Homeಮುಖಪುಟಎನ್‌ಸಿಟಿ ದೆಹಲಿ ತಿದ್ದುಪಡಿ ಬಿಲ್: ಬೇರೆ ರಾಜ್ಯಗಳ ಬಾಗಿಲಿಗೂ ಕೇಂದ್ರೀಕರಣದ ಭೂತ ವಕ್ಕರಿಸುವ ಮುನ್ಸೂಚನೆಯೇ?

ಎನ್‌ಸಿಟಿ ದೆಹಲಿ ತಿದ್ದುಪಡಿ ಬಿಲ್: ಬೇರೆ ರಾಜ್ಯಗಳ ಬಾಗಿಲಿಗೂ ಕೇಂದ್ರೀಕರಣದ ಭೂತ ವಕ್ಕರಿಸುವ ಮುನ್ಸೂಚನೆಯೇ?

- Advertisement -
- Advertisement -

ಮಧ್ಯ ಕರ್ನಾಟಕದ ಬೃಹತ್ ಜನಪದ ಮಹಾಕಾವ್ಯ ಜುಂಜಪ್ಪ ಕಾವ್ಯದಲ್ಲಿ ಒಂದು ಘಟನೆ ಬರುತ್ತದೆ. ಇಡೀ ನಾಡಿನ ತುಂಬೆಲ್ಲಾ ವಿಪರೀತ ಕ್ಷಾಮ, ನೀರು-ನಿಡಿಗೂ ತಾತ್ಸಾರ ಎದ್ದು ದನಗಳಿಗೆ ತಿನ್ನಲು ಮೇವು, ಕುಡಿಯಲು ನೀರಿಲ್ಲದ ಪರಿಸ್ಥಿತಿ ಬಂದೊದಗುತ್ತದೆ. ತನ್ನ ಪಶು ಸಂಪತ್ತು ಉಳಿಸಿಕೊಳ್ಳಲು ಮೇವು-ನೀರು ಹುಡುಕಿ ಹೊರಟ ಜುಂಜಪ್ಪನಿಗೆ ಒಂದು ದೊಡ್ಡ ಗೋಮಾಳ ಎದುರಾಗುತ್ತದೆ. ಆಳೆತ್ತರದ ಹುಲ್ಲು, ಕೆರೆ ತುಂಬಾ ನೀರು ನೋಡಿ ಸಂತಸಗೊಂಡ ಜುಂಜಪ್ಪ ತನ್ನ ದನಗಳನ್ನ ಅಲ್ಲಿಗೆ ಅಟ್ಟುತ್ತಾನೆ. ಆದರೆ ಆ ಪ್ರದೇಶದ ಸೆಟ್ಟಿ ನೂರಾರು ಜನ ಕಾವಲುಗಾರರು, ಭದ್ರವಾದ ಬೇಲಿ ಹಾಕಿ ನೊಣವೂ ಒಳ ಹೋಗದಂತೆ ಮಾಡಿರುತ್ತಾನೆ. ಆಗ ಜುಂಜಪ್ಪ ಹೇಳುವ ಮಾತಿದೆಯಲ್ಲ ಎಲ್ಲ ಕಾಲಕ್ಕೂ ಸಲ್ಲುವ ಮಾತು “ಯಪ್ಪಾ ದನಗೋಳ ಹುಲ್ಲಿದ್ದ ಕಡೆ ಮೇಯ್ಕಳಿ, ನೀರಿದ್ದ ಕಡೆ ಕುಡ್ಕಳಿ” ಎಂದು ಸೆಟ್ಟಿಯನ್ನು ಸದೆಬಡಿದು ತನ್ನ ಪಶು ಸಂಪತ್ತು ಉಳಿಸಿಕೊಳ್ಳುತ್ತಾನೆ.

ಜುಂಜಪ್ಪನ “ಹುಲ್ಲಿದ್ದ ಕಡೆ ಮೇಯ್ಕಳಿ, ನೀರಿದ್ದ ಕಡೆ ಕುಡ್ಕಳಿ” ಎನ್ನುವ ಕ್ರಾಂತಿಕಾರಿ ಮಾತಿನ ಅರ್ಥ ಎಲ್ಲವೂ ಎಲ್ಲರಿಗೆ ಸೇರಿದ್ದು, ಆಹಾರ, ನೀರು ಭೂಮಿಯ ಹಕ್ಕಿನ ಬಗ್ಗೆ ಮಾತನಾಡುತ್ತಾ ಹೋಗುತ್ತದೆ. ಈ ನಿದರ್ಶನ ಏಕೆ ಇಲ್ಲಿ ಬಂತು ಎಂದರೆ ಇಂದು ಕೇಂದ್ರ ಬಿಜೆಪಿ ಸರ್ಕಾರ ಈ ಎಲ್ಲಾ ಮೂರು ಮೂಲಭೂತ ಸಂಗತಿಗಳನ್ನು ಮುಕ್ಕರಿಸಿಕೊಂಡು ತಿನ್ನುತ್ತಿದೆ.

