೆ ಮತ್ತು ಮಧ್ಯಮ ಆದಾಯದ ಗುಂಪುಗಳಿಗೆ ನೀಡಲಾಗುವ ವಸತಿ ಸಾಲಗಳು ಕ್ರೆಡಿಟ್-ಸಂಬಂಧಿತ ಬಡ್ಡಿ ಸಹಾಯಧನಕ್ಕೆ ಅರ್ಹವಾಗಿವೆ.

ಈ ಸಾಲಗಳನ್ನು ಮಂಜೂರು ಮಾಡಿದ ಡಿಎಚ್‌ಎಫ್‌ಎಲ್‌ನಂತಹ ಹಣಕಾಸು ಸಂಸ್ಥೆಗಳಿಂದ ಸಬ್ಸಿಡಿಯನ್ನು ಪಡೆಯಬೇಕು. ಸಿಬಿಐ ಪ್ರಕಾರ, 2018 ರ ಡಿಸೆಂಬರ್‌ನಲ್ಲಿ ಡಿಎಚ್‌ಎಫ್‌ಎಲ್ ಹೂಡಿಕೆದಾರರಿಗೆ ಪಿಎಂಎವೈ ಅಡಿಯಲ್ಲಿ 88,651 ಸಾಲಗಳನ್ನು ಪ್ರಕ್ರಿಯೆಗೊಳಿಸಿದೆ ಮತ್ತು 539.4 ಕೋಟಿ ರೂ. ಸಬ್ಸಿಡಿಗಳನ್ನು ಪಡೆದುಕೊಂಡಿದೆ ಮತ್ತು ಇನ್ನೂ 1,347.8 ಕೋಟಿ ರೂ ಬಾಕಿ ಇದೆ ಎಂದು ಹೇಳಿಕೊಂಡಿದೆ.

2007-19ರ ನಡುವೆ ಡಿಎಚ್‌ಎಫ್‌ಎಲ್‌ನ ಕಪಿಲ್ ಮತ್ತು ಧೀರಜ್ ವಾಧ್ವಾನ್ ಅವರು ಮುಂಬೈನ ಅಸ್ತಿತ್ವದಲ್ಲೇ ಇಲ್ಲದ ಬಾಂದ್ರಾ ಶಾಖೆಯಲ್ಲಿ 2.6 ಲಕ್ಷ ನಕಲಿ ವಸತಿ ಸಾಲ ಖಾತೆಗಳನ್ನು ತೆರೆದಿದ್ದಾರೆ.

2007 ಮತ್ತು 2019 ರ ನಡುವೆ ಈ ಖಾತೆಗಳಿಗೆ 14,046 ಕೋಟಿ ಮೊತ್ತದ ವಸತಿ ಸಾಲಗಳನ್ನು ಈ ಖಾತೆಗಳಿಗೆ ಮಂಜೂರು ಮಾಡಲಾಗಿದೆ ಎಂದು ತೋರಿಸಲಾಗಿದೆ. ಅದರಲ್ಲಿ 11,755.79 ರೂ.ಗಳನ್ನು ಅನ್ನು ಇತರ ಕಾಲ್ಪನಿಕ ಸಂಸ್ಥೆಗಳಿಗೆ ರವಾನಿಸಲಾಗಿದೆ. ಈ ಮೊತ್ತವನ್ನು ಪಿಎಂ ವಸತಿ ಯೋಜನೆಯಲ್ಲಿ ನೀಡಲಾದ ಸಾಲಗಳು ಎಂದು ನಮೂದಿಸಿ, ಸಬ್ಸಿಡಿ ಹಣವನ್ನು ಗುಳುಂ ಮಾಡಲಾಗಿದೆ. ಈ ನಕಲಿ ಗೃಹಸಾಲ ವಿತರಣೆಗಾಗಿ ಈಗಾಗಲೇ ಡಿಎಚ್‌ಎಫ್‌ಎಲ್ 539.40 ಕೋಟಿ ರೂ ಬಡ್ಡಿ ಸಬ್ಸಿಡಿ ಪಡೆದುಕೊಂಡಿದೆ. ಇನ್ನೂ 1,347.80 ಕೋಟಿ ರೂ ಸಬ್ಸಿಡಿಗಾಗಿ ಕಾದು ಕೂತಿದೆ. ಒಟ್ಟು 1,887.20 ಕೋಟಿ ರೂ. ಸಬ್ಸಿಡಿ ಹಣ ಅದಕ್ಕೆ ದಕ್ಕಲಿದೆ. ಎಲ್ಲವೂ ಭಾರತ ಸರ್ಕಾರದ ಕೃಪೆ ಎಂಬ ಆರೋಪ ಕೇಳಿಬಂದಿದೆ.

