Homeಮುಖಪುಟಬಾಂಗ್ಲಾದೇಶಕ್ಕಾಗಿ ಹೋರಾಡಿ ಜೈಲು ಸೇರಿದ್ದ ಪ್ರಧಾನಿ: RTI ಅಡಿಯಲ್ಲಿ ಮಾಹಿತಿ ಕೋರಿ ಅರ್ಜಿ

ಬಾಂಗ್ಲಾದೇಶಕ್ಕಾಗಿ ಹೋರಾಡಿ ಜೈಲು ಸೇರಿದ್ದ ಪ್ರಧಾನಿ: RTI ಅಡಿಯಲ್ಲಿ ಮಾಹಿತಿ ಕೋರಿ ಅರ್ಜಿ

- Advertisement -
- Advertisement -

ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಜೈಲಿಗೆ ಹೋಗಿದ್ದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ ಬೆನ್ನಲ್ಲೇ, ಇದರ ಕುರಿತು ವಿವರಗಳನ್ನು ನೀಡಬೇಕು ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಮನವಿ ಸಲ್ಲಿಸಲಾಗಿದೆ. ಮೋದಿಯವರ ಈ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ನಗೆಪಾಟಲಿಗೀಡಾಗಿತ್ತು. ಜೊತೆಗೆ ಕಟು ವಿಮರ್ಶೆಗೆ ಒಳಗಾಗಿತ್ತು.

ಬಾಂಗ್ಲಾದೇಶದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ ನರೇಂದ್ರ ಮೋದಿ, “ಬಾಂಗ್ಲಾದೇಶ ವಿಮೋಚನೆಯ ಸಂದರ್ಭದ ಸ್ವಾತಂತ್ರ್ಯ ಹೋರಾಟದಲ್ಲಿ ನಾನು ಭಾಗವಹಿಸಿದ್ದೆ. ಬಾಂಗ್ಲಾದೇಶದ ಸ್ವಾತಂತ್ರ್ಯ ಸಂಗ್ರಾಮವು ನನ್ನ ಜೀವನದ ಪ್ರಯಾಣದಲ್ಲಿ ಒಂದು ಮಹತ್ವದ ಕ್ಷಣವಾಗಿತ್ತು. ನನ್ನ ಸಹೋದ್ಯೋಗಿಗಳು ಮತ್ತು ನಾನು ಭಾರತದಲ್ಲಿ ಸತ್ಯಾಗ್ರಹ ಮಾಡಿದ್ದೆವು. ಬಾಂಗ್ಲಾದೇಶದ ಸ್ವಾತಂತ್ರ್ಯ ಹೋರಾಟಕ್ಕಾಗಿ ಸತ್ಯಾಗ್ರಹದ ಸಮಯದಲ್ಲಿ ಜೈಲಿಗೆ ಹೋಗಲು ನನಗೆ ಅವಕಾಶ ಸಿಕ್ಕಿತು” ಎಂದು ಹೇಳಿದ್ದರು.

ಇದರ ಬೆನ್ನಲ್ಲೇ ಟ್ವಿಟರ್‌ನಲ್ಲಿ #lielikemodi ಎಂಬ ಹ್ಯಾಶ್‌ ಟ್ಯಾಗ್‌ ಟ್ರೆಂಡಿಂಗ್‌ ಆಗಿತ್ತು. ಈ ವರದಿ ಬರೆಯುವ ವೇಳೆಗೆ 2 ಲಕ್ಷಕ್ಕೂ ಹೆಚ್ಚು ಜನ ಈ ಹ್ಯಾಶ್‌ಟ್ಯಾಗ್ ಬಳಸಿ ಮೋದಿಯ ಕಾಲೆಳೆದಿದ್ದರು.

ಈಗ ಮೋದಿ ಹೇಳಿಕೆಯ ಕುರಿತು ಆರ್‌ಟಿಐ ಅಡಿಯಲ್ಲಿ ಮಾಹಿತಿಯನ್ನು ಕೋರಲಾಗಿದೆ.

