Homeಕರ್ನಾಟಕಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

- Advertisement -
- Advertisement -

ಮಸ್ಕಿ ಎಂಬ ಪುಟ್ಟ ತಾಲೂಕಿನ ಮ್ಯಾಲ ಐದಾರು ನೀರಾವರಿ ಯೋಜನೆ ಹೇರಿಬಿಟ್ಟಿದೆ ನಮ್ಮ ಸರ್ಕಾರ! ತಮ್ಮನ್ನು ಅಧಿಕಾರಕ್ಕೆ ತಂದರು ಎಂಬ ಏಕೈಕ ಕಾರಣಕ್ಕೆ ಇಂತಹ ಕ್ಷೇತ್ರಗಳಿಗೆ ಸಿಕ್ಕಾಪಟ್ಟೆ ಯೋಜನೆ ಘೋಷಣೆ ಮಾಡಿಬಿಟ್ಟಿದೆ ಯಡಿಯೂರಪ್ಪ ಸರ್ಕಾರ!

ನಂಜುಂಡಪ್ಪ ವರದಿಯ ಅತಿ ಹಿಂದುಳಿದ ತಾಲೂಕುಗಳ ಪಟ್ಟಿಯಲ್ಲಿ ಈ ಮಸ್ಕಿಯೂ ಒಂದು. ಇಲ್ಲಿನ ತಳ ಸಮುದಾಯದ ಜನಕ್ಕೆ ಭೂಮಿ ಇಲ್ಲ. ಅವರೆಲ್ಲ ಬೆಂಗಳೂರಿಗೋ, ಮಂಗಳೂರಿಗೋ ಹೋಗಿ ಬೆವರು ಹರಿಸುತ್ತಾರೆ, ಹೊಟ್ಟೆ ತುಂಬಿಸಿಕೊಳ್ಳಲು.

ಮೀಸಲು ಕ್ಷೇತ್ರ ಮಸ್ಕಿ ಎರಡು ಜಿಲ್ಲೆಗಳಲ್ಲಿ ಹರಿದು ಹಂಚಿ ಹೋಗಿದೆ. ಕೊಪ್ಪಳ ಮತ್ತು ರಾಯಚೂರಿನ ನೂರಾರು ಗ್ರಾಮಗಳನ್ನು ಸೇರಿಸಿ ಈ ಮಸ್ಕಿ ಕ್ಷೇತ್ರ ಮಾಡಲಾಗಿದೆ. ಸಿಂಧನೂರಿನಲ್ಲಿ ತುಂಗಭದ್ರೆ ಹರಿಯುತ್ತಾಳೆ, ಆ ಭಾಗ್ಯ ಮಸ್ಕಿ ಜನರಿಗಿಲ್ಲ. ಅವರು ಈಗ ಪಕ್ಕದಲ್ಲೇ ಹಾದು ಹೋಗುವ ಕೃಷ್ಣೆಯ ನೀರು ಕೇಳುತ್ತಿದ್ದಾರೆ. ಮುಖ್ಯವಾಹಿನಿ ಮಾಧ್ಯಮಕ್ಕೆ ಇದು ಒಂದು ಇಶ್ಯೂ ಆಗಲೇ ಇಲ್ಲ!

ಮಸ್ಕಿ ಮ್ಯಾಲ ದೊಡ್ಡ ಭಾರ

107 ಹಳ್ಳಿಗಳು ಅದರಲ್ಲೂ ಮುಖ್ಯವಾಗಿ 58 ಹಳ್ಳಿಗಳು ತಮ್ಮ ಭೂಮಿಗೆ ನೀರು ಬೇಕು ಅನ್ನುತ್ತಿವೆ. ಆದರೆ ಕೃಷ್ಣಾದಿಂದ ನೀರು ಕೊಡಲು ಆಗದು ಎಂದು ಅಧಿಕಾರಿಗಳು ಸಲ್ಲಿಸಿದ ವರದಿಯನ್ನೇ ಪ್ರತಾಪಗೌಡ ಪಾಟೀಲರು ಸತ್ಯ ಎಂದು ನಂಬಿದ್ದಾರೆ.

