Homeಕರ್ನಾಟಕರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

- Advertisement -
- Advertisement -

ರಮೇಶ್ ಜಾರಕಿಹೊಳಿಯವರ ಲೈಂಗಿಕ ಸಿಡಿ ಪ್ರಕರಣದಲ್ಲಿ ಮಹಾನಾಯಕ ಪದ ಬಳಸಬಾರದು ಎಂದು ಪ್ರಜ್ಞಾವಂತರು ಕಿಡಿಕಾರಿದ್ದಾರೆ. ಸಿಡಿ ಬಿಡುಗಡೆ ಆರಂಭದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈ ಷಡ್ಯಂತ್ರದ ಹಿಂದೆ ಯಾವ ಮಹಾನ್‌ನಾಯಕ ಇದ್ದಾನೆ ಎಂಬುದು ಗೊತ್ತು ಎಂದು ಹೇಳಿಕೆ ನೀಡಿದ್ದರು. ಅಂದಿನಿಂದ ಮಾಧ್ಯಮಗಳು ಯಾರು ಮಹಾನಾಯಕ ಎಂದು ಪದೇ ಪದೇ ಆ ಪದ ಬಳಸಿದ್ದವು.

ಇನ್ನು ನಿನ್ನೆ ಆ ಮಹಾನಾಯಕ ಡಿ.ಕೆ ಶಿವಕುಮಾರ್ ಎಂದು ರಮೇಶ್ ಜಾರಕಿಹೊಳಿ ಹೇಳಿದ ಬೆನ್ನಲ್ಲೆ ಬಹುತೇಕ ಮಾಧ್ಯಮಗಳು ಮತ್ತು ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಮಹಾನಾಯಕ ಡಿ.ಕೆ ಶಿವಕುಮಾರ್ ಎಂದು ಪ್ರಸಾರ ಮಾಡಿದ್ದವು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಝೀ ಕನ್ನಡ ವಾಹಿನಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ ಜೀವನ ಮತ್ತು ಹೋರಾಟದ ಕುರಿತು ‘ಮಹಾನಾಯಕ’ ಧಾರವಾಹಿ ಪ್ರಸಾರವಾಗುತ್ತಿದ್ದು ಅತ್ಯುತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಜಾತಿ ಬೇಧವಿಲ್ಲದೆ ಬಹಳಷ್ಟು ಜನರು ಆ ಧಾರವಾಹಿ ನೋಡುವ ಮೂಲಕ ಇತ್ತೀಚಿನ ದಿನಗಳಲ್ಲಿ ಅತಿಹೆಚ್ಚು ವೀಕ್ಷಣೆ ಪಡೆದ ಧಾರವಾಹಿ ಎನಿಸಿದೆ. ಅಲ್ಲದೇ ರಾಜ್ಯದ ಬಹುಪಾಲು ಊರುಗಳಲ್ಲಿ ಮಹಾನಾಯಕ ಧಾರವಾಹಿಯ ಫ್ಲೆಕ್ಸ್‌ಗಳು, ಬ್ಯಾನರ್‌ಗಳು ರಾರಾಜಿಸುತ್ತಿವೆ. ಇಂತಹ ಸಮಯದಲ್ಲಿ ಈ ರಾಜಕಾರಣಗಳ ಹೊಲಸು ರಾಜಕೀಯಕ್ಕೆ ಮಹಾನಾಯಕ ಹೆಸರನ್ನು ಏಕೆ ತರುತ್ತೀರಿ ಎಂಬುದು ಪ್ರಜ್ಞಾವಂತರ ಪ್ರಶ್ನೆಯಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಉದಾತ್ತ ನಾಯಕ ಬಾಬಾಸಾಹೇಬ್ ಅಂಬೇಡ್ಕರ್‌ರವರನ್ನು ನಾವು ಮಹಾನಾಯಕ ಎಂದು ಕರೆದು ಗೌರವ ಸಲ್ಲಿಸುತ್ತಿದ್ದೇವೆ. ಹಾಗಾಗಿ ನಿಮ್ಮ ರಾಜಕೀಯಕ್ಕೆ ಈ ಹೆಸರು ಬಳಸಿ ಅಂಬೇಡ್ಕರ್‌ರವರಿಗೆ ಅವಮಾನ ಮಾಡಬೇಡಿ ಎಂದು ಆಗ್ರಹಿಸಿದ್ದಾರೆ.

