Homeಮುಖಪುಟತಮಿಳುನಾಡಿನಲ್ಲಿ ಅಧಿಕಾರಕ್ಕೇರಿದರೆ ಕೃಷಿ ಕಾಯ್ದೆಗಳ ವಿರುದ್ದ ನಿರ್ಣಯ; ಡಿಎಂಕೆ ನಾಯಕ ಸ್ಟಾಲಿನ್

ತಮಿಳುನಾಡಿನಲ್ಲಿ ಅಧಿಕಾರಕ್ಕೇರಿದರೆ ಕೃಷಿ ಕಾಯ್ದೆಗಳ ವಿರುದ್ದ ನಿರ್ಣಯ; ಡಿಎಂಕೆ ನಾಯಕ ಸ್ಟಾಲಿನ್

- Advertisement -
- Advertisement -

ಕೇಂದ್ರದ ಕಾನೂನುಗಳಾದ ಸಿಎಎ ಸೇರಿದಂತೆ ಮೂರು ಕೃಷಿ ಕಾನೂನುಗಳನ್ನು ಸಂಸತ್ತಿನಲ್ಲಿ ಬೆಂಬಲಿಸಿದ್ದಕ್ಕಾಗಿ ಎಐಎಡಿಎಂಕೆ ಮತ್ತು ಪಿಎಂಕೆ ವಿರುದ್ದ ತೀವ್ರವಾಗಿ ದಾಳಿ ನಡೆಸಿರುವ ತಮಿಳುನಾಡು ವಿರೋಧ ಪಕ್ಷ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್, ತಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ತಮಿಳುನಾಡು ಅಸೆಂಬ್ಲಿಯ ಮೊದಲ ವ್ಯವಹಾರವೆ ಕೃಷಿ ಕಾನೂನುಗಳ ವಿರುದ್ಧದ ನಿರ್ಣಯವಾಗಲಿದೆ ಎಂದು ಭರವಸೆ ನೀಡಿದ್ದಾರೆ.

“ಕೃಷಿ ಕ್ಷೇತ್ರವನ್ನು ಸಾಂಸ್ಥಿಕಗೊಳಿಸಲು ಮತ್ತು ಬಡ ರೈತರ ಜೀವನೋಪಾಯವನ್ನು ಅಳಿಸಿಹಾಕಲು ಉದ್ದೇಶಿಸಿರುವ ಮೂರು ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ಎಐಎಡಿಎಂಕೆ ಮತ್ತು ಪಿಎಂಕೆ ಈ ಕಾನೂನುಗಳನ್ನು ಪೌರತ್ವ ತಿದ್ದುಪಡಿ ಮಸೂದೆಯಲ್ಲಿ ಬೆಂಬಲಿಸಿದಂತೆ ಬೆಂಬಲಿಸಿದ್ದವು. ಈಗ ರಾಜ್ಯದಲ್ಲಿ ಚುನಾವಣೆ ಇರುವುದರಿಂದ ಮೂರು ಕೃಷಿ ಕಾನೂನುಗಳನ್ನು ಅನುಮತಿಸುವುದಿಲ್ಲ ಎಂದು ಹೇಳುತ್ತಿದ್ದಾರೆ” ಎಂದು ತಿರುಪಥೂರು ಜಿಲ್ಲೆಯ ಜೋಲಾರ್‌ಪೇಟ್‌ನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ನೌಕರರ ಮುಷ್ಕರ ನೆಪವೊಡ್ಡಿ ಬಿಎಂಟಿಸಿ ಖಾಸಗೀಕರಣಗೊಳಿಸುವ ಹುನ್ನಾರ-ಆಪ್ ಆರೋಪ

ಪಂಜಾಬ್, ಕೇರಳ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳು ತಮ್ಮ ವಿಧಾನಸಭೆಗಳಲ್ಲಿ ಕೃಷಿ ಕಾನೂನುಗಳ ವಿರುದ್ಧ ನಿರ್ಣಯಗಳನ್ನು ಅಂಗೀಕರಿಸಿದರೂ, ಪಳನಿಸ್ವಾಮಿ ಅವರ ಸರ್ಕಾರ ಕಾನೂನಿನ ವಿರುದ್ದ ನಿರ್ಣಯವನ್ನು ತರಲಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಾವು ಮತ್ತೆ ಅಧಿಕಾರಕ್ಕೆ ಬಂದರೆ ಅಸೆಂಬ್ಲಿಯ ಮೊದಲ ವ್ಯವಹಾರವೆ ಈ ಮೂರು ಕೃಷಿ ಕಾನೂನುಗಳ ವಿರುದ್ಧ ನಿರ್ಣಯವಾಗಲಿದೆ” ಎಂದು ಸ್ಟಾಲಿನ್ ಘೋಷಿಸಿದ್ದಾರೆ.

ಸಿಎಎ ಜಾರಿಗೆ ಬೆಂಬಲ ನೀಡಿದ್ದಕ್ಕಾಗಿ ಎಐಎಡಿಎಂಕೆ ಮತ್ತು ಪಿಎಂಕೆ ಅವರನ್ನು ದೂಷಿಸಿದ ಸ್ಟಾಲಿನ್, “ಅವರು ಅಲ್ಪಸಂಖ್ಯಾತರ ರಕ್ಷಕರು ಎಂಬಂತೆ ನಟಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಡಿಎಂಕೆ ಸಂಸದರು ಸಂಸತ್ತಿನಲ್ಲಿ ಸಿಎಎ ವಿರುದ್ಧ ಮತ ಚಲಾಯಿಸಿದರು ಮತ್ತು ಹಲವು ಪ್ರತಿಭಟನೆಗಳನ್ನು ನಡೆಸಿದರು. ಮಾತ್ರವಲ್ಲದೆ ಸಾರ್ವಜನಿಕರಿಂದ ಎರಡು ಕೋಟಿ ಸಹಿಯನ್ನು ಸಂಗ್ರಹಿಸಿ ರಾಷ್ಟ್ರಪತಿಗೆ ಕಳುಹಿಸಿದರು ಎಂದು ಸ್ಟಾಲಿನ್ ಹೇಳಿದ್ದಾರೆ.


 

ಇದನ್ನೂ ಓದಿ: ಅಸ್ಸಾಂ: ಜಾಹೀರಾತನ್ನು ಸುದ್ದಿಯ ರೂಪದಲ್ಲಿ ನೀಡಿದ ಬಿಜೆಪಿ; ಕಾಂಗ್ರೆಸ್‌ನಿಂದ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...