Homeಮುಖಪುಟಪ್ರಧಾನಿಯ ದಕ್ಷಿಣ ಭಾರತ ಭೇಟಿ: ‘ಗೋ ಬ್ಯಾಕ್ ಫ್ಯಾಸಿಸ್ಟ್‌ ಮೋದಿ’ ಟ್ವಿಟರ್‌ ಟ್ರೆಂಡ್!

ಪ್ರಧಾನಿಯ ದಕ್ಷಿಣ ಭಾರತ ಭೇಟಿ: ‘ಗೋ ಬ್ಯಾಕ್ ಫ್ಯಾಸಿಸ್ಟ್‌ ಮೋದಿ’ ಟ್ವಿಟರ್‌ ಟ್ರೆಂಡ್!

ಮೋದಿ ಅಮೇರಿಕಾಕ್ಕೆ ಹೋಗಿ ಟ್ರಂಪ್‌ಗೂ ಪ್ರಚಾರ ಮಾಡಬಹುದು,ಆದರೆ ಅವರು ತಮಿಳುನಾಡಿನಲ್ಲಿ ಪ್ರಚಾರ ಮಾಡಲು ಆಗಲ್ಲ. ಯಾಕೆಂದರೆ ಮೋದಿ ಹೆಸರನ್ನು ಸ್ವತಃ ಬಿಜೆಪಿ ಸದಸ್ಯರೇ ಕಡೆಗಣಿಸಿದ್ದಾರೆ ಎಂದು ಟ್ವಿಟರ್‌ ಬಳಕೆದಾರರು ಹೇಳಿದ್ದಾರೆ.

- Advertisement -
- Advertisement -

ಕೇರಳದಲ್ಲಿ ಎಪ್ರಿಲ್ 6 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಆಡಳಿತರೂಢ ಎಡಪಕ್ಷಗಳ ಮೈತ್ರಿಕೂಟವಾದ ಎಲ್‌ಡಿಎಫ್‌, ಕಾಂಗ್ರೆಸ್ ನೇತೃತ್ವದ ಯುಡಿಎಫ್‌ ಹಾಗೂ ಬಿಜೆಪಿ ನೇತತ್ವದ ಎನ್‌ಡಿಎ ಈಗಾಗಲೇ ಚುನಾವಣಾ ಪ್ರಚಾರವನ್ನು ಭರ್ಜರಿಯಾಗಿ ನಡೆಸುತ್ತಿದೆ. ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ಮೋದಿ ಕೇರಳಕ್ಕೆ ತೆರಳಿದ್ದು ಪಾಲಕ್ಕಾಡ್‌ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಪ್ರಧಾನಿ ಮೋದಿ ಕೇರಳದಿಂದ, ತಮಿಳುನಾಡಿಗೆ ತೆರಳುತ್ತಿದ್ದು, ಟ್ವಿಟ್ಟರ್‌ನಲ್ಲಿ ‘ವಾಪಾಸು ಹೋಗಿ ಮೋದಿ’, ‘ವಾಪಾಸು ಹೋಗಿ ಸ್ಯಾಡಿಸ್ಟ್‌ ಮೋದಿ’, ‘ವಾಪಾಸು ಹೋಗಿ ಫ್ಯಾಸಿಸ್ಟ್‌ ಮೋದಿ’ ಎಂದು ಟ್ರೆಂಡ್ ಪ್ರಾರಂಭವಾಗಿದೆ. #GoBackSadistModi,#GoBackFascistModi, #GoBackModi ಎಂದು ಟ್ವಿಟರ್‌‌ನಲ್ಲಿ ಟ್ರೆಂಡ್ ಆಗಿದೆ. #GoBackModi ಟ್ವಿಟರ್‌ನ ಟ್ರೆಂಡ್‌ನ ಒಂದನೆ ಸ್ಥಾನದಲ್ಲಿದೆ.

ಇದನ್ನೂ ಓದಿ: ಕೇರಳದಲ್ಲಿನ ಏಕೈಕ ಬಿಜೆಪಿ ಖಾತೆಯನ್ನೂ ಕ್ಲೋಸ್ ಮಾಡುತ್ತೇವೆ: ಪಿಣರಾಯಿ ವಿಜಯನ್

ಪ್ರಧಾನಿ ಮೋದಿ ಕೇರಳದ ಪಾಲಕ್ಕಾಡ್‌‌ನಲ್ಲಿ ಮಾತನಾಡಿ, “ಯುಡಿಎಫ್ ಮತ್ತು ಎಲ್‌ಡಿಎಫ್‌‌ ಮ್ಯಾಚ್‌ ಪಿಕ್ಸ್‌‌ಅನ್ನು ಕೇರಳ ಈ ಬಾರಿ ತಿರಸ್ಕರಿಸಲಿದೆ” ಎಂದು ಹೇಳಿದ್ದಾರೆ. ಇದೀಗ ಅವರು ತಮಿಳುನಾಡಿಗೆ ತೆರಳಲಿದ್ದಾರೆ.

