Homeಕರ್ನಾಟಕಬಸವ ಕಲ್ಯಾಣ ಉಪಚುನಾವಣೆ: ವಿಜಯೇಂದ್ರಗೆ ಟಿಕೆಟ್ ಇಲ್ಲ, ಈಗ್ಲೂ ‘ಹೊರಗಿನವರಿಗೇ’ ಟಿಕೆಟ್: ನಾರಾಯಣರಾವ್ ನೆನಪೇ ಕಾಂಗ್ರೆಸ್...

ಬಸವ ಕಲ್ಯಾಣ ಉಪಚುನಾವಣೆ: ವಿಜಯೇಂದ್ರಗೆ ಟಿಕೆಟ್ ಇಲ್ಲ, ಈಗ್ಲೂ ‘ಹೊರಗಿನವರಿಗೇ’ ಟಿಕೆಟ್: ನಾರಾಯಣರಾವ್ ನೆನಪೇ ಕಾಂಗ್ರೆಸ್ ಶಕ್ತಿ!

- Advertisement -
- Advertisement -

ಬೀದರಿನ ಬಸವ ಕಲ್ಯಾಣದಲ್ಲಿ ಈಗ ಉಪ ಚುನಾವಣೆ ನಡೆಯುತ್ತಿದೆ. ಯಡಿಯೂರಪ್ಪ ಅಧಿಕಾರಕ್ಕೆ ಬರುವ ಮೊದಲು ಸದನದಲ್ಲಿ ನಡೆದ ಚರ್ಚೆಯಲ್ಲಿ ತಮ್ಮ ಮುಗ್ಧತೆ ಮತ್ತು ಅದಕ್ಕೂ ಮುಖ್ಯವಾಗಿ ಪ್ರಾಮಾಣಿಕತೆಯ ಕಾರಣಕ್ಕೆ ತಮ್ಮ ಭಾಷಣದಿಂದ ರಾಜ್ಯದ ಗಮನ ಸೆಳೆದ ನಾರಾಯಣರಾವ್ ಎಂಬ ಹಿಂದುಳಿದ ವರ್ಗಕ್ಕೆ ಸೇರಿದ ನಾಯಕ ಕೊವಿಡ್ ಕಾರಣಕ್ಕೆ ಮೃತಪಟ್ಟರು. ಆ ಕಾರಣಕ್ಕೆ ಇಲ್ಲಿ ಉಪ ಚುನಾವಣೆ.

ಇರಲಿ, ಇಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅಭ್ಯರ್ಥಿ ಎಂಬ ಮಾತು ಮೊನ್ನೆವರೆಗೂ ಚಾಲ್ತಿಯಲ್ಲಿತ್ತು. ಹತ್-ಹನ್ನೆರಡು ಸಲ ವಿಜಯೇಂದ್ರ ಇಲ್ಲಿಗೆ ಬಂದು, ಲೋಕಲ್ ನಾಯಕರೊಂದಿಗೆ ಗುಪ್ತ ಮಾತುಕತೆ ನಡೆಸಿದ್ದರು. ಮೃತ ಶಾಸಕ ನಾರಾಯಣಸ್ವಾಮಿಯವರ ಬಯಕೆಯಾಗಿದ್ದ ಅನುಭವ ಮಂಟಪಕ್ಕೆ ಮುಖ್ಯಮಂತ್ರಿ ಚಾಲನೆ ನೀಡಿಬಿಟ್ಟರು. ಬೇರೆ-ಯಾವುದೇ ನಿರ್ದಿಷ್ಠ ಬಜೆಟ್ ಅನುದಾನವೂ ಇಲ್ಲದೇ! ಈ ‘ಪ್ರಗತಿಪರ ಸಂಪ್ರದಾಯ’ ಎಂಬ ವಿಲಕ್ಷಣ ಹೆಸರಿನ ಕಾರ್ಯಕ್ರಮದಲ್ಲಿ ವಿಜಯೇಂದ್ರ ಕೂಡ ಇದ್ದರು.

ಇದನ್ನೂ ಓದಿ: ಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

ಆ ನಂತರವೂ, ಮೊನ್ನೆ ಮಠಗಳಿಗೆ ಬೇಕಾಬಿಟ್ಟಿ 800 ಕೋಟಿ ರೂ ಹಂಚಿದರಲ್ಲ ಸಿಎಂ ಸಾಹೇಬರು… ಅದರಲ್ಲಿ ಬೀದರ್ ಜಿಲ್ಲೆ ಮತ್ತು ಬಸವ ಕಲ್ಯಾಣ ತಾಲೂಕಿನ ಮಠಗಳಿಗೆ ಪ್ರಾಶಸ್ತ್ಯ ನೀಡಲಾಗಿತ್ತು.
ಈ ನಡುವೆ ಹತ್ತಾರು ಸಲ ಬಸವಕಲ್ಯಾಣಕ್ಕೆ ಬಂದ ವಿಜಯೇಂದ್ರ ತಾನೇ ಅಭ್ಯರ್ಥಿ ಎಂಬುದನ್ನು ಪಕ್ಷದ ಲೋಕಲ್ ನಾಯಕರಿಗೆ ಹೇಳಿ ಹೋದರು.

