Homeಕರ್ನಾಟಕಬಸವ ಕಲ್ಯಾಣ ಉಪಚುನಾವಣೆ: ವಿಜಯೇಂದ್ರಗೆ ಟಿಕೆಟ್ ಇಲ್ಲ, ಈಗ್ಲೂ ‘ಹೊರಗಿನವರಿಗೇ’ ಟಿಕೆಟ್: ನಾರಾಯಣರಾವ್ ನೆನಪೇ ಕಾಂಗ್ರೆಸ್...

ಬಸವ ಕಲ್ಯಾಣ ಉಪಚುನಾವಣೆ: ವಿಜಯೇಂದ್ರಗೆ ಟಿಕೆಟ್ ಇಲ್ಲ, ಈಗ್ಲೂ ‘ಹೊರಗಿನವರಿಗೇ’ ಟಿಕೆಟ್: ನಾರಾಯಣರಾವ್ ನೆನಪೇ ಕಾಂಗ್ರೆಸ್ ಶಕ್ತಿ!

- Advertisement -
- Advertisement -

ಬೀದರಿನ ಬಸವ ಕಲ್ಯಾಣದಲ್ಲಿ ಈಗ ಉಪ ಚುನಾವಣೆ ನಡೆಯುತ್ತಿದೆ. ಯಡಿಯೂರಪ್ಪ ಅಧಿಕಾರಕ್ಕೆ ಬರುವ ಮೊದಲು ಸದನದಲ್ಲಿ ನಡೆದ ಚರ್ಚೆಯಲ್ಲಿ ತಮ್ಮ ಮುಗ್ಧತೆ ಮತ್ತು ಅದಕ್ಕೂ ಮುಖ್ಯವಾಗಿ ಪ್ರಾಮಾಣಿಕತೆಯ ಕಾರಣಕ್ಕೆ ತಮ್ಮ ಭಾಷಣದಿಂದ ರಾಜ್ಯದ ಗಮನ ಸೆಳೆದ ನಾರಾಯಣರಾವ್ ಎಂಬ ಹಿಂದುಳಿದ ವರ್ಗಕ್ಕೆ ಸೇರಿದ ನಾಯಕ ಕೊವಿಡ್ ಕಾರಣಕ್ಕೆ ಮೃತಪಟ್ಟರು. ಆ ಕಾರಣಕ್ಕೆ ಇಲ್ಲಿ ಉಪ ಚುನಾವಣೆ.

ಇರಲಿ, ಇಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅಭ್ಯರ್ಥಿ ಎಂಬ ಮಾತು ಮೊನ್ನೆವರೆಗೂ ಚಾಲ್ತಿಯಲ್ಲಿತ್ತು. ಹತ್-ಹನ್ನೆರಡು ಸಲ ವಿಜಯೇಂದ್ರ ಇಲ್ಲಿಗೆ ಬಂದು, ಲೋಕಲ್ ನಾಯಕರೊಂದಿಗೆ ಗುಪ್ತ ಮಾತುಕತೆ ನಡೆಸಿದ್ದರು. ಮೃತ ಶಾಸಕ ನಾರಾಯಣಸ್ವಾಮಿಯವರ ಬಯಕೆಯಾಗಿದ್ದ ಅನುಭವ ಮಂಟಪಕ್ಕೆ ಮುಖ್ಯಮಂತ್ರಿ ಚಾಲನೆ ನೀಡಿಬಿಟ್ಟರು. ಬೇರೆ-ಯಾವುದೇ ನಿರ್ದಿಷ್ಠ ಬಜೆಟ್ ಅನುದಾನವೂ ಇಲ್ಲದೇ! ಈ ‘ಪ್ರಗತಿಪರ ಸಂಪ್ರದಾಯ’ ಎಂಬ ವಿಲಕ್ಷಣ ಹೆಸರಿನ ಕಾರ್ಯಕ್ರಮದಲ್ಲಿ ವಿಜಯೇಂದ್ರ ಕೂಡ ಇದ್ದರು.

ಇದನ್ನೂ ಓದಿ: ಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

ಆ ನಂತರವೂ, ಮೊನ್ನೆ ಮಠಗಳಿಗೆ ಬೇಕಾಬಿಟ್ಟಿ 800 ಕೋಟಿ ರೂ ಹಂಚಿದರಲ್ಲ ಸಿಎಂ ಸಾಹೇಬರು… ಅದರಲ್ಲಿ ಬೀದರ್ ಜಿಲ್ಲೆ ಮತ್ತು ಬಸವ ಕಲ್ಯಾಣ ತಾಲೂಕಿನ ಮಠಗಳಿಗೆ ಪ್ರಾಶಸ್ತ್ಯ ನೀಡಲಾಗಿತ್ತು.
ಈ ನಡುವೆ ಹತ್ತಾರು ಸಲ ಬಸವಕಲ್ಯಾಣಕ್ಕೆ ಬಂದ ವಿಜಯೇಂದ್ರ ತಾನೇ ಅಭ್ಯರ್ಥಿ ಎಂಬುದನ್ನು ಪಕ್ಷದ ಲೋಕಲ್ ನಾಯಕರಿಗೆ ಹೇಳಿ ಹೋದರು.

