Homeಮುಖಪುಟರೈತ ಚಳವಳಿಗೆ ಹೊಸ ಭರವಸೆ ನೀಡಿದ ಕರ್ನಾಟಕದ ರೈತ ಮಹಾಪಂಚಾಯತ್‌ಗಳು

ರೈತ ಚಳವಳಿಗೆ ಹೊಸ ಭರವಸೆ ನೀಡಿದ ಕರ್ನಾಟಕದ ರೈತ ಮಹಾಪಂಚಾಯತ್‌ಗಳು

- Advertisement -
- Advertisement -

ಪಂಜಾಬ್, ಹರಿಯಾಣದ ರೈತರು ತಮಗಾಗುತ್ತಿರುವ ಅನ್ಯಾಯದ ವಿರುದ್ಧ ಸಿಡಿದೆದ್ದಿದ್ದಾರೆ. ದೆಹಲಿಯನ್ನು ಸುತ್ತುವರೆದು ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದಾರೆ. ರಾಜಸ್ಥಾನ, ಉತ್ತರಪ್ರದೇಶ ಮತ್ತು ಉತ್ತರಖಂಡ್‌ನ ರೈತರು ಅವರಿಗೆ ಸಾಥ್ ನೀಡುತ್ತಿದ್ದಾರೆ. ಆದರೆ ದಕ್ಷಿಣ ಭಾರತದಲ್ಲಾಗಲಿ, ಕರ್ನಾಟಕದಲ್ಲಾಗಲಿ ರೈತರು ದೊಡ್ಡ ಮಟ್ಟದಲ್ಲಿ ಪ್ರತಿಭಟಿಸುತ್ತಿಲ್ಲ ಎಂಬ ಕೊರಗು ಪ್ರಶ್ನೆಯ ರೀತಿಯಲ್ಲಿ ಹಲವರಲ್ಲಿತ್ತು. ಮಾರ್ಚ್ 20,21,22 ರಂದು ನಡೆದ ಕರ್ನಾಟಕದ ಮೊದಲ ಮಹಾಪಂಚಾಯತ್‌ಗಳು ಮತ್ತು ಬೆಂಗಳೂರಿನ ವಿಧಾನಸೌಧ ಚಲೋ ಕಾರ್ಯಕ್ರಮ ಆ ಕೊರಗನ್ನು ನಿವಾರಿಸಿದೆ. ಮಾತ್ರವಲ್ಲದೇ ಈ ರೈತ ಮಹಾಪಂಚಾಯತ್‌ಗಳು ಕರ್ನಾಟಕದ ರೈತ ಚಳವಳಿಗೆ ಹೊಸ ಭರವಸೆ ನೀಡಿವೆ.

ಮಾರ್ಚ್ 20ರಂದು ಶಿವಮೊಗ್ಗದ ಸೈನ್ಸ್ ಕಾಲೇಜು ಮೈದಾನದಲ್ಲಿ ನಡೆದ ಕರ್ನಾಟಕದ ಮೊದಲ ರೈತ ಮಹಾಪಂಚಾಯತ್ ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾಯಿತು. ಶಿವಮೊಗ್ಗದಲ್ಲಿ 2003ರಲ್ಲಿ ನಡೆದ ಬಾಬಾಬುಡನ್ ಗಿರಿ ಹೋರಾಟದ 17 ವರ್ಷಗಳ ನಂತರದ ಬೃಹತ್ ಹೋರಾಟ ಇದಾಗಿತ್ತು. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿಯೇ ನೂರಾರು ಸಂಘಟನೆಗಳು ಒಂದುಗೂಡಿ, ಹತ್ತಾರು ಸಾವಿರ ಜನರು ಭಾಗಿಯಾಗಿ ಈ ಕೃಷಿ ಕಾಯ್ದೆಗಳನ್ನು ಹಿಂಪಡೆಯದಿದ್ದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಸಂದೇಶ ನೀಡಿದರು.

