Homeಮುಖಪುಟಲೋಕಸಭಾ ಚುನಾವಣೆ: ಮೈತ್ರಿ ಏಕೆ ಆಗಲಿಲ್ಲ? ದೆಹಲಿಯಲ್ಲಿ ಗೆಲ್ಲುವವರು ಯಾರು?

ಲೋಕಸಭಾ ಚುನಾವಣೆ: ಮೈತ್ರಿ ಏಕೆ ಆಗಲಿಲ್ಲ? ದೆಹಲಿಯಲ್ಲಿ ಗೆಲ್ಲುವವರು ಯಾರು?

- Advertisement -
- Advertisement -

ದೇಶದ ಆಡಳಿತ ಚುಕ್ಕಾಣಿ ಇರುವ ರಾಜಧಾನಿ ದೆಹಲಿಯಲ್ಲಿ ಮೇ 12ರಂದು ಮತದಾನ ನಡೆಯಲಿದೆ. ಪ್ರತಿ ಸಲ ಅಚ್ಚರಿಯ ಫಲಿತಾಂಶ ನೀಡುವ ದೆಹಲಿಯ 7 ಕ್ಷೇತ್ರಗಳಲ್ಲಿ ಈ ಸಲ ಭಾರೀ ಕುತೂಹಲ ಉಂಟು ಮಾಡಿದೆ. ಮೋದಿ ಅಲೆ, ಕೇಜ್ರಿವಾಲ್ ಕೆಲಸ ಮತ್ತು ರಾಹುಲ್ ವಿಶ್ವಾಸದಲ್ಲಿ ಯಾವುದನ್ನು ಅಲ್ಲಿಯ ಜನ ಕೈ ಹಿಡಿಯುತ್ತಾರೆ ನೋಡಬೇಕಿದೆ.

2014ರಲ್ಲಿ 7ಕ್ಕೆ 7 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ ಮತ್ತೆ ಅದೇ ವಿಶ್ವಾಸದಲ್ಲಿದೆ. ಬಿಜೆಪಿ ಮಣಿಸಲು ಕಾಂಗ್ರೆಸ್‍ನೊಡನೆ ಹೇಗಾದರೂ ಮಾಡಿ ಮೈತ್ರಿ ಮಾಡಿಕೊಳ್ಳಬೇಕೆಂದು ದೆಹಲಿ ಸಿಎಂ ಆಮ್ ಆದ್ಮಿ ಪಾರ್ಟಿಯ ಅರವಿಂದ್ ಕೇಜ್ರಿವಾಲ್ ಪಟ್ಟ ಶ್ರಮ ವ್ಯರ್ಥವಾಗಿದೆ. ಏಕೆಂದರೆ ಕಳೆದ ಚುನಾವಣೆಯಲ್ಲಿ ಎಲ್ಲಾ 7 ಕ್ಷೇತ್ರಗಳಲ್ಲಿ ಆಪ್ ಎರಡನೇ ಸ್ಥಾನದಲ್ಲಿದ್ದರೆ, ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ತಳಲ್ಪಟ್ಟಿತ್ತು. ಕಾಂಗ್ರೆಸ್ ಮತ್ತು ಆಪ್ ನಡುವಿನ ಮತವಿಭಜನೆಯಿಂದಾಗಿ ಬಿಜೆಪಿ ಸ್ವೀಪ್ ಮಾಡಿತ್ತು.

