Homeಮುಖಪುಟಪಿಎಂ ವಸತಿ ಯೋಜನೆ: 2.6 ಲಕ್ಷ ಫೇಕ್ ಅಕೌಂಟ್, 14 ಸಾವಿರ ಕೋಟಿ ರೂ ಗುಳುಂ!

ಪಿಎಂ ವಸತಿ ಯೋಜನೆ: 2.6 ಲಕ್ಷ ಫೇಕ್ ಅಕೌಂಟ್, 14 ಸಾವಿರ ಕೋಟಿ ರೂ ಗುಳುಂ!

ಪ್ರಧಾನ್‌ಮಂತ್ರಿ ಆವಾಸ್ ಯೋಜನಾ ಹಲವು ಕುಖ್ಯಾತ ಕಳ್ಳರ ಪಾಲಿಗೆ ಹುಲ್ಲುಗಾವಲು ಆಗಿತ್ತು ಎಂಬುದಕ್ಕೆ ಈಗ ಬೆಳಕಿಗೆ ಬಂದಿರುವ 14 ಸಾವಿರ ಕೋಟಿ ರೂ ಹಗರಣವೇ ಸಾಕ್ಷಿಯಾಗಿದೆ.

- Advertisement -
- Advertisement -

ಇತ್ತೀಚೆಗೆ ಫೆಬ್ರುವರಿ 25ರಂದು ‘ಆತ್ಮನಿರ್ಭರ್ ಬಂಗಾಳ’ ಹೆಸರಿನಲ್ಲಿ ಪ್ರಕಟವಾದ ಜಾಹಿರಾತಿನಲ್ಲಿ ಪ್ರಧಾನಿ ಚಿತ್ರದೊಂದಿಗೆ ಕಾಣಿಸಿಕೊಂಡಿದ್ದ ಬಂಗಾಳದ ಮಹಿಳೆ ಲಕ್ಷ್ಮಿದೇವಿ ಎಂಬುವವರು, ‘ಪಿಎಂ ವಸತಿ ಯೋಜನೆಯಿಂದಾಗಿ ತಲೆ ಮೇಲೊಂದು ಸೂರು ಸಿಕ್ಕಿತು’ ಎಂದು ಹೇಳಿದ್ದರು. ಆದರೆ ವಾಸ್ತವವಾಗಿ ಅವರು ಇರುವುದು ಒಂದು ಸಾದಾ ಬಾಡಿಗೆ ಮನೆಯಲ್ಲಿ!
ಪ್ರಧಾನ್‌ಮಂತ್ರಿ ಆವಾಸ್ ಯೋಜನಾ ಹಲವು ಕುಖ್ಯಾತ ಕಳ್ಳರ ಪಾಲಿಗೆ ಹುಲ್ಲುಗಾವಲು ಆಗಿತ್ತು ಎಂಬುದಕ್ಕೆ ಈಗ ಬೆಳಕಿಗೆ ಬಂದಿರುವ 14 ಸಾವಿರ ಕೋಟಿ ರೂ ಹಗರಣವೇ ಸಾಕ್ಷಿಯಾಗಿದೆ.

ಪ್ರಧಾನ್ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ)ಗೆ ಸಂಬಂಧಿಸಿದ ಹಗರಣವನ್ನು ಸಿಬಿಐ ಬುಧವಾರ ಪತ್ತೆ ಹಚ್ಚಿದೆ. ಈಗಾಗಲೇ ಬಿಕ್ಕಟ್ಟಿನಲ್ಲಿರುವ ದಿವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (ಡಿಎಚ್‌ಎಫ್‌ಎಲ್) ನ ಪ್ರವರ್ತಕರು ಈ ಹಗರಣದ ಸೃಷ್ಟಿಕರ್ತರು ಮತ್ತು ಫಲಾನುಭವಿಗಳು ಎಂಬ ಸತ್ಯ ಹೊರಬಿದ್ದಿದೆ.

ವಂಚನೆ ಮತ್ತು ಹಣದ ಪ್ರಕರಣದಲ್ಲಿ ಜೈಲಿನಲ್ಲಿರುವ ಸಹೋದರರಾದ ಕಪಿಲ್ ಮತ್ತು ಧೀರಜ್ ವಾಧ್ವಾನ್ ವಸತಿ ಯೋಜನೆಯಲ್ಲಿ ’14 ಸಾವಿರ ಕೋಟಿ’ ನುಂಗಿದ ಫಲಾನುಭವಿಗಳಾಗಿದ್ದಾರೆ.

ಸಿಬಿಐ ಪ್ರಕಾರ, ಕಪಿಲ್ ಮತ್ತು ಧೀರಜ್ ವಾಧ್ವಾನ್ “ನಕಲಿ ಮತ್ತು ಕಾಲ್ಪನಿಕ” ಗೃಹ ಸಾಲ ಖಾತೆಗಳನ್ನು ಸೃಷ್ಟಿಸಿ ಭಾರತ ಸರ್ಕಾರದಿಂದ 1,880 ಕೋಟಿ ಬಡ್ಡಿ ಸಹಾಯಧನವನ್ನು ಪಡೆದಿದ್ದಾರೆ.

