Homeಚಳವಳಿರೈತ ಹೋರಾಟ: ಸಿಂಘು ಗಡಿಯಲ್ಲಿ ನಡೆಯಲಿದೆ ಶೂಟಿಂಗ್ ಬಾಲ್ ಕಿಸಾನ್ ಪ್ರೀಮಿಯರ್ ಲೀಗ್!

ರೈತ ಹೋರಾಟ: ಸಿಂಘು ಗಡಿಯಲ್ಲಿ ನಡೆಯಲಿದೆ ಶೂಟಿಂಗ್ ಬಾಲ್ ಕಿಸಾನ್ ಪ್ರೀಮಿಯರ್ ಲೀಗ್!

- Advertisement -
- Advertisement -

ರೈತ ಹೋರಾಟಕ್ಕೆ ನಾಲ್ಕು ತಿಂಗಳು ತುಂಬಿ ಐದನೇ ತಿಂಗಳಿಗೆ ಕಾಲಿಟ್ಟಿದೆ. ದೆಹಲಿಯ ಗಡಿಗಳು ಈ ನಾಲ್ಕು ತಿಂಗಳಲ್ಲಿ ಹೋರಾಟಗಾರರ ಸ್ವಂತ ಊರುಗಳಾಗಿ ಮಾರ್ಪಟ್ಟಿವೆ. ತಮ್ಮದೆ ಗ್ರಾಮದಲ್ಲಿ ಇರುವಂತೆ, ಇಲ್ಲಿನ ರೈತರು ಸಿಂಘು, ಟಿಕ್ರಿ, ಗಾಜಿಪುರ್‌, ಶಹಜಾನ್‌ಪುರ ಗಡಿಗಳನ್ನು ಗ್ರಾಮಗಳಂತೆ ಭಾವಿಸಿದ್ದಾರೆ.

ಪ್ರತಿಭಟನಾಕಾರರಲ್ಲಿ ಪ್ರತಿಭಟನೆಯ ಉತ್ಸಾಹ ಕಡಿಮೆಯಾಗದಂತೆ ನೋಡಿಕೊಳ್ಳಲ್ಲು ಇಲ್ಲಿ ಕಾರ್ಯನಿರ್ವಹಿಸುತ್ತಿವರುವ ನೂರಾರು ಸಂಘಟನೆಗಳು ಪ್ರಯತ್ನ ಪಡುತ್ತಿವೆ. ಹಲವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಹೋರಾಟಗಾರರಲ್ಲಿ ಉತ್ಸಾಹ ತುಂಬುತ್ತಿವೆ. ಅವುಗಳಲ್ಲಿ ಅಮೆರಿಕನ್ ಸಿಖ್ ಸಂಘಟನೆ ಕೂಡ ಒಂದು.

ಏಪ್ರಿಲ್ 2 ಮತ್ತು 3 ರಂದು ಸಿಂಘು ಗಡಿಯಲ್ಲಿ ಕಿಸಾನ್ ಪ್ರೀಮಿಯರ್‌ ಲೀಗ್ ಆಯೋಜನೆಗೊಂಡಿದೆ. ಅಮೆರಿಕನ್ ಸಿಖ್ ಸಂಘಟನೆ ನ್ಯಾಷನಲ್ ಶೂಟಿಂಗ್ ಬಾಲ್ ಚಾಂಪಿಯನ್‌ಶಿಪ್ ಆಯೋಜನೆ ಮಾಡಿದೆ. ಪ್ರತಿಭಟನಾ ಸ್ಥಳ ಸಿಂಘು ಗಡಿಯ ಪಾರ್ಕರ್‌ ಮಾಲ್ ಬಳಿ ಪಂದ್ಯಗಳು ನಡೆಯಲಿವೆ.

