Homeಅಂತರಾಷ್ಟ್ರೀಯಪ್ರಧಾನಿ ಮೋದಿ ಬಾಂಗ್ಲಾ ಭೇಟಿ: ಬಾಂಗ್ಲಾದಲ್ಲಿ ತೀವ್ರಗೊಂಡ ’ಮೋದಿ ನಾಟ್ ವೆಲ್ಕಮ್’ ಪ್ರತಿಭಟನೆ

ಪ್ರಧಾನಿ ಮೋದಿ ಬಾಂಗ್ಲಾ ಭೇಟಿ: ಬಾಂಗ್ಲಾದಲ್ಲಿ ತೀವ್ರಗೊಂಡ ’ಮೋದಿ ನಾಟ್ ವೆಲ್ಕಮ್’ ಪ್ರತಿಭಟನೆ

ಮೋದಿ ಮುಖ್ಯಮಂತ್ರಿಯಾಗಿದ್ದಾಗ 2002 ರಲ್ಲಿ ಭಾರತದ ಗುಜರಾತ್‌ನಲ್ಲಿ 1,000 ಕ್ಕೂ ಹೆಚ್ಚು ಮುಸ್ಲಿಮರು ಕೊಲ್ಲಲ್ಪಟ್ಟರು ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

- Advertisement -
- Advertisement -

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶ ಸ್ವಾತಂತ್ರ್ಯದ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದು, ಬಾಂಗ್ಲಾದಲ್ಲಿ ತೀವ್ರ ಸ್ವರೂಪದ ಪ್ರತಿಭಟನೆಗೆ ಸಾಕ್ಷಿಯಾಗಿದೆ. ಸುವರ್ಣ ಮಹೋತ್ಸವದ ಅತಿಥಿ ಪ್ರಧಾನಿ ಮೋದಿ ಎಂದು ಘೋಷಣೆಯಾದಾಗಿನಿಂದಲೂ ಪ್ರತಿಭಟನೆಗಳು ನಡೆಯುತ್ತಿವೆ.

ಇದೇ 27ರವರೆಗೆ ಬಾಂಗ್ಲಾದೇಶ ರಾಜಧಾನಿ ಢಾಕಾದಲ್ಲಿ ದೇಶದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶಕ್ಕೆ ಭಾರತದ ಪ್ರಧಾನಿ ತೆರಳಿದ್ದು, ದೇಶದ ಸ್ಥಾಪಕ ಮತ್ತು ಹಾಲಿ ಪ್ರಧಾನಿ ಶೇಖ್ ಹಸೀನಾ ಅವರ ತಂದೆ ’ಬಂಗಬಂಧು’ ಶೇಖ್ ಮುಜಿಬುರ್ ರಹಮಾನ್ ಅವರ ಜನ್ಮ ಶತಮಾನೋತ್ಸವದಲ್ಲಿಯೂ ಭಾಗಿಯಾಗಲಿದ್ದಾರೆ.

ಮೋದಿಯವರ ಭೇಟಿಯು ಢಾಕಾದ ಮುಖ್ಯ ಮಸೀದಿಯಲ್ಲಿ ಹಿಂಸಾತ್ಮಕ ಪ್ರತಿಭಟನೆಗೆ ಕಾರಣವಾಯಿತು. ಪೊಲೀಸರು ಅಶ್ರುವಾಯು ಮತ್ತು ರಬ್ಬರ್ ಗುಂಡುಗಳನ್ನು ಬಳಸಿ ಸಾವಿರಾರು ಮಂದಿ ಪ್ರತಿಭಟನಾಕಾರರನ್ನು ಚದುರಿಸುವ ಪ್ರಯತ್ನ ನಡೆಸಿದ್ದಾರೆ.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ FIR: ಕೇಸು ರದ್ದು ಮಾಡಿ ಎಂದು ಕುಮಾರಸ್ವಾಮಿ…

ಶುಕ್ರವಾರ ನಮಾಜ್ ನಂತರ ಮೊಕರ್ರಾಮ್ ಮಸೀದಿ ಬಳಿ ನೂರಾರು ಪ್ರತಿಭಟನಾಕಾರರು ಮೋದಿಯವರಿಗೆ ಅಗೌರವ ತೋರುವ ಸಂಕೇತವಾಗಿ ಬೂಟುಗಳನ್ನು ಬೀಸಲು ಪ್ರಾರಂಭಿಸಿದ ನಂತರ ಹಿಂಸಾತ್ಮಕ ಘರ್ಷಣೆಗಳು ಸಂಭವಿಸಿದವು.