ಎಲ್ಲರಿಗೂ ವಸತಿ ಖಾತ್ರಿಪಡಿಸುವ ಕೇಂದ್ರ ಯೋಜನೆ ಪಿಎಂಎವೈ ಅನ್ನು ಅಕ್ಟೋಬರ್ 2015 ರಲ್ಲಿ ಘೋಷಿಸಲಾಯಿತು. ಯೋಜನೆಯಡಿಯಲ್ಲಿ ಆರ್ಥಿಕ ದುರ್ಬಲ ವಿಭಾಗಗಳ (ಇಡಬ್ಲ್ಯೂಎಸ್) ಮತ್ತು ಕಡಿಮೆ ಮತ್ತು ಮಧ್ಯಮ ಆದಾಯದ ಗುಂಪುಗಳಿಗೆ ನೀಡಲಾಗುವ ವಸತಿ ಸಾಲಗಳು ಕ್ರೆಡಿಟ್-ಸಂಬಂಧಿತ ಬಡ್ಡಿ ಸಹಾಯಧನಕ್ಕೆ ಅರ್ಹವಾಗಿವೆ.

ಈ ಸಾಲಗಳನ್ನು ಮಂಜೂರು ಮಾಡಿದ ಡಿಎಚ್‌ಎಫ್‌ಎಲ್‌ನಂತಹ ಹಣಕಾಸು ಸಂಸ್ಥೆಗಳಿಂದ ಸಬ್ಸಿಡಿಯನ್ನು ಪಡೆಯಬೇಕು. ಸಿಬಿಐ ಪ್ರಕಾರ, 2018 ರ ಡಿಸೆಂಬರ್‌ನಲ್ಲಿ ಡಿಎಚ್‌ಎಫ್‌ಎಲ್ ಹೂಡಿಕೆದಾರರಿಗೆ ಪಿಎಂಎವೈ ಅಡಿಯಲ್ಲಿ 88,651 ಸಾಲಗಳನ್ನು ಪ್ರಕ್ರಿಯೆಗೊಳಿಸಿದೆ ಮತ್ತು 539.4 ಕೋಟಿ ರೂ. ಸಬ್ಸಿಡಿಗಳನ್ನು ಪಡೆದುಕೊಂಡಿದೆ ಮತ್ತು ಇನ್ನೂ 1,347.8 ಕೋಟಿ ರೂ ಬಾಕಿ ಇದೆ ಎಂದು ಹೇಳಿಕೊಂಡಿದೆ.

2007-19ರ ನಡುವೆ ಡಿಎಚ್‌ಎಫ್‌ಎಲ್‌ನ ಕಪಿಲ್ ಮತ್ತು ಧೀರಜ್ ವಾಧ್ವಾನ್ ಅವರು ಮುಂಬೈನ ಅಸ್ತಿತ್ವದಲ್ಲೇ ಇಲ್ಲದ ಬಾಂದ್ರಾ ಶಾಖೆಯಲ್ಲಿ 2.6 ಲಕ್ಷ ನಕಲಿ ವಸತಿ ಸಾಲ ಖಾತೆಗಳನ್ನು ತೆರೆದಿದ್ದಾರೆ.

2007 ಮತ್ತು 2019 ರ ನಡುವೆ ಈ ಖಾತೆಗಳಿಗೆ 14,046 ಕೋಟಿ ಮೊತ್ತದ ವಸತಿ ಸಾಲಗಳನ್ನು ಈ ಖಾತೆಗಳಿಗೆ ಮಂಜೂರು ಮಾಡಲಾಗಿದೆ ಎಂದು ತೋರಿಸಲಾಗಿದೆ. ಅದರಲ್ಲಿ 11,755.79 ರೂ.ಗಳನ್ನು ಅನ್ನು ಇತರ ಕಾಲ್ಪನಿಕ ಸಂಸ್ಥೆಗಳಿಗೆ ರವಾನಿಸಲಾಗಿದೆ. ಈ ಮೊತ್ತವನ್ನು ಪಿಎಂ ವಸತಿ ಯೋಜನೆಯಲ್ಲಿ ನೀಡಲಾದ ಸಾಲಗಳು ಎಂದು ನಮೂದಿಸಿ, ಸಬ್ಸಿಡಿ ಹಣವನ್ನು ಗುಳುಂ ಮಾಡಲಾಗಿದೆ. ಈ ನಕಲಿ ಗೃಹಸಾಲ ವಿತರಣೆಗಾಗಿ ಈಗಾಗಲೇ ಡಿಎಚ್‌ಎಫ್‌ಎಲ್ 539.40 ಕೋಟಿ ರೂ ಬಡ್ಡಿ ಸಬ್ಸಿಡಿ ಪಡೆದುಕೊಂಡಿದೆ. ಇನ್ನೂ 1,347.80 ಕೋಟಿ ರೂ ಸಬ್ಸಿಡಿಗಾಗಿ ಕಾದು ಕೂತಿದೆ. ಒಟ್ಟು 1,887.20 ಕೋಟಿ ರೂ. ಸಬ್ಸಿಡಿ ಹಣ ಅದಕ್ಕೆ ದಕ್ಕಲಿದೆ. ಎಲ್ಲವೂ ಭಾರತ ಸರ್ಕಾರದ ಕೃಪೆ ಎಂಬ ಆರೋಪ ಕೇಳಿಬಂದಿದೆ.