ಸಂಜೆ 4 ಗಂಟೆಗೆ ಆರಂಭವಾಗಬೇಕಿದ್ದ ಸಮಾವೇಶ, ಒಂದು ಗಂಟೆ ತಡವಾಗಿ 5 ಗಂಟೆಗೆ ಆರಂಭವಾದರೂ ಯಾರೂ ವಿಚಲಿತರಾಗಲಿಲ್ಲ. ಮೈಸೂರಿನ ಜನಾರ್ಧನ್ ಜೆನ್ನಿ ಮತ್ತು ಚಿಂತನ್ ವಿಕಾಸ್‌ರವರ ಹೋರಾಟದ ಹಾಡುಗಳು ಜನರನ್ನು ಆಕರ್ಷಿಸಿದವು. ದೆಹಲಿ ರೈತ ಹೋರಾಟದ ಮುಖಂಡರಾದ ಡಾ.ದರ್ಶನ್ ಪಾಲ್, ಯುದುವೀರ್ ಸಿಂಗ್, ರಾಕೇಶ್ ಟಿಕಾಯತ್ ಮತ್ತು ಕುಲಬೀರ್ ಸಿಂಗ್‌ರವರು ವೇದಿಕೆಯೇರಿದೊಡನೆ ರೈತರು ಹರ್ಷೋದ್ಘಾರ ಮುಗಿಲುಮುಟ್ಟಿತು. ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪ, ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಕೆ.ಟಿ ಗಂಗಾಧರ್, ಶಿವಮೊಗ್ಗ ಮಹಾ ಪಂಚಾಯತ್‌ನ ಸಂಚಾಲಕರಾದ ಎಂ ಶ್ರೀಕಾಂತ್, ’ಸೂಡ’ದ (ಶಿವಮೊಗ್ಗ ಅರ್ಬನ್ ಡೆವಲಪ್‌ಮೆಂಟ್ ಅಥಾರಿಟಿ) ಮಾಜಿ ಅಧ್ಯಕ್ಷರಾದ ಎನ್ ರಮೇಶ್, ಸ್ವರಾಜ್ ಇಂಡಿಯಾದ ವಕ್ತಾರರಾದ ಕೆ ಪಿ ಶ್ರೀಪಾಲ್, ದ.ಸ.ಸಂದ (ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕರಾದ ಟಿ ಹೆಚ್ ಹಾಲೇಶಪ್ಪ, ಮಹಾನಗರಪಾಲಿಕೆಯ ವಿರೋಧ ಪಕ್ಷದ ನಾಯಕರಾದ ಹೆಚ್. ಸಿ ಯೋಗೇಶ್, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್ ಅಶೋಕ್, ಮಧು ಬಂಗಾರಪ್ಪ ಸೇರಿದಂತೆ ಹಲವರು ಮಾತನಾಡಿದರು. ಪ್ರತಿಯೊಬ್ಬರ ಭಾಷಣವನ್ನು ಸಮಾಧಾನದಿಂದ ಆಲಿಸಿದ ರೈತರು ಮತ್ತು ಸಾಮಾನ್ಯ ಜನರು ಜೋರಾದ ಚಪ್ಪಾಳೆ, ಜೈಕಾರಗಳೊಂದಿಗೆ ಪ್ರತಿಕ್ರಿಯಿಸಿದರು. ಮಹಾಪಂಚಾಯತ್ ನಿರ್ಣಯ ಮಂಡಿಸುವುದು ರಾತ್ರಿ 8 ಗಂಟೆಯಾದರೂ ರೈತರ್‍ಯಾರು ತಮ್ಮ ಕುರ್ಚಿಗಳಿಂದ ಕದಲಿರಲಿಲ್ಲ. ಅಷ್ಟರಮಟ್ಟಿಗೆ ರೈತರು ಮತ್ತು ನೆರೆದಿದ್ದವರೆಲ್ಲಾ ಈ ಹೋರಾಟದಲ್ಲಿ ಮಿಳಿತಗೊಂಡಿದ್ದರು.