ವಿಷಯಕ್ಕೆ ಬರುವುದಾದರೆ ಸೋಮವಾರ (ಮಾರ್ಚ್ 22ರಂದು) ಲೋಕಸಭೆಯಲ್ಲಿ ಮಂಡಿಸಿದ ರಾಷ್ಟ್ರ ರಾಜಧಾನಿ ದೆಹಲಿಯ ಭೂಪ್ರದೇಶ (ತಿದ್ದುಪಡಿ) ಕಾಯ್ದೆ (2021) (National Capital Territory of Delhi (Amendment) Bill – GNCTD)ಯ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಎಲ್ಲಾ ರಾಜ್ಯಗಳ ಶಾಸಕಾಂಗಕ್ಕೆ ಪರೋಕ್ಷ ಎಚ್ಚರಿಕೆ ನೀಡಿದೆಯೇ? ನಾವೇನು ದೂರವಿಲ್ಲ ನಿಮ್ಮ ಮನೆ ಬಾಗಿಲಿಗೂ ಬರುತ್ತೇವೆ ಎನ್ನುವ ಮುನ್ಸೂಚನೆಯೇ?

ಈ ತಿದ್ದುಪಡಿ ಏನು ಹೇಳುತ್ತದೆ?

ದೆಹಲಿ ಚುನಾಯಿತ ಸರ್ಕಾರ, ಸಚಿವ ಸಂಪುಟವು ಯಾವುದೇ ನಿರ್ಧಾರಗಳನ್ನು ಅನುಷ್ಠಾನಕ್ಕೆ ತರುವ ಮೊದಲು ಲೆಫ್ಟಿನೆಂಟ್ ಜನರಲ್ ಅಭಿಪ್ರಾಯ ಪಡೆದುಕೊಳ್ಳಬೇಕು ಎಂದು ಹೇಳುತ್ತದೆ.

ಇದರಿಂದ ಏನಾದರೂ ತೊಂದರೆಯೇ?

ಹೌದು, ಈ ತಿದ್ದುಪಡಿಯಿಂದ “ಸರ್ಕಾರ ಎಂದರೆ ಈಗ ಲೆಫ್ಟಿನೆಂಟ್ ಗವರ್ನರ್” ಎಂದಾಗುತ್ತದೆ.

ಈ ಹೊಸ ತಿದ್ದುಪಡಿಯ ಪ್ರಕಾರ ದೆಹಲಿ ಸರ್ಕಾರ ಸಣ್ಣ ನಿರ್ಧಾರ ತೆಗೆದುಕೊಳ್ಳಬೇಕಾದರೂ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಅಭಿಪ್ರಾಯ ತೆಗೆದುಕೊಳ್ಳಲೇಬೇಕು. ಅವರು ಹೂ ಅಂದರೆ ಹೂ ಇಲ್ಲ ಅಂದರೆ ಇಲ್ಲ. ’ಸರ್ಕಾರ’ ಎಂದರೆ ಲೆಫ್ಟಿನೆಂಟ್ ಗವರ್ನರ್ ಮಾತ್ರ. ಜನರಿಂದ ಆಯ್ಕೆಯಾದವರಿಗೆ ತುಸು ಗೌರವವೂ ಇಲ್ಲವೇ?

ತಿದ್ದುಪಡಿ ತಂದಿರುವ ದೊಡ್ಡ ಸಂಕಷ್ಟ ಏನು?