ಆದರೆ ಲೋಕಸಭಾ ಚುನಾವಣೆ ಮುಗಿದ ಕೇವಲ 9 ತಿಂಗಳ ನಂತರ ನಡೆದ ದೆಹಲಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವೂ 70 ಕ್ಷೇತ್ರಗಳ ಪೈಕಿ 67ನ್ನು ತನ್ನದಾಗಿಸಿಕೊಳ್ಳುವ ಮೂಲಕ ಅಭೂತಪೂರ್ವ ಸಾಧನೆ ಮಾಡಿತ್ತು. ತದನಂತರ ನಡೆದ ಕಾರ್ಪೋರೇಷನ್ ಚುಣಾವಣೆಗಳಲ್ಲಿ ಮತ್ತೆ ಬಿಜೆಪಿ ಮೇಲುಗೈ ಸಾಧಿಸಿತ್ತು. ಈಗಿನ ಲೋಕಸಭಾ ಚುನಾವಣೆಗೆ ಪೂರ್ವ ದಿಲ್ಲಿಯಿಂದ ಬಿಜೆಪಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ದಕ್ಷಿಣದಿಂದ ಮೀನಾಕ್ಷಿ ಲೇಖಿಯವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್‍ನಿಂದ ಕಪಿಲ್ ಸಿಬಲ್, ಶೀಲಾ ದೀಕ್ಷಿತ್, ಅಜಯ್ ಮಾಕನ್ ಆಕರ್ಷಣೆಯಾದರೆ ಆಪ್‍ನಿಂದ ದಿಲೀಪ್ ಪಾಂಡೆ, ಅತಿಶಿ ಮರ್ಲೀನಾ ಪ್ರಮುಖ ಸ್ಪರ್ಧಿಗಳಾಗಿದ್ದಾರೆ.

ಕಳೆದ 20 ವರ್ಷದ ನಾಲ್ಕು ಚುನವಣೆಯ ಫಲಿತಾಂಶಗಳನ್ನು ನೋಡಿದರೆ ಪೂರ್ತಿ ದೆಹಲಿ ಜನ ಒಂದೇ ರೀತಿ ಯೋಚಿಸುತ್ತಾರೆ ಮತ್ತು ಒಂದೇ ಪಕ್ಷವನ್ನು ಆರಿಸುತ್ತಾರೆ ಎನ್ನುವ ರೀತಿಯ ಮತದಾನ ನಡೆದಿದೆ. 1999ರಲ್ಲಿ 7ಕ್ಕೆ 7ನ್ನು ಬಿಜೆಪಿ ಗೆದ್ದಿತ್ತು. 2004ರಲ್ಲಿ 7ರಲ್ಲಿ 6 ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡಿತ್ತು. ದಕ್ಷಿಣ ದೆಹಲಿ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ವಿಜಯ್‍ಕುಮಾರ್ ಮಲ್ಹೋತ್ರ 18 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇನ್ನುಳಿದ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿದ್ದವು. 2009ರ ಚುನಾವಣೆಯಲ್ಲಿ ಎಲ್ಲಾ 7 ಸ್ಥಾನಗಳಲ್ಲಿ ಮತ್ತೆ ಕಾಂಗ್ರೆಸ್ ಗೆಲುವು ಸಾಧಿಸಿತು. 2014ರ ಚುನಾವಣೆಗೆ ಬಂದರೆ 7 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಹೀನಾಯವಾಗಿ ಸೋತು ಮೂರನೇ ಸ್ಥಾನಕ್ಕೆ ಕುಸಿದರೆ ಬಿಜೆಪಿ 7ನ್ನು ಗೆದ್ದಿತ್ತು. ಆಪ್ ಪೈಪೋಟಿ ನೀಡಿದರೂ ಒಂದನ್ನು ಗೆಲ್ಲಲಾಗಲಿಲ್ಲ.

ಈ ಬಾರಿ ಇಲ್ಲಿ ಮತ್ತೆ ಪೈಪೋಟಿ ನಡೆದಿದೆ. 2014ರಲ್ಲಿದ್ದ ಮೋದಿ ಅಲೆ ಈ ಬಾರಿ ಇದೆಯೇ ಇಲ್ಲವೇ ಎಂಬುದನ್ನು ಫಲಿತಾಂಶದ ದಿನ ಮಾತ್ರ ಗಮನಿಸಬಹುದಾಗಿದೆ. ಸಾರ್ವಜನಿಕ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ದೇಶ-ವಿದೇಶ ಗಮನ ಸೆಳೆಯುವಂತಹ ಒಳ್ಳೆಯ ಕೆಲಸ ಮಾಡಿರುವ ಆಮ್ ಆದ್ಮಿ ಪಕ್ಷಕ್ಕೆ ಜನ ಬೆಂಬಲಿಸುತ್ತಾರಾ ಎಂಬುದೂ ಪರೀಕ್ಷೆಗೊಳಪಡಲಿದೆ. ದೆಹಲಿ ಸರ್ಕಾರಿ ಶಾಲೆಗಳು ಮತ್ತು ಮೊಹಲ್ಲಾ ಕ್ಲಿನಿಕ್‍ಗಳು ಸಾಕಷ್ಟು ಒಳ್ಳೆಯ ಹೆಸರನ್ನು ಪಡೆದಿವೆ. ಇನ್ನು ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತಿಸ್‍ಘಡದಲ್ಲಿ ಗೆಲುವಿನ ನಗೆ ಬೀರಿರುವ ಕಾಂಗ್ರೆಸ್ ದೆಹಲಿ ಗೆದ್ದುಕೊಳ್ಳುವ ಹುಮ್ಮಸ್ಸಿನಲ್ಲಿದೆ.