“ದೆಹಲಿ ರೈತ ಹೋರಾಟ ಮತ್ತು ನಂತರದ ಕಿಸಾನ್ ಮಹಾಪಂಚಾಯತ್‌ಗಳಿಂದ ಸ್ಫೂರ್ತಿ ಪಡೆದು, ಸಮಾಜವಾದಿ ಹೋರಾಟದ ನೆಲವೆಂಬ ಹೆಗ್ಗಳಿಕೆಯ ಶಿವಮೊಗ್ಗದಲ್ಲಿ ಕರ್ನಾಟಕದ ಮೊದಲ ರೈತ ಮಹಾಪಂಚಾಯತ್ ನಡೆಸಬೇಕೆಂದುಕೊಂಡಾಗಲೇ ಇದು ಯಶಸ್ವಿಯಾಗುತ್ತದೆ ಎಂಬ ಖಾತ್ರಿ ನಮಗಿತ್ತು. ಈ ಕುರಿತು ಕರೆದ ಪೂರ್ವಭಾವಿ ಸಭೆಗೆ 200ಕ್ಕೂ ಹೆಚ್ಚು ಮುಖಂಡರು ಭಾಗವಹಿಸಿ ಅಚ್ಚರಿ ಮೂಡಿಸಿದ್ದರು. ತದನಂತರ ಶಿವಮೊಗ್ಗದ 8 ಜನರ ತಂಡ ದೆಹಲಿ ಗಡಿಗಳಿಗೆ ಭೇಟಿ ನೀಡಿ ಅಲ್ಲಿನ ರೈತ ಮುಖಂಡರೊಂದಿಗೆ ಚರ್ಚಿಸಿ ಮಹಾಪಂಚಾಯತ್‌ಗಳಿಗೆ ಆಹ್ವಾನ ನೀಡಿದಾಗ ಅವರು ಭಾಗವಹಿಸಲು ಪ್ರೀತಿಯಿಂದಲೇ ಒಪ್ಪಿಕೊಂಡರು. 1980-90ರ ದಶಕದ ಕರ್ನಾಟಕದ ರೈತ ಚಳವಳಿಯ ನೇತಾರ ಪ್ರೊ.ನಂಜುಂಡಸ್ವಾಮಿ ಮತ್ತು ಉತ್ತರ ಪ್ರದೇಶದ ರೈತ ಮುಖಂಡ ಮಹೇಂದ್ರ ಸಿಂಗ್ ಟಿಕಾಯತ್‌ರವರ ಹೋರಾಟದ ಕಿಚ್ಚು ಹಾಗೂ ಅವರಿಬ್ಬರ ನಡುವಿನ ಗಳೆತನ ಅವರನ್ನು ಕರ್ನಾಟಕದೆಡೆಗೆ ತುಡಿಯವಂತೆ ಮಾಡಿದ್ದವು. ನಂತರ ಒಂದು ತಿಂಗಳ ಕಾಲ ಮಹಾಪಂಚಾಯತ್ ತಯಾರಿಯಲ್ಲಿ ಶಿವಮೊಗ್ಗದ ಎಲ್ಲಾ ಸಂಘಟನೆಗಳು ತಮ್ಮೊಳಗಿನ ಭಿನ್ನತೆ ಬದಿಗೊತ್ತಿ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ಕೆಲಸ ಮಾಡಿದ್ದೇ ದೊಡ್ಡ ಯಶಸ್ಸು ಪಡೆಯಲು ಕಾರಣ” ಎನ್ನುತ್ತಾರೆ ಸಂಘಟಕರಲ್ಲೊಬ್ಬರಾದ ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್ ಅಶೋಕ್.

“ನಾವು ರೈತರಿಗೆ, ದಲಿತರಿಗೆ, ಕಾರ್ಮಿಕರಿಗೆ, ರಸ್ತೆ ಬದಿ ವ್ಯಾಪರಿಗಳಿಗೆ, ಆಟೋ ಚಾಲಕರಿಗೆ, ಮಹಿಳಾ ಸಂಘಗಳಿಗೆ ಮಹಾಪಂಚಾಯತ್‌ನಲ್ಲಿ ಭಾಗವಹಿಸುವಂತೆ ಕರೆ ನೀಡಿದೆವು. ಶಿವಮೊಗ್ಗದ ಎಲ್ಲಾ ತಾಲ್ಲೂಕುಗಳಲ್ಲಿ ಪ್ರಚಾರ ಸಭೆ ನಡೆಸಿದೆವು. ಆದರೆ ಅಲ್ಲಿ ಸ್ಥಳೀಯ ರೈತ ಮುಖಂಡರಲ್ಲಿ ಈ ಕಾಯ್ದೆಗಳ ಬಗ್ಗೆ ಸಿಟ್ಟು ಎಷ್ಟಿತ್ತೆಂದರೆ ಅವರು ತಮ್ಮ ತಾಲ್ಲೂಕಿನ ಎಲ್ಲಾ ಗ್ರಾಮಗಳಿಗೆ ಹೋರಾಟದ ವಿಚಾರ ಒಯ್ದರು. ಹಾಗಾಗಿ ದೊಡ್ಡ ಸಂಖ್ಯೆಯಲ್ಲಿ ರೈತರು ಮತ್ತು ಜನಸಾಮಾನ್ಯರು ಹೋರಾಟಕ್ಕೆ ಅಣಿನೆರೆದರು ಮಾತ್ರವಲ್ಲ ಇಡೀ ರೈತ ಮಹಾಪಂಚಾಯತ್ ಮುಗಿಯುವವರೆಗೂ ತದೇಕಚಿತ್ತದಿಂದ ಭಾಗವಹಿಸಿದರು. ಮಹಾಪಂಚಾಯತ್ ನಂತರ ಎಲ್ಲಾ ರೈತ-ದಲಿತ-ಕಾರ್ಮಿಕ ಮುಖಂಡರಲ್ಲಿ ಹೊಸ ಹುಮ್ಮಸ್ಸು ಬಂದಿದೆ. ನಾವು ರೈತ ವಿಚಾರ ಇಟ್ಟುಕೊಂಡು ಗ್ರಾಮಗಳಿಗೆ ಹೋದರೆ ರೈತರು ಹೋರಾಟಕ್ಕೆ ಬರುತ್ತಾರೆ ಎಂಬುದನ್ನು ಈ ಅಭೂತಪೂರ್ವ ಪ್ರತಿಕ್ರಿಯೆಯಿಂದ ಸಾಬೀತಾಗಿದೆ” ಎನ್ನುತ್ತಾರೆ ಕೆ.ಎಲ್ ಅಶೋಕ್.

