HomeUncategorizedಮಯನ್ಮಾರ್‌ ವಲಸಿಗರಿಗೆ ಆಹಾರ-ಆಶ್ರಯ ಕೊಡಬೇಡಿ: ಮಣಿಪುರ ಸರ್ಕಾರದ ಆಘಾತಕಾರಿ ನಿಲುವು

ಮಯನ್ಮಾರ್‌ ವಲಸಿಗರಿಗೆ ಆಹಾರ-ಆಶ್ರಯ ಕೊಡಬೇಡಿ: ಮಣಿಪುರ ಸರ್ಕಾರದ ಆಘಾತಕಾರಿ ನಿಲುವು

- Advertisement -
- Advertisement -

ಮಯನ್ಮಾರ್‌ನಿಂದ ವಲಸೆ ಬರುವ ಜನರಿಗೆ ಆಹಾರ ಒದಗಿಸಬಾರದು ಮತ್ತು ಯಾವುದೇ ಶಿಬಿರಗಳನ್ನು ತೆರೆಯಬಾರದು ಎಂದು ಮಣಿಪುರ ಸರ್ಕಾರ 5 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿರುವ ಆಘಾತಕಾರಿ ಘಟನೆ ನಡೆದಿದೆ. ಕಳೆದ ಫೆಬ್ರವರಿ ತಿಂಗಳಿನಿಂದ ಮಯನ್ಮಾರ್‌ನಲ್ಲಿ ತುರ್ತುಪರಿಸ್ಥಿತಿ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮಿಲಿಟರಿ ಹಿಂಸಾಚಾರ ಭುಗಿಲೆದ್ದಿದೆ. ಹಾಗಾಗಿ ಅಲ್ಲಿನ ಜನರು ನೆರೆಯ ರಾಷ್ಟ್ರಗಳಿಗೆ ವಲಸೆ ಹೋಗುತ್ತಿದ್ದಾರೆ.

ಈ ವಲಸೆಯನ್ನು ತಡೆಯಬೇಕು ಎಂದು ಹೇಳಿರುವ ಮಣಿಪುರದ ವಿಶೇಷ ಗೃಹ ಕಾರ್ಯದರ್ಶಿ ಹೆಚ್. ಜ್ಞಾನ ಪ್ರಕಾಶ್, ಈ ರೀತಿಯ ನಿರ್ದೇಶನಗಳನ್ನು ಗೌಪ್ಯ ಜ್ಞಾಪನ ಪತ್ರದ ಮೂಲಕ ನೀಡಿದ್ದಾರೆ. ಚಾಂಡೆಲ್, ತೆಂಗ್ನೌಪಾಲ್, ಕಮ್ಜಾಂಗ್, ಉಖ್ರುಲ್ ಮತ್ತು ಚುರಾಚಂದಪುರದ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದು, ಈ ಎಲ್ಲಾ ಜಿಲ್ಲೆಗಳು ಮಯನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿವೆ.

“ಮಯನ್ಮಾರ್‌ನಲ್ಲಿ ನಡೆಯುತ್ತಿರುವ ಘಟನೆಗಳ ಪರಿಣಾಮವಾಗಿ, ಆ ದೇಶದ ಪ್ರಜೆಗಳು ಮಣಿಪುರ ಸೇರಿದಂತೆ ಇತರೆ ಗಡಿ ರಾಜ್ಯಗಳ ಮೂಲಕ ಭಾರತವನ್ನು ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ. ಈ ನಿಟ್ಟಿನಲ್ಲಿ, ಈ ಕೆಳಗಿನ ಕ್ರಮಗಳನ್ನು ಅಗತ್ಯವಾಗಿ ತೆಗೆದುಕೊಳ್ಳಲು ನನಗೆ ನಿರ್ದೇಶಿಸಲಾಗಿದೆ” ಎಂದು ಜ್ಞಾಪನ ಪತ್ರದಲ್ಲಿ ತಿಳಿಸಲಾಗಿದೆ.

ಮಣಿಪುರಕ್ಕೆ ಪ್ರವೇಶಿಸಲು/ಆಶ್ರಯಿಸಲು ಪ್ರಯತ್ನಿಸುವ ಜನರನ್ನು ದೂರವಿಡಬೇಕೆಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಆದರೆ ವಲಸಿಗರಿಗೆ ಗಂಭೀರವಾದ ಗಾಯಗಳಿದ್ದಲ್ಲಿ, ಮಾನವೀಯ ಪರಿಗಣನೆಯ ಮೇಲೆ ವೈದ್ಯಕೀಯ ಚಿಕಿತ್ಸೆ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಮಯನ್ಮಾರ್ ತುರ್ತುಪರಿಸ್ಥಿತಿ: ಮಿಲಿಟರಿ ಪಡೆಯ ಗುಂಡೇಟಿಗೆ 50 ಪ್ರತಿಭಟನಾಕಾರರು ಬಲಿ