ಆದರೆ ಹಿಂದಿನ ಟ್ರೆಂಡ್ ಗಮನಿಸಿದರೆ ಈ ಬಾರಿ ಮತ್ತೆ 7ಕ್ಕೆ 7ನ್ನು ಬಿಜೆಪಿ ಗೆದ್ದುಕೊಳ್ಳುವಂತೆ ಕಾಣುತ್ತಿದೆ. ಏಕೆಂದರೆ ಕಳೆದ ಸಾರಿ ಅಲ್ಲಿ ಬಿಜೆಪಿ 46.40% ರಷ್ಟು ಮತಗಳನ್ನು ಪಡೆದಿದ್ದರೆ ಆಪ್ ಮತ್ತು ಕಾಂಗ್ರೆಸ್ ಸೇರಿ 32.90% + 15.10% = 48.00%ರಷ್ಟನ್ನು ಮಾತ್ರ ಪಡೆದುಕೊಂಡಿದ್ದವು. ಈ ಬಾರಿ ಈ ಎರಡು ಪಕ್ಷಗಳು ಮೈತ್ರಿ ಕೂಡ ಮಾಡಿಕೊಳ್ಳದೇ ಪ್ರತ್ಯೇಕವಾಗಿ ಚುನಾವಣೆಗೆ ಹೋಗಿರುವುದು ಸಹ ಬಿಜೆಪಿಗೆ ಅನುಕೂಲ ಮಾಡಿಕೊಡುವಂತಿದೆ. ಒಂದು ವೇಳೆ ಇದು ಬದಲಾದರೆ ಮತದಾರರ ಮನಸ್ಥಿತಿ ಕೂಡ ಬದಲಾಗಿದೆ ಎಂತಲೂ ಅರ್ಥೈಸಿಕೊಳ್ಳಬಹುದಾಗಿದೆ. ಇದರ ಹೊರತಾಗಿ ಅಚ್ಚರಿಯ ಫಲಿತಾಂಶ ಬರುವುದಾದಲ್ಲಿ ಮೇ 23ರವರೆಗೆ ಕಾಯಬೇಕು.

ಮೈತ್ರಿ ಏಕೆ ಆಗದಿದ್ದುದಕ್ಕೆ ಕಾಂಗ್ರೆಸ್‍ಗಿಂತ ಆಪ್ ಕಾರಣ ಹೌದೇ?

