Homeಮುಖಪುಟ'ಹಣ-ಆಸ್ತಿಯಿದ್ದರೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧೆ' ಎನ್ನುವ ಸೂತ್ರ ಮುರಿದ ಈ ಅಭ್ಯರ್ಥಿ!

‘ಹಣ-ಆಸ್ತಿಯಿದ್ದರೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧೆ’ ಎನ್ನುವ ಸೂತ್ರ ಮುರಿದ ಈ ಅಭ್ಯರ್ಥಿ!

ನನ್ನ ಹೆಂಡತಿ ಈಗಲೂ ಆಡು ಮೇಯಿಸಲು ಹೋಗುತ್ತಾಳೆ ಎನ್ನತ್ತಾರೆ ಗಂಧರ್ವಕೋಟ್ಟೈ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಚಿನ್ನದುರೈ...

- Advertisement -
- Advertisement -

ಚುನಾವಣೆಯಲ್ಲಿ ನಿಂತು ಗೆಲ್ಲಬೇಕು ಎಂದರೆ, ಸ್ಪರ್ಧಿಸುವವನು ಹಣವಂತನಾಗಿದ್ದರೆ ಮಾತ್ರ ಸಾಧ್ಯ ಎನ್ನುವ ಮಾತನ್ನು ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಮ್ಯನಿಸ್ಟ್ ಪಕ್ಷದ ಅಭ್ಯರ್ಥಿ ಚಿನ್ನದುರೈ ಸುಳ್ಳು ಮಾಡಲು ಹೊರಟಿದ್ದಾರೆ. ಪುದುಕೋಟ್ಟೈ ಜಿಲ್ಲೆಯ ಗಂಧರ್ವಕೋಟ್ಟೈ ವಿಧಾನಸಭಾ ಕ್ಷೇತ್ರದಿಂದ ಕಮ್ಯುನಿಸ್ಟ್ (ಮಾರ್ಕ್ಸಿಸ್ಟ್‌) ಪಕ್ಷದಿಂದ ಯಾವುದೇ ಆಸ್ತಿಯಿಲ್ಲದ, ಚಳವಳಿಯ ಹಿನ್ನೆಲೆಯಿರುವ ವ್ಯಕ್ತಿಯೊಬ್ಬರನ್ನು ಕಣಕ್ಕಿಳಿಸಲಾಗಿದೆ. ಇದು ಈ ಚುನಾವಣೆಯಲ್ಲಿ ಅತ್ಯಂತ ವಿಶೇಷವೆನಿಸಿದೆ.

ಮೂಲತಃ ಗಂಧರ್ವಕೋಟ್ಟೈನವರಾದ ಚಿನ್ನದುರೈ ಕಾರ್ಮಿಕರಾಗಿದ್ದಾಗಿನಿಂದಲೂ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು. ಸಿಐಟಿಯುನಲ್ಲಿ ಸಕ್ರಿಯ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಈಗ ವಿಧಾನಸಭಾ ಚುನಾವಣೆಯಲ್ಲಿಯೂ ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಕಾಮ್ರೇಡ್ ಟಾಕೀಸ್ ಎನ್ನುವ ಯೂಟ್ಯೂಬ್ ಚಾನೆಲ್ ಇವರ ಸಂದರ್ಶನ ಮಾಡಿದೆ.

ಇದನ್ನೂ ಓದಿ: ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಸಂತ್ರಸ್ತ ಯುವತಿ

ಹೆಂಚಿನ ಮನೆಯಲ್ಲಿ ವಾಸಿಸುತ್ತಿರುವ ಇವರ ಬಳಿಯಿರುವ ಆಸ್ತಿ ಒಂದು ಟಾಟಾ ಏಸ್ ಮಾತ್ರ. ಇದನ್ನು ಚಿನ್ನದುರೈ ಅವರ ಮಗ ಬಾಡಿಗೆಗೆ ಓಡಿಸುತ್ತಾರೆ. ಇದೇ ಇವರ ಕುಟುಂಬದ ಮೂಲ ಆದಾಯ.