ಇದಕ್ಕಾಗಿ ವಾಧ್ವಾನ್ ಸಹೋದರರು ಸರ್ಕಾರದ ನ್ಯಾಷನಲ್ ಹೌಸಿಂಗ್ ಬ್ಯಾಂಕ್‌ನ ಕೆಲವರೊಂದಿಗೆ ಶಾಮೀಲಾಗಿ ಈ ಕೃತ್ಯ ಎಸಗಿದ್ದಾರೆ. ಡಿಎಚ್‌ಎಫ್‌ಎಲ್‌ನಂತಹ ಕಂಪನಿಗಳು ವಸತಿ ಸಾಲ ನೀಡುತ್ತವೆ. ಸರ್ಕಾರದ ಸಬ್ಸಿಡಿ ಹಣವು ಅವುಗಳಿಗೆ ಪಾವತಿಯಾಗುತ್ತದೆ. ಆದರೆ ಫೇಕ್ ಅಕೌಂಟುಗಳನ್ನು ತೆರೆದ ಡಿಎಚ್‌ಎಫ್‌ಎಲ್ ತೆರಿಗೆದಾರರ ಹಣವನ್ನು ಸಬ್ಸಿಡಿ ರೂಪದಲ್ಲಿ ನುಂಗಿ ಕುಳಿತಿದೆ. ಹೀಗಾಗಿ ಕೊಲ್ಕೊತ್ತದ ಲಕ್ಷ್ಮಿದೇವಿಯಂತಹವರಿಗೆ ಮನೆ ಎಂಬುದು ಮರೀಚಿಕೆಯಾಗಿಯೇ ಉಳಿಯುತ್ತದೆ.

ಪಕ್ಕಾ ವಂಚಕರು!

ಕಳೆದ ವರ್ಷ ಜೂನ್‌ನಲ್ಲಿ ಸಿಬಿಐ ವಾಧ್ವಾನ್ ಸಹೋದರರು ಮತ್ತು ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿತ್ತು, ಕಪೂರ್ ಅವರ ಕುಟುಂಬವು ಡಿಎಚ್‌ಎಫ್‌ಎಲ್‌ನಲ್ಲಿ ಹೂಡಿಕೆ ಮಾಡಿದ್ದಕ್ಕಾಗಿ ಕಿಕ್‌ಬ್ಯಾಕ್ ಪಡೆದಿದೆ ಎಂದು ಚಾರ್ಜ್‌ಶೀಟ್ ನಲ್ಲಿ ಆರೋಪಿಸಲಾಗಿತ್ತು.

ಆ ಹಗರಣದಲ್ಲಿ 2018 ರ ಏಪ್ರಿಲ್ ಮತ್ತು ಜೂನ್ ನಡುವೆ ಯೆಸ್ ಬ್ಯಾಂಕ್ 3,700 ಕೋಟಿ ರೂ, ಸಾರ್ವಜನಿಕ ಹಣವನ್ನು ಡಿಎಚ್‌ಎಫ್‌ಎಲ್‌ನ ಅಲ್ಪಾವಧಿಯ ಡಿಬೆಂಚರ್‌ಗಳಲ್ಲಿ ಹೂಡಿಕೆ ಮಾಡಿತು. ಇದಕ್ಕೆ ಪ್ರತಿಯಾಗಿ, ವಾಧ್ವಾನ್‌ಗಳು ಕಪೂರ್ ಅವರ ಪತ್ನಿ ಮತ್ತು ಹೆಣ್ಣುಮಕ್ಕಳಿಂದ ನಿಯಂತ್ರಿಸಲ್ಪಡುವ ಸಂಸ್ಥೆಗೆ ಸಾಲ ರೂಪದಲ್ಲಿ 600 ಕೋಟಿ ರೂ. ಕಿಕ್ ಬ್ಯಾಕ್ ಪಾವತಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ವಾಧ್ವಾನ್ ಸಹೋದರರನ್ನು ಬಂಧಿಸಲಾಗಿತ್ತು. ಕಪೂರ್ ಅವರನ್ನು ಮಾರ್ಚ್‌ನಲ್ಲಿ ಬಂಧಿಸಲಾಯಿತು.


ಇದನ್ನೂ ಓದಿ: ಬಿಜೆಪಿಯ ಜಾಹೀರಾತಿನಲ್ಲಿ ಸಿಕ್ಕ ಮನೆ ಪತ್ರಿಕೆಗೆ ಮಾತ್ರ ಸೀಮಿತ- ವಾಸ್ತವದಲ್ಲಿ ಬಾಡಿಗೆ ಮನೆಯಲ್ಲಿರುವ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....