ಇದನ್ನೂ ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ಅಲಹಾಬಾದ್ ಹೈಕೋರ್ಟಿನ ವಕೀಲರಾದ ಕೃಷ್ಣ ಮೋಹನ್ ಪಾಂಡೆ ಎಂಬುವವರು ಈ ಕೆಳಗಿನ ಮಾಹಿತಿಗಳನ್ನು ಕೋರಿದ್ದಾರೆ. “ಪ್ರಧಾನಿ ಮೋದಿಯವರು ಬಾಂಗ್ಲಾದೇಶದ ಭೇಟಿಯ ಸಂದರ್ಭದಲ್ಲಿ ನೀಡಿದ ಹೇಳಿಕೆಯ ಬಗ್ಗೆ ಕೆಲವು ಮಾಹಿತಿಗಳನ್ನು ನೀಡಬೇಕು” ಎಂದು ಅರ್ಜಿ ಸಲ್ಲಿಸಿದ್ದಾರೆ.

  1. ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡುವಾಗ ಯಾವ ಕಾನೂನಿನ ಅಡಿಯಲ್ಲಿ ಪ್ರಧಾನಿಯವರನ್ನು ಬಂಧಿಸಲಾಗಿತ್ತು. ಅದರ ಎಫ್‌ಐಆರ್ ನಕಲನ್ನು ಒದಗಿಸಿ.
  2. ಪ್ರಧಾನಿ ನರೇಂದ್ರ ಮೋದಿಯವರನ್ನು ಬಂಧಿಸಿ ಭಾರತದ ಯಾವ ಜೈಲಿನಲ್ಲಿಡಲಾಗಿತ್ತು?
  3. ಪ್ರಧಾನಿ ಮೋದಿಯವರು ಎಷ್ಟುದಿನ ಜೈಲಿನಲ್ಲಿದ್ದರು?

ಈ ಮೆಲಿನ ಪ್ರಶ್ನೆಗಳಿಗೆ ಉತ್ತರ ನೀಡುವಂತೆ ವಕೀಲರು ಮಾಹಿತಿ ಹಕ್ಕಿನಡಿ ಮನವಿ ಸಲ್ಲಿಸಿದ್ದಾರೆ.

ಇದೇ ರೀತಿ ಕಾಂಗ್ರೆಸ್‌ನ ವಕ್ತಾರರಾದ ಸರಳ್ ಪಟೇಲ್ ಪ್ರಧಾನಮಂತ್ರಿ ಕಛೇರಿಯಿಂದಲೇ ಮಾಹಿತಿ ಕೋರಿದ್ದಾರೆ.

  1. ಪ್ರಧಾನಿ ಮೋದಿಯವರು ಹೇಳಿರುವಂತೆ, ಅವರ ಬಂಧನದ ವಿವರಗಳು ಮತ್ತು ನಿರ್ದಿಷ್ಟ ದಿನಾಂಕದ ಮಾಹಿತಿ ಒದಗಿಸಿ.
  2. ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡುವಾಗ ಯಾವ ಕಾನೂನಿನ ಅಡಿಯಲ್ಲಿ ಪ್ರಧಾನಿಯವರನ್ನು ಬಂಧಿಸಲಾಗಿತ್ತು. ಅದರ ಎಫ್‌ಐಆರ್ ನಕಲನ್ನು ಒದಗಿಸಿ. ಮತ್ತು ಇದನ್ನು ಬೆಂಬಲಿಸುವ ಇತರೆ ದಾಖಲೆಗಳನ್ನು ಒದಗಿಸಿ.
  3. ಪ್ರಧಾನಿ ನರೇಂದ್ರ ಮೋದಿಯವರನ್ನು ಬಂಧಿಸಿ ಭಾರತದ ಯಾವ ಜೈಲಿನಲ್ಲಿಡಲಾಗಿತ್ತು?
  4. ಪ್ರಧಾನಿಯವರ ಹೇಳಿಕೆಗೆ ಸಂಬಂಧಿಸಿದ ಎಲ್ಲಾ ದಾಖಲೆ ಮತ್ತು ಕಡತಗಳನ್ನು ಒದಗಿಸಿ.

ಎಂದು ಪ್ರಧಾನಮಂತ್ರಿ ಕಛೇರಿಯಲ್ಲಿ ಮನವಿ ಸಲ್ಲಿಸಿದ್ದಾರೆ.


ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...