Homeಕರ್ನಾಟಕಉಪ ಕುಲಪತಿ ಹುದ್ದೆ ಕೊಡಿಸುವುದಾಗಿ 17.5 ಲಕ್ಷ ವಂಚನೆ - ರಾಮಸೇನೆಯ ಸಂಸ್ಥಾಪಕ ಬಂಧನ

ಉಪ ಕುಲಪತಿ ಹುದ್ದೆ ಕೊಡಿಸುವುದಾಗಿ 17.5 ಲಕ್ಷ ವಂಚನೆ – ರಾಮಸೇನೆಯ ಸಂಸ್ಥಾಪಕ ಬಂಧನ

- Advertisement -
- Advertisement -

ವಿಶ್ವವಿದ್ಯಾನಿಲಯದಲ್ಲಿ ಉಪಕುಲಪತಿ ಹುದ್ದೆ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಆರೋಪದಲ್ಲಿ ರಾಮಸೇನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ ಎಂಬುವವನನ್ನು ಬಂಧಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳೂರು ವಿವಿಯಲ್ಲಿ ಉಪ ಕುಲಪತಿ ಹುದ್ದೆ ಕೊಡಿಸುತ್ತೇನೆ ಎಂದು ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ವಿವೇಕ್ ಆಚಾರ್ಯ ಅವರ ಬಳಿ 17.5 ಲಕ್ಷ ರೂ. ಹಣವನ್ನು ಪಡೆದಿದ್ದ. ಜೊತೆಗೆ ಆರೋಪಿಯು ತನಗೆ ಮುಖ್ಯಮಂತ್ರಿಯು ಪರಿಚಯವಿರುವುದಾಗಿಯೂ ಹೇಳಿಕೊಂಡಿದ್ದ.

ಈ ಹಿಂದೆ ಹಿಂದುತ್ವ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಪ್ರಸಾದ್ ಅತ್ತಾವರ ಶ್ರೀರಾಮ ಸೇನೆಯಲ್ಲಿ ಸಕ್ರಿಯನಾಗಿದ್ದ. ಬಳಿಕ ಆ ಸಂಘಟನೆಯಿಂದ ಹೊರಬಂದು ತನ್ನದೇ ಆದ ರಾಮಸೇನೆ ಎಂಬ ಹೆಸರಲ್ಲಿ ಸಂಘಟನೆ ಕಟ್ಟಿಕೊಂಡಿದ್ದ. ಅದರ ಸಂಸ್ಥಾಪಕ ಮತ್ತು ರಾಜ್ಯಾಧ್ಯಕ್ಷನೂ ತಾನೇ ಎಂದು ಹೇಳಿಕೊಂಡಿದ್ದಲ್ಲದೆ, ಮಂಗಳೂರು ಮತ್ತು ಬೆಂಗಳೂರಿನಲ್ಲಿ ಬಿಜೆಪಿ ಪ್ರಮುಖರ ಸಖ್ಯ ಬೆಳೆಸಿಕೊಂಡಿದ್ದ ಎನ್ನಲಾಗಿದೆ.

ಇದನ್ನೂ ಓದಿ: ಸಿಎಂ ಪಳನಿಸ್ವಾಮಿ ತಾಯಿಯ ಬಗ್ಗೆ ಅವಹೇಳನಕಾರಿ ಹೇಳಿಕೆ: ಕ್ಷಮೆ ಕೇಳಿದ ಡಿಎಂಕೆ ನಾಯಕ

ಪ್ರಸಾದ್ ಅತ್ತಾವರ ವಿರುದ್ಧ ಈ ಹಿಂದೆ ಕಂಕನಾಡಿ ನಗರ ಠಾಣೆಯಲ್ಲಿ ರೌಡಿಶೀಟ್ ಬುಕ್ ಮಾಡಲಾಗಿತ್ತು. ಬಂದರು, ಕದ್ರಿ ಮತ್ತು ಕಂಕನಾಡಿ ಠಾಣೆಗಳಲ್ಲಿ ಈತನ ವಿರುದ್ಧ ಹಲವು ಕೇಸುಗಳಿವೆ. ಇದೀಗ ಕುಲಪತಿ ಸ್ಥಾನದ ಆಮಿಷವೊಡ್ಡಿ ಹಣ ಪಡೆದ ಆರೋಪದಲ್ಲಿ ಬಂಧಿಸಲಾಗಿದೆ. ಇದೇ ರೀತಿ ಹಲವರಿಂದ ಹಣ ಪಡೆದು ಮೋಸಗೈದಿರುವ ವಿಚಾರ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು ಅದರ ಬಗ್ಗೆ ದೂರು ಬಂದಲ್ಲಿ ತನಿಖೆ ಮಾಡಲಾಗುವುದು ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಮಂಗಳೂರು ವಿವಿಯಲ್ಲಿ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ವಿವೇಕ್ ಆಚಾರ್ಯ ಉಪ ಕುಲಪತಿ ಆಗಲು ಎಲ್ಲ ಅರ್ಹತೆಗಳನ್ನು ಹೊಂದಿದ್ದರು. ಅಲ್ಲದೆ ಅದಕ್ಕಾಗಿ ಲಾಭಿ ನಡೆಸಿದ್ದರು. ಈ ವೇಳೆ, ಪ್ರಸಾದ್ ಅತ್ತಾವರ ತಾನು ಸಿಎಂ ಜೊತೆಗೆ ನಂಟು ಹೊಂದಿರುವುದಾಗಿ ಹೇಳಿಕೊಂಡು 15 ಲಕ್ಷ ಮತ್ತು ತನಗೆ ಅದಕ್ಕಾಗಿ ಓಡಾಡಲೆಂದು ಮತ್ತೆ 2.5 ಲಕ್ಷ ರೂ. ಹಣ ಪಡೆದಿದ್ದ. ಹಣ ಪಡೆದು ವರ್ಷದ ಮೇಲಾದರೂ ಕುಲಪತಿ ಹುದ್ದೆ ಕೊಡಿಸದ ಕಾರಣ ವಿವೇಕ್ ಆಚಾರ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಎಂದು ವಾರ್ತಾಭಾರತಿ ವರದಿ ಮಾಡಿದೆ.


ಇದನ್ನೂ ಓದಿ: ಹಿಂದಿಯಲ್ಲಿ ಸ್ವಾಗತ ಕೋರಿದ ನಿರೂಪಕಿ: ವೇದಿಕೆಯಿಂದ ಕೆಳಗಿಳಿದ ಎ ಆರ್ ರಹಮಾನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...