Homeಮುಖಪುಟಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

ಪ್ರಮುಖ ಸಚಿವಾಲಯಗಳು ಮೋದಿ ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿವೆ: ವರದಿ

- Advertisement -
- Advertisement -

ದೇಶ ಆರ್ಥಿಕ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ನರೇಂದ್ರ ಮೋದಿ ಸರಕಾರವು ದೇಶದ ಪ್ರಮುಖ ಸಾರ್ವಜನಿಕ ಕ್ಷೇತ್ರಗಳನ್ನು ಮತ್ತು ಸಚಿವಾಲಯಗಳನ್ನು ಖಾಸಗೀಯವರಿಗೆ ಮಾರಲು ಮುಂದಾಗಿದೆ. ಆದರೆ ಈ ಖಾಸಗೀಕರಣದೆಡೆಗಿನ ನೀತಿಯನ್ನು ಮೋದಿ ಸರ್ಕಾರದ ಹಲವಾರು ಪ್ರಮುಖ ಸಚಿವಾಲಯಗಳು ವಿರೋಧಿಸಿದ್ದವು ಎಂದು ಬ್ಲೂಮ್‌ಬರ್ಗ್ ಕ್ವಿಂಟ್ ವರದಿ ಮಾಡಿದೆ.

ಈ ಖಾಸಗೀಕರಣ ಪ್ರಕ್ರಿಯೆ ಕುರಿತು ಏಳು ತಿಂಗಳ ಅವಧಿಯಲ್ಲಿ ನಡೆದ ಪತ್ರವ್ಯವಹಾರವನ್ನು ಅವಲೋಕನ ಮಾಡಿ ವರದಿಯೊಂದನ್ನು ತಯಾರಿಸಲಾಗಿದೆ. ಅದರಲ್ಲಿ ಪ್ರಮುಖ ಸಚಿವಾಲಯಗಳು ಬೃಹತ್ ವಿರೋಧ ಮತ್ತು ಕಳವಳಗಳ ಹೊರತಾಗಿಯೂ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಮಂಡಿಸಿದ 2021-22ರ ಕೇಂದ್ರ ಬಜೆಟ್‌ನಲ್ಲಿ ಖಾಸಗೀಕರಣದ ಪರವಾದ ಹೊಸ ಸಾರ್ವಜನಿಕ ವಲಯ ಉದ್ಯಮ ನೀತಿಯನ್ನು ಘೋಷಿಸಿದ್ದಾರೆ.

ಮೇ 2020 ರಲ್ಲಿ ಕೊರೊನಾ ಸಾಂಕ್ರಾಮಿಕದ ಮಧ್ಯೆ ಸರ್ಕಾರದ ಆರ್ಥಿಕ ಪ್ಯಾಕೇಜಿನ ಭಾಗವಾಗಿ ಇದನ್ನು ಮೊದಲು ಘೋಷಿಸಲಾಯಿತು. ಹಣಕಾಸು ಸಚಿವಾಲಯದ ಹೂಡಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಇಲಾಖೆಗೆ ಈ ನೀತಿಯನ್ನು ರೂಪಿಸುವ ಕಾರ್ಯವನ್ನು ವಹಿಸಲಾಯಿತು.

ಜುಲೈ 6 ರಂದು ನೀತಿ ಆಯೋಗ್ ಸೇರಿದಂತೆ ನಲವತ್ತೊಂಬತ್ತು ಸಚಿವಾಲಯಗಳು, ಇಲಾಖೆಗಳು ಅದಕ್ಕೆ ಪ್ರತಿಕ್ರಿಯಿಸಲು ಕೇಳಲಾಯಿತು ಮತ್ತು ಅವರ ಪ್ರತಿಕ್ರಿಯೆ ಮತ್ತು ಸಲಹೆಯನ್ನು ನೀಡಲು ಎರಡು ವಾರಗಳ ಕಾಲಾವಕಾಶ ನೀಡಲಾಯಿತು.

