Homeಮುಖಪುಟಛತ್ತಿಸ್‌ಗಢ ಆದಿವಾಸಿ ಹಕ್ಕುಗಳ ಹೋರಾಟಗಾರ್ತಿ ಹಿಡ್ಮೆ ಮಾರ್ಖಂ ಬಿಡುಗಡೆಗೆ ಒತ್ತಾಯ: ಸಿಎಂ ಗೆ ಪತ್ರ

ಛತ್ತಿಸ್‌ಗಢ ಆದಿವಾಸಿ ಹಕ್ಕುಗಳ ಹೋರಾಟಗಾರ್ತಿ ಹಿಡ್ಮೆ ಮಾರ್ಖಂ ಬಿಡುಗಡೆಗೆ ಒತ್ತಾಯ: ಸಿಎಂ ಗೆ ಪತ್ರ

- Advertisement -
- Advertisement -

ಗಣಿಗಾರಿಕೆ ವಿರೋಧಿ ಮತ್ತು ಬುಡಕಟ್ಟು ಹಕ್ಕುಗಳ ಹೋರಾಟಗಾರ್ತಿ 28 ವರ್ಷದ ಹಿಡ್ಮೆ ಮಾರ್ಖಂ ಅವರನ್ನು ಬಿಡುಗಡೆಗೊಳಿಸುವಂತೆ ಛತ್ತಿಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಗೇಲ್‌ಗೆ ಅಲ್ಲಿನ ನಾಗರಿಕರು ಪತ್ರ ಬರೆದಿದ್ದಾರೆ.

ದಂತೇವಾಡಾದ ಸಮೇಲಿಯಲ್ಲಿ ನಡೆದ ಅಂತರರಾಷ್ಟ್ರೀಯ ಕಾರ್ಮಿಕ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಿಡ್ಮೆ ಮಾರ್ಖಂ ಅವರನ್ನು ಪೊಲೀಸರು ಮತ್ತು ಅರೆಸೈನಿಕ ಪಡೆಗಳು ಬಂಧಿಸಿದ್ದರು. ಆದರೆ ಇದು ಅಪಹರಣ ಎಂದು ಪೀಪಲ್ಸ್ ಯೂನಿಯನ್ ಆಫ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಆರೋಪಿಸಿತ್ತು. ಆದರೆ ಪೊಲೀಸರು ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈಗ ಹಿಡ್ಮೆ ಮೂರು ವಾರಗಳಿಂದ ಜೈಲಿನಲ್ಲಿದ್ದಾರೆ.

ಪಿಯುಸಿಎಲ್‌‌ ಹೇಳಿಕೆಯಂತೆ, “ಶಾಂತಿಯುತವಾಗಿ ನೆರೆದಿದ್ದ ಮುನ್ನೂರು ಗ್ರಾಮಸ್ಥರು ಮತ್ತು ಹೋರಾಟಗಾರರ ಮುಂದೆ ಹಿಡ್ಮೆ ಮಾರ್ಖಂ ಅವರನ್ನು ಎಳೆದೊಯ್ಯಲಾಯಿತು. ನೆರೆದಿದ್ದವರಲ್ಲಿ ಜೈಲು ಬಂದಿ ರಿಹೈ ಸಮಿತಿ ಮತ್ತು ಛತ್ತೀಸ್‌ಗಢ ಮಹಿಳಾ ಅಧಿಕಾರಿ ಮಂಚ್‌ನ ಹೋರಾಟಗಾರರು ಕೂಡ ಇದ್ದರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಹಿಳಾ ದಿನದಂದೇ ಆದಿವಾಸಿ ಹೋರಾಟಗಾರ್ತಿ ಹಿಡ್ಮೆ ಮಾರ್ಖಂ ಅಪಹರಣ ಮಾಡಿದ ಪೊಲೀಸರು: ಆರೋಪ

