Homeಕರ್ನಾಟಕಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ಕರ್ನಾಟಕ ಮಾದರಿಯ ರೈತ ಹೋರಾಟಕ್ಕೆ ಪೂರಕ ಚಳುವಳಿಯೊಂದು ಮಸ್ಕಿಯಲ್ಲಿ ರೂಪುತಳೆಯುತ್ತಿದೆ.

- Advertisement -
- Advertisement -

ಮಸ್ಕಿಯಲ್ಲಿ ಅಭ್ಯರ್ಥಿಗಳು ಅದಲು ಬದಲು, ಜೆಡಿಎಸ್ ಕ್ಯಾಂಡಿಡೆಟೇ ಇಲ್ಲ- ಈ ಪಾಲಿಟಿಕಲ್ ಕತೆಯ ಆಚೆ ಹೋಗೋಣ. ಮುಖ್ಯವಾಹಿನಿ ಮಾಧ್ಯಮಗಳೆಲ್ಲ ಕಾಟಾಚಾರಕ್ಕೆ ಎಂಬಂತೆ ಇಲ್ಲಿನ ಒಂದು ‘ಪುಟ್ಟ’ ನೀರಾವರಿ ಹೋರಾಟದ ಬಗ್ಗೆ ಬರೆದಿವೆ. ಅದು ಕೇವಲ ಕೊಪ್ಪಳ-ರಾಯಚೂರು ಸುದ್ದಿ ಎಂಬಂತೆ ಅವು ವರ್ತಿಸಿವೆ.

ದೆಹಲಿ ಗಡಿಗಳನ್ನು ಮೀರಿ ಕರ್ನಾಟಕಕ್ಕೂ ತಲುಪಿದ ರೈತ ಹೋರಾಟದ ಸಂದರ್ಭದಲ್ಲಿ ಇಲ್ಲಿ ನಮ್ಮದೇ ಮಾದರಿಯ ರೈತ ಚಳವಳಿ ಕಟ್ಟುವ ಮಾತು ಕೇಳಿ ಬಂದಿವೆ. ಇಂತಹ ಚಳುವಳಿ ನೀರಿಗಾಗಿ 100 ದಿನ ದಾಟಿ ನಡೆದಿರುವ ಈ ಪುಟ್ಟ ಹೋರಾಟವನ್ನು ಗಣನೆಗೆ ತೆಗೆದುಕೊಳ್ಳಬೇಕು. ಕೃಷಿ ಸಚಿವ ಬಿ.ಸಿ ಪಾಟೀಲರ ಕೇತ್ರದ ರಟ್ಟಿಹಳ್ಳಿಯಲ್ಲಿ ಒಂದು ರೈತ ಹೋರಾಟ ಇನ್ನೂ ಜೀವಂತವಾಗಿದೆ. ಅವರು ನೀರು ಕೇಳುತ್ತಿಲ್ಲ, ಬದಲಿಗೆ ಶಿವಮೊಗ್ಗದ ಭೂಮಿಗೆ ನೀರು ಒದಗಿಸಲು ತಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳುತ್ತಿರುವ ಪ್ರಕ್ರಿಯೆ ವಿರುದ್ಧ ಅವರ ಹೋರಾಟವಿದೆ.

ನೀರು ಬೇಕು, ಭೂಮಿ ಉಳಿಯಬೇಕು ಎಂಬ ಈ ಎರಡು ರೈತ ಹೋರಾಟಗಳಲ್ಲಿ ವೈಪರೀತ್ಯ ಕಾಣಿಸಬಹುದು. ಆದರೆ, ಎರಡೂ ಬದುಕಿಗಾಗಿ ನಡೆಯುತ್ತಿರುವ ಹೋರಾಟಗಳೇ ಅಲ್ಲವೇ? ಕರ್ನಾಟಕ ಮಾದರಿಯ ರೈತ ಚಳುವಳಿ ಕಟ್ಟುವಾಗ ಈ ಪುಟ್ಟ ಹೋರಾಟದ ತೊರೆಗಳನ್ನು, ಇಲ್ಲಿನ ‘ಮೇಲ್ನೋಟದ’ ವೈಪರೀತ್ಯಗಳನ್ನು ಗಮನಿಸಬೇಕು…