ಈ ಕುರಿತು ಸ್ವತಃ ಚಿನ್ನದುರೈ ಅವರೇ ಹೇಳಿರುವಂತೆ, “ನಾನು ನಾಮಪತ್ರ ಸಲ್ಲಿಸಲು ಹೋದಾಗ ಆಸ್ತಿ ವಿವರಗಳನ್ನು ಸಲ್ಲಿಸಬೆಕಾಗಿತ್ತು. ಜೊತೆಗೆ ಐಟಿ ವಿವರಗಳನ್ನು ಸಲ್ಲಿಸಬೇಕಾಗಿತ್ತು. ಆದರೆ ನನ್ನ ಬಳಿ ಆಸ್ತಿಯೆ ಇಲ್ಲದಿರುವುದರಿಂದ ಅದರ ವಿವರಗಳನ್ನು ಸಲ್ಲಿಸಿರಲಿಲ್ಲ. ಆದರೆ ಆಸ್ತಿ ವಿವರಗಳನ್ನು ಸಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಬಿಡದೇ ಒತ್ತಾಯ ಮಾಡುತ್ತಿದ್ದರು. ನಂತರ ನಮ್ಮ ಊರಿನ ಡಿಎಂಕೆ ಮುಖಂಡರು ಬಂದು ನೇರವಾಗಿ ಹೇಳಿದ ನಂತರ ನನಗೆ ತೊಂದರೆ ಕೊಡುವುದನ್ನು ನಿಲ್ಲಿಸಿದರು. ಠೇವಣಿ ಕಟ್ಟಲೂ ಸಹ ನನ್ನ ಬಳಿ ಹಣವಿರಲಿಲ್ಲ. ಊರಿನ ಮುಖಂಡರು, ಡಿಎಂಕೆ ಮುಖಂಡರು ಮತ್ತು ಇನ್ನೂ ಕೆಲವು ಸ್ನೇಹಿತರು ಸೇರಿ ಹಣ ಕಟ್ಟಿದರು. ಇದನ್ನು ನೋಡಿದಾಗ ನನಗೆ ಜನಸೇವೆ ಮಾಡಲು ಇನ್ನಷ್ಟು ಹುರುಪು ಹೆಚ್ಚಾಯಿತು” ಎನ್ನುತ್ತಾರೆ.

“ನನ್ನ ಹೆಂಡತಿ ಈಗಲೂ ಆಡು ಮೇಯಿಸಲು ಹೋಗುತ್ತಾಳೆ. ಆದರೆ ಕೆಲವರೆಲ್ಲಾ, ‘ನಿನ್ನ ಗಂಡ ಎಂಎಲ್‌ಎ ಆಗುತ್ತಾನಲ್ಲ. ನೀನ್ಯಾಕೆ ಆಡು ಮೇಯಿಸಲು ಬರುತ್ತೀಯ’ ಎಂದು ನನ್ನ ಹೆಂಡತಿಗೆ ಕೇಳುತ್ತಾರೆ. ಆದರೆ ಆಕೆ ಇದಕ್ಕೆಲ್ಲಾ ತಲೆಕೆಡಿಸಿಕೊಳ್ಳದೆ ಪ್ರತಿನಿತ್ಯ ತನ್ನ ಕಾಯಕ ಮಾಡುತ್ತಾಳೆ. ಆದರೆ ನಮ್ಮ ಮುಖಂಡರು ಹೇಳುವಂತೆ, ನಾನು ಚುನಾವಣೆಯಲ್ಲಿ ಗೆದ್ದು 5 ವರ್ಷ ಸಂಪೂರ್ಣವಾಗಿ ಶಾಸಕನಾಗಿ ನನ್ನ ಜನರಿಗೆ ಸೇವೆ ಮಾಡಿದ ನಂತರವೂ ನಾನು ಹೀಗೇ ಇರುತ್ತೇನೆ” ಎಂದು ಆಶ್ವಾಸನೆ ನೀಡಿದ್ದಾರೆ.

“ನನ್ನ ಕ್ಷೇತ್ರದ ಬಹುಪಾಲು ಹಳ್ಳಿಗಳಿಗೆ ಬಸ್ ವ್ಯವಸ್ಥೆಯಿಲ್ಲ. ರಸ್ತೆಯೇ ಇಲ್ಲದಿರುವಾಗ ಬಸ್ ವ್ಯವಸ್ಥೆ ಇರಲು ಹೇಗೆ ಸಾಧ್ಯ. ಹಾಗಾಗಿ ಮೂಲಭೂತವಾಗಿ ಒಂದು ಹಳ್ಳಿಗೆ ಸಿಗಬೇಕಾದ ಯಾವುದೇ ಸೌಕರ್ಯಗಳೂ ಸಹ ಸಿಗುತ್ತಿಲ್ಲ. ಇದನ್ನು ಒದಗಿಸುವುದು ನನ್ನ ಆದ್ಯತೆ. ಇದರಲ್ಲಿ ಶಿಕ್ಷಣ ಮತ್ತು ಆರೋಗ್ಯದಂತಹ ವಿಷಯಗಳಿಗೆ ಮೊದಲ ಆದ್ಯತೆ ನೀಡುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಉಪಚುನಾವಣೆ: ಮೂರೂ ಪಕ್ಷಗಳಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