ಇದಕ್ಕೂ ಮೊದಲು ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ ಮತ್ತು ಭೂವ್ಯವಹಾರಗಳನ್ನು ಹೊರತುಪಡಿಸಿ ಮಿಕ್ಕ ಎಲ್ಲಾ ರೀತಿಯ ಸಂಗತಿಗಳಲ್ಲಿ ಲೆಫ್ಟಿನೆಂಟ್ ಜನರಲ್ ಅವರ ಒಪ್ಪಿಗೆ ಪಡೆದುಕೊಳ್ಳಬೇಕಾದ ಅಗತ್ಯ ಇರಲಿಲ್ಲ, ಆದರೆ ಈಗ ಪ್ರತಿಯೊಂದಕ್ಕೂ ಎಲ್‌ಜಿ ಅವರ ಮನೆ ಬಾಗಿಲು ತಟ್ಟುವ ಪ್ರಮೇಯವನ್ನು ತಿದ್ದುಪಡಿ ತಂದಿಟ್ಟಿದೆ.

ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಅಧಿಕಾರ ವ್ಯಾಪ್ತಿಯ ಬಗ್ಗೆ 2018ರಲ್ಲಿ ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ತೀರ್ಪು ನೀಡಿತ್ತು. ದೆಹಲಿಯ ಎಲ್‌ಜಿ ಸ್ವತಂತ್ರವಾಗಿ ವರ್ತಿಸುವಂತಿಲ್ಲ, ಸರ್ಕಾರದ ನೀತಿ ನಿರ್ಧಾರಗಳಿಗೆ ಅಡ್ಡಿಪಡಿಸುವಂತಿಲ್ಲ. ಸಂವಿಧಾನವು ಚುನಾಯಿತ ಸರಕಾರಕ್ಕೆ ಮಹತ್ವ ನೀಡಿರುವಾಗ ಅದರ ನಿರ್ಧಾರಗಳಲ್ಲಿ ಎಲ್‌ಜಿ ಕೈಯಾಡಿಸುವಂತಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿತ್ತು.

ಆದರೆ ಈಗ ಬಿಜೆಪಿ ಸರ್ಕಾರದ ಉಪ್ಪು ಕದಿಯುವ ಬುದ್ಧಿಯಿಂದ ದೆಹಲಿ ಸರ್ಕಾರಕ್ಕೆ ನ್ಯಾಯಾಲಯದಿಂದ ಸಿಕ್ಕಿದ್ದ ಈ ಹಕ್ಕು ಏನಾಗಲಿದೆ? ಮಣ್ಣುಪಾಲೇ!

’ಶಾಸಕಾಂಗ ರೂಪಿಸುವ ಯಾವುದೇ ಕಾನೂನಿನ ಪ್ರಕಾರ ಸರ್ಕಾರ ಎಂದರೆ ಅದು ಲೆಫ್ಟಿನೆಂಟ್ ಜನರಲ್’ ಎಂದು ನೇರವಾಗಿ ಪ್ರಜಾಪ್ರಭುತ್ವದ, ಸಂವಿಧಾನದ ಆಶಯಗಳ ಮುಖದ ಮೇಲೆ ಹೊಡೆಯುವಷ್ಟು (ಈಗಾಗಲೇ ಸಾಕಷ್ಟು ಬಾರಿ ಹೊಡೆದಿದೆ) ಬಿಜೆಪಿ ಮುಂದಕ್ಕೆ ಹೋಗಿದೆ.

ಈ ವಿವಾದ ಶುರು ಮಾಡಿದ್ದು ಯಾರು ಕಾಂಗ್ರೆಸ್/ ಬಿಜೆಪಿ?

ಕಾಂಗ್ರೆಸ್ ಸರ್ಕಾರ ಕೇಂದ್ರಾಡಳಿತ ಪ್ರದೇಶವಾಗಿದ್ದ ರಾಷ್ಟ ರಾಜಧಾನಿ ದೆಹಲಿಯಲ್ಲಿ ಸೀಮಿತ ಅಧಿಕಾರ ಹೊಂದಿರುವ ವಿಧಾನಸಭೆಗೆ ಅವಕಾಶ ನೀಡಿ ’ರಾಷ್ಟ್ರ ರಾಜಧಾನಿ ಪ್ರದೇಶ- ದೆಹಲಿ ಸರ್ಕಾರ’ (NCT) ಕಾಯ್ದೆ- 1991 ಅನ್ನು ಜಾರಿಗೊಳಿಸಲಾಯಿತು. 1996ರಿಂದಲೂ ದೆಹಲಿ ಸರ್ಕಾರ, ಕೇಂದ್ರ ಸರ್ಕಾರದ ಜೊತೆಗಿನ ಎಲ್ಲಾ ರೀತಿಯ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕವೇ ಬಗೆಹರಿಸಿಕೊಳ್ಳುತ್ತಿದ್ದವು. ಆದರೆ, 2015ರಲ್ಲಿ ದೆಹಲಿಯ ಅಧಿಕಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಯಿತು. ಹಾಗಾದರೆ ಇಲ್ಲಿ ಎರಡು ಬಗೆದದ್ದು ಬಿಜೆಪಿಯೇ ಎಂದಾಯಿತು.

