Homeಕರ್ನಾಟಕಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

ಕರ್ನಾಟಕ ಮಾದರಿಯ ರೈತ ಹೋರಾಟಕ್ಕೆ ಪೂರಕ ಚಳುವಳಿಯೊಂದು ಮಸ್ಕಿಯಲ್ಲಿ ರೂಪುತಳೆಯುತ್ತಿದೆ.

- Advertisement -
- Advertisement -

ಮಸ್ಕಿಯಲ್ಲಿ ಅಭ್ಯರ್ಥಿಗಳು ಅದಲು ಬದಲು, ಜೆಡಿಎಸ್ ಕ್ಯಾಂಡಿಡೆಟೇ ಇಲ್ಲ- ಈ ಪಾಲಿಟಿಕಲ್ ಕತೆಯ ಆಚೆ ಹೋಗೋಣ. ಮುಖ್ಯವಾಹಿನಿ ಮಾಧ್ಯಮಗಳೆಲ್ಲ ಕಾಟಾಚಾರಕ್ಕೆ ಎಂಬಂತೆ ಇಲ್ಲಿನ ಒಂದು ‘ಪುಟ್ಟ’ ನೀರಾವರಿ ಹೋರಾಟದ ಬಗ್ಗೆ ಬರೆದಿವೆ. ಅದು ಕೇವಲ ಕೊಪ್ಪಳ-ರಾಯಚೂರು ಸುದ್ದಿ ಎಂಬಂತೆ ಅವು ವರ್ತಿಸಿವೆ.

ದೆಹಲಿ ಗಡಿಗಳನ್ನು ಮೀರಿ ಕರ್ನಾಟಕಕ್ಕೂ ತಲುಪಿದ ರೈತ ಹೋರಾಟದ ಸಂದರ್ಭದಲ್ಲಿ ಇಲ್ಲಿ ನಮ್ಮದೇ ಮಾದರಿಯ ರೈತ ಚಳವಳಿ ಕಟ್ಟುವ ಮಾತು ಕೇಳಿ ಬಂದಿವೆ. ಇಂತಹ ಚಳುವಳಿ ನೀರಿಗಾಗಿ 100 ದಿನ ದಾಟಿ ನಡೆದಿರುವ ಈ ಪುಟ್ಟ ಹೋರಾಟವನ್ನು ಗಣನೆಗೆ ತೆಗೆದುಕೊಳ್ಳಬೇಕು. ಕೃಷಿ ಸಚಿವ ಬಿ.ಸಿ ಪಾಟೀಲರ ಕೇತ್ರದ ರಟ್ಟಿಹಳ್ಳಿಯಲ್ಲಿ ಒಂದು ರೈತ ಹೋರಾಟ ಇನ್ನೂ ಜೀವಂತವಾಗಿದೆ. ಅವರು ನೀರು ಕೇಳುತ್ತಿಲ್ಲ, ಬದಲಿಗೆ ಶಿವಮೊಗ್ಗದ ಭೂಮಿಗೆ ನೀರು ಒದಗಿಸಲು ತಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳುತ್ತಿರುವ ಪ್ರಕ್ರಿಯೆ ವಿರುದ್ಧ ಅವರ ಹೋರಾಟವಿದೆ.

ನೀರು ಬೇಕು, ಭೂಮಿ ಉಳಿಯಬೇಕು ಎಂಬ ಈ ಎರಡು ರೈತ ಹೋರಾಟಗಳಲ್ಲಿ ವೈಪರೀತ್ಯ ಕಾಣಿಸಬಹುದು. ಆದರೆ, ಎರಡೂ ಬದುಕಿಗಾಗಿ ನಡೆಯುತ್ತಿರುವ ಹೋರಾಟಗಳೇ ಅಲ್ಲವೇ? ಕರ್ನಾಟಕ ಮಾದರಿಯ ರೈತ ಚಳುವಳಿ ಕಟ್ಟುವಾಗ ಈ ಪುಟ್ಟ ಹೋರಾಟದ ತೊರೆಗಳನ್ನು, ಇಲ್ಲಿನ ‘ಮೇಲ್ನೋಟದ’ ವೈಪರೀತ್ಯಗಳನ್ನು ಗಮನಿಸಬೇಕು…

