Homeಅಂತರಾಷ್ಟ್ರೀಯBreaking: ಸುಯೆಜ್ ಕಾಲುವೆಯಲ್ಲಿ ಸಿಲುಕಿದ್ದ ಬೃಹತ್ ಹಡಗು ಈಗ ಚಲಿಸುತ್ತಿದೆ

Breaking: ಸುಯೆಜ್ ಕಾಲುವೆಯಲ್ಲಿ ಸಿಲುಕಿದ್ದ ಬೃಹತ್ ಹಡಗು ಈಗ ಚಲಿಸುತ್ತಿದೆ

- Advertisement -
- Advertisement -

ಕಳೆದ ಒಂದು ವಾರದಿಂದ ಈಜಿಪ್ಟ್‌ನ ಸುಯೆಜ್ ಕಾಲುವೆಯಲ್ಲಿ ಸಿಲುಕಿದ್ದ 400 ಮೀಟರ್ ಉದ್ದದ ಬೃಹತ್ ಸರಕು ಹಡಗು ‘ಎವರ್‌ ಗಿವೆನ್’ ಈಗ ಚಲಿಸುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ರೆಡ್ ಸೀ ಮುಖಾಂತರ ಕಡಿದಾದ ಕಾಲುವೆಯಲ್ಲಿ ಸಾಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡ ಜಪಾನ್ ದೇಶದ ಈ ದೈತ್ಯ ಹಡಗಿನಿಂದಾಗಿ ಜಾಗತಿಕ ಜಲಮಾರ್ಗ ವ್ಯಾಪಾರ ವಹಿವಾಟಿನ ಮೇಲೆ ತೀವ್ರ ಪರಿಣಾಮ ಬೀರಿದ್ದು, ಬಿಲಿಯನ್‌ಗಟ್ಟಲೆ ಡಾಲರ್ ನಷ್ಟ ಉಂಟಾಗುತ್ತಿದೆ. ಈ ಹಡಗನ್ನು ಆ ಸ್ಥಳದಿಂದ ಬಂದರಿಗೆ ಸಾಗಿಸುವುದು ಹರಸಾಹಸದ ಕೆಲಸ ಎಂದು ಹೇಳಲಾಗಿತ್ತು. ಆದರೆ ಈಗ ಈ ಎಲ್ಲಾ ಅಡೆತಡೆಗಳನ್ನು ದಾಟಿ ಹಡಗು ಮುಂದೆ ಚಲಿಸುತ್ತಿದೆ.

ಈ ಕೆಲಸ ಪೂರ್ಣಗೊಳಿಸಲು ಕೆಲವು ವಾರಗಳೇ ಬೇಕಾಗಬಹುದು ಎಂದು ಎವರ್ ಗಿವನ್ ಹಡಗನ್ನು ಅಲ್ಲಿಂದ ಸಾಗಿಸಲು ಜವಾಬ್ದಾರಿ ನೀಡಲಾಗಿರುವ ಎರಡು ಸಂಸ್ಥೆಗಳ ಪೈಕಿ ಒಂದಾಗಿರುವ ಡೆನ್ಮಾರ್ಕ್‍ನ ಬೊಸ್ಲಾಲಿಸ್ ಸಂಸ್ಥೆಯ ಸಿಒಇಒ ಪೀಟರ್ ಬೆರ್ಡೊವೊಸ್ಕಿ ಹೇಳಿದ್ದರು.

ಇದನ್ನೂ ಓದಿ: ಈಜಿಪ್ಟ್‌ನ ಸುಯೆಜ್ ಕಾಲುವೆಯ ಮಧ್ಯೆ ಸಿಲುಕಿದ ಬೃಹತ್ ಹಡಗು – ಕೋಟ್ಯಂತರ ಡಾಲರ್ ನಷ್ಟ!

ನಂತರ ಸುಯೆಜ್ ಕಾಲುವೆ ಪ್ರಾಧಿಕಾರ ಈ ಅತ್ಯಂತ ಮಹತ್ವದ ಕಾಲುವೆ ಮುಖಾಂತರ ಎಲ್ಲಾ ಸಂಚಾರ ನಿಲ್ಲಿಸಿತ್ತು. ಪ್ರತಿ ದಿನ ಈ ಕಾಲುವೆ ಮೂಲಕ ಸುಮಾರು 50 ಸರಕು ಹಡಗುಗಳು ಹಾದು ಹೋಗುತ್ತವೆ ಹಾಗೂ ಸರಾಸರಿ ಜಾಗತಿಕ ಹಡಗು ಸಂಚಾರದ ಶೇ 30ರಷ್ಟು ಹಡಗುಗಳು ವಾರ್ಷಿಕವಾಗಿ ಈ ಕಾಲುವೆ ಮೂಲಕ ಸಾಗುತ್ತವೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು.

ಈಗಾಗಲೇ ಸುಯೆಜ್ ಕಾಲುವೆ ಬಂದ್ ಆಗಿದ್ದರಿಂದ ಗಂಟೆಗೆ ಸುಮಾರು 400 ಮಿಲಿಯನ್ ಡಾಲರ್ ನಷ್ಟ ಉಂಟಾಗಿತ್ತು. ಈ ದೈತ್ಯ ಹಡಗು 2.20 ಲಕ್ಷ ಟನ್ ಭಾರವಿದ್ದು, 193.3 ಕಿಮೀ ಉದ್ದವಿರುವ ಕಿರಿದಾದ ಸುಯೆಜ್ ಕಾಲುವೆಯನ್ನು ವಸ್ತುಶಃ ಬ್ಲಾಕ್ ಮಾಡಿತ್ತು. ಈ ಹಾದಿಯಲ್ಲಿ ಸಾಮಾನ್ಯವಾಗಿ ಸಾಗುವ ಸರಕು ನೌಕೆಗಳು ಹೆಚ್ಚಾಗಿ ತೈಲ, ಸಂಸ್ಕರಿತ ತೈಲ, ಆಹಾರ ಧಾನ್ಯ ಸಾಗಿಸುತ್ತವೆಯಲ್ಲದೆ ಪೂರ್ವ ಮತ್ತು ಪಾಶ್ಚಿಮಾತ್ಯ ದೇಶಗಳ ನಡುವೆ ವ್ಯಾಪಾರ ವಹಿವಾಟಿಗೆ ಮಹತ್ವದ ಕೊಂಡಿಯಾಗಿದೆ.


ಇದನ್ನೂ ಓದಿ: ಬಾಂಗ್ಲಾದೇಶಕ್ಕಾಗಿ ಹೋರಾಡಿ ಜೈಲು ಸೇರಿದ್ದ ಪ್ರಧಾನಿ: RTI ಅಡಿಯಲ್ಲಿ ಮಾಹಿತಿ ಕೋರಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...