Homeಕರ್ನಾಟಕ‘ರಮೇಶ್‌ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯುತ್ತೇನೆ’ - ಸಿಡಿ ಹಗರಣದ ಸಂತ್ರಸ್ತೆ ಯುವತಿ

‘ರಮೇಶ್‌ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯುತ್ತೇನೆ’ – ಸಿಡಿ ಹಗರಣದ ಸಂತ್ರಸ್ತೆ ಯುವತಿ

- Advertisement -
- Advertisement -

ರಾಜ್ಯದಾದ್ಯಂತ ಭಾರಿ ಸುದ್ದಿಯಾಗಿದ್ದ ಸಿಡಿ ಹಗರಣದ ವಿಡಿಯೊದಲ್ಲಿ ಕಾಣಿಸಿಕೊಂಡಿದ್ದವರು ಎಂದು ಹೇಳಲಾಗಿರುವ ಯುವತಿ ಇದೀಗ ಶನಿವಾರ ಬೆಳಿಗ್ಗೆ ನಾಲ್ಕನೆ ವಿಡಿಯೊವನ್ನು ಹರಿಬಿಟ್ಟಿದ್ದಾರೆ. ಯುವತಿಯು ಹೊಸ ವಿಡಿಯೊದಲ್ಲಿ, “ರಮೇಶ್ ಜಾರಕಿಹೊಳಿ ಅವರ ಹೆಸರು ಬರೆದಿಟ್ಟು ಸಾಯುವಷ್ಟು ಕಿರುಕುಳ ಆಗುತ್ತಿದೆ” ಎಂದು ಹೇಳಿದ್ದಾರೆ.

ವಿಡಿಯೊದಲ್ಲಿ ಅವರು, “ನನಗೆ ಬದುಕಬೇಕೊ, ಸಾಯಬೇಕೊ ಎಂದು ಒಂದೂ ತಿಳಿಯುತ್ತಿಲ್ಲ. ಯಾವುದೆ ಮಾಹಿತಿ ಸಿಕ್ಕರೂ, ಅದರಲ್ಲಿ ಯಾವುದು ಸತ್ಯ, ಯಾವುದು ಸುಳ್ಳು ಎಂದು ಪರಿಗಣಿಸಿ ಆ ನಂತರ ಅದನ್ನು ಸುದ್ದಿ ಮಾಡಬೇಕು” ಎಂದು ಮಾಧ್ಯಮದೊಂದಿಗೆ ವಿನಂತಿ ಮಾಡಿದ್ದಾರೆ.

ಇದನ್ನೂ ಓದಿ: ಸಂತ್ರಸ್ತೆಗೆ ಭಯ ಹುಟ್ಟಿಸುತ್ತಿರುವ ರಮೇಶ್ ಜಾರಕಿಹೊಳಿ ಬಂಧಿಸಿ: ಮಹಿಳಾ ಕಾಂಗ್ರೆಸ್ ಒತ್ತಾಯ

‘‘ಮಾರ್ಚ್ 2 ರಂದು ಸಿ.ಡಿ. ರಿಲೀಸ್ ಆಗುತ್ತಿದ್ದಂತೆ, ನನಗೆ ಏನು ಮಾಡಬೇಕು, ಎಲ್ಲಿಗೆ ಹೋಗಬೇಕು, ಇದನ್ನು ಯಾರು, ಯಾಕಾಗಿ ಮಾಡಿದ್ದಾರೆ ಎಂಬುದು ತಿಳಿಯಲಿಲ್ಲ. ಮಾಧ್ಯಮದಲ್ಲಿ ಸುದ್ದಿ ಬರುತ್ತಿದ್ದಂತೆ ಸುದ್ದಿ ವಾಹಿನಿಯಲ್ಲಿದ್ದ ನರೇಶ್ ಅಣ್ಣನನ್ನು ಸಂಪರ್ಕಿಸಿದೆ. ಆಗ ‘ಇದಕ್ಕೆಲ್ಲ ರಾಜಕೀಯ ಬೆಂಬಲ‌ ಬೇಕು. ನಾವು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಜೊತೆ‌ ಮಾತನಾಡೋಣ’ ಎಂದು ಅವರು ಧೈರ್ಯ ಹೇಳಿದ್ದರು’’ ಎಂದು ಯುವತಿ ವಿಡಿಯೊದಲ್ಲಿ ತಿಳಿಸಿದ್ದಾರೆ.