ಮಣಿಪುರ ಹೊರತಾಗಿ, ನಾಗಾಲ್ಯಾಂಡ್, ಮಿಜೋರಾಂ ಮತ್ತು ಅರುಣಾಚಲ ಪ್ರದೇಶಗಳೂ ಕೂಡ ಮಯನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿವೆ. ನೆರೆಯ ದೇಶದ 500 ಕ್ಕೂ ಹೆಚ್ಚು ಪ್ರಜೆಗಳು ಈಗಾಗಲೇ ಮಿಜೋರಾಂಗೆ ಕಾಲಿಟ್ಟಿದ್ದಾರೆ.

ಇತ್ತೀಚೆಗೆ ಮಿಜೋರಾಂ ಸರ್ಕಾರವು, “ಮಯನ್ಮಾರ್ ನಿರಾಶ್ರಿತರ ಬಿಕ್ಕಟ್ಟನ್ನು ಮಾನವೀಯ ಆಧಾರದ ಮೇಲೆ ಪರಿಗಣಿಸಲು ಮತ್ತು ವಲಸೆ ಬರುವ ಜನರಿಗೆ ಭಾರತಕ್ಕೆ ಪ್ರವೇಶಿಸಲು ಅವಕಾಶ ನೀಡುವಂತೆ ಕೋರಿ” ಕೇಂದ್ರಕ್ಕೆ ಪತ್ರ ಬರೆದಿತ್ತು. ಆದರೆ ಮಯನ್ಮಾರ್‌ನಿಂದ ಒಳಹರಿವು ತಡೆಯಲು ಕೇಂದ್ರ ಸರ್ಕಾರ ಅಸ್ಸಾಂ ರೈಫಲ್ಸ್‌ಗೆ ನಿರ್ದೇಶನ ನೀಡಿತ್ತು.

ಭಾರತವು ಮಯನ್ಮಾರ್‌ನೊಂದಿಗೆ 1,643 ಕಿ.ಮೀ ಭೂ ಗಡಿಯನ್ನು ಹಂಚಿಕೊಂಡಿದೆ. ಮಯನ್ಮಾರ್‌ನ ಚಿನ್ ಸಮುದಾಯ ಮತ್ತು ಭಾರತದ ಮಿಜೋಸ್ ಸಮುದಾಯ ಒಂದೇ ಜನಾಂಗಕ್ಕೆ ಸೇರಿದವರಾಗಿದ್ದಾರೆ. ಚಿನ್ ಜನರು ಮಯನ್ಮಾರ್‌ನ ಚಿನ್ ರಾಜ್ಯದಲ್ಲಿ ನೆಲೆಸಿದ್ದಾರೆ. ಇದು ಮಿಜೋರಾಂನೊಂದಿಗೆ 404 ಕಿ.ಮೀ ಗಡಿಯನ್ನು ಹಂಚಿಕೊಂಡಿದೆ.

ಮಯನ್ಮಾರ್‌‌ನಲ್ಲಿ ಆಡಳಿತವನ್ನು ಸೇನೆಯು ಕ್ಷಿಪ್ರಕ್ರಾಂತಿ ಮೂಲಕ ವಶಕ್ಕೆ ಪಡೆದುಕೊಂಡಿದ್ದು, ಇದನ್ನು ವಿರೋಧಿಸಿ ಸಾವಿರಾರು ಪ್ರತಿಭಟನಾಕಾರರು ಮಯನ್ಮಾರ್‌‌ನಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಫೆ.1ರಿಂದಲೂ ಇಲ್ಲಿನ ಸೇನಾದಂಗೆ ವಿರುದ್ಧ ಜನರು ತೀವ್ರವಾಗಿ ಪ್ರತಿಭಟಿಸುತ್ತಿದ್ದಾರೆ. ಇದನ್ನು ಹತ್ತಿಕ್ಕಲು ಸೇನಾಡಳಿತವು ಯತ್ನಿಸುತ್ತಿದೆ. ಈ ಗಲಭೆಯಲ್ಲಿ ಈವರೆಗೆ ಸುಮಾರು 380ಕ್ಕೂ ಹೆಚ್ಚು ಪ್ರತಿಭಟನಕಾರರು ಹತರಾಗಿದ್ದಾರೆ.


ಇದನ್ನೂ ಓದಿ: ಮಯನ್ಮಾರ್‌ ಸೇನಾ ಕ್ರಾಂತಿ- ಭಾರಿ ಹಿಂಸಾಚಾರದ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...