“ನನಗೆ ಆಗ ತಿಂಗಳಿಗೆ ಕೇವಲ 50 ರೂ. ಸಂಬಳವಿತ್ತು. ಇದರ ಜೊತೆ 20 ರೂ.ಗಳನ್ನು ಸೇರಿಸಿ 70 ರೂ. ಸಂಬಳ ಕೊಡಿ ಎಂದು ಕೇಳಿದೆ. ಮಾಲೀಕ ಒಪ್ಪಲಿಲ್ಲ. ಆಗ ಸಿಐಟಿಯು ಸಂಘಟನೆ ಸೇರಿದೆ. ಆಗ ನನ್ನ ವಯಸ್ಸು 21. ಸಂಘಟನೆ ಸೇರಿದ ನಂತರ ನನ್ನ ಜೊತೆಗಿನ ಕಾರ್ಮಿಕರ ಹಕ್ಕುಗಳಿಗಾಗಿ ಸಾಕಷ್ಟು ಹೋರಾಟ ಮಾಡಿದ್ದೇನೆ. ಇದಕ್ಕಾಗಿ 3 ಬಾರಿ ಜೈಲಿಗೂ ಹೋಗಿದ್ದೇನೆ” ಎಂದು ಹೇಳಿದ್ದಾರೆ.

ಅಂತಿಮವಾಗಿ, “ತಮಿಳು ನೆಲದಲ್ಲಿ ಬಿಜೆಪಿಯನ್ನು ತಳವೂರಲು ಬಿಡಬಾರದು ಎನ್ನುವುದೇ ನಮ್ಮ ಮೈತ್ರಿಯ ಗುರಿಯಾಗಿದೆ. ಜೊತೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಎಐಎಡಿಎಂಕೆ ಪಕ್ಷವನ್ನು 234 ಕ್ಷೇತ್ರಗಳಲ್ಲಿಯೂ ಸೋಲಿಸಬೇಕು ಎಂಬುದೇ ನಮ್ಮ ಉದ್ದೇಶವಾಗಿದೆ. ಯಾಕೆಂದರೆ ಈ ಸರ್ಕಾರ ಕೃಷಿಕರಿಗೆ, ಕೃಷಿ ಕಾರ್ಮಿಕರಿಗಾಗಿ ಏನನ್ನೂ ಮಾಡಿಲ್ಲ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಅನೈತಿಕ ಕಾನೂನುಗಳ ವಿರುದ್ಧ ದನಿಯೆತ್ತಿಲ್ಲ. ಅಪಾಯದಲ್ಲಿರುವ ತಮಿಳಿನ ಅಸ್ಮಿತೆಗಾಗಿ ಯಾವುದೇ ಕ್ರಮ ಕೈಗೊಂಡಿಲ್ಲ” ಎನ್ನುತ್ತಾರೆ.

ಇವರನ್ನು ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುವ ಮೂಲಕ ಕಮ್ಯನಿಸ್ಟ್ ಪಕ್ಷವು ತಾನು ತಳಸಮುದಾಯದ ಪರ ಎಂಬುದನ್ನು ಸಾಬೀತುಪಡಿಸಿದೆ.

ಪಂಚರಾಜ್ಯ ಚುನಾವಣೆಗಳು ಘೋಷಣೆಯಾಗಿದ್ದು, ಏಪ್ರಿಲ್ ತಿಂಗಳಿನಲ್ಲಿ ಮತದಾನ ನಡೆದು, ಮೇ ತಿಂಗಳಿನಲ್ಲಿ ಫಲಿತಾಂಶ ಹೊರಬೀಳಲಿದೆ.

ತಮಿಳುನಾಡಿನಲ್ಲಿ ಡಿಎಂಕೆ-ಕಾಂಗ್ರೆಸ್-ಕಮ್ಯುನಿಸ್ಟ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು, ಎಐಎಡಿಎಂಕೆ ಪಕ್ಷವನ್ನು ಸೋಲಿಸಬೇಕು ಎಂಬ ಪಣತೊಟ್ಟಿವೆ. ಹಾಗಾಗಿ ತಮಿಳುನಾಡಿನ 234 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳ ಆಯ್ಕೆಯನ್ನು ಬಹಳ ಎಚ್ಚರದಿಂದ ಮಾಡಿದೆ.


ಇದನ್ನೂ ಓದಿ: ಸಂಪರ್ಕದ ಮೂಲಕ ಕೊರೊನಾ : ಭಾರತದಲ್ಲೇ ಅತಿ ಹೆಚ್ಚು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...