Homeಮುಖಪುಟ66ನೇ ಫಿಲ್ಮ್‌ ಫೇರ್ ಅವಾರ್ಡ್‌ ಪ್ರಕಟ: 7 ಪ್ರಶಸ್ತಿ ಗೆದ್ದ ತಾಪ್ಸಿ ಪನ್ನು ನಟನೆಯ 'ತಪ್ಪಡ್'...

66ನೇ ಫಿಲ್ಮ್‌ ಫೇರ್ ಅವಾರ್ಡ್‌ ಪ್ರಕಟ: 7 ಪ್ರಶಸ್ತಿ ಗೆದ್ದ ತಾಪ್ಸಿ ಪನ್ನು ನಟನೆಯ ‘ತಪ್ಪಡ್’ ಚಿತ್ರ

- Advertisement -
- Advertisement -

66ನೇ ಫಿಲ್ಮ್‌ ಫೇರ್ ಪ್ರಶಸ್ತಿ ಪ್ರಕಟವಾಗಿದ್ದು, ತಾಪ್ಸಿ ಪನ್ನು ನಟನೆಯ ‘ತಪ್ಪಡ್’ ಚಿತ್ರ ಅತ್ಯುತ್ತಮ ಚಿತ್ರ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ. ದಿವಂಗತ ಬಾಲಿವುಡ್ ನಟ ಇರ್ಫಾನ್ ಖಾನ್ ಅಂಗ್ರೇಜಿ ಮೀಡಿಯಂ ಚಿತ್ರಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿ ಮತ್ತು ಜೀವಮಾನ ಸಾಧನೆಯ ಪ್ರಶಸ್ತಿ ಪಡೆದಿದ್ದಾರೆ.

ಪಿತೃಪ್ರಧಾನತೆಯ ಕರಾಳತೆಯನ್ನು ಹೇಳುವ ಚಿತ್ರ ತಪ್ಪಡ್ ಈ ಬಾರಿಯ ಫಿಲ್ಮ್‌ ಫೇರ್‌ನಲ್ಲಿ 7 ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ. ಅಮಿತಾಬ್ ಬಚ್ಚನ್ ನಟನೆಯ ಗುಲಾಬೋ ಸಿತಾಬೋ ಚಿತ್ರ 6 ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಈ ಮೂಲಕ ಅತಿ ಹೆಚ್ಚು ಪ್ರಶಸ್ತಿ ಗಳಿಸಿದ ಚಿತ್ರಗಳಲ್ಲಿ ಈ ಎರಡು ಚಿತ್ರಗಳು ಮೊದಲ ಸಾಲಿನಲ್ಲಿವೆ.

ಹಿಂದಿ ಚಿತ್ರಗಳಲ್ಲಿನ ಕಲಾತ್ಮಕತೆ ಮತ್ತು ತಾಂತ್ರಿಕತೆ ವಿಭಾಗಗಳಿಗೆ ನೀಡುವ ಪ್ರಶಸ್ತಿಗಳು ಶನಿವಾರ ರಾತ್ರಿ ಪ್ರಕಟವಾಗಿವೆ. ಇದರ ಸಂಪೂರ್ಣ ವಿವರ ಇಲ್ಲಿದೆ.

66ನೇ ಫಿಲ್ಮ್‌ ಫೇರ್ ಪ್ರಶಸ್ತಿಗಳು

ಅತ್ಯುತ್ತಮ ಚಿತ್ರ: ತಪ್ಪಡ್

ವಿಮರ್ಶಕರ ಅತ್ಯುತ್ತಮ ಚಿತ್ರ: ಈಬ್ ಅಲ್ಲೆ ಓ…

ಅತ್ಯುತ್ತಮ ನಟ (ಮುಖ್ಯ ಪಾತ್ರ): ಇರ್ಫಾನ್ ಖಾನ್ (ಅಂಗ್ರೇಜಿ ಮೀಡಿಯಂ)

ಅತ್ಯುತ್ತಮ ನಟಿ (ಮುಖ್ಯ ಪಾತ್ರ): ತಾಪ್ಸಿ ಪನ್ನು (ತಪ್ಪಡ್)

ವಿಮರ್ಶಕರ ಮೆಚ್ಚುಗೆಯ ನಟ (ಮುಖ್ಯ ಪಾತ್ರ): ಅಮಿತಾಬ್ ಬಚ್ಚನ್ (ಗುಲಾಬೋ ಸಿತಾಬೋ)

ವಿಮರ್ಶಕರ ಮೆಚ್ಚುಗೆಯ ನಟಿ (ಮುಖ್ಯ ಪಾತ್ರ): ತಿಲೋತ್ತಮಾ ಶೋಮ್ (ಸರ್)

ಅತ್ಯುತ್ತಮ ನಿರ್ದೇಶಕ: ಓಮ್ ಬಿರ್ಲಾ (ತಾನ್ಹಾಜಿ: ದಿ ಅನ್‌ಸಂಗ್ ವಾರಿಯರ್)

ಅತ್ಯುತ್ತಮ ಪೋಷಕ ನಟಿ (ಸ್ತ್ರೀ): ಫಾರೂಖ್ ಜಾಫರ್ (ಗುಲಾಬೊ ಸೀತಾಬೊ)

