Homeಕರ್ನಾಟಕರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

- Advertisement -
- Advertisement -

ರಮೇಶ್ ಜಾರಕಿಹೊಳಿಯವರ ಲೈಂಗಿಕ ಸಿಡಿ ಪ್ರಕರಣದಲ್ಲಿ ಮಹಾನಾಯಕ ಪದ ಬಳಸಬಾರದು ಎಂದು ಪ್ರಜ್ಞಾವಂತರು ಕಿಡಿಕಾರಿದ್ದಾರೆ. ಸಿಡಿ ಬಿಡುಗಡೆ ಆರಂಭದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈ ಷಡ್ಯಂತ್ರದ ಹಿಂದೆ ಯಾವ ಮಹಾನ್‌ನಾಯಕ ಇದ್ದಾನೆ ಎಂಬುದು ಗೊತ್ತು ಎಂದು ಹೇಳಿಕೆ ನೀಡಿದ್ದರು. ಅಂದಿನಿಂದ ಮಾಧ್ಯಮಗಳು ಯಾರು ಮಹಾನಾಯಕ ಎಂದು ಪದೇ ಪದೇ ಆ ಪದ ಬಳಸಿದ್ದವು.

ಇನ್ನು ನಿನ್ನೆ ಆ ಮಹಾನಾಯಕ ಡಿ.ಕೆ ಶಿವಕುಮಾರ್ ಎಂದು ರಮೇಶ್ ಜಾರಕಿಹೊಳಿ ಹೇಳಿದ ಬೆನ್ನಲ್ಲೆ ಬಹುತೇಕ ಮಾಧ್ಯಮಗಳು ಮತ್ತು ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಮಹಾನಾಯಕ ಡಿ.ಕೆ ಶಿವಕುಮಾರ್ ಎಂದು ಪ್ರಸಾರ ಮಾಡಿದ್ದವು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಝೀ ಕನ್ನಡ ವಾಹಿನಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ ಜೀವನ ಮತ್ತು ಹೋರಾಟದ ಕುರಿತು ‘ಮಹಾನಾಯಕ’ ಧಾರವಾಹಿ ಪ್ರಸಾರವಾಗುತ್ತಿದ್ದು ಅತ್ಯುತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಜಾತಿ ಬೇಧವಿಲ್ಲದೆ ಬಹಳಷ್ಟು ಜನರು ಆ ಧಾರವಾಹಿ ನೋಡುವ ಮೂಲಕ ಇತ್ತೀಚಿನ ದಿನಗಳಲ್ಲಿ ಅತಿಹೆಚ್ಚು ವೀಕ್ಷಣೆ ಪಡೆದ ಧಾರವಾಹಿ ಎನಿಸಿದೆ. ಅಲ್ಲದೇ ರಾಜ್ಯದ ಬಹುಪಾಲು ಊರುಗಳಲ್ಲಿ ಮಹಾನಾಯಕ ಧಾರವಾಹಿಯ ಫ್ಲೆಕ್ಸ್‌ಗಳು, ಬ್ಯಾನರ್‌ಗಳು ರಾರಾಜಿಸುತ್ತಿವೆ. ಇಂತಹ ಸಮಯದಲ್ಲಿ ಈ ರಾಜಕಾರಣಗಳ ಹೊಲಸು ರಾಜಕೀಯಕ್ಕೆ ಮಹಾನಾಯಕ ಹೆಸರನ್ನು ಏಕೆ ತರುತ್ತೀರಿ ಎಂಬುದು ಪ್ರಜ್ಞಾವಂತರ ಪ್ರಶ್ನೆಯಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಉದಾತ್ತ ನಾಯಕ ಬಾಬಾಸಾಹೇಬ್ ಅಂಬೇಡ್ಕರ್‌ರವರನ್ನು ನಾವು ಮಹಾನಾಯಕ ಎಂದು ಕರೆದು ಗೌರವ ಸಲ್ಲಿಸುತ್ತಿದ್ದೇವೆ. ಹಾಗಾಗಿ ನಿಮ್ಮ ರಾಜಕೀಯಕ್ಕೆ ಈ ಹೆಸರು ಬಳಸಿ ಅಂಬೇಡ್ಕರ್‌ರವರಿಗೆ ಅವಮಾನ ಮಾಡಬೇಡಿ ಎಂದು ಆಗ್ರಹಿಸಿದ್ದಾರೆ.

