Homeಕರ್ನಾಟಕಡಿಕೆಶಿ,‌ ಸಿದ್ದರಾಮಯ್ಯ ಹೆಸರು; ಸಿಡಿ ಹಗರಣ ಹನಿಟ್ಯ್ರಾಪ್‌ ಸ್ವರೂಪ ಪಡೆಯುತ್ತಿದೆ - ಜೆಡಿಎಸ್‌‌ ಆರೋಪ

ಡಿಕೆಶಿ,‌ ಸಿದ್ದರಾಮಯ್ಯ ಹೆಸರು; ಸಿಡಿ ಹಗರಣ ಹನಿಟ್ಯ್ರಾಪ್‌ ಸ್ವರೂಪ ಪಡೆಯುತ್ತಿದೆ – ಜೆಡಿಎಸ್‌‌ ಆರೋಪ

- Advertisement -
- Advertisement -

ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ. ಪ್ರಕರಣದಲ್ಲಿ ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಹೆಸರು ಕೇಳಿಬರುವ ಮೂಲಕ ಪ್ರಕರಣ ಈಗ ‘ಹನಿಟ್ರ್ಯಾಪ್‌’ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೆಲ್ಲದರ ನಡುವೆ ರಾಷ್ಟ್ರದ ಎದುರು ನಾಚಿಕೆ ಪಡುವ ಸ್ಥಿತಿಯಲ್ಲಿ ರಾಜ್ಯ ನಿಂತಿದೆ ಎಂದು ಜಾತ್ಯಾತೀತ ಜನತಾದಳ ಪಕ್ಷವು ಶನಿವಾರ ಹೇಳಿದೆ.

ಈ ಬಗ್ಗೆ ಪಕ್ಷದ ಅಧೀಕೃತ ಟ್ವಿಟರ್‌ ಖಾತೆಯಿಂದ ಸರಣಿ ಟ್ವೀಟ್ ಮಾಡಲಾಗಿದ್ದು, ‘‘ರಾತ್ರಿ ಒಂದು ಆಡಿಯೊ ಬಿಡುಗಡೆಯಾಗುವುದು, ಬೆಳಗ್ಗೆ ಅದಕ್ಕೊಂದು ಸ್ಪಷ್ಟನೆಯ ವಿಡಿಯೊ ಬಿಡುಗಡೆಯಾಗುವುದು… ಇವೆಲ್ಲವನ್ನೂ ಗಮನಿಸುತ್ತಿದ್ದರೆ ಇದರ ಹಿಂದೆ ದೊಡ್ಡ ಕೂಟವೇ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸುವ ನೆಪದಲ್ಲಿ, ಆಕೆಯನ್ನು ಮುಂದಿಟ್ಟುಕೊಂಡು ಯಾರೋ ಆಟವಾಡುತ್ತಿರುವುದು ಸ್ಪಷ್ಟವಾಗುತ್ತಲಿದೆ” ಎಂದು ಜೆಡಿಎಸ್‌ ಸಂಶಯ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಮತ ಹಾಕಿದ್ದು TMCಗೆ, ವಿವಿಪ್ಯಾಟ್‌ BJP ಚಿನ್ಹೆ ತೋರಿಸುತ್ತಿದೆ!: ಚುನಾವಣಾ ಆಯೋಗಕ್ಕೆ TMC ದೂರು

“ಪ್ರಕರಣವನ್ನು ಅದರಪಾಡಿಗೆ ಬಿಟ್ಟು, ಆಗುವ ಬೆಳವಣಿಗೆಯನ್ನು ರಾಷ್ಟ್ರ ನೋಡಿ ಮನರಂಜನೆ ಪಡೆಯುವಂತೆ ಮಾಡುವುದು ರಾಜ್ಯಕ್ಕೆ, ನಮ್ಮ ಪೊಲೀಸರಿಗೆ ಮಾಡುವ ಅತಿ ದೊಡ್ಡ ಅಪಮಾನವಾಗುತ್ತದೆ. ಈ ಸಂದರ್ಭದಲ್ಲಿ ಪೊಲೀಸರು ದಿಟ್ಟತನ ಮೆರೆಯುವುದು ಅತ್ಯಗತ್ಯ. ಯಾವುದೇ ರಾಜಕೀಯ ಒತ್ತಡಗಳನ್ನೂ ಲೆಕ್ಕಿಸದೇ ತನಿಖೆ ನಡೆಸಿ ಅಸಲಿ ಸತ್ಯ ಬಯಲಿಗೆಳೆಯಬೇಕು” ಎಂದು ಪಕ್ಷವು ಆಗ್ರಹಿಸಿದೆ.

“ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್‌ ಆಗಿದೆಯೋ ಎಂಬ ಪ್ರಶ್ನೆಗಳು ಸಾರ್ವಜನಿಕರನ್ನು ಕಾಡುತ್ತಿವೆ. ಆಡಳಿತ ಪಕ್ಷ, ವಿರೋಧ ಪಕ್ಷ ಎಂಬುದನ್ನು ಲೆಕ್ಕಿಸದೇ ಅಸಲಿ ಸಂಗತಿಯನ್ನು ಪೊಲೀಸರು ಹೊರ ತರಬೇಕು. ರಾಜ್ಯದ ಪೊಲೀಸರ ಕರ್ತವ್ಯ ನಿಷ್ಠೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರಿದೆ. ಅದರ ಪ್ರದರ್ಶನಕ್ಕೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ” ಎಂದು ಹೇಳಿದೆ.

“ಲೈಂಗಿಕ ಪ್ರಕರಣವೊಂದರ ವರದಿಗಳು ನಿತ್ಯ ಪ್ರಕಟವಾಗುತ್ತಿದ್ದರೆ, ಅದರಿಂದ ಕುಟುಂಬಗಳು ಮತ್ತು ಮಕ್ಕಳ ಮೇಲೆ ಆಗುವ ಪರಿಣಾಮಗಳನ್ನು ನಾವು ಚಿಂತಿಸಬೇಕಿದೆ. ಇದಕ್ಕೆ ಅಂತ್ಯ ಹಾಡಬೇಕಿದ್ದರೆ ಸೂಕ್ತ ತನಿಖೆಯೊಂದೇ ದಾರಿ. ಇಲ್ಲವಾದರೆ, ಈ ಪ್ರಕರಣದ ಬೆಳವಣಿಗೆಗಳು ಮತ್ತಷ್ಟು ವಿಸ್ತಾರವಾಗುತ್ತ ನಾಗರಿಕ ಸಮಾಜ ನಾಚಿಕೆಯಲ್ಲಿ ದಿನ ಕಳೆಯಬೇಕಾಗುತ್ತದೆ” ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸಂತ್ರಸ್ತ ಯುವತಿ ನನ್ನನ್ನು ಭೇಟಿಯಾಗಿಲ್ಲ: ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...