ಯಾವುದೇ ಮಹತ್ವದ ಪ್ರತಿಕ್ರಿಯೆ‌ಗಳನ್ನು ನೀಡದೆ 21 ಸಚಿವಾಲಯಗಳು ಮತ್ತು ಇಲಾಖೆಗಳು ನೀತಿಯನ್ನು ಬೆಂಬಲಿಸಿದರೆ, ಏಳು ಇಲಾಖೆಗಳು ತಮ್ಮಿಂದ ನಿಯಂತ್ರಿಸಲ್ಪಡುವ ಕ್ಷೇತ್ರಗಳು ಕಾರ್ಯತಂತ್ರದ ಪಟ್ಟಿಯಲ್ಲಿ ಇರಬೇಕೆಂದು ಬಯಸಿದ್ದರೆ, ಏಳು ಗುಂಪುಗಳು ನೀತಿಯಿಂದ ವಿನಾಯಿತಿ ಕೋರಿವೆ.

ಈ ಸಂದರ್ಭದಲ್ಲಿ ಮೂರು ಇಲಾಖೆಗಳು ಷರತ್ತುಬದ್ಧ ಅನುಮೋದನೆ ನೀಡಿವೆ ಮತ್ತು 10 ಇಲಾಖೆಗಳು ಖಾಸಗೀಕರಣಕ್ಕೆ ಬಲವಾದ ಅಸಮ್ಮತಿ ಸೂಚಿಸಿ ಸಲಹೆಗಳು ಮತ್ತು ಪ್ರತಿಕ್ರಿಯೆ ‌ಗಳನ್ನು ಕಳುಹಿಸಿವೆ ಎಂದು ಬ್ಲೂಮ್‌ಬರ್ಗ್ ಕ್ವಿಂಟ್ ವರದಿ ಮಾಡಿದೆ.

ಇತರ ಇಲಾಖೆಗಳೊಂದಿಗೆ ಬಾಹ್ಯಾಕಾಶ ಇಲಾಖೆ 2020 ರ ಜುಲೈ 24 ರಂದು ಪತ್ರವೊಂದನ್ನು ಬರೆದಿದ್ದು, ಅದರ ನಿಯಂತ್ರಣದಲ್ಲಿರುವ ಎರಡು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ಆಂಟ್ರಿಕ್ಸ್ ಕಾರ್ಪ್ ಮತ್ತು ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಅನ್ನು ಖಾಸಗೀಕರಣಕ್ಕಾಗಿ ಪರಿಗಣಿಸಬಾರದು ಎಂದು ಒತ್ತಾಯಿಸಿದೆ.

ಆರೋಗ್ಯ ಸಚಿವಾಲಯವೂ ಆರೋಗ್ಯ ರಕ್ಷಣೆಯನ್ನು ಕಾರ್ಯತಂತ್ರದ ಪಟ್ಟಿಯ ಕ್ಷೇತ್ರವಾಗಿ ಸೇರಿಸದಿರುವುದನ್ನು ವಿರೋಧಿಸಿ ಪತ್ರ ಬರೆದಿದೆ. ಸರ್ಕಾರಿ ಸ್ವಾಮ್ಯದ ಘಟಕದ ಉಪಸ್ಥಿತಿಯ ಅಗತ್ಯವಿರುವ “ಆರೋಗ್ಯ ಸೇವೆಗಳನ್ನು ಕಾರ್ಯತಂತ್ರದ ವಲಯವಾಗಿ ಸೇರಿಸಲು ಒಳಪಟ್ಟಿರುತ್ತದೆ” ಎಂಬ ಉದ್ದೇಶಿತ ಖಾಸಗೀಕರಣ ನೀತಿಯನ್ನು ಅದು ಬೆಂಬಲಿಸಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಪೂರ್ಣ ವರದಿಗೆ ಇಲ್ಲಿ ಕ್ಲಿಕ್ ಮಾಡಿ


ಇದನ್ನೂ ಓದಿ: ಎಲ್ಲಾ ಬ್ಯಾಂಕುಗಳು ಖಾಸಗೀಕರಣಗೊಳ್ಳುವುದಿಲ್ಲ – ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...