ಇದಕ್ಕಾಗಿ ವಾಧ್ವಾನ್ ಸಹೋದರರು ಸರ್ಕಾರದ ನ್ಯಾಷನಲ್ ಹೌಸಿಂಗ್ ಬ್ಯಾಂಕ್‌ನ ಕೆಲವರೊಂದಿಗೆ ಶಾಮೀಲಾಗಿ ಈ ಕೃತ್ಯ ಎಸಗಿದ್ದಾರೆ. ಡಿಎಚ್‌ಎಫ್‌ಎಲ್‌ನಂತಹ ಕಂಪನಿಗಳು ವಸತಿ ಸಾಲ ನೀಡುತ್ತವೆ. ಸರ್ಕಾರದ ಸಬ್ಸಿಡಿ ಹಣವು ಅವುಗಳಿಗೆ ಪಾವತಿಯಾಗುತ್ತದೆ. ಆದರೆ ಫೇಕ್ ಅಕೌಂಟುಗಳನ್ನು ತೆರೆದ ಡಿಎಚ್‌ಎಫ್‌ಎಲ್ ತೆರಿಗೆದಾರರ ಹಣವನ್ನು ಸಬ್ಸಿಡಿ ರೂಪದಲ್ಲಿ ನುಂಗಿ ಕುಳಿತಿದೆ. ಹೀಗಾಗಿ ಕೊಲ್ಕೊತ್ತದ ಲಕ್ಷ್ಮಿದೇವಿಯಂತಹವರಿಗೆ ಮನೆ ಎಂಬುದು ಮರೀಚಿಕೆಯಾಗಿಯೇ ಉಳಿಯುತ್ತದೆ.

ಪಕ್ಕಾ ವಂಚಕರು!

ಕಳೆದ ವರ್ಷ ಜೂನ್‌ನಲ್ಲಿ ಸಿಬಿಐ ವಾಧ್ವಾನ್ ಸಹೋದರರು ಮತ್ತು ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿತ್ತು, ಕಪೂರ್ ಅವರ ಕುಟುಂಬವು ಡಿಎಚ್‌ಎಫ್‌ಎಲ್‌ನಲ್ಲಿ ಹೂಡಿಕೆ ಮಾಡಿದ್ದಕ್ಕಾಗಿ ಕಿಕ್‌ಬ್ಯಾಕ್ ಪಡೆದಿದೆ ಎಂದು ಚಾರ್ಜ್‌ಶೀಟ್ ನಲ್ಲಿ ಆರೋಪಿಸಲಾಗಿತ್ತು.

ಆ ಹಗರಣದಲ್ಲಿ 2018 ರ ಏಪ್ರಿಲ್ ಮತ್ತು ಜೂನ್ ನಡುವೆ ಯೆಸ್ ಬ್ಯಾಂಕ್ 3,700 ಕೋಟಿ ರೂ, ಸಾರ್ವಜನಿಕ ಹಣವನ್ನು ಡಿಎಚ್‌ಎಫ್‌ಎಲ್‌ನ ಅಲ್ಪಾವಧಿಯ ಡಿಬೆಂಚರ್‌ಗಳಲ್ಲಿ ಹೂಡಿಕೆ ಮಾಡಿತು. ಇದಕ್ಕೆ ಪ್ರತಿಯಾಗಿ, ವಾಧ್ವಾನ್‌ಗಳು ಕಪೂರ್ ಅವರ ಪತ್ನಿ ಮತ್ತು ಹೆಣ್ಣುಮಕ್ಕಳಿಂದ ನಿಯಂತ್ರಿಸಲ್ಪಡುವ ಸಂಸ್ಥೆಗೆ ಸಾಲ ರೂಪದಲ್ಲಿ 600 ಕೋಟಿ ರೂ. ಕಿಕ್ ಬ್ಯಾಕ್ ಪಾವತಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ವಾಧ್ವಾನ್ ಸಹೋದರರನ್ನು ಬಂಧಿಸಲಾಗಿತ್ತು. ಕಪೂರ್ ಅವರನ್ನು ಮಾರ್ಚ್‌ನಲ್ಲಿ ಬಂಧಿಸಲಾಯಿತು.


ಇದನ್ನೂ ಓದಿ: ಬಿಜೆಪಿಯ ಜಾಹೀರಾತಿನಲ್ಲಿ ಸಿಕ್ಕ ಮನೆ ಪತ್ರಿಕೆಗೆ ಮಾತ್ರ ಸೀಮಿತ- ವಾಸ್ತವದಲ್ಲಿ ಬಾಡಿಗೆ ಮನೆಯಲ್ಲಿರುವ ಮಹಿಳೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...