ಈಗ ಏನಾಗಿದೆ ಅಂದರೆ, ಮಸ್ಕಿಯ ಮೇಲೆ ಹಲವು ನೀರಾವರಿ ಪ್ರಾಜೆಕ್ಟ್ ಹೇರಲಾಗಿದೆ. ಇವೆಲ್ಲ ಕಾಟಾಚಾರದ ಯೋಜನೆಗಳು. ಬಜೆಟ್ ಅಲೊಕೇಷನ್ ಇಲ್ಲವೇ ಇಲ್ಲ! ಕೃಷ್ಣಾ ನದಿಯಿಂದ 17 ಕೆರೆ ತುಂಬಿಸುವ ಯೊಜನೆಯಲ್ಲಿ ಈಗ 87 ಕೋಟಿ ರೂ ಬಿಡುಗಡೆ ಆಗಿದೆ. ಅದು ಕಂಟ್ರಾಕ್ಟರ್‌ಗಳ ಪಾಲಾಗಿದೆ ಎಂಬ ದೊಡ್ಡ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಮಸ್ಕಿ ಉಪಚುನಾವಣೆ: NRBC_5A ನೀರಾವರಿ ಹೋರಾಟ ಫಲಿತಾಂಶ ಬದಲಿಸಬಲ್ಲದೇ?

’58 ಹಳ್ಳಿಯ ಜನ 100 ದಿನದಿಂದ ಪ್ರತಿಭಟನೆ ಮಾಡ್ತಾ ತಮ್ಮ ಭೂಮಿಗೆ ನೀರು ಬೇಕು ಅಂತಾರಲ್ಲರಿ?’ ಎಂದು ನಾವು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡರನ್ನು ಕೇಳಿದೆವು. ‘’ಹಂಗೆಲ್ಲ ನೀರ್ ಕೋಡೋಕ್ ಆಗಲ್ಲ. ಅದೊಂದು ಅವೈಜ್ಞಾನಿಕ ಯೋಜನಾ ಅದ.. ನಾವ್ ಜನ್ರಿಗೆ ತಿಳವಳಿಕೆ ಕೊಟ್ಟೀವಿ. ಅಲ್ಲಿ ಯಾರೋ ಸ್ವಲ್ಪ ಮಂದಿ ಸ್ಟ್ರೈಕ್ ಮಾಡಾಕ ಹತ್ಯಾರ’ ಎಂದರು.
ಅಲ್ಲ ನೀವು ಪರ್ಯಾಯದ ಬಗ್ಗೆ ವಿಚಾರನಾ ಮಾಡಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರತಾಪಗೌಡರು, ನಂದವಾಡಗಿ ನೀರಾವರಿ ಯೋಜನಾ ಅದ, ಕೋಟೆಕಲ್ ಬಸವಣ್ಣ ಏತ ನೀರಾವರಿ ಯೋಜನಾನೂ ಐತಿ, 500 ಕೋಟಿ ರೂ ಕೊಟ್ಟು ಕೆರೆ ತುಂಬಿಸ್ತಾ ಇದ್ದೀವಿ’ ಎಂದರು.

ಮಸ್ಕಿಯಲ್ಲಿ ಗುಳೆ ಸಮಸ್ಯೆ ವ್ಯಾಪಕವಾಗಿದೆ. ಇಲ್ಲಿನ ಎಸ್‌ಸಿ/ಎಸ್‌ಟಿ ಸಮುದಾಯದ ಜನರು ಕೂಲಿಗಾಗಿ ಬೆಂಗಳೂರು, ಮಂಗಳೂರು, ಗೋವಾ ಕಡೆ ವಲಸೆ ಹೋಗುವುದು ನಿತ್ಯದ ಕತೆಯೇ ಆಗಿದೆ.

ಆದರೆ ಗೆಜೆಟ್‌ನಲ್ಲಿ ಮಸ್ಕಿ ಭರಪೂರ ನೀರಾವರಿ ಆಗಿಬಿಟ್ಟಿದೆ.. ಅದನ್ನೆ ಪ್ರತಾಪಗೌಡ ಪಾಟೀಲರು ನಂಬಿದ್ದಾರೆ. ಜನ ಏನು ನಂಬುತ್ತಾರೆ ಎಂಬುವುದು ಚುನಾವಣಾ ಫಲಿತಾಂಶದಲ್ಲಿ ಗೋಚರವಾಗಲಿದೆ.

ಬಸವಕಲ್ಯಾಣ: ಆಟ ‘ಟಫ್’ ಇದೆ, ಬಟ್ ನಾರಾಯಣರಾವ್ ಸರಳತೆ ಚಾಲ್ತಿಗೆ ಬಂದಿದೆ!

