Homeಕರ್ನಾಟಕರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

- Advertisement -
- Advertisement -

ರಮೇಶ್ ಜಾರಕಿಹೊಳಿಯವರ ಲೈಂಗಿಕ ಸಿಡಿ ಪ್ರಕರಣದಲ್ಲಿ ಮಹಾನಾಯಕ ಪದ ಬಳಸಬಾರದು ಎಂದು ಪ್ರಜ್ಞಾವಂತರು ಕಿಡಿಕಾರಿದ್ದಾರೆ. ಸಿಡಿ ಬಿಡುಗಡೆ ಆರಂಭದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈ ಷಡ್ಯಂತ್ರದ ಹಿಂದೆ ಯಾವ ಮಹಾನ್‌ನಾಯಕ ಇದ್ದಾನೆ ಎಂಬುದು ಗೊತ್ತು ಎಂದು ಹೇಳಿಕೆ ನೀಡಿದ್ದರು. ಅಂದಿನಿಂದ ಮಾಧ್ಯಮಗಳು ಯಾರು ಮಹಾನಾಯಕ ಎಂದು ಪದೇ ಪದೇ ಆ ಪದ ಬಳಸಿದ್ದವು.

ಇನ್ನು ನಿನ್ನೆ ಆ ಮಹಾನಾಯಕ ಡಿ.ಕೆ ಶಿವಕುಮಾರ್ ಎಂದು ರಮೇಶ್ ಜಾರಕಿಹೊಳಿ ಹೇಳಿದ ಬೆನ್ನಲ್ಲೆ ಬಹುತೇಕ ಮಾಧ್ಯಮಗಳು ಮತ್ತು ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಮಹಾನಾಯಕ ಡಿ.ಕೆ ಶಿವಕುಮಾರ್ ಎಂದು ಪ್ರಸಾರ ಮಾಡಿದ್ದವು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಝೀ ಕನ್ನಡ ವಾಹಿನಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ ಜೀವನ ಮತ್ತು ಹೋರಾಟದ ಕುರಿತು ‘ಮಹಾನಾಯಕ’ ಧಾರವಾಹಿ ಪ್ರಸಾರವಾಗುತ್ತಿದ್ದು ಅತ್ಯುತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ಜಾತಿ ಬೇಧವಿಲ್ಲದೆ ಬಹಳಷ್ಟು ಜನರು ಆ ಧಾರವಾಹಿ ನೋಡುವ ಮೂಲಕ ಇತ್ತೀಚಿನ ದಿನಗಳಲ್ಲಿ ಅತಿಹೆಚ್ಚು ವೀಕ್ಷಣೆ ಪಡೆದ ಧಾರವಾಹಿ ಎನಿಸಿದೆ. ಅಲ್ಲದೇ ರಾಜ್ಯದ ಬಹುಪಾಲು ಊರುಗಳಲ್ಲಿ ಮಹಾನಾಯಕ ಧಾರವಾಹಿಯ ಫ್ಲೆಕ್ಸ್‌ಗಳು, ಬ್ಯಾನರ್‌ಗಳು ರಾರಾಜಿಸುತ್ತಿವೆ. ಇಂತಹ ಸಮಯದಲ್ಲಿ ಈ ರಾಜಕಾರಣಗಳ ಹೊಲಸು ರಾಜಕೀಯಕ್ಕೆ ಮಹಾನಾಯಕ ಹೆಸರನ್ನು ಏಕೆ ತರುತ್ತೀರಿ ಎಂಬುದು ಪ್ರಜ್ಞಾವಂತರ ಪ್ರಶ್ನೆಯಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಉದಾತ್ತ ನಾಯಕ ಬಾಬಾಸಾಹೇಬ್ ಅಂಬೇಡ್ಕರ್‌ರವರನ್ನು ನಾವು ಮಹಾನಾಯಕ ಎಂದು ಕರೆದು ಗೌರವ ಸಲ್ಲಿಸುತ್ತಿದ್ದೇವೆ. ಹಾಗಾಗಿ ನಿಮ್ಮ ರಾಜಕೀಯಕ್ಕೆ ಈ ಹೆಸರು ಬಳಸಿ ಅಂಬೇಡ್ಕರ್‌ರವರಿಗೆ ಅವಮಾನ ಮಾಡಬೇಡಿ ಎಂದು ಆಗ್ರಹಿಸಿದ್ದಾರೆ.

