Homeಮುಖಪುಟಅಸ್ಸಾಂ: ಜಾಹೀರಾತನ್ನು ಸುದ್ದಿಯ ರೂಪದಲ್ಲಿ ನೀಡಿದ ಬಿಜೆಪಿ; ಕಾಂಗ್ರೆಸ್‌ನಿಂದ ದೂರು ದಾಖಲು

ಅಸ್ಸಾಂ: ಜಾಹೀರಾತನ್ನು ಸುದ್ದಿಯ ರೂಪದಲ್ಲಿ ನೀಡಿದ ಬಿಜೆಪಿ; ಕಾಂಗ್ರೆಸ್‌ನಿಂದ ದೂರು ದಾಖಲು

ಜೆ.ಪಿ. ನಡ್ಡಾ, ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್, ರಾಜ್ಯಾಧ್ಯಕ್ಷ ರಂಜೀತ್‌ ಕುಮಾರ್‌ ದಾಸ್ ಮತ್ತು ಎಂಟು ಪ್ರಮುಖ ಪತ್ರಕೆಗಳ ವಿರುದ್ದ ದೂರು ದಾಖಲಿಸಿದೆ.

- Advertisement -
- Advertisement -

ಮಾರ್ಚ್ 27 ರಂದು ಪಂಚರಾಜ್ಯಗಳ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ಅಂದು ಚುನಾವಣೆ ನಡೆದ ಅಸ್ಸಾಂನಲ್ಲಿನ ಎಲ್ಲಾ ಕ್ಷೇತ್ರದಲ್ಲೂ ಬಿಜೆಪಿ ಜಯಗಳಿಸಿದೆ ಎಂಬ ‘ಜಾಹೀರಾತನ್ನು, ಸುದ್ದಿಯ ರೂಪದಲ್ಲಿ ನೀಡಿದ್ದಾರೆ’ ಎಂದು ಆರೋಪಿಸಿ ದೂರು ದಾಖಲಾಗಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್, ರಾಜ್ಯದ ಬಿಜೆಪಿ ಅಧ್ಯಕ್ಷ ರಂಜೀತ್‌ ಕುಮಾರ್‌ ದಾಸ್ ಮತ್ತು ಎಂಟು ಪ್ರಮುಖ ಪತ್ರಿಕೆಗಳ ವಿರುದ್ದ ಕಾಂಗ್ರೆಸ್ ದೂರು ದಾಖಲಿಸಿದೆ.

ಮಾದರಿ ನೀತಿ ಸಂಹಿತೆ (ಎಂಸಿಸಿ), ಜನರ ಪ್ರಾತಿನಿಧ್ಯ ಕಾಯ್ದೆ, 1951 ರ ಸೆಕ್ಷನ್ 126 ಎ ಮತ್ತು ಮಾರ್ಚ್ 26 ರಂದು ಹೊರಡಿಸಿದ ಇಸಿಐ ನಿರ್ದೇಶನಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಭಾನುವಾರ ರಾತ್ರಿ ಎಫ್‌ಪೂರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಅಸ್ಸಾಂ ಕಾಂಗ್ರೆಸ್‌‌ನ ಕಾನೂನು ವಿಭಾಗದ ಅಧ್ಯಕ್ಷ ನಿರನ್ ಬೋರಾ ಹೇಳಿದ್ದಾರೆ.

ಇದನ್ನೂ ಓದಿ: ಹಿಂದಿಯಲ್ಲಿ ಸ್ವಾಗತ ಕೋರಿದ ನಿರೂಪಕಿ: ವೇದಿಕೆಯಿಂದ ಕೆಳಗಿಳಿದ ಎ ಆರ್ ರಹಮಾನ್!

“ಬಿಜೆಪಿ ನಾಯಕರು ಮತ್ತು ಸದಸ್ಯರು ಎಂಸಿಸಿ, ಜನರ ಪ್ರಾತಿನಿಧ್ಯ ಕಾಯ್ದೆ, 1951 ಮತ್ತು ಇಸಿಐನ ಸಂಬಂಧಿತ ಸೂಚನೆಗಳು ಮತ್ತು ಮಾಧ್ಯಮ ನೀತಿಗಳ ಉಲ್ಲಂಘನೆಯಾಗಿದೆ. ಬಿಜೆಪಿಗೆ ಸೋಲಾಗುತ್ತದೆ ಎಂದು ತಿಳಿದ ನಂತರ ರಾಜ್ಯದ ಮತದಾರರ ಮೇಲೆ ಪ್ರಭಾವ ಬೀರಲು ಹತಾಶ, ಅಕ್ರಮ ಮತ್ತು ಅಸಂವಿಧಾನಿಕ ವಿಧಾನಗಳನ್ನು ಆಶ್ರಯಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಎರಡನೇ ಮತ್ತು ಮೂರನೇ ಹಂತಗಳಲ್ಲಿ ನಡೆಯುವ ಚುನಾವಣೆಯಲ್ಲಿ ಮತದಾರರನ್ನು ಮೋಸಗೊಳಿಸಲು ಮಾಡಲಾದ ಪೂರ್ವ ಯೋಜಿತ ಪಿತೂರಿಯಾಗಿದೆ ಇದು. ಸಿಎಂ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ರಾಜ್ಯಾಧ್ಯಕ್ಷ ಮತ್ತು ಪಕ್ಷದ ಇತರ ಸದಸ್ಯರು ಉದ್ದೇಶಪೂರ್ವಕವಾಗಿ ಉತ್ತರ ಅಸ್ಸಾಂನ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಹೇಳುವ ಮೂಲಕ ವಿವಿಧ ಪತ್ರಿಕೆಗಳ ಮುಖ ಪುಟಗಳಲ್ಲಿ ಜಾಹೀರಾತುಗಳನ್ನು ಸುದ್ದಿಯ ರೀತಿಯಲ್ಲಿ ಬಿಡುಗಡೆ ಮಾಡಿದ್ದಾರೆ” ಎಂದು ಬೋರಾ ಹೇಳಿದ್ದಾರೆ.