ಮತ್ತೆ ಮಸ್ಕಿಗೆ ಬರೋಣ, ಆದರೆ ಅದು ಸಿಂಧನೂರು ಮೂಲಕವೇ ಬರಬೇಕು! ಈ ಉಪ ಚುನಾವಣೆಯಲ್ಲಿ ಈ ನೀರಾವರಿ ಹೋರಾಟ ಒಂದು ಗುಪ್ತಗಾಮಿನಿಯ ರಭಸದಂತೆ ಹರಿಯುತ್ತಿದೆ. ಅದು ತಮ್ಮೂರ ಹೊಲಗಳಿಗೆ ನೀರನ್ನು ಬೇಡುತ್ತಿದೆ. ಚುನಾವಣೆ ಇರುವ ಮತಕ್ಷೇತ್ರದ 107 ಗ್ರಾಮಗಳು, ಅದರಲ್ಲೂ ಮುಖ್ಯವಾಗಿ 58 ಗ್ರಾಮಗಳು ಈಗ ಹೋರಾಟಕ್ಕೆ ನಿಂತಿವೆ. ಅವೇನೂ ಬೇರೆಯವರ ಪಾಲಿನ ನೀರು ಕೇಳುತ್ತಿಲ್ಲ. ಆಂಧ್ರಪ್ರದೇಶದ ಭೂಮಿಗೆ ಸೇರಬೇಕಾದ ನೀರನ್ನು ಕಬಳಿಸಲು ಯತ್ನಿಸುತ್ತಿಲ್ಲ. ಸುಖಾಸುಮ್ಮನೇ ಸಮುದ್ರಕ್ಕೆ ಹರಿದು ಹೋಗುವ ನೀರನ್ನು ಅವರು ನಮ್ಮ ಹೊಲಕ್ಕ ಕೊಡ್ರಿ ಅನ್ನುತ್ತಿದ್ದಾರೆ.

ಏನಿದು NRBC_5A ಯೋಜನೆ?

ಮಸ್ಕಿ ತಾಲ್ಲೂಕಿನ ಬರಪೀಡಿತ 58 ಹಳ್ಳಿಗಳ ಗ್ರಾಮಸ್ಥರು, ರೈತರು ನಾರಾಯಣಪೂರ ಬಲದಂಡೆ ಕಾಲುವೆ 5(ಎ) ಪಾಮನ ಕಲ್ಲೂರು ಶಾಲಾ ಕಾಲುವೆ ಯೋಜನೆಯ ಮೂಲಕ ತಮ್ಮ ಗ್ರಾಮಗಳಿಗೆ ನೀರಾವರಿ ಯೋಜನೆ ಬೇಕೆಂದು ಆಗ್ರಹಿಸಿ ಕಳೆದ 12 ವರ್ಷಗಳಿಂದ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕ ನೀರಾವರಿ ಸಂಘ ಕಟ್ಟಿ ತಮ್ಮೂರಿಗೆ ಕಾಲುವೇ ನೀರು ಬಿಡಬೇಕೆಂದು ನೂರಾರು ಪ್ರತಿಭಟನೆಗಳನ್ನು ನಡೆಸಿದ್ದಾರೆ. ಈ 12 ವರ್ಷಗಳ ಅವಧಿಯಲ್ಲಿ ನಾಲ್ಕು ಸರ್ಕಾರಗಳು ಬದಲಾಗಿವೆ. ಎಲ್ಲಾ ಸರ್ಕಾರಗಳು ಭರವಸೆ ನೀಡಿವೆಯೇ ಹೊರತು ಒಬ್ಬರು ಕಾರ್ಯರೂಪಕ್ಕೆ ತಂದಿಲ್ಲ ಎಂದು ರೈತರು ಆರೋಪಿಸುತ್ತಾರೆ.