ಒಟ್ಟಾರೆಯಾಗಿ ದೆಹಲಿ ರೈತ ಹೋರಾಟದ ಸ್ಫೂರ್ತಿ ಮತ್ತು ಅದಕ್ಕೆ ಸ್ಪಂದಿಸಿ ಹೋರಾಟವನ್ನು ದಕ್ಷಿಣಭಾರತಕ್ಕೆ ಕರೆತಂದಿರುವ ಶಿವಮೊಗ್ಗ ರೈತ ಮಹಾಪಂಚಾಯತ್ ಜಿಲ್ಲೆಯಲ್ಲಿ ಹೊಸ ಸಂಚಲನ ಮೂಡಿಸಿದೆ. ಪ್ರತಿ ಸಂಘಟನೆಗಳು ಹೊಸ ಹುಮ್ಮಸ್ಸಿನಿಂದ ಮುಂದಿನ ಹೋರಾಟಕ್ಕೆ ಸಜ್ಜಾಗುತ್ತಿವೆ. ಈ ಒಗ್ಗಟ್ಟು ಕಾಪಾಡಿಕೊಂಡು ರೈತ ಚಳವಳಿ ವಿಸ್ತರಿಸುವುದು ಹೇಗೆ ಎಂದು ಎಲ್ಲಾ ಸಂಘಟನೆಗಳು ನಾಯಕರು ಆಲೋಚನೆಯಲ್ಲಿದ್ದಾರೆ. ಇದರ ಬೆನ್ನಿಗೆ ಹಾವೇರಿ ರೈತ ಮಹಾಪಂಚಾಯತ್ ನಡೆದಿದೆ. ಮಾರ್ಚ್ 30 ರಂದು ಬೆಳಗಾವಿಯಲ್ಲಿ ಮಹಾಪಂಚಾಯತ್ ನಡೆಸಲು ರೈತರು ತೀರ್ಮಾನಿಸಿದ್ದಾರೆ. ಹೋರಾಟದ ಕಿಡಿ ಎಲ್ಲೆಡೆ ಹರಡುತ್ತಿದೆ.