ಬಂಧನದಲ್ಲಿದ್ದಾಗ ಛತ್ತೀಸ್‌ಗಡ ಪೊಲೀಸ್‌‌ ಮತ್ತು ಅರೆಸೈನಿಕ ಪಡೆಗಳಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಕವಾಸಿ ನಂದೆ ಮತ್ತು ಪಾಂಡೆ ಎಂಬ ಇಬ್ಬರು ಯುವತಿಯರ ನೆನಪಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪೊಲೀಸರ ದೌರ್ಜನ್ಯದಿಂದಾಗಿ ನಂದೆ ಮತ್ತು ಪಾಂಡೆ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ.

ಹಿಡ್ಮೆ ಅರೆಸೈನಿಕ ಪಡೆ ಕ್ಯಾಂಪ್‌ಗಳು ಮತ್ತು ಒಕ್ಕಲೆಬ್ಬಿಸುವುದರ ವಿರುದ್ಧದ ಗಟ್ಟಿ ಧ್ವನಿಯ ಹೋರಾಟಗಾರ್ತಿಯಾಗಿದ್ದಾರೆ. ‘ಜೈಲ್‌ ಬಂದಿ ರಿಹೈ ಸಮಿತಿ’ಯ ಕನ್ವೀನರ್ ಆಗಿರುವ ಅವರು ರಾಜ್ಯಪಾಲರು, ಮುಖ್ಯಮಂತ್ರಿ, ಪೊಲೀಸ್ ವರಿಷ್ಠಾಧಿಕಾರಿ, ಕಲೆಕ್ಟರ್ ಮತ್ತು ಇತರ ಅಧಿಕಾರಿಗಳನ್ನು ಭೇಟಿ ಮಾಡಿ, ಜೈಲುಗಳು ಮತ್ತು ಪೊಲೀಸ್ ಶಿಬಿರಗಳಲ್ಲಿ ಬಂಧಿಸಲ್ಪಟ್ಟ ಮತ್ತು ಶಿಕ್ಷೆಗೊಳಗಾದ ಅಮಾಯಕ ಆದಿವಾಸಿಗಳ ಬಿಡುಗಡೆಗಾಗಿ ಹಲವಾರು ಹೋರಾಟವನ್ನು ನಡೆಸಿದ್ದಾರೆ.

ತಮ್ಮ ಭೂಮಿಯನ್ನು ಪವಿತ್ರ ಭೂವಿ ಎಂದು ಪ್ರತಿಪಾದಿಸುವ ಅವರು ಅಲ್ಲಿನ ಗಣಿಗಾರಿಕೆ ವಿರುದ್ಧವೂ ಹೋರಾಡುತ್ತಿದ್ದರು. ಆದಿವಾಸಿಗಳು ಪವಿತ್ರ ಎಂದು ನಂಬುವ ನಂದರಾಜ್ ಬೆಟ್ಟವನ್ನು ಉಳಿಸುವ ಆಂದೋಲನದ ಭಾಗವಾಗಿ, ಅದಾನಿ ಪ್ರೈವೆಟ್‌‌ ಲಿಮಿಟೆಡ್‌‌ನಂತಹ ಕಂಪೆನಿಗಳು ಬೆಟ್ಟವನ್ನು ನಾಶಪಡಿಸುವುದನ್ನು ವಿರೋಧಿಸಿ, ಕಂಪೆನಿಯ ಗಣಿಗಾರಿಕೆ ಯೋಜನೆಗಳ ವಿರುದ್ಧ ತೀವ್ರವಾಗಿ ಹೋರಾಟವನ್ನು ಸಂಘಟಿಸಿದ್ದರು.


ಇದನ್ನೂ ಓದಿ: ಟೈಟಾನಿಕ್ ಚಲನಚಿತ್ರ ನೋಡಿದ್ದೀರಾ?- ಲಸಿಕೆ ಆದ್ಯತೆಯ ಬಗ್ಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...