Homeಮುಖಪುಟಅಲ್ಪಸಂಖ್ಯಾತರ ಹಕ್ಕು ಕಸಿಯುವ ಕರ್ನಾಟಕ ಸೊಸೈಟಿ ತಿದ್ದುಪಡಿ ವಿಧೇಯಕ ಸೋಲಿಸಿ: PFI

ಅಲ್ಪಸಂಖ್ಯಾತರ ಹಕ್ಕು ಕಸಿಯುವ ಕರ್ನಾಟಕ ಸೊಸೈಟಿ ತಿದ್ದುಪಡಿ ವಿಧೇಯಕ ಸೋಲಿಸಿ: PFI

- Advertisement -
- Advertisement -

ವಿಧಾನಸಭೆಯಲ್ಲಿ ಅನುಮೋದನೆ ಪಡೆದುಕೊಂಡಿರುವ ಕರ್ನಾಟಕ ಸೊಸೈಟಿಗಳ ತಿದ್ದುಪಡಿ ವಿಧೇಯಕವು ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿಯುವ ಹುನ್ನಾರವಾಗಿದೆ. ಹಾಗಾಗಿ ತಿದ್ದುಪಡಿ ವಿಧೇಯಕವನ್ನು ಮೇಲ್ಮನೆಯಲ್ಲಿ ವಿಫಲಗೊಳಿಸಲು ಜಾತ್ಯತೀತ ಪಕ್ಷಗಳಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (PFI) ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಕರೆ ನೀಡಿದ್ದಾರೆ.

ವಿಧೇಯಕ ಕಾನೂನಾಗಿ ಜಾರಿಯಾದ ನಂತರ, ಕೆಲವೊಂದು ಸಬೂಬುಗಳನ್ನು ಮುಂದಿಟ್ಟುಕೊಂಡು ಸರಕಾರವು ಅಲ್ಪಸಂಖ್ಯಾತರ ಸಂಸ್ಥೆಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸುವ ಮೂಲಕ ಅಲ್ಪಸಂಖ್ಯಾತರ ಸಂಸ್ಥೆಗಳ ನಿಯಂತ್ರಣವನ್ನು ತನ್ನ ಸುಪರ್ದಿಗೆ ಪಡೆಯುವ ಹುನ್ನಾರ ನಡೆಸುತ್ತಿದೆ. ಸರಕಾರದಿಂದ ರಚಿಸಲಾದ ಸಂಸ್ಥೆಗಳಿಗೆ ಸರಕಾರವು ಆಡಳಿತಾಧಿಕಾರಿಯನ್ನು ನೇಮಿಸಲು ಯಾವುದೇ ತೊಡಕಿಲ್ಲ. ಆದರೆ ಸಹಕಾರಿ ಸಂಸ್ಥೆಗಳು ಸರಕಾರೇತರ ಸಂಸ್ಥೆಗಳಾಗಿದ್ದು, ಇವು ಸರಕಾರದಿಂದ ಯಾವುದೇ ಅನುದಾನ ಪಡೆಯುತ್ತಿಲ್ಲ. ಈ ನಿಟ್ಟಿನಲ್ಲಿ ಪ್ರಸಕ್ತ ತಿದ್ದುಪಡಿಯ ಮೂಲಕ ಅಲ್ಪಸಂಖ್ಯಾತರ ಸೊಸೈಟಿಗಳಲ್ಲಿ ಸರಕಾರ ಮಾಡುತ್ತಿರುವ ಹಸ್ತಕ್ಷೇಪವು ಸಂವಿಧಾನ ವಿರೋಧಿಯಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, “ಅಲ್ಪ ಸಂಖ್ಯಾತ ಸಂಸ್ಥೆಗಳಿಗೆ ಆಡಳಿತಾಧಿಕಾರಿಯನ್ನು ನೇಮಿಸುವ ಅವಕಾಶ ಸಂವಿಧಾನಬಾಹಿರ ಎಂದು ಕರ್ನಾಟಕ ಹೈಕೋರ್ಟ್ 1987ರಲ್ಲೇ ಆದೇಶ ನೀಡಿದೆ. ಆದರೂ ಬಿಜೆಪಿ ಸರಕಾರವು ಇದಕ್ಕೆ ಕಾನೂನಿನ ಮಾನ್ಯತೆ ನೀಡಲು ತಿದ್ದುಪಡಿಯನ್ನು ತಂದಿದೆ” ಎಂದು ಕಿಡಿಕಾರಿದ್ದಾರೆ.

