Homeಕರ್ನಾಟಕಕರ್ನಾಟಕದಲ್ಲಿ ಮುಂದುವರೆದ ಹೋರಾಟ: ಮಾ.‌ 31 ಕ್ಕೆ ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್

ಕರ್ನಾಟಕದಲ್ಲಿ ಮುಂದುವರೆದ ಹೋರಾಟ: ಮಾ.‌ 31 ಕ್ಕೆ ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ರದ್ದು ಮಾಡುವಂತೆ ರೈತರು ನಡೆಸುತ್ತಿರುವ ಹೋರಾಟವು ಐದನೆ ತಿಂಗಳಿಗೆ ಕಾಲಿಟ್ಟಿದೆ. ದೆಹಲಿಯನ್ನು ಕೇಂದ್ರವಾಗಿಟ್ಟುಕೊಂಡು ಅಲ್ಲಿನ ಹೆದ್ದಾರಿಗಳ ಗಡಿಯಲ್ಲಿ ರೈತರು ಮೂರು ತಿಂಗಳು ಹೋರಾಟ ನಡೆಸುತ್ತಿದ್ದರು. ಆದರೆ ಗಣರಾಜ್ಯೋತ್ಸವದಂದು ಕೇಂದ್ರ ಸರ್ಕಾರವು ಹೋರಾಟ ನಿರತ ರೈತರಿಗೆ ನೀಡಿದ ಕಿರುಕುಳದಿಂದಾಗಿ ಹೋರಾಟದ ಮಾದರಿಯನ್ನು ರೈತರು ಬದಲಾಯಿಸಿದ್ದರು.

ರೈತರು ದೆಹಲಿಯ ಗಡಿಗಳನ್ನು ಕೇಂದ್ರೀಕರಿಸುವುದನ್ನು ಬಿಟ್ಟು ದೇಶದ ಹಳ್ಳಿ- ಹಳ್ಳಿಗಳಲ್ಲಿ ರೈತ ಮಹಾಪಂಚಾಯತ್‌ಗಳನ್ನು ನಡೆಸಲು ತೀರ್ಮಾನಿಸಿದ್ದರು. ಅದರಂತೆ ಉತ್ತರ ಭಾರತದ ಪಂಜಾಬ್, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಉತ್ತರಖಂಡ್‌, ಪಶ್ಚಿಮ ಬಂಗಾಳ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಬೃಹತ್‌ ರೈತ ಮಹಾಪಂಚಾಯತ್‌ ನಡೆದಿತ್ತು. ಈ ರೈತ ಮಹಾಪಂಚಾಯತ್‌‌‌‌‌ ಭಾರಿ ಜನಬೆಂಬಲ ಪಡೆಯುತ್ತಿದೆ.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ ಶಿವಮೊಗ್ಗದಲ್ಲಿ FIR ದಾಖಲು

ಅದರಂತೆ ದಕ್ಷಿಣ ಭಾರತದಲ್ಲೂ ಮಾರ್ಚ್‌ 20 ರಂದು ದಕ್ಷಿಣ ಭಾರತದ ಮೊದಲ ರೈತ ಮಹಾಪಂಚಾಯತ್‌ ಶಿವಮೊಗ್ಗದಲ್ಲಿ ಯಶಸ್ವಿಯಾಗಿ ನಡೆದಿತ್ತು. ಇದೀಗ ಕರ್ನಾಟಕದಲ್ಲಿ ರೈತ ಮಹಾಪಂಚಾಯತ್‌‌‌‌ ಪರ್ವ ಮುಂದುವರೆದಿದೆ.

ಮಾರ್ಚ್ 31 ರಂದು ಮತ್ತೊಂದು ಸುತ್ತಿನ ರೈತ ಮಹಾಪಂಚಾಯತ್ ಬೆಳಗಾವಿಯಲ್ಲಿ ನಡೆಯಲಿದೆ. ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಸಂಯಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಈ ಮಹಾಪಂಚಾಯತ್‌ ಬೆಳಗಾವಿಯ ಸಿಪಿಎಡ್‌ ಮೈದಾನದಲ್ಲಿ ಬೆಳಿಗ್ಗೆ 11 ಕ್ಕೆ ಮಹಾ ಪಂಚಾಯತ್‌ ನಡೆಯಲಿದೆ. ಸಮಾವೇಶದಲ್ಲಿ ರಾಕೇಶ್ ಟಿಕಾಯತ್‌ ಮತ್ತು ಯುದ್ದವೀರ್‌ ಸಿಂಗ್, ಡಾ. ದರ್ಶನ್ ಪಾಲ್ ಭಾಗವಹಿಸಿ ಮಾತನಾಡಲಿದ್ದಾರೆ.

ಇದನ್ನೂ ಓದಿ: ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

ಶಿವಮೊಗ್ಗದಲ್ಲಿ ಮಹಾ ಪಂಚಾಯತ್ ನಡೆದ ಮರುದಿನ ಹಾವೇರಿಯಲ್ಲಿ ಹಾಗೂ ಮಾರ್ಚ್ 22 ರಂದು ಬೆಂಗಳೂರಿನಲ್ಲಿ ವಿಧಾನಸಭಾ ಚಲೋ ನಡೆದಿತ್ತು. ಈ ಮಹಾಪಂಚಾಯತ್‌ನಲ್ಲಿ ರೈತ ಮುಖಂಡರಾದ ರಾಕೇಶ್ ಟಿಕಾಯತ್‌, ದರ್ಶನ್ ಪಾಲ್, ಯುದ್‌‌ವೀರ್‌ ಸಿಂಗ್‌, ಚುಕ್ಕಿ ನಂಜುಂಡ ಸ್ವಾಮಿ, ಬಡಗಲಪುರ ನಾಗೇಂದ್ರ, ಕೋಡಿಹಳ್ಳಿ ಚಂದ್ರಶೇಖರ್‌ ಸೇರಿದಂತೆ ಹಲವರು ಭಾಗವಹಿಸಿದ್ದರು.

ಶಿವಮೊಗ್ಗ ಮಹಾಪಂಚಾಯತ್‌ನಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್‌ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಅವರ ಮೇಲೆ ಎಫ್‌ಐಆರ್‌ ಕೂಡಾ ದಾಖಲಾಗಿತ್ತು. ಇದನ್ನು ವಿರೋಧಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಎಫ್‌ಐಆರ್‌ ಅನ್ನು ರದ್ದು ಪಡಿಸುವಂತೆ ಸರ್ಕಾರ ಮೇಲೆ ಒತ್ತಡ ಹಾಕಿದ್ದರು.

ಇದನ್ನೂ ಓದಿ: ಮೋದಿ ಸರ್ಕಾರದ ಬಳಿ ಅಭಿವೃದ್ದಿಯ ಅಜೆಂಡಾವಿಲ್ಲ, ಕೋಮುವಾದ ಅಜೆಂಡಾ ಮಾತ್ರವಿದೆ: ಯುದುವೀರ್ ಸಿಂಗ್

ರೈತರಿಗೆ ಹೋರಾಟ ಮಾಡುವ ಹಕ್ಕಿಲ್ಲವೆ? ಸರ್ಕಾರ ಗೂಟಾ ಹೊಡ್ಕೊಂಡು ಇಲ್ಲೇ ಇರುತ್ತದೆಯೆ? – JDS ಶಾಸಕ ಮಂಜುನಾಥ್‌ ಆಕ್ರೋಶ| ವಿಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...