ಅದೇನು ಎಡವಟ್ಟಾಯಿತೊ ಎನೊ. ಈಗ ಇಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸದಗಲ. ಇವರು ಕೂಡ ಬೀದರ್‌ನವರು ಅಲ್ಲವೇ ಅಲ್ಲ. ಕಲಬುರ್ಗಿ ಜಿಲ್ಲೆಯ ಅಸಾಮಿ. ಇವರ ಪತ್ನಿ ಇಲ್ಲಿ ತಹಶೀಲ್ದಾರ್ ಆಗಿ ಕೆಲಸ ಮಾಡಿದ್ದರು ಅಷ್ಟೇ.

ನಾರಾಯಣರಾವ್ ಪ್ರಾಮಾಣಿಕತೆಯೇ ಕಾಂಗ್ರೆಸ್ ಶಕ್ತಿ

ಕಾಂಗ್ರೆಸ್ ಇಲ್ಲಿ ಮೃತ ಶಾಸಕ ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರನ್ನು ಕಣಕ್ಕೆ ಇಳಿಸಿದೆ. ಇಲ್ಲಿ ಕಾಂಗ್ರೆಸ್ ವರ್ಚಸ್ಸಿಗಿಂತ ನಾರಾಯಣರಾವ್ ಅವರ ಪ್ರಾಮಾಣಿಕತೆ, ಸರಳತೆ ಮತ್ತು ಅಂತಿಮದಲ್ಲಿ ಅವರು ಸದನದಲ್ಲಿ ಮಾಡಿದ ‘ಜನಸಾಮಾನ್ಯನ ಭಾಷಣ’ವೇ ಸ್ಪರ್ಧೆಗೆ ನಿಂತ ಹಾಗೆ ಕಾಣುತ್ತಿದೆ.

ಇದನ್ನೂ ಓದಿ: ಸದನದಲ್ಲಿ ಮಿಂಚಿದ ಬಸವ ಪ್ರಣೀತ ಶಾಸಕ ನಾರಾಯಣರಾವ್

ಇನ್ನೊಂದು ಕಡೆ ಮಸ್ಕಿ ಮತ್ತು ಬೆಳಗಾವಿಯಲ್ಲಿ ಕ್ಯಾಂಡಿಡೇಟ್ ಹಾಕದ ಜೆಡಿಎಸ್ ಇಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ! ಇಲ್ಲಿ ಸುಮಾರು 40,000 ದಷ್ಟು ಮುಸ್ಲಿಂ ಮತಗಳಿರುವುದೇ ಅದಕ್ಕೆ ಕಾರಣ..

ಈ ಕುರಿತು ಸಿದ್ದರಾಮಯ್ಯ “ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 40,000 ಅಲ್ಪಸಂಖ್ಯಾತ ಮತಗಳಿವೆ. ಜೆಡಿಎಸ್ ನವರು ಬಿಜೆಪಿ ಜೊತೆ ಒಳ‌ಒಪ್ಪಂದ ಮಾಡಿಕೊಂಡು ಮುಸ್ಲಿಂ‌ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ನಮ್ಮ ಮತಗಳನ್ನು ವಿಭಜಿಸುವ ಹುನ್ನಾರ ಮಾಡುತ್ತಿದ್ದಾರೆ. ಇದನ್ನು ಕ್ಷೇತ್ರದ ಜನ ಅರ್ಥಮಾಡಿಕೊಳ್ಳಬೇಕು” ಎಂದು ಪ್ರೆಸ್ ಮೀಟ್ ನಲ್ಲಿ ತಿಳಿಸಿದ್ದಾರೆ…

ಒಟ್ಟಿನಲ್ಲಿ ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.. ನಾರಾಯಣ್ ರಾವ್ ನೆನಪಿನಲ್ಲಿ ಅವರ ಪತ್ನಿಯನ್ನು ಕ್ಷೇತ್ರದ ಜನತೆ ಮತ್ತೆ ವಿಧಾನಸೌಧಕ್ಕೆ ಕಳಿಸುತ್ತಾರಾ? ಕಾದು ನೋಡಬೇಕಿದೆ.

ಇದನ್ನೂ ಓದಿ: ಅರಸು ಯುಗದ ಆದರ್ಶದ ಕೊಂಡಿ ಬಿ ನಾರಾಯಣರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...