“ಮನೆಯಿಂದಲೂ ನಿರಂತರವಾಗಿ ಕರೆಗಳು ಬರುತ್ತಿದ್ದವು. ಅವರೆಲ್ಲ ಭಯಗೊಂಡಿದ್ದು, ಅವರನ್ನು ಸಮಾಧಾನ ಮಾಡಿದ್ದೆ. ಆನಂತರ ನಾವು ಡಿ.ಕೆ. ಶಿವಕುಮಾರ್‌ ಅವರ ಮನೆಯ ಬಳಿ ಹೋಗಿದ್ದೆವು. ಆದರೆ ನಮಗೆ ಅವರನ್ನು ಭೇಟಿಯಾಗಲು ಆಗಲಿಲ್ಲ. ಅಷ್ಟೊತ್ತಿಗೆ ಏನೇನೋ ಆಗ್ಬಿಟ್ಟಿತ್ತು. ಆನಂತ ನಾವು ಅಲ್ಲಿಂದ ವಾಪಾಸು ಬಂದೆವು” ಎಂದು ಅವರು ವಿಡಿಯೊದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ‘ಮಹಾನ್ ನಾಯಕ ಡಿ.ಕೆ ಶಿವಕುಮಾರ್ ವಿರುದ್ಧ ಕನಕಪುರಕ್ಕೆ ಬಂದು ಹೋರಾಡುತ್ತೇನೆ’: ರಮೇಶ್ ಜಾರಕಿಹೊಳಿ

“ನನ್ನ ತಂದೆ ತಾಯಿ ಸೇರಿದಂತೆ ಕುಟುಂಬ ಅಪಾಯದಲ್ಲಿದೆ ಎಂದು ನನಗೆ ಅನಿಸುತ್ತಿದೆ. ತಂದೆ-ತಾಯಿ, ಸಹೋದರನ ಮೊಬೈಲ್ ಸಂಭಾಷಣೆ ಎಲ್ಲೆಡೆ ಹರಿದಾಡುತ್ತಿದೆ. ಅವರು ಎಲ್ಲಿದ್ದಾರೆ ಎಂದು ನನಗೆ ತಿಳಿದಿಲ್ಲ. ಅವರನ್ನು ಬೆಂಗಳೂರಿಗೆ ಕರೆ ತಂದು ಅವರಿಗೆ ರಕ್ಷಣೆ ನೀಡಬೇಕು. ನಾನು ಸುರಕ್ಷಿತವಾಗಿದ್ದು, ನನ್ನನ್ನು ಯಾರೂ ಕಿಡ್ನಾಪ್‌ ಮಾಡಿಲ್ಲ. ಅವರ ಸಮ್ಮುಖದಲ್ಲೇ ನಾನು ಪೊಲೀಸರಿಗೆ ಹೇಳಿಕೆ ನೀಡುತ್ತೇನೆ” ಎಂದು ಅವರು ತಿಳಿಸಿದ್ದಾರೆ.

“ಕಳೆದ 24 ದಿನದಿಂದ ನನಗೆ ತುಂಬಾ ಕಿರುಕುಳವಾಗುತ್ತಿದೆ. ರಮೇಶ್ ಜಾರಕಿಹೊಳಿ ಅವರು ಎಷ್ಟೇ ದುಡ್ಡು ಖರ್ಚಾದರೂ ಎಲ್ಲರನ್ನೂ ಜೈಲಿಗೆ ಹಾಕಿಸುತ್ತೇನೆ, ನನ್ನ ಬಂಧಿಸಿದರೆ ಸರ್ಕಾರ ಉರುಳಿಸುತ್ತೇನೆ ಎನ್ನುತ್ತಿದ್ದಾರೆ. ಇದರ ಅರ್ಥವೇನು? ನನ್ನ ಅಪ್ಪ-ಅಮ್ಮ ಸೇರಿದಂತೆ ನನ್ನನ್ನೂ ಸಾಯಿಸಬಹುದು. ನನಗೆ ನೀಡುತ್ತಿರುವ ಕಿರುಕುಳಕ್ಕೆ ರಮೇಶ್ ಜಾರಕಿಹೊಳಿ ಅವರ ಹೆಸರು ಬರೆದಿಟ್ಟು ನಾನು ಸತ್ತು ಹೋಗಬೇಕು ಎಂದು ಅನಿಸುತ್ತಿದೆ” ಎಂದು ಯುವತಿಯು ವಿಡಿಯೊದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸಿದ ಸಂತ್ರಸ್ತ ಯುವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....