Homeಅಂಕಣಗಳುನೂರರ ನೋಟ: ರೈತ ಹೋರಾಟ ತೀವ್ರಗೊಳ್ಳುವುದರ ಜೊತೆಗೆ ಜೈಲ್ ಭರೋ ಪ್ರಾರಂಭಿಸಬೇಕು

ನೂರರ ನೋಟ: ರೈತ ಹೋರಾಟ ತೀವ್ರಗೊಳ್ಳುವುದರ ಜೊತೆಗೆ ಜೈಲ್ ಭರೋ ಪ್ರಾರಂಭಿಸಬೇಕು

- Advertisement -
- Advertisement -

ರೈತ ಹೋರಾಟವನ್ನು ದಕ್ಷಿಣ ಭಾರತ ಮತ್ತು ಉತ್ತರ ಪ್ರದೇಶಗಳಿಗೆ ವಿಸ್ತರಿಸಲು ಭಾರತ್ ಕಿಸಾನ್ ಯೂನಿಯನ್ ತೀರ್ಮಾನಿಸಿರುವುದು ಸ್ವಾಗತಾರ್ಹ ಬೆಳವಣಿಗೆ. ಭಾರತದ ಕಿಸಾನ್ ಯೂನಿಯನ್ ಪರವಾಗಿ ಈ ಹೋರಾಟದ ವಿಸ್ತರಣೆ ಜವಬ್ದಾರಿಯನ್ನು ರಾಕೇಶ್ ಟಿಕಾಯತ್ ವಹಿಸಿಕೊಂಡಿದ್ದಾರೆ. ಶಿವಮೊಗ್ಗದಲ್ಲಿ 20ನೇ ತಾರೀಕು ರೈತ ಮಹಾಪಂಚಾಯತ್‌ಅನ್ನು ಉದ್ಘಾಟಿಸಿದ ರಾಕೇಶ್ ಟಿಕಾಯತ್, ದೆಹಲಿಯಲ್ಲಿ ಚಳುವಳಿ ನಡೆಸುತ್ತಿರುವ ಭಾರತ್ ಕಿಸಾನ್ ಯೂನಿಯನ್ ಈ ಹೋರಾಟವನ್ನು ಮೋದಿ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಹಿಂಪಡೆಯುವವರೆಗೂ, ಅನಿರ್ದಿಷ್ಟ ಕಾಲ ಮುಂದುವರೆಸುವುದಾಗಿ ಮಾಡಿದ್ದಾರೆ. ಅದರ ಜೊತೆ ಜೊತೆಗೇ ದಕ್ಷಿಣ ಭಾರತ ರಾಜ್ಯಗಳಲ್ಲಿ ಉತ್ತರ ಪ್ರದೇಶದಲ್ಲಿ ನಡೆಯುವಂತೆಯೇ ರೈತ ಮಹಾಪಂಚಾಯತ್‌ಗಳ ಸಮಾವೇಶಗಳನ್ನು ನಡೆಸುವ ಮೂಲಕ ರೈತರ ಈ ಹೋರಾಟಕ್ಕೆ ಬೆಂಬಲ ಪಡೆದುಕೊಳ್ಳುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಕರ್ನಾಟಕದ ಶಿವಮೊಗ್ಗದಲ್ಲಿ ಇದನ್ನು ಮೊದಲ ಬಾರಿಗೆ ನೆರವೇರಿಸಿದ್ದಾರೆ.

