Homeಕರ್ನಾಟಕಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಈ ಬಾರಿ ಗಂಭೀರವಾಗಿ ಪರಿಗಣಿಸಿದೆಯೇ?

ಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಈ ಬಾರಿ ಗಂಭೀರವಾಗಿ ಪರಿಗಣಿಸಿದೆಯೇ?

- Advertisement -
- Advertisement -

ಬೆಳಗಾವಿ ಜಿಲ್ಲೆಯ ರಾಜಕಾರಣವೆಂದರೆ ಆಯ್ದ ಕೆಲ ಪಾಳೇಗಾರ ಕುಟುಂಬಗಳ ರಾಜಕಾರಣ. ಇಂತಹ ಊರಿನಲ್ಲಿ ಇಲ್ಲಿವರೆಗೂ ಎಂಪಿ ಇಲೆಕ್ಷನ್ ಅನ್ನು ಗಂಭೀರವಾಗಿ ಪರಿಗಣಿಸದೇ ಇದ್ದ ಕಾಂಗ್ರೆಸ್ ಈ ಸಲ ಶಾಸಕ ಸತೀಶ್ ಜಾರಕಿಹೊಳಿಯವರನ್ನು ಕಣಕ್ಕೆ ಇಳಿಸುತ್ತಿದೆ. ಅಂದರೆ ಆಟ ಚಾಲೂ ಅಂತಿವೆ ಗೋಕಾಕ್, ಅರಭಾವಿ, ಯಮಕನಮರಡಿ ಕಡೆಯ ಪಡ್ಡೆ ಯುವಕರು..

ಕಳೆದ ವರ್ಷ ಡಿಸೆಂಬರ್‌ನಲ್ಲಿ ಬೆಳಗಾವಿಯ ಖಾಸಗಿ ಹೋಟೆಲ್‌ವೊಂದರ ಲಾಬಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮ ತಾಳ್ಮೆ ಕಳೆದುಕೊಂಡರು. ನಗರಕ್ಕೆ ರಾಷ್ಟ್ರಮುಟ್ಟದ ನಾಯಕರನ್ನು ಸ್ವಾಗತಿಸುವ ಕೆಲವು ಬ್ಯಾನರ್‌ಗಳಲ್ಲಿ “ಸುರೇಶ್ ಅಂಗಡಿ ಅಭಿಮಾನಿಗಳ ಸಂಘ” ಎಂದು ಹಾಕಲಾಗಿದೆ ಎಂದು ಫುಲ್ ಗರಂ ಆಗಿದ್ದರು.

ತಕ್ಷಣ ಅವುಗಳನ್ನು ತೆಗೆದುಹಾಕುವಂತೆ ತಾಕೀತು ಮಾಡಿದ್ದ ಅವರು “ಯಾರೂ ಮತ್ತೆ ಅಂತಹ ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಹಾಕಬಾರದು. ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಸ್ಥಾನವಿಲ್ಲ. ನಮ್ಮ ಪಾಲಿಗೆ ಸಾಮೂಹಿಕ ನಾಯಕತ್ವವೇ ಫೈನಲ್” ಎಂದಿದ್ದರು. ಆದರೆ ನಳೀನ್ ಸಾಹೇಬರ ಆಟಾಟೋಪ ಈಗ ಏನಾಯಿತು? ಈಗ ಬಿಜೆಪಿ ಅಭ್ಯರ್ಥಿ ಯಾರು? ಮೃತ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಅಂಗಡಿ ಮೇಡಂ!

ಸುರೇಶ ಅಂಗಡಿಯವರ ಎರಡನೇ ಮಗಳು ಅಭ್ಯರ್ಥಿಯಾಗುವ ಚಾನ್ಸ್ ಇತ್ತು. ಆಕೆ ಕೈಗಾರಿಕಾ ಸಚಿವ, ಮಾಜಿ ಮುಖ್ಯಮಂತ್ರಿ ಹುಬ್ಬಳ್ಳಿಯ ಜಗದೀಶ ಶೆಟ್ಟರ್ ಅವರ ಸೊಸೆ ಕೂಡ! ಅದ್ಯಾಕೋ ಕೊನೆ ಕ್ಷಣದಲ್ಲಿ ಅಂಗಡಿಯವರ ಪತ್ನಿ ಮಂಗಳಮ್ಮರಿಗೆ ಬಿಜೆಪಿ ಟಿಕೇಟ್ ನೀಡಲಾಗಿತು. ನಳಿನ್ ಕುಮಾರ್ ಕಟೀಲ್ ಅವರೇ, ಇದು ವಂಶ ಪಾರಂಪರ್ಯದ ಅಚ್ಚಿನಲ್ಲಿ ಬರುವುದಿಲ್ಲವೆ ಎಂದು ಕೆಲವರು ಪ್ರಶ್ನಿಸುತ್ತಿದ್ದಾರೆ.