“ಮಹಾನಾಯಕ” ಎನ್ನುವ ಶಬ್ದಕ್ಕೆ ದೇಶಾದ್ಯಂತ ಅಪಾರ ಗೌರವವಿದೆ. ಒಂದು ಥರ್ಡಕ್ಲಾಸ್ ವಿಷಯದಲ್ಲಿ ನಿರಂತರವಾಗಿ ಈ ಗೌರವಯುತ ಪದದ ದುರ್ಬಳಕೆಯಾಗುತ್ತಿರುವುದು ನಿಜಕ್ಕೂ ಖಂಡನೀಯ ಎಂದು ವಿಕಾಸ್ ಹೊಸಮನಿ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಮಹಾನಾಯಕ’ ಎನ್ನುವ ಪದವನ್ನ ಸಿ‌ಡಿ ಪ್ರಕರಣದಲ್ಲಿ ಮಾಧ್ಯಮಗಳು ಬಳಸುತ್ತಿರುವುದು ಖಂಡನೀಯ. ಮಹಾನಾಯಕ ಎಂಬ ಬಿರುದು ಇರುವುದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಎಂದು ತಿಳಿದಿರುವ ಸಂಗತಿಯೇ. ಮಾಧ್ಯಮಗಳು ಪದೇ ಪದೇ ಸಿಡಿ ಪ್ರಕರಣ ವಿಷಯದಲ್ಲಿ ಈ ಪದ ಬಳಕೆ ಮಾಡಿ ಅಂಬೇಡ್ಕರ್ ರವರ ಅನುಯಾಯಿಗಳ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ನೀಚ ಕೃತ್ಯ ಮಾಡುತ್ತಿದ್ದಾರೆ ಎಂದು ಬಾಲಾಜಿ ಎಂ ಕಾಂಬಳೆ ಕಿಡಿಕಾರಿದ್ದಾರೆ.

ಸಿಡಿ ವಿಚಾರದಲ್ಲಿ ಮಹಾನಾಯಕ ಪದ ಬಳಕೆ ಸರಿಯಲ್ಲ, ಕೋಟ್ಯಾಂತರ ಜನ ಮಹಾನಾಯಕ ಧಾರಾವಾಹಿ ನೊಡ್ತಿದಾರೆ. ಕನಿಷ್ಟ ಪ್ರಜ್ಙೆ ಇಟ್ಟುಕೊಳ್ಳಿ. ಹಾಗೆಯೇ ಮೀಡಿಯಾ ಬಳಗದವ್ರು ಅನ್ನ ತಿನ್ನೊ ಕೆಲ್ಸ ಮಾಡಿ. ಯಾವಾನೊ ಒಬ್ಬ ಮಹಾನಾಯಕ ಅಂದಿದ್ ತಕ್ಷಣ ಗೊತ್ತಿಲ್ಲದೆ ನೀವೂ ಬಳಸೋದಲ್ಲ. ಸ್ವಲ್ಪ ಕಾಮನ್ ಸೆನ್ಸ್ ಇರಲಿ ಎಂದು ಮುರಳಿ ಮಾಲೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಸಂವಿಧಾನಿಕ ದೇಶದಲ್ಲಿ ಯಾರು ಯಾರಿಗೂ ಸಾಹುಕಾರರಲ್ಲ, ಯಾರೂ ಕೂಡಾ ಬಾಬಾ ಸಾಹೇಬರಂತೆ ನಿಜದ ಅರ್ಥದಲ್ಲಿ ಮಹಾ ನಾಯಕರಾಗುವ ಯೋಗ್ಯತೆಯನ್ನೂ ಹೊಂದಿಲ್ಲ.
ಹೀಗಾಗಿ ಪದಗಳು ಸಿಕ್ಕಿವೆ ಎಂಬ ಮಾತ್ರಕ್ಕೆ ಅವುಗಳನ್ನು ಹೇಗೆ ಬೇಕೋ ಹಾಗೆ ಬಳಸುತ್ತಾ ಬಾಬಾ ಸಾಹೇಬರಂತಹ ಮಹಾನ್ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೆಲಸವನ್ನು ಈ ಸಂವಿಧಾನಿಕ ನೆಲದಲ್ಲಿ ಹುಟ್ಟಿದ ಯಾರೂ ಸಹ ಮಾಡಬಾರದು. ದಯಮಾಡಿ ಮಾಧ್ಯಮಗಳು ಇಂತಹ ಫ್ಯೂಡಲ್ ಹಾಗೂ ಹೋಲಿಕೆಗೂ ಅರ್ಹವಿಲ್ಲದ ಮಹತ್ವದ ಪದಗಳ ಬೇಕಾಬಿಟ್ಟಿ ಬಳಕೆಗೆ ಕಡಿವಾಣ ಹಾಕಲಿ ಎಂದು ಮಾಜಿ ಸಚಿವರಾದ ಎಚ್‌.ಸಿ ಮಹಾದೇವಪ್ಪನವರು ಆಗ್ರಹಿಸಿದ್ದಾರೆ.

ಹಾಗೆಯೇ ಚಿತ್ರನಟ ಪ್ರಥಮ್ ಕೂಡ ಆ ಪದಬಳಕೆ ವಿರೋಧಿಸಿ ಟ್ವೀಟ್ ಮಾಡಿದ್ದಾರೆ.

 


ಇದನ್ನೂ ಓದಿ: ಹೊಸ ಅಲೆ ಸೃಷ್ಟಿಸಿದ ‘ಮಹಾನಾಯಕ’ ಧಾರಾವಾಹಿ: ವರ್ಷದ ಅತ್ಯುನ್ನತ ಡಬ್ಬಿಂಗ್ ವಿಭಾಗದಲ್ಲಿ ಪ್ರಶಸ್ತಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...