Homeಮುಖಪುಟಅಸ್ಸಾಂ: ಜಾಹೀರಾತನ್ನು ಸುದ್ದಿಯ ರೂಪದಲ್ಲಿ ನೀಡಿದ ಬಿಜೆಪಿ; ಕಾಂಗ್ರೆಸ್‌ನಿಂದ ದೂರು ದಾಖಲು

ಅಸ್ಸಾಂ: ಜಾಹೀರಾತನ್ನು ಸುದ್ದಿಯ ರೂಪದಲ್ಲಿ ನೀಡಿದ ಬಿಜೆಪಿ; ಕಾಂಗ್ರೆಸ್‌ನಿಂದ ದೂರು ದಾಖಲು

ಜೆ.ಪಿ. ನಡ್ಡಾ, ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್, ರಾಜ್ಯಾಧ್ಯಕ್ಷ ರಂಜೀತ್‌ ಕುಮಾರ್‌ ದಾಸ್ ಮತ್ತು ಎಂಟು ಪ್ರಮುಖ ಪತ್ರಕೆಗಳ ವಿರುದ್ದ ದೂರು ದಾಖಲಿಸಿದೆ.

- Advertisement -
- Advertisement -

ಮಾರ್ಚ್ 27 ರಂದು ಪಂಚರಾಜ್ಯಗಳ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದೆ. ಅಂದು ಚುನಾವಣೆ ನಡೆದ ಅಸ್ಸಾಂನಲ್ಲಿನ ಎಲ್ಲಾ ಕ್ಷೇತ್ರದಲ್ಲೂ ಬಿಜೆಪಿ ಜಯಗಳಿಸಿದೆ ಎಂಬ ‘ಜಾಹೀರಾತನ್ನು, ಸುದ್ದಿಯ ರೂಪದಲ್ಲಿ ನೀಡಿದ್ದಾರೆ’ ಎಂದು ಆರೋಪಿಸಿ ದೂರು ದಾಖಲಾಗಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್, ರಾಜ್ಯದ ಬಿಜೆಪಿ ಅಧ್ಯಕ್ಷ ರಂಜೀತ್‌ ಕುಮಾರ್‌ ದಾಸ್ ಮತ್ತು ಎಂಟು ಪ್ರಮುಖ ಪತ್ರಿಕೆಗಳ ವಿರುದ್ದ ಕಾಂಗ್ರೆಸ್ ದೂರು ದಾಖಲಿಸಿದೆ.

ಮಾದರಿ ನೀತಿ ಸಂಹಿತೆ (ಎಂಸಿಸಿ), ಜನರ ಪ್ರಾತಿನಿಧ್ಯ ಕಾಯ್ದೆ, 1951 ರ ಸೆಕ್ಷನ್ 126 ಎ ಮತ್ತು ಮಾರ್ಚ್ 26 ರಂದು ಹೊರಡಿಸಿದ ಇಸಿಐ ನಿರ್ದೇಶನಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಭಾನುವಾರ ರಾತ್ರಿ ಎಫ್‌ಪೂರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಅಸ್ಸಾಂ ಕಾಂಗ್ರೆಸ್‌‌ನ ಕಾನೂನು ವಿಭಾಗದ ಅಧ್ಯಕ್ಷ ನಿರನ್ ಬೋರಾ ಹೇಳಿದ್ದಾರೆ.

ಇದನ್ನೂ ಓದಿ: ಹಿಂದಿಯಲ್ಲಿ ಸ್ವಾಗತ ಕೋರಿದ ನಿರೂಪಕಿ: ವೇದಿಕೆಯಿಂದ ಕೆಳಗಿಳಿದ ಎ ಆರ್ ರಹಮಾನ್!

“ಬಿಜೆಪಿ ನಾಯಕರು ಮತ್ತು ಸದಸ್ಯರು ಎಂಸಿಸಿ, ಜನರ ಪ್ರಾತಿನಿಧ್ಯ ಕಾಯ್ದೆ, 1951 ಮತ್ತು ಇಸಿಐನ ಸಂಬಂಧಿತ ಸೂಚನೆಗಳು ಮತ್ತು ಮಾಧ್ಯಮ ನೀತಿಗಳ ಉಲ್ಲಂಘನೆಯಾಗಿದೆ. ಬಿಜೆಪಿಗೆ ಸೋಲಾಗುತ್ತದೆ ಎಂದು ತಿಳಿದ ನಂತರ ರಾಜ್ಯದ ಮತದಾರರ ಮೇಲೆ ಪ್ರಭಾವ ಬೀರಲು ಹತಾಶ, ಅಕ್ರಮ ಮತ್ತು ಅಸಂವಿಧಾನಿಕ ವಿಧಾನಗಳನ್ನು ಆಶ್ರಯಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಎರಡನೇ ಮತ್ತು ಮೂರನೇ ಹಂತಗಳಲ್ಲಿ ನಡೆಯುವ ಚುನಾವಣೆಯಲ್ಲಿ ಮತದಾರರನ್ನು ಮೋಸಗೊಳಿಸಲು ಮಾಡಲಾದ ಪೂರ್ವ ಯೋಜಿತ ಪಿತೂರಿಯಾಗಿದೆ ಇದು. ಸಿಎಂ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ರಾಜ್ಯಾಧ್ಯಕ್ಷ ಮತ್ತು ಪಕ್ಷದ ಇತರ ಸದಸ್ಯರು ಉದ್ದೇಶಪೂರ್ವಕವಾಗಿ ಉತ್ತರ ಅಸ್ಸಾಂನ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಹೇಳುವ ಮೂಲಕ ವಿವಿಧ ಪತ್ರಿಕೆಗಳ ಮುಖ ಪುಟಗಳಲ್ಲಿ ಜಾಹೀರಾತುಗಳನ್ನು ಸುದ್ದಿಯ ರೀತಿಯಲ್ಲಿ ಬಿಡುಗಡೆ ಮಾಡಿದ್ದಾರೆ” ಎಂದು ಬೋರಾ ಹೇಳಿದ್ದಾರೆ.