ಮತ್ತೆ ಮಸ್ಕಿಗೆ ಬರೋಣ, ಆದರೆ ಅದು ಸಿಂಧನೂರು ಮೂಲಕವೇ ಬರಬೇಕು! ಈ ಉಪ ಚುನಾವಣೆಯಲ್ಲಿ ಈ ನೀರಾವರಿ ಹೋರಾಟ ಒಂದು ಗುಪ್ತಗಾಮಿನಿಯ ರಭಸದಂತೆ ಹರಿಯುತ್ತಿದೆ. ಅದು ತಮ್ಮೂರ ಹೊಲಗಳಿಗೆ ನೀರನ್ನು ಬೇಡುತ್ತಿದೆ. ಚುನಾವಣೆ ಇರುವ ಮತಕ್ಷೇತ್ರದ 107 ಗ್ರಾಮಗಳು, ಅದರಲ್ಲೂ ಮುಖ್ಯವಾಗಿ 58 ಗ್ರಾಮಗಳು ಈಗ ಹೋರಾಟಕ್ಕೆ ನಿಂತಿವೆ. ಅವೇನೂ ಬೇರೆಯವರ ಪಾಲಿನ ನೀರು ಕೇಳುತ್ತಿಲ್ಲ. ಆಂಧ್ರಪ್ರದೇಶದ ಭೂಮಿಗೆ ಸೇರಬೇಕಾದ ನೀರನ್ನು ಕಬಳಿಸಲು ಯತ್ನಿಸುತ್ತಿಲ್ಲ. ಸುಖಾಸುಮ್ಮನೇ ಸಮುದ್ರಕ್ಕೆ ಹರಿದು ಹೋಗುವ ನೀರನ್ನು ಅವರು ನಮ್ಮ ಹೊಲಕ್ಕ ಕೊಡ್ರಿ ಅನ್ನುತ್ತಿದ್ದಾರೆ.

ಏನಿದು NRBC_5A ಯೋಜನೆ?

ಮಸ್ಕಿ ತಾಲ್ಲೂಕಿನ ಬರಪೀಡಿತ 58 ಹಳ್ಳಿಗಳ ಗ್ರಾಮಸ್ಥರು, ರೈತರು ನಾರಾಯಣಪೂರ ಬಲದಂಡೆ ಕಾಲುವೆ 5(ಎ) ಪಾಮನ ಕಲ್ಲೂರು ಶಾಲಾ ಕಾಲುವೆ ಯೋಜನೆಯ ಮೂಲಕ ತಮ್ಮ ಗ್ರಾಮಗಳಿಗೆ ನೀರಾವರಿ ಯೋಜನೆ ಬೇಕೆಂದು ಆಗ್ರಹಿಸಿ ಕಳೆದ 12 ವರ್ಷಗಳಿಂದ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕ ನೀರಾವರಿ ಸಂಘ ಕಟ್ಟಿ ತಮ್ಮೂರಿಗೆ ಕಾಲುವೇ ನೀರು ಬಿಡಬೇಕೆಂದು ನೂರಾರು ಪ್ರತಿಭಟನೆಗಳನ್ನು ನಡೆಸಿದ್ದಾರೆ. ಈ 12 ವರ್ಷಗಳ ಅವಧಿಯಲ್ಲಿ ನಾಲ್ಕು ಸರ್ಕಾರಗಳು ಬದಲಾಗಿವೆ. ಎಲ್ಲಾ ಸರ್ಕಾರಗಳು ಭರವಸೆ ನೀಡಿವೆಯೇ ಹೊರತು ಒಬ್ಬರು ಕಾರ್ಯರೂಪಕ್ಕೆ ತಂದಿಲ್ಲ ಎಂದು ರೈತರು ಆರೋಪಿಸುತ್ತಾರೆ.