ಇದನ್ನೂ ಓದಿ: ರೈತ ವಿರೋಧಿ ಕೃಷಿ ಕಾಯ್ದೆ ತಂದು ಶೋಷಿಸುತ್ತಿರುವವರೆ ನಿಜ ಭಯೋತ್ಪಾದಕರು- ನಟ ಚೇತನ್ ಕಿಡಿ

ಈ ಕುರಿತು ದೆಹಲಿಯ ಗಡಿಗಳಲ್ಲಿ ಕಳೆದ ನಾಲ್ಕು ತಿಂಗಳಿನಿಂದ ರೈತರ ಪ್ರತಿಭಟನೆಯ ಇಂಚಿಂಚು ಮಾಹಿತಿ ನೀಡುತ್ತಿರುವ ಸಂದೀಪ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಕಿಸಾನ್ ಪ್ರೀಮಿಯರ್ ಲೀಗ್‌ನಲ್ಲಿ ಮೊದಲ ಬಹುಮಾನ ಒಂದು ಲಕ್ಷ ರೂಪಾಯಿ ಮತ್ತು ಟ್ರೋಫಿ, ಎರಡನೇ ಬಹುಮಾನ 70,000 ರೂಪಾಯಿ ಜೊತೆಗೆ ಟ್ರೋಪಿ ಮತ್ತು ಮೂರನೇ, ನಾಲ್ಕನೇ ಬಹುಮಾನವಾಗಿ ಟ್ರೋಪಿ ಜೊತೆಗೆ 21,000 ರೂಪಾಯಿಗಳನ್ನು ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಸಿಂಘು ಗಡಿಯಲ್ಲಿ ಮನೆ ನಿರ್ಮಾಣ: ರೈತರ ವಿರುದ್ದ ಎರಡು ಪ್ರಕರಣ ದಾಖಲು

ಎಲ್ಲಾ ಗಡಿಗಳಲ್ಲಿ ಜಿಮ್, ಕ್ರೀಡಾ ಸೌಲಭ್ಯಗಳಿರುವುದು ತಿಳಿದಿರುವ ವಿಷಯವೆ. ಸಂಜೆಯ ವೇಳೆ ಗಡಿಗಳಲ್ಲಿ ಯುವಜನತೆ ಒಂದೆಡೆ ಸೇರಿ ಆಟಗಳನ್ನು ಆಡುತ್ತಾರೆ. ಕಬ್ಬಡ್ಡಿ, ಫುಟ್‌ಬಾಲ್, ವಾಲಿಬಾಲ್ ಸೇರಿದಂತೆ ಹಲವು ಆಟಗಳಲ್ಲಿ ತೊಡಗಿಸಿಕೊಳ್ಳತ್ತಾರೆ. ಇವರುಗಳನ್ನು ಪ್ರೋತ್ಸಾಹಿಸಲು ಈ ಪಂದ್ಯಾವಳಿ ಆಯೋಜಿಸಲಾಗಿದೆ ಎನ್ನಲಾಗಿದೆ.

ಈ ಹಿಂದೆ ಸಿಂಘು ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಉತ್ತೇಜನ ನೀಡುವ ಸಲುವಾಗಿ, ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ ಮತ್ತು ದೆಹಲಿಯ 12 ಬಾಲಕಿಯರ ತಂಡಗಳು ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ನೂರಾರು ಕಿಲೋಮೀಟರ್ ದೂರಗಳಿಂದ ಬಂದು ಸಿಂಗು ಗಡಿಯಲ್ಲಿ ಕಬ್ಬಡಿ ಆಡಿ ರೈತರಿಗೆ ಬೆಂಬಲ ಸೂಚಿಸಿದ್ದರು.

ಒಟ್ಟಾರೆ, ಗಡಿಗಳನ್ನೇ ಮನೆಗಳನ್ನಾಗಿಸಿಕೊಂಡಿರುವ ರೈತರು ಹಲವು ಕಾರ್ಯಕ್ರಮಗಳ ಮೂಲಕ ತಮ್ಮಲ್ಲಿನ ಪ್ರತಿಭಟನಾ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಒಕ್ಕೂಟ ಸರ್ಕಾರ, ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್ ತೆಗೆದುಕೊಳ್ಳುವವರೆಗೂ ಗಡಿಗಳಿಂದ ವಾಪಸ್ ಆಗುವುದಿಲ್ಲ ಎಂಬ ಸ್ಪಷ್ಟ ಸಂದೇಶ ನೀಡುತ್ತಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರೆದ ಹೋರಾಟ: ಮಾ.‌ 31 ಕ್ಕೆ ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...