Homeಮುಖಪುಟಹಿಂದಿಯಲ್ಲಿ ಸ್ವಾಗತ ಕೋರಿದ ನಿರೂಪಕಿ: ವೇದಿಕೆಯಿಂದ ಕೆಳಗಿಳಿದ ಎ ಆರ್ ರಹಮಾನ್!

ಹಿಂದಿಯಲ್ಲಿ ಸ್ವಾಗತ ಕೋರಿದ ನಿರೂಪಕಿ: ವೇದಿಕೆಯಿಂದ ಕೆಳಗಿಳಿದ ಎ ಆರ್ ರಹಮಾನ್!

- Advertisement -
- Advertisement -

‘99 ಸಾಂಗ್ಸ್’ ಚಿತ್ರದ ಕಾರ್ಯಕ್ರಮವೊಂದರಲ್ಲಿ ನಿರೂಪಕಿಯೊಬ್ಬರು ಹಿಂದಿಯಲ್ಲಿ ಸ್ವಾಗತಿಸಿದರು ಎನ್ನುವ ಕಾರಣಕ್ಕೆ ಎ ಆರ್ ರಹಮಾನ್ ವೇದಿಕೆಯಿಂದ ಕೆಳಗಿಳಿದ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.

ಆಸ್ಕರ್ ಪ್ರಶಸ್ತಿ ಪುರಸ್ಕೃತ ಸಂಗೀತಗಾರ ಎ ಆರ್ ರೆಹಮಾನ್ ಅವರ ಮೊದಲ ನಿರ್ಮಾಣದ, ವಿಶ್ವೇಶ್ ಕೃಷ್ಣಮೂರ್ತಿ ಅವರ ಚೊಚ್ಚಲ ನಿರ್ದೇಶನದ ‘99 ಸಾಂಗ್ಸ್’ ಚಿತ್ರದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.

‘99 ಸಾಂಗ್ಸ್‌’ನಲ್ಲಿ ಹೊಸಮುಖಗಳಾದ ಇಹಾನ್ ಭಟ್ ಮತ್ತು ಎಡಿಲ್ಸಿ ವರ್ಗಾಸ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ, ಚೆನ್ನೈನಲ್ಲಿ ಚಿತ್ರದ ಲಾಂಚಿಂಗ್ ಕಾರ್ಯಕ್ರಮ ನಡೆಯಿತು. ಈ ಚಿತ್ರವನ್ನು ಎ ಆರ್ ರಹಮಾನ್ ಅವರೇ ಅವರ ವೈಎಂ ಮೂವೀಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಹೊಸಮುಖಗಳ ಜೊತೆಗೆ ಲಿಸಾ ರೇ, ಮನೀಶಾ ಕೊಯಿರಾಲಾ, ಆದಿತ್ಯ ಸೀಲ್, ಡ್ರಮ್ಮರ್ ರಂಜಿತ್ ಬರೋಟ್ ಮತ್ತು ರಾಹುಲ್ ರಾಮ್ ಕೂಡ ಕಾಣಿಸಿಕೊಳ್ಳಲಿದ್ದಾರೆ.

ರಹಮಾನ್ ಅವರನ್ನು ತಮಿಳಿನಲ್ಲಿ ಸ್ವಾಗತಿಸಿದ ನಿರೂಪಕಿ, ನಟ ಇಹಾನ್ ಭಟ್ ಅವರನ್ನು ಹಿಂದಿಯಲ್ಲಿ ಸ್ವಾಗತಿಸಿದರು. “ಇಹಾನ್ ಭಟ್, ಚೆನ್ನೈ ಮೇ ಆಪ್ ಕಾ ಹಾರ್ದಿಕ್ ಸ್ವಾಗತ್ ಕರ್ತಿ ಹೂ” ಎಂದರು.

ಇದಕ್ಕೆ ರಹಮಾನ್, ಆಶ್ಚರ್ಯಕರ ರೀತಿಯಲ್ಲಿ ‘ಹಿಂದಿ’! ಎಂದು ಪ್ರತಿಕ್ರಿಯಿಸಿ ವೇದಿಕೆಯಿಂದ ಕೆಳಗಿಳಿದರು. ನಂತರ ‘ನೀವು ತಮಿಳು ಭಾಷೆಯಲ್ಲಿ ಮಾತನಾಡುತ್ತೀರೋ ಇಲ್ಲವೋ ಎಂದು ನಾನು ಆಗಲೇ ನಿಮ್ಮನ್ನು ಕೇಳಿರಲಿಲ್ಲವೇ?’ ಎಂದು ಹಾಸ್ಯಚಟಾಕಿ ಹಾರಿಸಿದರು. ಈ ವೇಳೆ, ಕಾರ್ಯಕ್ರಮದಲ್ಲಿ ಸೇರಿದ್ದ ಜನ ಸಮೂಹ ನಗೆಗಡಲಲ್ಲಿ ತೇಲಿತು.

ಇದನ್ನೂ ಓದಿ: ಕರ್ನಾಟಕದಲ್ಲಿ ಕನ್ನಡ ಮಾಯ, ತಮಿಳುನಾಡಿನಲ್ಲಿ ತಮಿಳುಮಯ: ಹಿಂದಿ ಹೇರಿಕೆಗೆ ಆಕ್ರೋಶ

ಬಳಿಕ ತಮಿಳಿನಲ್ಲಿ ಉತ್ತರಿಸಿದ ನಿರೂಪಕಿ, “ಇಹಾನ್ ಭಟ್ ಅವರಿಗೆ ಅರ್ಥವಾಗಲಿ ಎಂದು ಅವರನ್ನು ಹಿಂದಿ ಭಾಷೆಯಲ್ಲಿ ಸ್ವಾಗತಿಸಲು ಪ್ರಯತ್ನಿಸಿದೆ. ಕೋಪಿಸಿಕೊಳ್ಳಬೇಡಿ ಸರ್” ಎಂದು ವಿವರಣೆ ನೀಡಿದರು.

ಆದರೆ ಇದು ಆ ಕ್ಷಣಕ್ಕೆ ಹಾಸ್ಯದಂತೆ ಕಂಡರೂ ಸಹ ಹಿಂದಿ ಹೇರಿಕೆಯ ವಿರುದ್ಧದ ತಮಿಳಿಗರ ಧೋರಣೆಯನ್ನು ಬಿಂಬಿಸುತ್ತದೆ. ಹಾಗಾಗಿಯೇ ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಂಡು ಹಿಂದಿ ಭಾಷಾ ಹೇರಿಕೆಯ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.


ಇದನ್ನೂ ಓದಿ: ಹಿಂದಿ ರಾಷ್ಟ್ರ ಭಾಷೆ ಅಲ್ಲ: ಕನ್ನಡಿಗರ ಆಕ್ರೋಶಕ್ಕೆ ಮಣಿದು ಕ್ಷಮೆ ಕೇಳಿದ ದೊಡ್ಡರಂಗೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...