Homeಕರ್ನಾಟಕ'ಬಿಜೆಪಿ ಸರ್ಕಾರದ ಸಚಿವನಾಗಿ ಕೇಂದ್ರವನ್ನು ಟೀಕಿಸುತ್ತೇನಾ' - ಉಲ್ಟಾ ಹೊಡೆದ ಮಾಧುಸ್ವಾಮಿ ಹೇಳಿದ್ದೇನು?

‘ಬಿಜೆಪಿ ಸರ್ಕಾರದ ಸಚಿವನಾಗಿ ಕೇಂದ್ರವನ್ನು ಟೀಕಿಸುತ್ತೇನಾ’ – ಉಲ್ಟಾ ಹೊಡೆದ ಮಾಧುಸ್ವಾಮಿ ಹೇಳಿದ್ದೇನು?

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ಧ ಗರಂ ಆಗಿದ್ದ ಸಚಿವ ಮಾಧುಸ್ವಾಮಿ, ‘ಕೇಂದ್ರ ಸರ್ಕಾರದಿಂದ ಸರ್ವಾಧಿಕಾರಿ ಧೋರಣೆ ಆರಂಭವಾಗಿದೆ’ ಎಂದು ಹೇಳಿಕೆ ನೀಡಿದ್ದರು. ಈಗ ಉಲ್ಟಾ ಹೊಡೆದಿರುವ ಮಾಧುಸ್ವಾಮಿ, ತನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ.

ಈ ಹೇಳಿಕೆಗಳು ರಾಜ್ಯ ರಾಜಕೀಯ ವಲಯದಲ್ಲಿ ಸಂಚಲವನ್ನುಂಟುಮಾಡಿತ್ತು. ಬಿಜೆಪಿಯೇತರರು ಮಾಧುಸ್ವಾಮಿಯನ್ನು ಅಭಿನಂಧಿಸಿದರೆ, ಬಿಜೆಪಿ ನಾಯಕರು ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದರು.

ಈಗ ತುಮಕೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಧುಸ್ವಾಮಿ, “ನಾನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಗ್ಗೆ ಮಾತನಾಡಿಲ್ಲ. ವಿಚಾರ ಸಂಕಿರಣದಲ್ಲಿ ಮಾತನಾಡಿದ್ದನ್ನು ತಪ್ಪಾಗಿ ವ್ಯಾಖ್ಯಾನಿಸಲಾಗಿದೆ” ಎಂದು ಹೇಳಿದ್ದಾರೆ.

“ಅಲ್ಲಿ ಮಾತನಾಡಿದ ವಿಷಯ ವಿಚಾರ ಸಂಕಿರಣಕ್ಕಷ್ಟೇ ಸೀಮಿತ. ಪ್ರಾದೇಶಿಕ ಭಾವನೆ, ಒಕ್ಕೂಟ ವ್ಯವಸ್ಥೆ ಬಗ್ಗೆ ಹೇಳುವಾಗ ಕಳೆದ 70 ವರ್ಷಗಳ ಕೇಂದ್ರದ ಸರ್ವಾಧಿಕಾರಿ ಧೋರಣೆ, ಕಾಲಕಾಲಕ್ಕೆ ಸರ್ಕಾರಗಳು ತೆಗೆದುಕೊಳ್ಳುವ ನಿರ್ಣಯಗಳು ಪ್ರಾದೇಶಿಕ ಭಾವನೆ ಹೆಚ್ಚಾಗಲು ಕಾರಣ ಎಂದು ಹೇಳಿದ್ದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಅದನ್ನು ತಪ್ಪಾಗಿ ಗ್ರಹಿಸಿ ‘ಮಾಧುಸ್ವಾಮಿ ರಾಜ್ಯದ ಜನರ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಅದಕ್ಕೆ ಅಭಿನಂದನೆಗಳು’ ಎಂದು ಹೇಳಿದ್ದಾರೆ. ನಾನು ಬಿಜೆಪಿ ಸರ್ಕಾರದ ಸಚಿವನಾಗಿ ಕೇಂದ್ರವನ್ನು ಟೀಕಿಸುತ್ತೇನಾ? ವಿಚಾರ ಸಂಕಿರಣದಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯವನ್ನು ದೊಡ್ಡದಾಗಿ ಬಿಂಬಿಸುವ ಅಗತ್ಯವಿಲ್ಲ. ನಾನು ಹೇಳಿದ್ದು ಮೋದಿ ಸರ್ಕಾರದ ಬಗ್ಗೆ ಅಲ್ಲ, ಹಿಂದಿನ ಸರ್ಕಾರಗಳ ಬಗ್ಗೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಕೇಂದ್ರದ ಸರ್ವಾಧಿಕಾರಿ ಧೋರಣೆ ಹೇಳಿಕೆ: ಮಾಧುಸ್ವಾಮಿ ಅಭಿನಂದಿಸಿದ ಕಾಂಗ್ರೆಸ್ – ತೇಜಸ್ವಿ ಸೂರ್ಯ ಆಕ್ಷೇಪ

ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಮಾಧುಸ್ವಾಮಿ, “ಕೇಂದ್ರ ಸರ್ಕಾರದಲ್ಲಿ ಸರ್ವಾಧಿಕಾರಿ ಧೋರಣೆ ಪ್ರಾರಂಭವಾಗಿದ್ದು, ಒಕ್ಕೂಟಕ್ಕೆ ಬಹಳ ದೊಡ್ಡ ಆತಂಕ ಎದುರಾಗಿದೆ. ಬೆಳೆದಂತೆ ಉದಾರವಾದಿಗಳಾಗಬೇಕಾಗಿದ್ದ ನಾವು ಪ್ರಸ್ತುತ ಕೇಂದ್ರೀಕರಣ ಆಗುತ್ತಿದ್ದೇವೆ. ನೀಟ್ ಪರೀಕ್ಷಗೂ, ಕರ್ನಾಟಕಕ್ಕೂ ಏನ್‌ ಸಂಬಂಧವಿದೆ?” ಎಂದು ಹೇಳಿದ ಅವರು, ಪಕ್ಕದಲ್ಲೇ ಕೂತಿದ್ದ ಸಂಸದ ತೇಜಸ್ವಿ ಸೂರ್ಯ ಅವರಿಗೆ ನೀವಿದನ್ನು ಸಂಸತ್ತಿನಲ್ಲಿ ಕೇಳಬೇಕು ಎಂದು ಎಚ್ಚರಿಸಿದ್ದರು.

“ಕರ್ನಾಟಕದಲ್ಲಿ ಇರುವ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕನ್ನಡಿಗರಿಗೆ ಅವಕಾಶ ಇಲ್ಲ. ತುಮಕೂರಿನಲ್ಲಿ ಪ್ರಧಾನಿ ಉದ್ಘಾಟನೆ ಮಾಡಿದ ಫುಡ್ ಪಾರ್ಕ್, ಬೆಂಗಳೂರಿನಲ್ಲಿರುವ ಕಂಪನಿಗಳು. ಹೀಗೆ ಎಲ್ಲಿಯೂ ಕನ್ನಡಿಗರಿಗೆ ಆದ್ಯತೆ ಇಲ್ಲ. ಜಾಗ, ಸೌಲಭ್ಯ ಎಲ್ಲವೂ ನಮ್ಮದಾದರೂ ಉದ್ಯೋಗ ಮಾತ್ರ ಬೇರೆಯವರಿಗೆ ಸೇರಿದೆ” ಎಂದು ಅವರು ಹೇಳಿದ್ದಾಗಿ ಆಂದೋಲನ ಪತ್ರಿಕೆ ವರದಿ ಮಾಡಿದೆ.

“ಈ ಅನ್ಯಾಯದ ವಿರುದ್ಧ ತಮಿಳುನಾಡಿನಂತಹ ರಾಜ್ಯಗಳು ಹೋರಾಟ ಮಾಡಿ ತಮ್ಮ ರಾಜ್ಯದವರಿಗೆ ಅನುಕೂಲವಾಗುವಂತೆ ಮಾಡಿವೆ. ಆದರೆ ಕರ್ನಾಟಕದ ಜನರು ಹೋರಾಟ ಮಾಡುವುದಿಲ್ಲ, ಯಾಕೆಂದರೆ ನಾವು ರಾಷ್ಟ್ರೀಯವಾದಿಗಳು” ಎಂದು ಮಾಧುಸ್ವಾಮಿ ವ್ಯಂಗ್ಯವಾಡಿದ್ದಾಗಿ ಪತ್ರಿಕೆ ವರದಿ ಮಾಡಿದೆ.


ಇದನ್ನೂ ಓದಿ: ಖಾತೆ ಬದಲಾವಣೆ: ಯಡಿಯೂರಪ್ಪಗೆ ಸೆಡ್ಡು ಹೊಡೆದು ಶೆಟ್ಟರ್ ಪಾಳಯಕ್ಕೆ ಜಿಗಿದರೆ ಮಾಧುಸ್ವಾಮಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...