Homeಕರ್ನಾಟಕಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಈ ಬಾರಿ ಗಂಭೀರವಾಗಿ ಪರಿಗಣಿಸಿದೆಯೇ?

ಬೆಳಗಾವಿ ಬೈ ಎಲೆಕ್ಷನ್: ಕಾಂಗ್ರೆಸ್ ಈ ಬಾರಿ ಗಂಭೀರವಾಗಿ ಪರಿಗಣಿಸಿದೆಯೇ?

- Advertisement -
- Advertisement -

ಬೆಳಗಾವಿ ಜಿಲ್ಲೆಯ ರಾಜಕಾರಣವೆಂದರೆ ಆಯ್ದ ಕೆಲ ಪಾಳೇಗಾರ ಕುಟುಂಬಗಳ ರಾಜಕಾರಣ. ಇಂತಹ ಊರಿನಲ್ಲಿ ಇಲ್ಲಿವರೆಗೂ ಎಂಪಿ ಇಲೆಕ್ಷನ್ ಅನ್ನು ಗಂಭೀರವಾಗಿ ಪರಿಗಣಿಸದೇ ಇದ್ದ ಕಾಂಗ್ರೆಸ್ ಈ ಸಲ ಶಾಸಕ ಸತೀಶ್ ಜಾರಕಿಹೊಳಿಯವರನ್ನು ಕಣಕ್ಕೆ ಇಳಿಸುತ್ತಿದೆ. ಅಂದರೆ ಆಟ ಚಾಲೂ ಅಂತಿವೆ ಗೋಕಾಕ್, ಅರಭಾವಿ, ಯಮಕನಮರಡಿ ಕಡೆಯ ಪಡ್ಡೆ ಯುವಕರು..

ಕಳೆದ ವರ್ಷ ಡಿಸೆಂಬರ್‌ನಲ್ಲಿ ಬೆಳಗಾವಿಯ ಖಾಸಗಿ ಹೋಟೆಲ್‌ವೊಂದರ ಲಾಬಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮ ತಾಳ್ಮೆ ಕಳೆದುಕೊಂಡರು. ನಗರಕ್ಕೆ ರಾಷ್ಟ್ರಮುಟ್ಟದ ನಾಯಕರನ್ನು ಸ್ವಾಗತಿಸುವ ಕೆಲವು ಬ್ಯಾನರ್‌ಗಳಲ್ಲಿ “ಸುರೇಶ್ ಅಂಗಡಿ ಅಭಿಮಾನಿಗಳ ಸಂಘ” ಎಂದು ಹಾಕಲಾಗಿದೆ ಎಂದು ಫುಲ್ ಗರಂ ಆಗಿದ್ದರು.

ತಕ್ಷಣ ಅವುಗಳನ್ನು ತೆಗೆದುಹಾಕುವಂತೆ ತಾಕೀತು ಮಾಡಿದ್ದ ಅವರು “ಯಾರೂ ಮತ್ತೆ ಅಂತಹ ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಹಾಕಬಾರದು. ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಸ್ಥಾನವಿಲ್ಲ. ನಮ್ಮ ಪಾಲಿಗೆ ಸಾಮೂಹಿಕ ನಾಯಕತ್ವವೇ ಫೈನಲ್” ಎಂದಿದ್ದರು. ಆದರೆ ನಳೀನ್ ಸಾಹೇಬರ ಆಟಾಟೋಪ ಈಗ ಏನಾಯಿತು? ಈಗ ಬಿಜೆಪಿ ಅಭ್ಯರ್ಥಿ ಯಾರು? ಮೃತ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಅಂಗಡಿ ಮೇಡಂ!

ಸುರೇಶ ಅಂಗಡಿಯವರ ಎರಡನೇ ಮಗಳು ಅಭ್ಯರ್ಥಿಯಾಗುವ ಚಾನ್ಸ್ ಇತ್ತು. ಆಕೆ ಕೈಗಾರಿಕಾ ಸಚಿವ, ಮಾಜಿ ಮುಖ್ಯಮಂತ್ರಿ ಹುಬ್ಬಳ್ಳಿಯ ಜಗದೀಶ ಶೆಟ್ಟರ್ ಅವರ ಸೊಸೆ ಕೂಡ! ಅದ್ಯಾಕೋ ಕೊನೆ ಕ್ಷಣದಲ್ಲಿ ಅಂಗಡಿಯವರ ಪತ್ನಿ ಮಂಗಳಮ್ಮರಿಗೆ ಬಿಜೆಪಿ ಟಿಕೇಟ್ ನೀಡಲಾಗಿತು. ನಳಿನ್ ಕುಮಾರ್ ಕಟೀಲ್ ಅವರೇ, ಇದು ವಂಶ ಪಾರಂಪರ್ಯದ ಅಚ್ಚಿನಲ್ಲಿ ಬರುವುದಿಲ್ಲವೆ ಎಂದು ಕೆಲವರು ಪ್ರಶ್ನಿಸುತ್ತಿದ್ದಾರೆ.