ಹಾವೇರಿ ರೈತ ಮಹಾಪಂಚಾಯತ್

2008ರಲ್ಲಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ 8 ದಿನಗಳಲ್ಲಿಯೆ ರಸಗೊಬ್ಬರಕ್ಕಾಗಿ ಪ್ರತಿಭಟಿಸಿದ ರೈತರ ಮೇಲೆ ಗೋಲಿಬಾರ್‌ಗೆ ಆದೇಶ ನೀಡಿತ್ತು. ಈ ಘಟನೆಯಲ್ಲಿ ಇಬ್ಬರನ್ನು ಕೊಂದು ಹಾಕಲಾಗಿತ್ತು. ಅಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯಡಿಯೂರಪ್ಪನವರೆ ಇಂದು ಸಹ ಮುಖ್ಯಮಂತ್ರಿಯಾಗಿದ್ದಾರೆ. ಆದರೆ ರೈತರು ಆ ಕರಾಳ ದಿನವನ್ನು ಮಾತ್ರ ಮರೆತಿಲ್ಲ. ಆ ಆಕ್ರೋಶ ಮಾರ್ಚ್ 21ರಂದು ಜರುಗಿದ ಹಾವೇರಿ ರೈತ ಮಹಾಪಂಚಾಯತ್‌ನಲ್ಲಿ ವ್ಯಕ್ತವಾಯಿತು.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಐಕ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ ಸಾವಿರಾರು ಜನ ಒಟ್ಟುಗೂಡಿ ಕರಾಳ ಕೃಷಿ ಕಾಯ್ದೆಗಳನ್ನು ಜಾರಿಮಾಡಿರುವ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಬೃಹತ್ ಮೆರವಣಿಗೆ ನಡೆಸಿ ಕೃಷಿ ಕಾಯ್ದೆಗಳ ವಿರುದ್ಧ ಘೋಷಣೆ ಕೂಗಲಾಯಿತು. ರೈತ ಮುಖಂಡರಾದ ರಾಮಣ್ಣ ಕೆಂಚಳ್ಳಿ, ಮಲ್ಲಿಕಾರ್ಜುನ್ ಬಳ್ಳಾರಿ, ಬಾಬಾಗೌಡ ಪಾಟೀಲ್, ಚುಕ್ಕಿ ನಂಜುಂಡಸ್ವಾಮಿ, ನಂದಿನಿ ಜಯರಾಂ, ಕೋಡಿಹಳ್ಳಿ ಚಂದ್ರಶೇಖರ್, ಕೆ.ಟಿ ಗಂಗಾಧರ್ ಸೇರಿದಂತೆ ಹಲವು ಮುಖಂಡರು ಮಾತನಾಡಿದರು. ಸಂಯುಕ್ತ ಕಿಸಾನ್ ಮೋರ್ಚಾದ ವತಿಯಿಂದ ರಾಕೇಶ್ ಟಿಕಾಯತ್ ಮತ್ತು ಯುದುವೀರ್ ಸಿಂಗ್ ಮಾತನಾಡಿದರು.

ಬೆಂಗಳೂರು ವಿಧಾನಸೌಧ ಚಲೋ

ಈ ಎರಡು ರೈತ ಮಹಾಪಂಚಾಯತ್‌ಗಳ ಸಮಾರೋಪದ ರೀತಿಯಲ್ಲಿ ಬೆಂಗಳೂರಿನಲ್ಲಿ ಮಾರ್ಚ್ 22ರಂದು ವಿಧಾನಸೌಧ ಚಲೋಗೆ ಕರೆ ನೀಡಲಾಗಿತ್ತು. ರಾಜ್ಯ ಬಿಜೆಪಿ ಸರ್ಕಾರವು ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು, ಕೃಷಿ ಭೂಮಿ ಕೊಳ್ಳುವ ಮಿತಿ ಹೆಚ್ಚಳಕ್ಕೆ ಸಣ್ಣ ರೈತರು ಮತ್ತು ಕಾರ್ಮಿಕರು ಅಸಮಾಧಾನ ವ್ಯಕ್ತಪಡಿಸಿದರು. ಈಗಾಗಲೇ ಬೆಂಗಳೂರಿನಲ್ಲಿ ಕಳೆದ ಆಗಸ್ಟ್ ತಿಂಗಳಿನಿಂದಲೂ ಬೃಹತ್ ರೈತ ಹೋರಾಟ ನಡೆಯುತ್ತಿದೆ. ಆದರೆ ಸಿಎಂ ಯಡಿಯೂರಪ್ಪ ರೈತರನ್ನು ಕರೆದು ಸಭೆ ನಡೆಸುವ ಕನಿಷ್ಠ ಸೌಜನ್ಯ ಕೂಡ ತೋರಿಲ್ಲ. ವಿಧಾನಸೌಧ ಚಲೋ ಕಾರ್ಯಕ್ರಮದಲ್ಲಿಯೂ ಕೂಡ ರೈತರ ಹಕ್ಕೊತ್ತಾಯ ಪತ್ರ ಸ್ವೀಕರಿಸಲು ಸಿಎಂ ಬಾರದೆ, ರೈತರ ಬಗ್ಗೆ ಹಲವು ಬಾರಿ ಅನುಚಿತ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಟೀಕೆಗೆ ಗುರಿಯಾಗಿದ್ದ ಕೃಷಿ ಸಚಿವ ಬಿ.ಸಿ ಪಾಟೀಲ್‌ರನ್ನು ಕಳಿಸಿದ್ದಕ್ಕೆ ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.


ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರೆದ ಹೋರಾಟ: ಮಾ.‌ 31 ಕ್ಕೆ ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...