“ಮತದಾರರ ಮನಸ್ಸನ್ನು ಪೂರ್ವಾಗ್ರಹ ಪೀಡಿತಗೊಳಿಸುವ ರೀತಿಯಲ್ಲಿ ಜಾಹೀರಾತುಗಳನ್ನು ಪ್ರಸ್ತುತಪಡಿಸಲಾಗಿದೆ. ಈ ದುರುದ್ದೇಶಪೂರಿತ ಮತ್ತು ತಿರುಚಿರುವ ಜಾಹೀರಾತುಗಳು ಜನರ ಪ್ರತಿನಿಧಿ ಕಾಯ್ದೆ 1951 ರ ಸೆಕ್ಷನ್ 126 ಎ ಅನ್ನು ಸ್ಪಷ್ಟವಾಗಿ ಉಲ್ಲಂಘಿಸಿವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಂತ್ರಸ್ತ ಯುವತಿ ಪ್ರಾಣಕ್ಕೆ ಅಪಾಯವಾದರೇ ಬಿಜೆಪಿ ಸರ್ಕಾರವೇ ಹೊಣೆ- ಸಿದ್ದರಾಮಯ್ಯ

ಇದಲ್ಲದೆ, ಅಸ್ಸಾಂಗೆ ನಿರ್ದಿಷ್ಟವಾದ ಇಸಿಐನ ಸೂಚನೆಗಳು ಇದ್ದು, ಮಾರ್ಚ್ 27 ರಿಂದ ಏಪ್ರಿಲ್ 29 ರ ವರೆಗೆ ಮತದಾನ ಫಲಿತಾಂಶಗಳಿಗೆ ಸಂಬಂಧಿಸಿದ ಯಾವುದೇ ರೀತಿಯ ಮುನ್ಸೂಚನೆಯನ್ನು ಪ್ರಸಾರ ಮಾಡುವುದನ್ನು ನಿಷೇಧಿಸಿವೆ ಎಂದು ಬೋರಾ ಹೇಳಿದ್ದಾರೆ.

“ಪ್ರಸಕ್ತ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ತಮ್ಮ ಪರವಾಗಿದೆ ಎಂದು ತಪ್ಪಾಗಿ ಊಹಿಸುವ ದೊಡ್ಡ ಪ್ರಮಾಣದ ಜಾಹೀರಾತುಗಳನ್ನು ಬಿಜೆಪಿ ಪ್ರಕಟಿಸುವುದರಿಂದ ಇದು ಈ ಸೂಚನೆಗಳ ನೇರ ಉಲ್ಲಂಘನೆಯಾಗಿದೆ” ಎಂದು ಅವರು ಹೇಳಿದ್ದಾರೆ.

ಪತ್ರಿಕೆಗಳು ಸೇರಿದಂತೆ ದೂರಿನಲ್ಲಿ ಹೆಸರಿಸಲಾದವರ ವಿರುದ್ಧ “ತ್ವರಿತ ಮತ್ತು ಅಗತ್ಯ ಕ್ರಮ” ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್‌ ಒತ್ತಾಯಿಸಿದೆ.

ಅಸ್ಸಾಂನಲ್ಲಿ ಶನಿವಾರ ನಡೆದ ಮೊದಲ ಹಂತದ ಮತದಾನದ ವೇಳೆ ಒಟ್ಟು 81.09 ಲಕ್ಷ ಮತದಾರರಲ್ಲಿ ಶೇಕಡಾ 79.93 ರಷ್ಟು ಜನರು 47 ವಿಧಾನಸಭಾ ಕ್ಷೇತ್ರಗಳಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಎರಡನೇ ಹಂತದಲ್ಲಿ 39 ಸ್ಥಾನಗಳಿಗೆ ಚುನಾವಣೆ ಏಪ್ರಿಲ್ 1 ರಂದು ಮತ್ತು 40 ಸ್ಥಾನಗಳಿಗೆ ಮೂರನೇ ಮತ್ತು ಅಂತಿಮ ಹಂತದಲ್ಲಿ ಏಪ್ರಿಲ್ 6 ರಂದು ಮತದಾನ ನಡೆಯಲಿದೆ.

ಇದನ್ನೂ ಓದಿ: ಸಿಡಿ ಪ್ರಕರಣ: ರಕ್ಷಣೆ ಕೊಡಿ ಎಂದು ಹೈಕೋರ್ಟ್ ಸಿಜೆಐಗೆ ಪತ್ರ ಬರೆದ ಸಂತ್ರಸ್ತ ಯುವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...