Homeಕರ್ನಾಟಕಡಿಕೆಶಿ,‌ ಸಿದ್ದರಾಮಯ್ಯ ಹೆಸರು; ಸಿಡಿ ಹಗರಣ ಹನಿಟ್ಯ್ರಾಪ್‌ ಸ್ವರೂಪ ಪಡೆಯುತ್ತಿದೆ - ಜೆಡಿಎಸ್‌‌ ಆರೋಪ

ಡಿಕೆಶಿ,‌ ಸಿದ್ದರಾಮಯ್ಯ ಹೆಸರು; ಸಿಡಿ ಹಗರಣ ಹನಿಟ್ಯ್ರಾಪ್‌ ಸ್ವರೂಪ ಪಡೆಯುತ್ತಿದೆ – ಜೆಡಿಎಸ್‌‌ ಆರೋಪ

- Advertisement -
- Advertisement -

ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ. ಪ್ರಕರಣದಲ್ಲಿ ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಹೆಸರು ಕೇಳಿಬರುವ ಮೂಲಕ ಪ್ರಕರಣ ಈಗ ‘ಹನಿಟ್ರ್ಯಾಪ್‌’ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೆಲ್ಲದರ ನಡುವೆ ರಾಷ್ಟ್ರದ ಎದುರು ನಾಚಿಕೆ ಪಡುವ ಸ್ಥಿತಿಯಲ್ಲಿ ರಾಜ್ಯ ನಿಂತಿದೆ ಎಂದು ಜಾತ್ಯಾತೀತ ಜನತಾದಳ ಪಕ್ಷವು ಶನಿವಾರ ಹೇಳಿದೆ.

ಈ ಬಗ್ಗೆ ಪಕ್ಷದ ಅಧೀಕೃತ ಟ್ವಿಟರ್‌ ಖಾತೆಯಿಂದ ಸರಣಿ ಟ್ವೀಟ್ ಮಾಡಲಾಗಿದ್ದು, ‘‘ರಾತ್ರಿ ಒಂದು ಆಡಿಯೊ ಬಿಡುಗಡೆಯಾಗುವುದು, ಬೆಳಗ್ಗೆ ಅದಕ್ಕೊಂದು ಸ್ಪಷ್ಟನೆಯ ವಿಡಿಯೊ ಬಿಡುಗಡೆಯಾಗುವುದು… ಇವೆಲ್ಲವನ್ನೂ ಗಮನಿಸುತ್ತಿದ್ದರೆ ಇದರ ಹಿಂದೆ ದೊಡ್ಡ ಕೂಟವೇ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸುವ ನೆಪದಲ್ಲಿ, ಆಕೆಯನ್ನು ಮುಂದಿಟ್ಟುಕೊಂಡು ಯಾರೋ ಆಟವಾಡುತ್ತಿರುವುದು ಸ್ಪಷ್ಟವಾಗುತ್ತಲಿದೆ” ಎಂದು ಜೆಡಿಎಸ್‌ ಸಂಶಯ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಮತ ಹಾಕಿದ್ದು TMCಗೆ, ವಿವಿಪ್ಯಾಟ್‌ BJP ಚಿನ್ಹೆ ತೋರಿಸುತ್ತಿದೆ!: ಚುನಾವಣಾ ಆಯೋಗಕ್ಕೆ TMC ದೂರು

“ಪ್ರಕರಣವನ್ನು ಅದರಪಾಡಿಗೆ ಬಿಟ್ಟು, ಆಗುವ ಬೆಳವಣಿಗೆಯನ್ನು ರಾಷ್ಟ್ರ ನೋಡಿ ಮನರಂಜನೆ ಪಡೆಯುವಂತೆ ಮಾಡುವುದು ರಾಜ್ಯಕ್ಕೆ, ನಮ್ಮ ಪೊಲೀಸರಿಗೆ ಮಾಡುವ ಅತಿ ದೊಡ್ಡ ಅಪಮಾನವಾಗುತ್ತದೆ. ಈ ಸಂದರ್ಭದಲ್ಲಿ ಪೊಲೀಸರು ದಿಟ್ಟತನ ಮೆರೆಯುವುದು ಅತ್ಯಗತ್ಯ. ಯಾವುದೇ ರಾಜಕೀಯ ಒತ್ತಡಗಳನ್ನೂ ಲೆಕ್ಕಿಸದೇ ತನಿಖೆ ನಡೆಸಿ ಅಸಲಿ ಸತ್ಯ ಬಯಲಿಗೆಳೆಯಬೇಕು” ಎಂದು ಪಕ್ಷವು ಆಗ್ರಹಿಸಿದೆ.

“ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್‌ ಆಗಿದೆಯೋ ಎಂಬ ಪ್ರಶ್ನೆಗಳು ಸಾರ್ವಜನಿಕರನ್ನು ಕಾಡುತ್ತಿವೆ. ಆಡಳಿತ ಪಕ್ಷ, ವಿರೋಧ ಪಕ್ಷ ಎಂಬುದನ್ನು ಲೆಕ್ಕಿಸದೇ ಅಸಲಿ ಸಂಗತಿಯನ್ನು ಪೊಲೀಸರು ಹೊರ ತರಬೇಕು. ರಾಜ್ಯದ ಪೊಲೀಸರ ಕರ್ತವ್ಯ ನಿಷ್ಠೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರಿದೆ. ಅದರ ಪ್ರದರ್ಶನಕ್ಕೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ” ಎಂದು ಹೇಳಿದೆ.

“ಲೈಂಗಿಕ ಪ್ರಕರಣವೊಂದರ ವರದಿಗಳು ನಿತ್ಯ ಪ್ರಕಟವಾಗುತ್ತಿದ್ದರೆ, ಅದರಿಂದ ಕುಟುಂಬಗಳು ಮತ್ತು ಮಕ್ಕಳ ಮೇಲೆ ಆಗುವ ಪರಿಣಾಮಗಳನ್ನು ನಾವು ಚಿಂತಿಸಬೇಕಿದೆ. ಇದಕ್ಕೆ ಅಂತ್ಯ ಹಾಡಬೇಕಿದ್ದರೆ ಸೂಕ್ತ ತನಿಖೆಯೊಂದೇ ದಾರಿ. ಇಲ್ಲವಾದರೆ, ಈ ಪ್ರಕರಣದ ಬೆಳವಣಿಗೆಗಳು ಮತ್ತಷ್ಟು ವಿಸ್ತಾರವಾಗುತ್ತ ನಾಗರಿಕ ಸಮಾಜ ನಾಚಿಕೆಯಲ್ಲಿ ದಿನ ಕಳೆಯಬೇಕಾಗುತ್ತದೆ” ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸಂತ್ರಸ್ತ ಯುವತಿ ನನ್ನನ್ನು ಭೇಟಿಯಾಗಿಲ್ಲ: ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...