ಅಲ್ಪಸಂಖ್ಯಾತರ ವಿರೋಧಿ ನಿಲುವು ಹೊಂದಿರುವ ಬಿಜೆಪಿ ಸರಕಾರವು ಅಲ್ಪಸಂಖ್ಯಾತರಿಗೆ ಸಂಬಂಧಿಸಿದ ಯೋಜನೆ, ಅನುದಾನಗಳನ್ನು ನಿರಂತರವಾಗಿ ಕಡಿತಗೊಳಿಸುತ್ತಾ ತಾರತಮ್ಯ ಎಸಗುತ್ತಿರುವುದು ಖಂಡನಾರ್ಹವಾಗಿದೆ. ಈ ಮಧ್ಯೆ ಸಿಡಿ ಪ್ರಕರಣದ ಗದ್ದಲದ ನಡುವೆ ಯಾವುದೇ ಚರ್ಚೆಗಳಿಲ್ಲದೆ ವಿಧೇಯಕಕ್ಕೆ ಅನುಮೋದನೆ ದೊರಕಿರುವುದು ವಿರೋಧ ಪಕ್ಷಗಳ ವೈಫಲ್ಯವನ್ನು ಬೊಟ್ಟು ಮಾಡುತ್ತದೆ. ಹಲವು ಸಮಯಗಳಿಂದ ಈ ವಿಚಾರ ಚರ್ಚೆಯಲ್ಲಿತ್ತಾದರೂ ಜಾತ್ಯತೀತ ಪಕ್ಷಗಳು ಇದಕ್ಕೆ ಮಹತ್ವ ನೀಡದಿರುವುದು ಅಲ್ಪಸಂಖ್ಯಾತರ ಪರವಾದ ಅವರ ನಿರ್ಲಕ್ಷ್ಯ ಭಾವವನ್ನು ಸ್ಟಷ್ಟಪಡಿಸುತ್ತದೆ ಎಂದು ಯಾಸಿರ್ ಹಸನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಾತ್ಯತೀತ ಪಕ್ಷಗಳ ಪ್ರಾಬಲ್ಯವಿದ್ದರೂ, ಬಿಜೆಪಿ ಸರಕಾರವು ಹಿಂಬಾಗಿಲ ಮೂಲಕ ಮೇಲ್ಮನೆಯಲ್ಲಿ ರೈತವಿರೋಧಿ, ಜನವಿರೋಧಿ ಗೋ ಹತ್ಯೆ ಮಸೂದೆ ಅಂಗೀಕರಿಸಲು ಇತ್ತೀಚಿಗೆ ಸಫಲವಾಗಿತ್ತು. ಆದರೆ ಈ ಬಾರಿ ಅಲ್ಪಸಂಖ್ಯಾತರ ಪರವಾದ ತಮ್ಮ ಬದ್ಧತೆಯನ್ನು ಖಾತರಿಪಡಿಸಲು ವಿಪಕ್ಷಗಳು ಒಗ್ಗಟ್ಟಾಗಿ ಈ ವಿಧೇಯಕವನ್ನು ವಿಫಲಗೊಳಿಸಬೇಕೆಂದು ಅವರು ಕರೆ ನೀಡಿದ್ದಾರೆ.


ಇದನ್ನೂ ಓದಿ: ಪಿಎಂ ವಸತಿ ಯೋಜನೆ: 2.6 ಲಕ್ಷ ಫೇಕ್ ಅಕೌಂಟ್, 14 ಸಾವಿರ ಕೋಟಿ ರೂ ಗುಳುಂ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...