ಅದೇನು ಎಡವಟ್ಟಾಯಿತೊ ಎನೊ. ಈಗ ಇಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸದಗಲ. ಇವರು ಕೂಡ ಬೀದರ್‌ನವರು ಅಲ್ಲವೇ ಅಲ್ಲ. ಕಲಬುರ್ಗಿ ಜಿಲ್ಲೆಯ ಅಸಾಮಿ. ಇವರ ಪತ್ನಿ ಇಲ್ಲಿ ತಹಶೀಲ್ದಾರ್ ಆಗಿ ಕೆಲಸ ಮಾಡಿದ್ದರು ಅಷ್ಟೇ.

ನಾರಾಯಣರಾವ್ ಪ್ರಾಮಾಣಿಕತೆಯೇ ಕಾಂಗ್ರೆಸ್ ಶಕ್ತಿ

ಕಾಂಗ್ರೆಸ್ ಇಲ್ಲಿ ಮೃತ ಶಾಸಕ ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರನ್ನು ಕಣಕ್ಕೆ ಇಳಿಸಿದೆ. ಇಲ್ಲಿ ಕಾಂಗ್ರೆಸ್ ವರ್ಚಸ್ಸಿಗಿಂತ ನಾರಾಯಣರಾವ್ ಅವರ ಪ್ರಾಮಾಣಿಕತೆ, ಸರಳತೆ ಮತ್ತು ಅಂತಿಮದಲ್ಲಿ ಅವರು ಸದನದಲ್ಲಿ ಮಾಡಿದ ‘ಜನಸಾಮಾನ್ಯನ ಭಾಷಣ’ವೇ ಸ್ಪರ್ಧೆಗೆ ನಿಂತ ಹಾಗೆ ಕಾಣುತ್ತಿದೆ.

ಇದನ್ನೂ ಓದಿ: ಸದನದಲ್ಲಿ ಮಿಂಚಿದ ಬಸವ ಪ್ರಣೀತ ಶಾಸಕ ನಾರಾಯಣರಾವ್

ಇನ್ನೊಂದು ಕಡೆ ಮಸ್ಕಿ ಮತ್ತು ಬೆಳಗಾವಿಯಲ್ಲಿ ಕ್ಯಾಂಡಿಡೇಟ್ ಹಾಕದ ಜೆಡಿಎಸ್ ಇಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ! ಇಲ್ಲಿ ಸುಮಾರು 40,000 ದಷ್ಟು ಮುಸ್ಲಿಂ ಮತಗಳಿರುವುದೇ ಅದಕ್ಕೆ ಕಾರಣ..

ಈ ಕುರಿತು ಸಿದ್ದರಾಮಯ್ಯ “ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 40,000 ಅಲ್ಪಸಂಖ್ಯಾತ ಮತಗಳಿವೆ. ಜೆಡಿಎಸ್ ನವರು ಬಿಜೆಪಿ ಜೊತೆ ಒಳ‌ಒಪ್ಪಂದ ಮಾಡಿಕೊಂಡು ಮುಸ್ಲಿಂ‌ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ನಮ್ಮ ಮತಗಳನ್ನು ವಿಭಜಿಸುವ ಹುನ್ನಾರ ಮಾಡುತ್ತಿದ್ದಾರೆ. ಇದನ್ನು ಕ್ಷೇತ್ರದ ಜನ ಅರ್ಥಮಾಡಿಕೊಳ್ಳಬೇಕು” ಎಂದು ಪ್ರೆಸ್ ಮೀಟ್ ನಲ್ಲಿ ತಿಳಿಸಿದ್ದಾರೆ…

ಒಟ್ಟಿನಲ್ಲಿ ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.. ನಾರಾಯಣ್ ರಾವ್ ನೆನಪಿನಲ್ಲಿ ಅವರ ಪತ್ನಿಯನ್ನು ಕ್ಷೇತ್ರದ ಜನತೆ ಮತ್ತೆ ವಿಧಾನಸೌಧಕ್ಕೆ ಕಳಿಸುತ್ತಾರಾ? ಕಾದು ನೋಡಬೇಕಿದೆ.

ಇದನ್ನೂ ಓದಿ: ಅರಸು ಯುಗದ ಆದರ್ಶದ ಕೊಂಡಿ ಬಿ ನಾರಾಯಣರಾವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...