“ಮಹಾನಾಯಕ” ಎನ್ನುವ ಶಬ್ದಕ್ಕೆ ದೇಶಾದ್ಯಂತ ಅಪಾರ ಗೌರವವಿದೆ. ಒಂದು ಥರ್ಡಕ್ಲಾಸ್ ವಿಷಯದಲ್ಲಿ ನಿರಂತರವಾಗಿ ಈ ಗೌರವಯುತ ಪದದ ದುರ್ಬಳಕೆಯಾಗುತ್ತಿರುವುದು ನಿಜಕ್ಕೂ ಖಂಡನೀಯ ಎಂದು ವಿಕಾಸ್ ಹೊಸಮನಿ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಮಹಾನಾಯಕ’ ಎನ್ನುವ ಪದವನ್ನ ಸಿ‌ಡಿ ಪ್ರಕರಣದಲ್ಲಿ ಮಾಧ್ಯಮಗಳು ಬಳಸುತ್ತಿರುವುದು ಖಂಡನೀಯ. ಮಹಾನಾಯಕ ಎಂಬ ಬಿರುದು ಇರುವುದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಎಂದು ತಿಳಿದಿರುವ ಸಂಗತಿಯೇ. ಮಾಧ್ಯಮಗಳು ಪದೇ ಪದೇ ಸಿಡಿ ಪ್ರಕರಣ ವಿಷಯದಲ್ಲಿ ಈ ಪದ ಬಳಕೆ ಮಾಡಿ ಅಂಬೇಡ್ಕರ್ ರವರ ಅನುಯಾಯಿಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ನೀಚ ಕೃತ್ಯ ಮಾಡುತ್ತಿದ್ದಾರೆ ಎಂದು ಬಾಲಾಜಿ ಎಂ ಕಾಂಬಳೆ ಕಿಡಿಕಾರಿದ್ದಾರೆ.

ಸಿಡಿ ವಿಚಾರದಲ್ಲಿ ಮಹಾನಾಯಕ ಪದ ಬಳಕೆ ಸರಿಯಲ್ಲ, ಕೋಟ್ಯಾಂತರ ಜನ ಮಹಾನಾಯಕ ಧಾರಾವಾಹಿ ನೊಡ್ತಿದಾರೆ. ಕನಿಷ್ಟ ಪ್ರಜ್ಙೆ ಇಟ್ಟುಕೊಳ್ಳಿ. ಹಾಗೆಯೇ ಮೀಡಿಯಾ ಬಳಗದವ್ರು ಅನ್ನ ತಿನ್ನೊ ಕೆಲ್ಸ ಮಾಡಿ. ಯಾವಾನೊ ಒಬ್ಬ ಮಹಾನಾಯಕ ಅಂದಿದ್ ತಕ್ಷಣ ಗೊತ್ತಿಲ್ಲದೆ ನೀವೂ ಬಳಸೋದಲ್ಲ. ಸ್ವಲ್ಪ ಕಾಮನ್ ಸೆನ್ಸ್ ಇರಲಿ ಎಂದು ಮುರಳಿ ಮಾಲೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಸಂವಿಧಾನಿಕ ದೇಶದಲ್ಲಿ ಯಾರು ಯಾರಿಗೂ ಸಾಹುಕಾರರಲ್ಲ, ಯಾರೂ ಕೂಡಾ ಬಾಬಾ ಸಾಹೇಬರಂತೆ ನಿಜದ ಅರ್ಥದಲ್ಲಿ ಮಹಾ ನಾಯಕರಾಗುವ ಯೋಗ್ಯತೆಯನ್ನೂ ಹೊಂದಿಲ್ಲ.
ಹೀಗಾಗಿ ಪದಗಳು ಸಿಕ್ಕಿವೆ ಎಂಬ ಮಾತ್ರಕ್ಕೆ ಅವುಗಳನ್ನು ಹೇಗೆ ಬೇಕೋ ಹಾಗೆ ಬಳಸುತ್ತಾ ಬಾಬಾ ಸಾಹೇಬರಂತಹ ಮಹಾನ್ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೆಲಸವನ್ನು ಈ ಸಂವಿಧಾನಿಕ ನೆಲದಲ್ಲಿ ಹುಟ್ಟಿದ ಯಾರೂ ಸಹ ಮಾಡಬಾರದು. ದಯಮಾಡಿ ಮಾಧ್ಯಮಗಳು ಇಂತಹ ಫ್ಯೂಡಲ್ ಹಾಗೂ ಹೋಲಿಕೆಗೂ ಅರ್ಹವಿಲ್ಲದ ಮಹತ್ವದ ಪದಗಳ ಬೇಕಾಬಿಟ್ಟಿ ಬಳಕೆಗೆ ಕಡಿವಾಣ ಹಾಕಲಿ ಎಂದು ಮಾಜಿ ಸಚಿವರಾದ ಎಚ್‌.ಸಿ ಮಹಾದೇವಪ್ಪನವರು ಆಗ್ರಹಿಸಿದ್ದಾರೆ.

ಹಾಗೆಯೇ ಚಿತ್ರನಟ ಪ್ರಥಮ್ ಕೂಡ ಆ ಪದಬಳಕೆ ವಿರೋಧಿಸಿ ಟ್ವೀಟ್ ಮಾಡಿದ್ದಾರೆ.

 


ಇದನ್ನೂ ಓದಿ: ಹೊಸ ಅಲೆ ಸೃಷ್ಟಿಸಿದ ‘ಮಹಾನಾಯಕ’ ಧಾರಾವಾಹಿ: ವರ್ಷದ ಅತ್ಯುನ್ನತ ಡಬ್ಬಿಂಗ್ ವಿಭಾಗದಲ್ಲಿ ಪ್ರಶಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...