’ಲೋಕಸಭೆಯಲ್ಲಿ ಅನುಮೋದನೆ ಪಡೆದ ಮಸೂದೆಯ ಸಾಲುಗಳು ದೆಹಲಿ ನಾಗರಿಕರಿಗೆ ಅವಮಾನ ಮೂಡುವಂತಿವೆ. ದೆಹಲಿಯ ಜನರು ಮತ ಚಲಾಯಿಸಿ ಆಯ್ಕೆ ಮಾಡಿದವರಿಂದ ಅಧಿಕಾರವನ್ನು ಕಿತ್ತುಕೊಂಡು, ಸೋತವರಿಗೆ ಅಧಿಕಾರ ನೀಡಿರುವ ಬಿಜೆಪಿಯು ದೆಹಲಿ ಜನರಿಗೆ ಮೋಸ ಮಾಡಿದೆ’ ಎಂದು ದೆಹಲಿ ಮುಖ್ಯಮಂತ್ರಿ ಆಮ್ ಆದ್ಮಿ ಪಕ್ಷದ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

’ಇತ್ತೀಚೆಗೆ ಗುಜರಾತ್ ರಾಜ್ಯದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅದರಲ್ಲೂ ಸೂರತ್‌ನಲ್ಲಿ ಎಎಪಿ 22 ಸೀಟುಗಳನ್ನು ಗೆದ್ದು ಪಾದಾರ್ಪಣೆ ಮಾಡಿದ್ದು ಅಮಿತ್ ಷಾ, ನರೇಂದ್ರ ಮೋದಿ ಅವರ ಗರ್ವಕ್ಕೆ ಪೆಟ್ಟುಕೊಟ್ಟಿದೆ. ಅಲ್ಲದೇ ಇಡೀ ರಾಷ್ಟ್ರದಲ್ಲಿ ಅದರಲ್ಲೂ ಪ್ರಮುಖವಾಗಿ ಉತ್ತರ ಭಾರತ ಭಾಗದಲ್ಲಿ ಬಿಜೆಪಿಗೆ ಆತಂಕ ಮೂಡಿಸುತ್ತಿರುವ ಏಕೈಕೆ ಪಕ್ಷವೆಂದರೆ ಆಮ್ ಆದ್ಮಿ ಪಕ್ಷವೊಂದೆ. ಆದ ಕಾರಣ ನಮ್ಮ ಪಕ್ಷವನ್ನು ಮುಗಿಸುವ ಹುನ್ನಾರವೇ ಕಾಯ್ದೆಯ ತಿದ್ದುಪಡಿ’ ಎಂಬುದು ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರ ಮಾತು.

’ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿಶನ್ ರೆಡ್ಡಿ ಅವರು ಮಸೂದೆ ಮಂಡನೆಯ ವೇಳೆ ಸರ್ಕಾರದ ದಕ್ಷತೆ ಹೆಚ್ಚಾಗಲಿದೆ ಅಲ್ಲದೇ, ದೆಹಲಿ ಸರ್ಕಾರದ ಕಾರ್ಯವಿಧಾನಕ್ಕೆ ಸಂಬಂಧಿಸಿದಂತೆ ಅಸ್ಪಷ್ಟತೆ ಸೃಷ್ಟಿಯಾಗಿತ್ತು. ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯುವ ನಿಟ್ಟಿನಿಂದ ಮಸೂದೆ ಮಂಡಿಸಲಾಗಿದೆ. ದೆಹಲಿಗೆ ಎಲ್‌ಜಿ ಅವರೇ ಆಡಳಿತಗಾರರಾಗಿದ್ದಾರೆ. ಅಲ್ಲದೆ ಸರ್ಕಾರದ ದೈನಂದಿನ ವ್ಯವಹಾರಗಳನ್ನು ತಿಳಿದುಕೊಳ್ಳುವ ಅಧಿಕಾರ ಅವರಿಗೆ ಇದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ. ಆಡಳಿತಕ್ಕೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಲಾಗಿದೆ ಎನ್ನುವ ತಿಪ್ಪೆ ಸಾರಿಸುವ ಮಾತುಗಳನ್ನು ಆಡುತ್ತಲೇ ನಮ್ಮ ಸರ್ಕಾರದ ಧಮನಕ್ಕೆ ಬಿಜೆಪಿ ನಿಂತಿದೆ’ ಎಂಬುದು ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಅಭಿಪ್ರಾಯ.