ಎರಡನೆಯ ರೈತ ಮಹಾಪಂಚಾಯತ್ ಹಾವೇರಿಯಲ್ಲಿ 21ರಂದು ನಡೆದಿದೆ. 22.3.21ರಂದು ಬೆಂಗಳೂರಿನಲ್ಲಿ ನಡೆಯುವ ವಿಧಾನ ಸೌಧ ಚಲೋ ಮೆರವಣಿಗೆಯಲ್ಲಿ ರೈತರು ಮತ್ತು ಇತರ ಸಾಮಾಜಿಕ ಸಂಸ್ಥೆಗಳು ಕೂಡಿಕೊಂಡು ರೈತ ಮಹಾಪಂಚಾಯತ್ ನಡೆಸುವುದಲ್ಲದೆ ಯಡಿಯೂರಪ್ಪ ಸರ್ಕಾರದ ವಿರುದ್ಧ ಮುತ್ತಿಗೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದವು. ಶಿವಮೊಗ್ಗದಲ್ಲಿ ಅಶೋಕ್ ಅವರ ತಂಡ ತಾಲ್ಲೂಕು ತಾಲ್ಲೂಕಿಗೂ ಹೋಗಿ ರೈತ ಜಾಗೃತಿ ಕೆಲಸ ಮಾಡಿದ್ದರ ಫಲವಾಗಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ರೈತರು ಮತ್ತು ಇತರ ಹೋರಾಟ ಸಂಘಟನೆಗಳ ಕಾರ್ಯಕರ್ತರು ಶಿವಮೊಗ್ಗದಲ್ಲಿ ಭಾಗವಹಿಸಿ ರೈತ ಮಹಾಪಂಚಾಯತ್‌ಗೆ ಚಾಲನೆ ಕೊಟ್ಟಿದ್ದಾರೆ. ಅದೇ ರೀತಿ ಅತ್ಯಧಿಕ ಸಂಖ್ಯೆಯಲ್ಲಿ ಬೆಂಗಳೂರು ಮುತ್ತಿಗೆಗೆ ಕೂಡ ಜನ ಸೇರಿದ್ದು, ಅದು ಕೊನೆಗೆ ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶವಾಗಿ ಮಾರ್ಪಟ್ಟಿತು ಕೃಷಿ ಸಚಿವ ಬಿ ಸಿ ಪಾಟಿಲ್, ಸಮಾವೇಶಕ್ಕೆ ಬಂದು ರೈತರ ಮನವಿಯನ್ನು ಸ್ವೀಕರಿಸಿ ಹೋಗಿದ್ದಾರೆ.

ಬೆಂಗಳೂರು ಕಾರ್ಯಕ್ರಮದ ನಂತರ ಆಂಧ್ರ, ತಮಿಳುನಾಡು, ಕೇರಳ ರಾಜ್ಯಗಳಲ್ಲಿ ರೈತ ಮಹಾಪಂಚಾಯತ್‌ಗಳು ಮುಂದುವರೆಲಿದೆ. ಪತ್ರಿಕಾ ಸಂದರ್ಶನದಲ್ಲಿ ರಾಕೇಶ್ ಟಿಕಾಯತ್ ಕೆಲವು ಸ್ವಾರಸ್ಯಕರ ವಿಚಾರಗಳನ್ನು ತಿಳಿಸಿದ್ದಾರೆ. ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳ ಕಾರ್ಯಕರ್ತರು ರೈತ ವಿರೋಧಿ ಕಾನೂನುಗಳನ್ನು ಸರ್ಕಾರ ಹಿಂಪಡೆಯುವವರೆಗೂ ದೆಹಲಿಯನ್ನು ಬಿಟ್ಟು ಹೊರಬೀಳುವುದಿಲ್ಲ ಎಂದಿದ್ದಾರೆ. ’ನಾವು ರೈತರು ಬೀಜ ಬಿತ್ತಿ 3 ರಿಂದ 4 ತಿಂಗಳು ಫಸಲಿಗೆ ಕಾಯುತ್ತೇವೆ, ಅದೇ ರೀತಿ ರೈತರ ಸಮಸ್ಯೆಗಳಿಗೆ ಪರಿಹಾರ ಸಿಗುವವರೆಗೆ ಕಾಯಲು ಸಿದ್ಧರಿದ್ದೇವೆ. ಅದಕ್ಕಾಗಿ ಹೋರಾಟವನ್ನು ಅನಿರ್ದಿಷ್ಟ ಕಾಲ ನಡೆಸಲು ತಯಾರಿ ಮಾಡಿಕೊಂಡಿದ್ದೇವೆ. ಪಂಜಾಬ್, ಹರ್ಯಾಣ, ರಾಜಸ್ಥಾನ ರಾಜ್ಯಗಳಿಗೆ ಸೀಮಿತವಾಗಿರುವ ರೈತ ಚಳುವಳಿಯನ್ನು ಭಾರತದ ಎಲ್ಲ ರಾಜ್ಯಗಳಿಗೂ ಹರಡಲು ಕ್ರಮಕೈಗೊಳ್ಳುತ್ತೇವೆ. ಈ ಕೆಲಸವನ್ನು ನಾವು ಈಗ ರೈತ ಮಹಾಪಂಚಾಯತ್‌ಗಳನ್ನು ನಡೆಸುವ ಮೂಲಕ ಕರ್ನಾಟಕದಿಂದ ಆರಂಭ ಮಾಡಲಿದ್ದೇವೆ’ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಸ್ಪಷ್ಟ ಪಡಿಸಿದ್ದಾರೆ.