“ಮತದಾರರ ಮನಸ್ಸನ್ನು ಪೂರ್ವಾಗ್ರಹ ಪೀಡಿತಗೊಳಿಸುವ ರೀತಿಯಲ್ಲಿ ಜಾಹೀರಾತುಗಳನ್ನು ಪ್ರಸ್ತುತಪಡಿಸಲಾಗಿದೆ. ಈ ದುರುದ್ದೇಶಪೂರಿತ ಮತ್ತು ತಿರುಚಿರುವ ಜಾಹೀರಾತುಗಳು ಜನರ ಪ್ರತಿನಿಧಿ ಕಾಯ್ದೆ 1951 ರ ಸೆಕ್ಷನ್ 126 ಎ ಅನ್ನು ಸ್ಪಷ್ಟವಾಗಿ ಉಲ್ಲಂಘಿಸಿವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಂತ್ರಸ್ತ ಯುವತಿ ಪ್ರಾಣಕ್ಕೆ ಅಪಾಯವಾದರೇ ಬಿಜೆಪಿ ಸರ್ಕಾರವೇ ಹೊಣೆ- ಸಿದ್ದರಾಮಯ್ಯ

ಇದಲ್ಲದೆ, ಅಸ್ಸಾಂಗೆ ನಿರ್ದಿಷ್ಟವಾದ ಇಸಿಐನ ಸೂಚನೆಗಳು ಇದ್ದು, ಮಾರ್ಚ್ 27 ರಿಂದ ಏಪ್ರಿಲ್ 29 ರ ವರೆಗೆ ಮತದಾನ ಫಲಿತಾಂಶಗಳಿಗೆ ಸಂಬಂಧಿಸಿದ ಯಾವುದೇ ರೀತಿಯ ಮುನ್ಸೂಚನೆಯನ್ನು ಪ್ರಸಾರ ಮಾಡುವುದನ್ನು ನಿಷೇಧಿಸಿವೆ ಎಂದು ಬೋರಾ ಹೇಳಿದ್ದಾರೆ.

“ಪ್ರಸಕ್ತ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ತಮ್ಮ ಪರವಾಗಿದೆ ಎಂದು ತಪ್ಪಾಗಿ ಊಹಿಸುವ ದೊಡ್ಡ ಪ್ರಮಾಣದ ಜಾಹೀರಾತುಗಳನ್ನು ಬಿಜೆಪಿ ಪ್ರಕಟಿಸುವುದರಿಂದ ಇದು ಈ ಸೂಚನೆಗಳ ನೇರ ಉಲ್ಲಂಘನೆಯಾಗಿದೆ” ಎಂದು ಅವರು ಹೇಳಿದ್ದಾರೆ.

ಪತ್ರಿಕೆಗಳು ಸೇರಿದಂತೆ ದೂರಿನಲ್ಲಿ ಹೆಸರಿಸಲಾದವರ ವಿರುದ್ಧ “ತ್ವರಿತ ಮತ್ತು ಅಗತ್ಯ ಕ್ರಮ” ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್‌ ಒತ್ತಾಯಿಸಿದೆ.

ಅಸ್ಸಾಂನಲ್ಲಿ ಶನಿವಾರ ನಡೆದ ಮೊದಲ ಹಂತದ ಮತದಾನದ ವೇಳೆ ಒಟ್ಟು 81.09 ಲಕ್ಷ ಮತದಾರರಲ್ಲಿ ಶೇಕಡಾ 79.93 ರಷ್ಟು ಜನರು 47 ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಎರಡನೇ ಹಂತದಲ್ಲಿ 39 ಸ್ಥಾನಗಳಿಗೆ ಚುನಾವಣೆ ಏಪ್ರಿಲ್ 1 ರಂದು ಮತ್ತು 40 ಸ್ಥಾನಗಳಿಗೆ ಮೂರನೇ ಮತ್ತು ಅಂತಿಮ ಹಂತದಲ್ಲಿ ಏಪ್ರಿಲ್ 6 ರಂದು ಮತದಾನ ನಡೆಯಲಿದೆ.

ಇದನ್ನೂ ಓದಿ: ಸಿಡಿ ಪ್ರಕರಣ: ರಕ್ಷಣೆ ಕೊಡಿ ಎಂದು ಹೈಕೋರ್ಟ್ ಸಿಜೆಐಗೆ ಪತ್ರ ಬರೆದ ಸಂತ್ರಸ್ತ ಯುವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...