ದೆಹಲಿಯ ಚುನಾಯಿತ ಸರ್ಕಾರ ಮತ್ತು ಲೆಫ್ಟಿನೆಂಟ್ ಜನರಲ್ ಅಧಿಕಾರದ ಜಟಾಪಟಿ ಹೊಸತೇನೂ ಅಲ್ಲ. ಕೇಂದ್ರ ಸರ್ಕಾರವು 2015ರಲ್ಲಿ ಲೆಫ್ಟಿನೆಂಟ್ ಜನರಲ್ ನಜೀಬ್ ಜಂಗ್ ಸಹ ಇದೇ ಮಾತು ಹೇಳಿದ್ದರು. ’ಸರ್ಕಾರ ಎಂದರೆ ರಾಷ್ಟ್ರಪತಿಯ ಮೂಲಕ ಸಂವಿಧಾನದ 239ನೇ ಪರಿಚ್ಛೇದದ ಅನ್ವಯ ನೇಮಕಗೊಂಡ ಲೆಫ್ಟಿನೆಂಟ್ ಜನರಲ್’ ಎಂದಿದ್ದರು.

ಒಟ್ಟಿನಲ್ಲಿ ಬಿಜೆಪಿ ಎಷ್ಟು ಮೊಂಡುತನ ಬೆಳೆಸಿಕೊಂಡಿದೆ ಎಂದರೆ ನಾಳೆ ಬಾ ಎಂದು ಬಾಗಿಲ ಮೇಲೆ ಬರೆದರೂ ಇಂದೇ ಬರುವೆ ಎನ್ನುವ ಭೂತದಂತಾಗಿದೆ. ಈ ಭೂತ ಇಂದು ದೆಹಲಿಯ ಬಾಗಿಲು ಮಾತ್ರ ಬಡಿದಿಲ್ಲ, ಎಲ್ಲರ ಮನೆ ಬಾಗಿಲಿಗೂ ಬರುತ್ತೇವೆ ಎನ್ನುವ ಮುಸ್ಸೂಚನೆಯೇ ಇದು?

ಗುಜರಾತ್ ಮಾಡೆಲ್‌ಅನ್ನು ಇಡೀ ದೇಶವೇ ಮರೆಯುವಂತೆ ಮಾಡಿ, ಬಿಜೆಪಿಗೆ ಮಗ್ಗುಲು ಮುಳ್ಳಾಗಿ ಬೆಳೆಯುತ್ತಿದ್ದ ಅರವಿಂದ ಕೇಜ್ರಿವಾಲ್ ಅವರ ದೆಹಲಿ ಮಾಡೆಲ್ ಎನ್ನುವ ಬೆಣ್ಣೆ ಜಾರಿ ಬಿಜೆಪಿಯ ರೊಟ್ಟಿಗೆ ಬಿದ್ದಿದೆ. ಇನ್ನು ನಿಮ್ಮ, ನಿಮ್ಮ ಮಾದರಿಗಳನ್ನು ನೀವಿಟ್ಟುಕೊಳ್ಳಿ ನಾವು ಹೇಳುವ ಮಾದರಿಯೇ ಅಂತಿಮ ಮರಣ ಶಾಸನ ಇದಾಗಲಿದೆಯೇ? ಎಲ್ಲವೂ ಆಗುತ್ತಿರುವ ಈ ಹೊತ್ತಿನಲ್ಲಿ ಇದೂ ಆಗಲಿದೆ ಎನ್ನುವುದೇ ದುರಂತ.

ಸೋಮಶೇಖರ್ ಶಿರಾ
ಪತ್ರಕರ್ತರು. ಸದ್ಯ ಎಎಪಿ ಕರ್ನಾಟಕದ ಸಾಮಾಜಿಕ ಮಾಧ್ಯಮ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ಗದ್ದಲ, ವಿರೋಧಗಳ ನಡುವೆ ರಾಜ್ಯಸಭೆಯಲ್ಲೂ ದೆಹಲಿ ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...