ಕಾಲಕ್ರಮೇಣ ಭಾರತದ ಎಲ್ಲ ರಾಜ್ಯಗಳಲ್ಲೂ ಭಾರತ ಕಿಸಾನ್ ಯೂನಿಯನ್ ನೇತೃತ್ವದಲ್ಲಿ ಆಯಾ ರಾಜ್ಯಗಳ ಎಲ್ಲ ಹೋರಾಟ ಸಮಿತಿಗಳೂ ಕೂಡಿಕೊಂಡು ಚಳುವಳಿಯನ್ನು ಬಲಗೊಳಿಸಬೇಕು. ರೈತರ ಬೇಡಿಕೆಗಳಿಗೆ ಆದ್ಯತೆ ನೀಡಿ, ಬಿಜೆಪಿ ಸರ್ಕಾರದಿಂದ ಸಾರ್ವಜನಿಕರು ಅನುಭವಿಸುತ್ತಿರುವ ಇತರ ಕಷ್ಟಕೋಟಲೆಗಳ ವಿರುದ್ಧವಾಗಿಯೂ ಧ್ವನಿ ಎತ್ತಬೇಕು.

ಮೋದಿ ಒಬ್ಬ ಚುನಾಯಿತ ಸರ್ವಾಧಿಕಾರಿಯಾವುವತ್ತ ನಡೆದಿದ್ದಾರೆ. ಸಾಮಾನ್ಯ ಜನ ದಿನನಿತ್ಯ ಅನುಭವಿಸುತ್ತಿರುವ ಆಹಾರ ಪದಾರ್ಥಗಳ ಬೆಲೆ ಏರಿಕೆ, ಮನೆಗಳಿಗೆ ಸರಬರಾಜು ಮಾಡಲಾಗುವ ಗ್ಯಾಸ್ ಸಿಲೆಂಡರ್‌ಗಳ ಬೆಲೆ ವಿಪರೀತವಾಗಿ ಹೆಚ್ಚುತ್ತಿರುವುದು, ಸರ್ಕಾರಿ ಉದ್ಯಮಗಳ ಷೇರುಗಳನ್ನು ಮಾರಾಟ ಮಾಡುವುದು, ಕಲ್ಲಿದ್ದಲು ಗಣಿಗಳನ್ನು ಖಾಸಗಿಯವರಿಗೆ ಮಾರಾಟ ಮಾಡುವ ಪ್ರವೃತ್ತಿ, ಏರೋಡ್ರೋಮ್‌ಗಳು, ರೈಲ್ವೆ ಮಾರ್ಗಗಳು ಇವುಗಳ ಖಾಸಗೀಕರಣ, ರೈತರ ಜಮೀನುಗಳನ್ನು ಬಂಡವಾಳಶಾಹಿಗಳು ಕೊಂಡು ರೈತರನ್ನು ಬೀದಿಪಾಲು ಮಾಡುವ ಇಲ್ಲವೇ ಶ್ರೀಮಂತರ ಗುಲಾಮರನ್ನಾಗಿಸುವ ಹುನ್ನಾರ, ಬೆಂಬಲ ಬೆಲೆ ಘೋಷಿಸದೆ ರೈತರು ಬೆಳೆದ ಬೆಳೆಗಳನ್ನು ಸರ್ಕಾರವೇ ಕೊಳ್ಳುತ್ತಿದ್ದ ಪದ್ಧತಿಯನ್ನು ರದ್ದುಗೊಳಿಸಿಸಲು ಮಾಡಿರುವ ಪ್ರಯತ್ನ, ಖಾಸಗಿಯವರು ಅವುಗಳನ್ನು ಕೊಳ್ಳುವ ಸೌಲಭ್ಯ ಒದಗಿಸಿಕೊಟ್ಟಿರುವುದು ಈ ಎಲ್ಲವೂ ರೈತ ವಿರೋಧಿ ತೀರ್ಮಾನಗಳೇ ಆಗಿವೆ. ಇವುಗಳ ವಿರುದ್ಧ ಒಂದು ಶಾಂತಿಯುತ ಹೋರಾಟ ನಡೆಸಿ ಜೈಲ್‌ಭರೋ ಕಾರ್ಯಾಚರಣೆಗೆ ಜನರನ್ನು ಅಣಿಗೊಳಿಸುವ ಕೆಲಸ ಜರೂರಾಗಿ ಆಗಬೇಕು.