ಮಸ್ಕಿ ಮತ ಕ್ಷೇತ್ರ

ಮಸ್ಕಿ ಕೇತ್ರವೇ ಭೌಗೋಳಿಕವಾಗಿ ಒಂದು ವೈಪರೀತ್ಯಗಳ ಕ್ಷೇತ್ರ. ಮಸ್ಕಿ ಮತ್ತು ಸಿಂಧನೂರು ತಾಲೂಕುಗಳ ನೂರಾರು ಗ್ರಾಮಗಳು ಸೇರಿ ಮಸ್ಕಿ ಮತಕ್ಷೇತ್ರವಾಗಿದೆ. ಆದರೆ ಹರಿವ ನೀರಿಗೆ ಈ ಭೌಗೋಳಿಕ ಬಾರ್ಡರ್‌ಗಳು ಇಲ್ಲ.

1.72 ಲಕ್ಷ ಹೆಕ್ಟೇರ್ ಭೂಮಿಗೆ ಕೃಷ್ಣಾ ನೀರು ಕೊಡಿ ಎಂಬುದು 107 ಹಳ್ಳಿಗಳ, ಮುಖ್ಯವಾಗಿ 58 ಹಳ್ಳಿಗಳ ಹಕ್ಕೊತ್ತಾಯ. ನೆನಪಿಡಿ, ಇಲ್ಲಿ ತುಂಗಭದ್ರಾ ನೀರನ್ನು ಅವರು ಕೇಳುತ್ತಿಲ್ಲ. ಈ ಮಾತು ಏಕೆ ಹೇಳಬೇಕಿದೆ ಎಂದರೆ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಹೆಸರಲ್ಲಿ ಸರ್ಕಾರ ವಂಚನೆ ಮಾಡುತ್ತಿದೆ. ಮತ್ತೊಮ್ಮೆ ಪಕ್ಕಾ ಮಾಡಿಕೊಳ್ಳಿ, ತುಂಗಭದ್ರೆಯಲ್ಲ, ಇಲ್ಲಿಗೆ ಬೇಕಿರುವುದು ಕೃಷ್ಣೆ.

ಮಸ್ಕಿ-ಲಿಂಗಸುಗೂರು ಹೆದ್ದಾರಿಯಲ್ಲಿ ಬರುವ ಪಾಮನ ಕಲ್ಲೂರು ಎಂಬ ಗ್ರಾಮದಲ್ಲಿ ನೀರಿಗಾಗಿ ಈ ಹೋರಾಟ ನಡೆದಿದೆ, ಅದೀಗ 125 ದಿನ ದಾಟಿದೆ ಕೂಡ. ಈ ಹೋರಾಟಕ್ಕೆ ಬೆಂಬಲ ನೀಡುತ್ತಿರುವ ಚಂದ್ರಶೇಖರ್ ಗೋರಬಾಳ ನಾನುಗೌರಿ.ಕಾಂ ಜೊತೆ ಮಾತನಾಡಿ, ‘ಈ ಹೋರಾಟ ನೂರಾರು ಹಳ್ಳಿಗಳ ಜನರ ಜೀವನ್ಮರಣದ ಪ್ರಶ್ನೆ. ಹೋರಾಟವೇ ಬೇರೆ ರಾಜಕೀಯವೇ ಬೇರೆ ಎನ್ನಲೂ ಆಗದು. ಈ ಸಲದ ಚುನಾವಣಾ ಫಲಿತಾಂಶದಲ್ಲಿ ಈ ಹೋರಾಟವೇ ಡಿಸೈಡಿಂಗ್ ಫ್ಯಾಕ್ಟರ್ ಆಗಲಿದೆ, ಆಗಲೇಬೇಕು- ಡೆಮಾಕ್ರಸಿಯ ಹಿತಕ್ಕಾಗಿ’ ಎಂದಿದ್ದಾರೆ.

  • ಮಲ್ಲನಗೌಡರ್ ಪಿ.ಕೆ

ಇದನ್ನೂ ಓದಿ: NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ


ಇದನ್ನೂ ಓದಿ: ಮಸ್ಕಿ ಉಪಚುನಾವಣೆ| ಅಭ್ಯರ್ಥಿಗಳು ಅದಲು-ಬದಲು: ಮೀಸಲು ಕ್ಷೇತ್ರದಲ್ಲಿ ‘ಗೌಡರ’ ಸ್ಪರ್ಧೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...