ಸಾಮಾಜಿಕ ಜಾಲತಾಣಗಳಲ್ಲಿ ಆಮ್‍ಆದ್ಮಿ ಪಕ್ಷವು ಕಾಂಗ್ರೆಸ್‍ಗೆ ಮೈತ್ರಿಯ ಆಹ್ವಾನ ನೀಡುವುದು, ಅದಕ್ಕೆ ಕಾಂಗ್ರೆಸ್‍ನಿಂದ ಯಾವ ಪ್ರತಿಕ್ರಿಯೆಯೂ ಕಾಣದಿರುವುದು ಅಥವಾ ಟಿವಿ ವರದಿಗಾರರಿಗೆ ಶೀಲಾ ದೀಕ್ಷಿತ್ ಮೈತ್ರಿ ಇಲ್ಲ ಎಂದು ಹೇಳುವುದು ಇದನ್ನು ಎಲ್ಲರೂ ನೋಡಿದ್ದಾರೆ. ವಾಸ್ತವವೇನೆಂದರೆ, ಮಾಧ್ಯಮಗಳ ಮೂಲಕ ಪದೇ ಪದೇ ಮೈತ್ರಿಯ ಆಹ್ವಾನ ನೀಡಿದ್ದ ಆಮ್‍ಆದ್ಮಿ ಪಕ್ಷವು ಕಾಂಗ್ರೆಸ್ ನಾಯಕತ್ವದ ಜೊತೆಗೆ ಅಂತಹ ಪ್ರಯತ್ನವನ್ನು ಮಾಡಲಿಲ್ಲವೆಂದು ಮೂಲಗಳು ತಿಳಿಸುತ್ತವೆ. ತಾನು ಬಿಜೆಪಿ ವಿರುದ್ಧದ ಮೈತ್ರಿಗೆ ತುದಿಗಾಲಿನಲ್ಲಿದ್ದೇನೆಂದು ಹೇಳುವುದಕ್ಕೆ ಆಪ್ ಮಾಡಿದ ಪ್ರಯತ್ನ ಎಷ್ಟಿತ್ತೋ, ಅಷ್ಟು ಪ್ರಯತ್ನ ನಿಜಕ್ಕೂ ಕಾಂಗ್ರೆಸ್ ಜೊತೆಗೆ ಮಾತುಕತೆಗೆ ಇರಲಿಲ್ಲವೆಂಬುದು ದೆಹಲಿ ವರ್ತುಲದ ಬಹಳಷ್ಟು ಜನರ ಅಂಬೋಣ.

ಎರಡನೆಯದಾಗಿ, ತನ್ನ ನೆಲೆಯೇ ಇಲ್ಲದ ಇತರ ರಾಜ್ಯಗಳು ಮತ್ತು ದೆಹಲಿಗಳ ಮೈತ್ರಿ ಒಟ್ಟಿಗೇ ಆಗಬೇಕೆಂಬುದು ಆಪ್‍ನ ನಿಲುವಾಗಿತ್ತು. ಆದರೆ, ಕಾಂಗ್ರೆಸ್ ತಮ್ಮದು ರಾಜ್ಯವಾರು ಮೈತ್ರಿಯಾದ್ದರಿಂದ, ದೆಹಲಿಯ ಕುರಿತು ಮಾತ್ರ ಮಾತನಾಡಿ ಎಂದಿತು. ಇದನ್ನೇ ರಾಹುಲ್‍ಗಾಂಧಿ ಟ್ವಿಟ್ಟರ್ ಮೂಲಕ ಹೇಳಿದರು. ಆಪ್‍ಗೆ 4 ಮತ್ತು ಕಾಂಗ್ರೆಸ್‍ಗೆ 3 ಎಂಬುದು ಅವರ ಪ್ರಸ್ತಾಪವಾಗಿತ್ತು. ಇದನ್ನು ಆಪ್ ತಿರಸ್ಕರಿಸಿತ್ತು. ಒಂದು ರೀತಿಯಲ್ಲಿ ಇದು ಹೇಗಿತ್ತೆಂದರೆ ಜೆಡಿಎಸ್ ಪಕ್ಷವು ಕಾಂಗ್ರೆಸ್ ಜೊತೆಗಿನ ಕರ್ನಾಟಕದ ಮೈತ್ರಿಗೆ, ಆಂಧ್ರಪ್ರದೇಶದಲ್ಲೂ ನಾಲ್ಕು ಸೀಟು ಬಿಟ್ಟುಕೊಡುವ ಷರತ್ತು ಹಾಕಿದರೆ ಹೇಗಿರುತ್ತದೋ ಹಾಗೆ. ಒಟ್ಟಾರೆಯಾಗಿ ಮೈತ್ರಿ ಆಗಲಿಲ್ಲ.

ಸರಿಯಾದ ಮೈತ್ರಿ ಆಗಿದ್ದರೆ 7ಕ್ಕೆ 7 ಗೆಲ್ಲಬಹುದಾಗಿದ್ದ ಕಾಂಗ್ರೆಸ್-ಆಪ್ ಪಕ್ಷಗಳು ಈಗ ಹೆಚ್ಚೆಂದರೆ ಒಂದೆರಡನ್ನು ಗೆಲ್ಲಬಹುದು, ಇಲ್ಲವಾದರೆ ಅದೂ ಇಲ್ಲ ಎಂಬ ಪರಿಸ್ಥಿತಿಯನ್ನು ತಂದುಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...