“ಮಹಾನಾಯಕ” ಎನ್ನುವ ಶಬ್ದಕ್ಕೆ ದೇಶಾದ್ಯಂತ ಅಪಾರ ಗೌರವವಿದೆ. ಒಂದು ಥರ್ಡಕ್ಲಾಸ್ ವಿಷಯದಲ್ಲಿ ನಿರಂತರವಾಗಿ ಈ ಗೌರವಯುತ ಪದದ ದುರ್ಬಳಕೆಯಾಗುತ್ತಿರುವುದು ನಿಜಕ್ಕೂ ಖಂಡನೀಯ ಎಂದು ವಿಕಾಸ್ ಹೊಸಮನಿ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಮಹಾನಾಯಕ’ ಎನ್ನುವ ಪದವನ್ನ ಸಿ‌ಡಿ ಪ್ರಕರಣದಲ್ಲಿ ಮಾಧ್ಯಮಗಳು ಬಳಸುತ್ತಿರುವುದು ಖಂಡನೀಯ. ಮಹಾನಾಯಕ ಎಂಬ ಬಿರುದು ಇರುವುದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಎಂದು ತಿಳಿದಿರುವ ಸಂಗತಿಯೇ. ಮಾಧ್ಯಮಗಳು ಪದೇ ಪದೇ ಸಿಡಿ ಪ್ರಕರಣ ವಿಷಯದಲ್ಲಿ ಈ ಪದ ಬಳಕೆ ಮಾಡಿ ಅಂಬೇಡ್ಕರ್ ರವರ ಅನುಯಾಯಿಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ನೀಚ ಕೃತ್ಯ ಮಾಡುತ್ತಿದ್ದಾರೆ ಎಂದು ಬಾಲಾಜಿ ಎಂ ಕಾಂಬಳೆ ಕಿಡಿಕಾರಿದ್ದಾರೆ.

ಸಿಡಿ ವಿಚಾರದಲ್ಲಿ ಮಹಾನಾಯಕ ಪದ ಬಳಕೆ ಸರಿಯಲ್ಲ, ಕೋಟ್ಯಾಂತರ ಜನ ಮಹಾನಾಯಕ ಧಾರಾವಾಹಿ ನೊಡ್ತಿದಾರೆ. ಕನಿಷ್ಟ ಪ್ರಜ್ಙೆ ಇಟ್ಟುಕೊಳ್ಳಿ. ಹಾಗೆಯೇ ಮೀಡಿಯಾ ಬಳಗದವ್ರು ಅನ್ನ ತಿನ್ನೊ ಕೆಲ್ಸ ಮಾಡಿ. ಯಾವಾನೊ ಒಬ್ಬ ಮಹಾನಾಯಕ ಅಂದಿದ್ ತಕ್ಷಣ ಗೊತ್ತಿಲ್ಲದೆ ನೀವೂ ಬಳಸೋದಲ್ಲ. ಸ್ವಲ್ಪ ಕಾಮನ್ ಸೆನ್ಸ್ ಇರಲಿ ಎಂದು ಮುರಳಿ ಮಾಲೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಸಂವಿಧಾನಿಕ ದೇಶದಲ್ಲಿ ಯಾರು ಯಾರಿಗೂ ಸಾಹುಕಾರರಲ್ಲ, ಯಾರೂ ಕೂಡಾ ಬಾಬಾ ಸಾಹೇಬರಂತೆ ನಿಜದ ಅರ್ಥದಲ್ಲಿ ಮಹಾ ನಾಯಕರಾಗುವ ಯೋಗ್ಯತೆಯನ್ನೂ ಹೊಂದಿಲ್ಲ.
ಹೀಗಾಗಿ ಪದಗಳು ಸಿಕ್ಕಿವೆ ಎಂಬ ಮಾತ್ರಕ್ಕೆ ಅವುಗಳನ್ನು ಹೇಗೆ ಬೇಕೋ ಹಾಗೆ ಬಳಸುತ್ತಾ ಬಾಬಾ ಸಾಹೇಬರಂತಹ ಮಹಾನ್ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೆಲಸವನ್ನು ಈ ಸಂವಿಧಾನಿಕ ನೆಲದಲ್ಲಿ ಹುಟ್ಟಿದ ಯಾರೂ ಸಹ ಮಾಡಬಾರದು. ದಯಮಾಡಿ ಮಾಧ್ಯಮಗಳು ಇಂತಹ ಫ್ಯೂಡಲ್ ಹಾಗೂ ಹೋಲಿಕೆಗೂ ಅರ್ಹವಿಲ್ಲದ ಮಹತ್ವದ ಪದಗಳ ಬೇಕಾಬಿಟ್ಟಿ ಬಳಕೆಗೆ ಕಡಿವಾಣ ಹಾಕಲಿ ಎಂದು ಮಾಜಿ ಸಚಿವರಾದ ಎಚ್‌.ಸಿ ಮಹಾದೇವಪ್ಪನವರು ಆಗ್ರಹಿಸಿದ್ದಾರೆ.

ಹಾಗೆಯೇ ಚಿತ್ರನಟ ಪ್ರಥಮ್ ಕೂಡ ಆ ಪದಬಳಕೆ ವಿರೋಧಿಸಿ ಟ್ವೀಟ್ ಮಾಡಿದ್ದಾರೆ.

 


ಇದನ್ನೂ ಓದಿ: ಹೊಸ ಅಲೆ ಸೃಷ್ಟಿಸಿದ ‘ಮಹಾನಾಯಕ’ ಧಾರಾವಾಹಿ: ವರ್ಷದ ಅತ್ಯುನ್ನತ ಡಬ್ಬಿಂಗ್ ವಿಭಾಗದಲ್ಲಿ ಪ್ರಶಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...