ಕ್ಯಾಂಡಿಡೇಟ್ ಕೊರತೆಯಲ್ಲಿ ಕಾಂಗ್ರೆಸ್

ಬೆಳಗಾವಿ ಜಿಲ್ಲೆಯ ರಾಜಕಾರಣವೆಂದರೆ ಅದೊಂದು ಸಿಂಡಿಕೇಟ್ ದಂಧೆ. ಜಾರಕಿಹೊಳಿ, ಎ.ಬಿ ಪಾಟೀಲ್ ಮತ್ತು ಹುಕ್ಕೇರಿ ಕುಟುಂಬಗಳು ಪಕ್ಷಭೇಧ ಮರೆತು ಅಲ್ಲಿ ತಮ್ಮ ರಾಜಕೀಯ ಪ್ರಾಬಲ್ಯ ಮೆರೆಯಲು ತಮ್ಮ ತಮ್ಮ ಏರಿಯಾದಲ್ಲಿ ವೇದಿಕೆ ರೂಪಿಸಿಕೊಂಡಿವೆ ಎಂಬುದೇನೂ ಹೊಸ ವಿಷಯವಲ್ಲ. ಲಕ್ಷ್ಮೀ ಹೆಬ್ಬಾಳಕರ್ ಈ ಸಿಂಡಿಕೇಟ್ ಬುಡವನ್ನು ಕೊಂಚ ಅಲ್ಲಾಡಿಸಿದ್ದು ಕೂಡ ಸತ್ಯವೇ!

ಆದರೆ, ಕಳೆದ 15 ವರ್ಷದಿಂದ ಬೆಳಗಾವಿ ಸಂಸದ ಚುನಾವಣೆಗೆ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಯನ್ನೇ ಹಾಕದೆ ಬಿಜೆಪಿಗೆ ನೆರವಾಗುತ್ತ ಬಂದಿದೆ. ಪ್ರಬಲ ಅಭ್ಯರ್ಥಿ ಇದ್ದರೆ ತಾನೇ ಹಾಕಲು? ಪಕ್ಷದ ಇತರ ಕಾರ್ಯಕರ್ತರನ್ನು ಇವರು ಬೆಳೆಯಲು ಬಿಟ್ಟರೆ ತಾನೇ? ಎಂಬ ಪ್ರಶ್ನೆಗಳು ಸಹಜ.

ಈಗ ಅನಿವಾರ್ಯವಾಗಿ, ಇದ್ದುದರಲ್ಲಿ ಸ್ವಲ್ಪ ಪ್ರಗತಿಪರ ನಾಯಕ ಎಂದು ಕರೆಸಿಕೊಂಡಿರುವ ‘ದೊಡ್’ ಸಾಹುಕಾರ್ ಸತೀಶ ಜಾರಕಿಹೊಳಿಯವರನ್ನೇ ಕಾಂಗ್ರೆಸ್ ಕಣಕ್ಕೆ ಇಳಿಸುತ್ತಿದೆ. ಸದ್ಯ ಶಾಸಕರಾಗಿರುವ ಅವರು ರಾಜ್ಯ ರಾಜಕಾರಣದಲ್ಲಿಯೇ ಹೆಚ್ಚು ಆಸಕ್ತಿಯುಳ್ಳವರಾಗಿದ್ದರು. ಆದರೆ ಕಾಂಗ್ರೆಸ್‌ಗೆ ಕ್ಯಾಂಡಿಡೇಟ್‌ ಕೊರತೆ ಇರುವುದರಿಂದ ಈ ಕ್ಷೇತ್ರ ಗೆಲ್ಲಬೇಕಾದರೆ ಬೇರೆ ಮುಖ ಕಾಣುತ್ತಿಲ್ಲ.

ಆದರೆ ಈ ಉಪ ಚುನಾವಣೆಯಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಯ ಲೈಂಗಿಕ ಸಿ.ಡಿ ಪ್ರಕರಣ, ಎಂಇಎಸ್ ಇತ್ಯಾದಿ ಪಾತ್ರಗಳೂ ಯಾವ ಮಟ್ಟಿಗೆ ಪ್ರಭಾವ ಬೀರಬಹುದು ಎಂಬ ಪ್ರಶ್ನೆಗಳಿವೆ. ಅದು ಸ್ವಲ್ಪ ದಿನಗಳಲ್ಲಿಯೇ ಬಹಿರಂಗಗೊಳ್ಳಲ್ಲಿದೆ.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ; ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...