ಕ್ಯಾಂಡಿಡೇಟ್ ಕೊರತೆಯಲ್ಲಿ ಕಾಂಗ್ರೆಸ್

ಬೆಳಗಾವಿ ಜಿಲ್ಲೆಯ ರಾಜಕಾರಣವೆಂದರೆ ಅದೊಂದು ಸಿಂಡಿಕೇಟ್ ದಂಧೆ. ಜಾರಕಿಹೊಳಿ, ಎ.ಬಿ ಪಾಟೀಲ್ ಮತ್ತು ಹುಕ್ಕೇರಿ ಕುಟುಂಬಗಳು ಪಕ್ಷಭೇಧ ಮರೆತು ಅಲ್ಲಿ ತಮ್ಮ ರಾಜಕೀಯ ಪ್ರಾಬಲ್ಯ ಮೆರೆಯಲು ತಮ್ಮ ತಮ್ಮ ಏರಿಯಾದಲ್ಲಿ ವೇದಿಕೆ ರೂಪಿಸಿಕೊಂಡಿವೆ ಎಂಬುದೇನೂ ಹೊಸ ವಿಷಯವಲ್ಲ. ಲಕ್ಷ್ಮೀ ಹೆಬ್ಬಾಳಕರ್ ಈ ಸಿಂಡಿಕೇಟ್ ಬುಡವನ್ನು ಕೊಂಚ ಅಲ್ಲಾಡಿಸಿದ್ದು ಕೂಡ ಸತ್ಯವೇ!

ಆದರೆ, ಕಳೆದ 15 ವರ್ಷದಿಂದ ಬೆಳಗಾವಿ ಸಂಸದ ಚುನಾವಣೆಗೆ ಕಾಂಗ್ರೆಸ್ ಪ್ರಬಲ ಅಭ್ಯರ್ಥಿಯನ್ನೇ ಹಾಕದೆ ಬಿಜೆಪಿಗೆ ನೆರವಾಗುತ್ತ ಬಂದಿದೆ. ಪ್ರಬಲ ಅಭ್ಯರ್ಥಿ ಇದ್ದರೆ ತಾನೇ ಹಾಕಲು? ಪಕ್ಷದ ಇತರ ಕಾರ್ಯಕರ್ತರನ್ನು ಇವರು ಬೆಳೆಯಲು ಬಿಟ್ಟರೆ ತಾನೇ? ಎಂಬ ಪ್ರಶ್ನೆಗಳು ಸಹಜ.

ಈಗ ಅನಿವಾರ್ಯವಾಗಿ, ಇದ್ದುದರಲ್ಲಿ ಸ್ವಲ್ಪ ಪ್ರಗತಿಪರ ನಾಯಕ ಎಂದು ಕರೆಸಿಕೊಂಡಿರುವ ‘ದೊಡ್’ ಸಾಹುಕಾರ್ ಸತೀಶ ಜಾರಕಿಹೊಳಿಯವರನ್ನೇ ಕಾಂಗ್ರೆಸ್ ಕಣಕ್ಕೆ ಇಳಿಸುತ್ತಿದೆ. ಸದ್ಯ ಶಾಸಕರಾಗಿರುವ ಅವರು ರಾಜ್ಯ ರಾಜಕಾರಣದಲ್ಲಿಯೇ ಹೆಚ್ಚು ಆಸಕ್ತಿಯುಳ್ಳವರಾಗಿದ್ದರು. ಆದರೆ ಕಾಂಗ್ರೆಸ್‌ಗೆ ಕ್ಯಾಂಡಿಡೇಟ್‌ ಕೊರತೆ ಇರುವುದರಿಂದ ಈ ಕ್ಷೇತ್ರ ಗೆಲ್ಲಬೇಕಾದರೆ ಬೇರೆ ಮುಖ ಕಾಣುತ್ತಿಲ್ಲ.

ಆದರೆ ಈ ಉಪ ಚುನಾವಣೆಯಲ್ಲಿ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಯ ಲೈಂಗಿಕ ಸಿ.ಡಿ ಪ್ರಕರಣ, ಎಂಇಎಸ್ ಇತ್ಯಾದಿ ಪಾತ್ರಗಳೂ ಯಾವ ಮಟ್ಟಿಗೆ ಪ್ರಭಾವ ಬೀರಬಹುದು ಎಂಬ ಪ್ರಶ್ನೆಗಳಿವೆ. ಅದು ಸ್ವಲ್ಪ ದಿನಗಳಲ್ಲಿಯೇ ಬಹಿರಂಗಗೊಳ್ಳಲ್ಲಿದೆ.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ; ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...