ಮಸೀದಿಯ ಬಳಿಯ ಬೀದಿಗಳಲ್ಲಿ ಭಾರಿ ಪ್ರಮಾಣದಲ್ಲಿ ಹಾಜರಿದ್ದ ಪೊಲೀಸರ ಮೇಲೆ ಪ್ರತಿಭಟನಾಕಾರರು ಕಲ್ಲು ಎಸೆಯುತ್ತಿರುವುದನ್ನು ಸ್ಥಳೀಯ ಮಾಧ್ಯಮಗಳು ತೋರಿಸಿವೆ. ಪತ್ರಕರ್ತರು ಸೇರಿದಂತೆ ಕನಿಷ್ಠ 40 ಜನರು ಈ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ ಎಂದು ಸೊಮೊಯ್ ಟಿವಿ ವರದಿ ಮಾಡಿದೆ.

PC: Al Jazeera

ಮೋದಿಯ ಭೇಟಿಯನ್ನು ವಿರೋಧಿಸಿ ಬಾಂಗ್ಲಾ ದೇಶದಾದ್ಯಂತ ನಡೆದ ಪ್ರತಿಭಟನೆಗಳಲ್ಲಿ ಶುಕ್ರವಾರ 40 ಮಂದಿ ಗಾಯಗೊಂಡಿದ್ದಾರೆ. ಭಾರತದಲ್ಲಿ ಮುಸ್ಲಿಮರನ್ನು ಹಿಂಸಿಸುತ್ತಿದ್ದಾರೆ ಎಂದು ಆರೋಪಿಸಿ ಈ ಪ್ರತಿಭಟನೆಗಳು ನಡೆದಿವೆ ಎನ್ನಲಾಗಿದೆ.

ಸುಮಾರು 2,000 ಪ್ರತಿಭಟನಾಕಾರರು ಶುಕ್ರವಾರ ಢಾಕಾದಲ್ಲಿ ಮೆರವಣಿಗೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಅನೇಕರು ಕಲ್ಲುಗಳನ್ನು ಅಧಿಕಾರಿಗಳ ಮೇಲೆ ಎಸೆದಿದ್ದಾರೆ. ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಜನರು ಏನು ತೊಡುತ್ತಾರೆ ಎಂಬುದರಲ್ಲಿ ರಾಜಕಾರಣಿಗಳು ಮೂಗು ತೂರಿಸಬೇಕಿಲ್ಲ: ಸ್ಮೃತಿ ಇರಾನಿ

ಕಳೆದ ಶುಕ್ರವಾರ ಕೂಡ ಬೈತುಲ್ ಮೊಕರ್ರಾಮ್ ಮಸೀದಿಯ ಹೊರಗೆ ನಡೆದ ಮತ್ತೊಂದು ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು, ಮೋದಿ ಮುಖ್ಯಮಂತ್ರಿಯಾಗಿದ್ದಾಗ 2002 ರಲ್ಲಿ ಗುಜರಾತ್‌ನಲ್ಲಿ 1,000 ಕ್ಕೂ ಹೆಚ್ಚು ಮುಸ್ಲಿಮರು ಕೊಲ್ಲಲ್ಪಟ್ಟರು ಎಂದು ಆರೋಪಿಸಿದ್ದಾರೆ.

PC: Munir Uz zaman

“ಅವರ (ಮೋದಿ) ಸರ್ಕಾರವು ಹಲವಾರು ಕಾನೂನುಗಳನ್ನು ಜಾರಿಗೆ ತಂದಿದೆ, ಅದು ಮುಸ್ಲಿಮರನ್ನು ಭಾರತದಲ್ಲಿ ಎರಡನೇ ದರ್ಜೆಯ ಪ್ರಜೆಯನ್ನಾಗಿ ಮಾಡುತ್ತದೆ. ಅವರಂತಹ ನಾಯಕನನ್ನು 50 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ಅನುಮತಿಸಬಾರದು” ಎಂದು ಇಸ್ಲಾಮಿಸ್ಟ್ ರಾಜಕೀಯ ಸಂಘಟನೆಯಾದ ಹೆಫಜತ್-ಎ-ಇಸ್ಲಾಂನ ಪ್ರಧಾನ ಕಾರ್ಯದರ್ಶಿ ಮೌಲಾನಾ ಮಾಮುನುಲ್ ಹಕ್ ಹೇಳಿದ್ದಾರೆ.

ಮೋದಿಯ ನೀತಿಗಳು ಬಾಂಗ್ಲಾದೇಶದ ಸ್ಥಾಪನಾ ತತ್ವಗಳ ಮೂಲ ಸಿದ್ಧಾಂತಗಳಿಗೆ ವಿರುದ್ಧವಾಗಿವೆ ಎಂದು ಬಾಂಗ್ಲಾದೇಶ ವಿದ್ಯಾರ್ಥಿ ಸಂಘದ ಅಧ್ಯಕ್ಷ ಫೊಯೆಜ್ ಉಲ್ಲಾ ಹೇಳಿದ್ದಾರೆ.


ಇದನ್ನೂ ಓದಿ: ಭಾರತ್ ಬಂದ್: ಆಂಧ್ರಪ್ರದೇಶ, ಪಂಜಾಬ್ ಪೂರ್ಣ ಸ್ತಬ್ದ – ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...