ಬಿಜೆಪಿ ಸರ್ಕಾರದ ಈ ಜನವಿರೋಧಿ ನಿರ್ಧಾರಗಳು ರೈತ ಸಮೂಹವನ್ನೇ ಮಾತ್ರವಲ್ಲದೆ ಎಲ್ಲ ಸ್ಥರಗಳ ಜನರನ್ನೂ ಕಾಡುತ್ತಿರುವುದರಿಂದ ಜನಸಮೂಹ ದೊಡ್ಡ ಸಂಖ್ಯೆಯಲ್ಲಿ ಈ ಹೋರಾಟದಲ್ಲಿ ಕೂಡಿಕೊಳ್ಳುತ್ತಾರೆಂಬುದು ನನ್ನ ಅಭಿಪ್ರಾಯ. ಅಲ್ಲದೆ ಇಂತಹ ಕಾರ್ಯಕ್ರಮ ಕೈಗೊಳ್ಳುವುದರಿಂದ ಸರ್ಕಾರ ತನ್ನ ಜನವಿರೋಧಿ, ರೈತ ವಿರೋಧಿ ನೀತಿಯನ್ನು ಕೈಬಿಡಬೇಕು ಇಲ್ಲವೇ ಮೋದಿ ರಾಜೀನಾಮೆ ಕೊಟ್ಟು ಹೋಗಬೇಕು ಎಂಬ ಪರಿಸ್ಥಿತಿಯನ್ನು ಉಂಟು ಮಾಡಲು ಸಹಕರಿಸುತ್ತದೆ. ಈ ಜೈಲ್‌ಭರೋ ಕಾರ್ಯಕ್ರಮ ಇದನ್ನು ಇನ್ನಷ್ಟು ತೀವ್ರಗೊಳಿಸುವುದರಲ್ಲಿ ಅನುಮಾನವಿಲ್ಲ.

ಭಾರತದ ಎಲ್ಲ ರಾಜ್ಯಗಳಲ್ಲೂ ಈ ಜೈಲ್‌ಭರೋ ಕಾರ್ಯಕ್ರಮ ಯಶಸ್ವಿಯಾಗಿ ನಡೆದರೆ, ಮುಂದೆಂದೂ ಈ ಜನವಿರೋಧಿ, ರೈತ ವಿರೋಧಿ ರಾಜಕೀಯ ಪಕ್ಷಗಳು ಅವುಗಳ ರಾಜಕೀಯ ನಾಯಕರು ಇಂತಹ ದುಸ್ಸಾಹಸಕ್ಕೆ ಎಂದಿಗೂ ಕೈ ಹಾಕಲಾರರು ಎಂಬ ವಿಶ್ವಾಸ ನನಗಿದೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದುವರೆದ ಹೋರಾಟ: ಮಾ.‌ 31 ಕ್ಕೆ ಬೆಳಗಾವಿಯಲ್ಲಿ ರೈತ ಮಹಾಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....