ಆರಾಮಾಗಿ ಎತ್ತಿಕೊಳ್ಳಬಹುದಾದ ಈ ಕ್ಷೇತ್ರದಲ್ಲಿ ಬಿಜೆಪಿ ಸಿಕ್ಕಾಪಟ್ಟೆ ರೊಕ್ಕ ಹರಿಸಿಯೂ ನಿಟ್ಟುಸಿರು ಬಿಡ್ತಾ ಇದೆ, ಅದಕ್ಕೆ ಕಾರಣ ಮೃತ ಕಾಂಗ್ರಸ್ ಶಾಸಕ ನಾರಾಯಣರಾವ್ ಸರಳತೆ!
ಸದನದಲ್ಲಿ ಸಿಕ್ಕ ಒಂದೇ ಅವಕಾಶದಿಂದ ರೊಕ್ಕದ ರಾಜಕೀಯ, ಬಾಂಬೇ ಗಮ್ಮತ್ತು ಎಲ್ಲವನ್ನೂ ಬಟಾಬಯಲು ಮಾಡಿದ ನಾರಾಯಣರಾವ್ ಅವರ ಪತ್ನಿ ಈಗ ಕಾಂಗ್ರೆಸ್ ಅಭ್ಯರ್ಥಿ.

ಇದನ್ನೂ ಓದಿ: ಲಿಂಗಾಯಿತರು ನನಗೆ ಮತ ಕೊಡದಿದ್ದರೂ ಪರವಾಗಿಲ್ಲ, ಬಸವ ತತ್ವದ ಮೇಲೆ ನಡೆದರೆ ಸಾಕು: ಶಾಸಕ ಬಿ.ನಾರಾಯಣರಾವ್ 

ಬಿಜೆಪಿಯಿಂದ ನಿಂತಿರುವ ಶರಣು ಸದಲಗ ಕಲಬುರ್ಗಿ ಜಿಲ್ಲೆಯ ಮನುಷ್ಯ ಆಗಿರೋ ಕಾರಣ ಬೀದರ್‌ನ ಬಸವಕಲ್ಯಾಣದಲ್ಲಿ ಈಗ ಒಂದು ಅಪಸ್ವರ ಸಹಜವಾಗಿಯೇ ಎದ್ದಿದೆ.
ನಾರಾಯಣರಾವ್ ಸದನದಲ್ಲಿ ಮಾಡಿದ ಕೊನೆಯ ಭಾಷಣ ಈಗ ಫಲಿತಾಂಶವನ್ನು ನಿರ್ಧರಿಸುವ ಮಟ್ಟಕ್ಕೆ ಬಂದಿದೆ. ‘ಸಿದ್ರಾಮಯ್ಯ ಸಾಹೇಬ್ರು ಟಿಕೇಟ್ ಕೊಟ್ರು’ ಎಂಬ ನಾರಾಯಣರಾವ್ ಮಾತು ಈಗ ಜನಪ್ರಿಯವಾಗಿದ್ದು, ಅವರ ‘ಸಿದ್ರಾಮಯ್ಯ’ ——— ಕೂಡ ಈ ಕ್ಷೇತ್ರವನ್ನು ಸೀರಿಯಸ್ ಆಗಿ ಪರಿಗಣಿಸಿದ್ದಾರೆ ಎನ್ನಲಾಗಿದೆ.

ಹಾಗೆಯೇ ಬಿಜೆಪಿ ಸಂಸದ ಭಗವಂತ ಖೂಬಾರವರ ಪುತ್ರ ಮಲ್ಲಿಕಾರರ್ಜುನ ಖೂಬಾ ಟಿಕೆಟ್ ಸಿಗದೇ ಸಿಕ್ಕಾಪಟ್ಟೆ ಸಿಟ್ಟಾಗಿದ್ದಾರೆ. ನಾಳೆ ನಡೆಯುವ ಪ್ರೆಸ್‌ಮೀಟ್‌ನಲ್ಲಿ ಖೂಬಾ ತಮ್ಮ ಒಲವು ಯಾರ ಕಡೆ ಎಂದು ಘೋಷಣೆ ಮಾಡಲಿದ್ದಾರೆ.


ಇದನ್ನೂ ಓದಿ: ಸದನದಲ್ಲಿಂದು ಗಮನಸೆಳೆದ ಕಾಂಗ್ರೆಸ್ಸಿನ ಶಾಸಕ ಬಿ.ನಾರಾಯಣರಾವ್ ರವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...