ಮಸ್ಕಿ ಮತ ಕ್ಷೇತ್ರ

ಮಸ್ಕಿ ಕೇತ್ರವೇ ಭೌಗೋಳಿಕವಾಗಿ ಒಂದು ವೈಪರೀತ್ಯಗಳ ಕ್ಷೇತ್ರ. ಮಸ್ಕಿ ಮತ್ತು ಸಿಂಧನೂರು ತಾಲೂಕುಗಳ ನೂರಾರು ಗ್ರಾಮಗಳು ಸೇರಿ ಮಸ್ಕಿ ಮತಕ್ಷೇತ್ರವಾಗಿದೆ. ಆದರೆ ಹರಿವ ನೀರಿಗೆ ಈ ಭೌಗೋಳಿಕ ಬಾರ್ಡರ್‌ಗಳು ಇಲ್ಲ.

1.72 ಲಕ್ಷ ಹೆಕ್ಟೇರ್ ಭೂಮಿಗೆ ಕೃಷ್ಣಾ ನೀರು ಕೊಡಿ ಎಂಬುದು 107 ಹಳ್ಳಿಗಳ, ಮುಖ್ಯವಾಗಿ 58 ಹಳ್ಳಿಗಳ ಹಕ್ಕೊತ್ತಾಯ. ನೆನಪಿಡಿ, ಇಲ್ಲಿ ತುಂಗಭದ್ರಾ ನೀರನ್ನು ಅವರು ಕೇಳುತ್ತಿಲ್ಲ. ಈ ಮಾತು ಏಕೆ ಹೇಳಬೇಕಿದೆ ಎಂದರೆ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಹೆಸರಲ್ಲಿ ಸರ್ಕಾರ ವಂಚನೆ ಮಾಡುತ್ತಿದೆ. ಮತ್ತೊಮ್ಮೆ ಪಕ್ಕಾ ಮಾಡಿಕೊಳ್ಳಿ, ತುಂಗಭದ್ರೆಯಲ್ಲ, ಇಲ್ಲಿಗೆ ಬೇಕಿರುವುದು ಕೃಷ್ಣೆ.

ಮಸ್ಕಿ-ಲಿಂಗಸುಗೂರು ಹೆದ್ದಾರಿಯಲ್ಲಿ ಬರುವ ಪಾಮನ ಕಲ್ಲೂರು ಎಂಬ ಗ್ರಾಮದಲ್ಲಿ ನೀರಿಗಾಗಿ ಈ ಹೋರಾಟ ನಡೆದಿದೆ, ಅದೀಗ 125 ದಿನ ದಾಟಿದೆ ಕೂಡ. ಈ ಹೋರಾಟಕ್ಕೆ ಬೆಂಬಲ ನೀಡುತ್ತಿರುವ ಚಂದ್ರಶೇಖರ್ ಗೋರಬಾಳ ನಾನುಗೌರಿ.ಕಾಂ ಜೊತೆ ಮಾತನಾಡಿ, ‘ಈ ಹೋರಾಟ ನೂರಾರು ಹಳ್ಳಿಗಳ ಜನರ ಜೀವನ್ಮರಣದ ಪ್ರಶ್ನೆ. ಹೋರಾಟವೇ ಬೇರೆ ರಾಜಕೀಯವೇ ಬೇರೆ ಎನ್ನಲೂ ಆಗದು. ಈ ಸಲದ ಚುನಾವಣಾ ಫಲಿತಾಂಶದಲ್ಲಿ ಈ ಹೋರಾಟವೇ ಡಿಸೈಡಿಂಗ್ ಫ್ಯಾಕ್ಟರ್ ಆಗಲಿದೆ, ಆಗಲೇಬೇಕು- ಡೆಮಾಕ್ರಸಿಯ ಹಿತಕ್ಕಾಗಿ’ ಎಂದಿದ್ದಾರೆ.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ: NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ


ಇದನ್ನೂ ಓದಿ: ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...