ಇದನ್ನೂ ಓದಿ: ಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ತಾಂತ್ರಿಕ ವಿಭಾಗ

ಅತ್ಯುತ್ತಮ ಕಥೆ: ಅನುಭವ್ ಸುಶೀಲಾ ಸಿಂಗ್ ಮತ್ತು ಮೃನ್ಮಮೈ ಲಗೂ ವೈಕುಲ್ (ತಪ್ಪಡ್)

ಅತ್ಯುತ್ತಮ ಚಿತ್ರಕಥೆ: ರೋಹೆನಾ ಗೆರಾ (ಸರ್)

ಅತ್ಯುತ್ತಮ ಸಂಭಾಷಣೆ: ಜುಹಿ ಚತುರ್ವೇದಿ (ಗುಲಾಬೊ ಸೀತಾಬೊ)

ಅತ್ಯುತ್ತಮ ಚೊಚ್ಚಲ ನಿರ್ದೇಶಕ: ರಾಜೇಶ್ ಕೃಷ್ಣನ್ (ಲೂಟ್‌ಕೇಸ್)

ಅತ್ಯುತ್ತಮ ಚೊಚ್ಚಲ ಸ್ತ್ರೀ: ಅಲಯಾ ಎಫ್ (ಜವಾನಿ ಜಾನೆಮನ್)

ಅತ್ಯುತ್ತಮ ಸಂಗೀತ ಆಲ್ಬಮ್: ಪ್ರೀತಮ್ (ಲುಡೋ)

ಅತ್ಯುತ್ತಮ ಸಾಹಿತ್ಯ: ಗುಲ್ಜಾರ್ (ಛಪಾಕ್)

ಅತ್ಯುತ್ತಮ ಹಿನ್ನೆಲೆ ಗಾಯಕ: ರಾಘವ್ ಚೈತನ್ಯ (ತಪ್ಪಡ್‌‌ನ ಏಕ್ ತುಕ್ಡಾ ಧೂಪ್)

ಅತ್ಯುತ್ತಮ ಹಿನ್ನೆಲೆ ಗಾಯಕಿ: ಆಸೀಸ್ ಕೌರ್ (ಮಲಾಂಗ್ ಶೀರ್ಷಿಕೆ ಹಾಡು)

ಅತ್ಯುತ್ತಮ ಸಾಹಸ: ರಂಜಾನ್ ಬುಲಟ್, ಆರ್.ಪಿ.ಯಾದವ್ (ತನ್ಹಾಜಿ: ದಿ ಅನ್ಸಂಗ್ ವಾರಿಯರ್)

ಅತ್ಯುತ್ತಮ ಹಿನ್ನೆಲೆ ಸಂಗೀತ: ಮಂಗೇಶ್ ಊರ್ಮಿಳಾ ಧಕ್ಡೆ (ತಪ್ಪಡ್)

ಅತ್ಯುತ್ತಮ ಛಾಯಾಗ್ರಹಣ: ಅಭಿ ಮುಖೋಪಾಧ್ಯಾಯ (ಗುಲಾಬೊ ಸೀತಾಬೋ)

ಅತ್ಯುತ್ತಮ ನೃತ್ಯ ಸಂಯೋಜನೆ: ಫರಾಹ್ ಖಾನ್ (ದಿಲ್ ಬೆಚರಾ ಶೀರ್ಷಿಕೆ ಹಾಡು)

ಅತ್ಯುತ್ತಮ ವೇಷಭೂಷಣ ವಿನ್ಯಾಸ: ವೀರಾ ಕಪೂರ್ ಇ (ಗುಲಾಬೊ ಸೀತಾಬೊ)

ಅತ್ಯುತ್ತಮ ಎಡಿಟಿಂಗ್: ಯಶಾ ಪುಷ್ಪಾ ರಾಮ್‌ಚಂದಾನಿ (ತಪ್ಪಡ್)

ಅತ್ಯುತ್ತಮ ಪ್ರೊಡಕ್ಷನ್ ಡಿಸೈನ್: ಮನಸಿ ಧ್ರುವ್ ಮೆಹ್ತಾ (ಗುಲಾಬೊ ಸೀತಾಬೊ)

ಅತ್ಯುತ್ತಮ ಧ್ವನಿ ವಿನ್ಯಾಸ: ಕಾಮೋಡ್ ಖರಡೆ (ತಪ್ಪಡ್)

ಅತ್ಯುತ್ತಮ ವಿಎಫ್‌ಎಕ್ಸ್: ಪ್ರಸಾದ್ ಸುತಾರ್, ಎನ್ವೈ ವಿಎಫ್‌ಎಕ್ಸ್‌ವಾಲಾ (ತನ್ಹಾಜಿ: ದಿ ಅನ್‌ಸಂಗ್ ವಾರಿಯರ್)

ವಿಶೇಷ ಪ್ರಶಸ್ತಿಗಳು

ಜೀವಮಾನ ಸಾಧನೆ ಪ್ರಶಸ್ತಿ: ಇರ್ಫಾನ್ ಖಾನ್

ಆರ್‌ಡಿ ಬರ್ಮನ್ ಪ್ರಶಸ್ತಿ: ಗುಲ್ಜರ್


ಇದನ್ನೂ ಓದಿ: ಆಸ್ಕರ್ ಪ್ರಶಸ್ತಿಗೆ ಮೊದಲ ಮುಸ್ಲಿಂ ನಟ ನಾಮನಿರ್ದೇಶನ: ಇತಿಹಾಸ ಸೃಷ್ಟಿಸಿದ ರಿಜ್ ಅಹ್ಮದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...