ಚಿನ್ನಸರವಣ ಅವರು, “ಅಮೇರಿಕಾದಲ್ಲಿ ಟ್ರಂಪ್‌ಗೂ ಮೋದಿ ಪ್ರಚಾರ ಮಾಡಬಹುದು. ಆದರೆ ಅವರು ತಮಿಳುನಾಡಿನಲ್ಲಿ ಪ್ರಚಾರ ಮಾಡಲು ಸಾಧ್ಯವಿಲ್ಲ. ಮೋದಿ ಹೆಸರನ್ನು ಸ್ವತಃ ಬಿಜೆಪಿ ಸದಸ್ಯರೇ ಕಡೆಗಣಿಸಿದ್ದಾರೆ. ಕಾರಣ ತಮಿಳುನಾಡಿನ ಜನರು ಮೋದಿಯ ಮೇಲೆ ಕೋಪಗೊಂಡಿದ್ದಾರೆ. ಅದು ಅವರು ನೀಡುವ ಮತಗಳ ಮೇಲೆ ಪರಿಣಾಮ ಬೀರುತ್ತಾರೆ. 56 ಇಂಚು ವ್ಯರ್ಥವಾಯಿತು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೇರಳ ಮುಖ್ಯಮಂತ್ರಿ ಮತ್ತು ಪ್ರಧಾನಿ ರಹಸ್ಯ ಹೊಂದಾಣಿಕೆ ಮಾಡಿಕೊಂಡಿದ್ದಾರೆ: ಕಾಂಗ್ರೆಸ್

ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಯಾವುದೆ ಸಾರಿಗೆ ವ್ಯವಸ್ಥೆ ಇಲ್ಲದ ಪರಿಣಾಮ ಬರಿಕಾಲಲ್ಲೇ ಸಾವಿರಾರು ಕಿ.ಮೀ ವರೆಗೂ ನಡೆದುಕೊಂಡು ಹೊರಟಿದ್ದ ವಲಸೆ ಕಾರ್ಮಿಕರು ರೈಲು ಅಫಘಾತಕ್ಕೀಡಾಗಿ ಮೃತಪಟ್ಟಿದ್ದರು. ಈ ಸಮಯದಲ್ಲಿ ಮೃತಪಟ್ಟ ಕಾರ್ಮಿಕರು ದಾರಿಯಲ್ಲಿ ತಿನ್ನಲು ಕೊಂಡೊಯ್ದಿದ್ದ ರೊಟ್ಟಿಗಳು ರೈಲಿನ ಹಳಿಗಳಲ್ಲಿ ಅನಾಥವಾಗಿ ಬಿದ್ದಿರುವ ಹೃದಯ ವಿದ್ರಾವಕ ಚಿತ್ರವೊಂದು ಭಾರಿ ಆಕ್ರೋಶವನ್ನು ಹುಟ್ಟುಹಾಕಿತ್ತು. ಆ ಚಿತ್ರವನ್ನು ಸರಣಿ ಎಂಬವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, “ಯಾವತ್ತೂ ಮರೆಯುವುದಿಲ್ಲ, ಯಾವತ್ತೂ ಕ್ಷಮಿಸಲ್ಲ” ಎಂದು ಬರೆದಿದ್ದಾರೆ.

ಬೃಜ್ ಮೋಹನ್‌ ಅವರು, “ಪ್ರತಿ ಬಾರಿಯೂ ಮೋದಿ ತಮಿಳುನಾಡಿಗೆ ಕಾಲಿಡಲು ಯೋಜಿಸಿದಾಗ, ಜನರು #GoBackModi ಹೇಳುವ ಪ್ರವೃತ್ತಿಯನ್ನು ಕಡ್ಡಾಯಗೊಳಿಸಿದ್ದಾರೆ. ಒಂದು ವಿಷಯ ಸ್ಪಷ್ಟವಾಗಿದೆ, ಬಿಜೆಪಿ ಮತ್ತು ಮೋದಿಗೆ ತಮಿಳುನಾಡಿ‌ನಲ್ಲಿ ಸ್ಥಾನವಿಲ್ಲ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ‘ಬಿಜೆಪಿ ಸರ್ಕಾರದ ಸಚಿವನಾಗಿ ಕೇಂದ್ರವನ್ನು ಟೀಕಿಸುತ್ತೇನಾ’ – ಉಲ್ಟಾ ಹೊಡೆದ ಮಾಧುಸ್ವಾಮಿ ಹೇಳಿದ್ದೇನು?

ನಿತ್ಯಾ ಶ್ರೀ ಅವರು, “ತಮಿಳುನಾಡು ಇನ್ನೊಂದು ಉತ್ತರ ಪ್ರದೇಶ ಆಗುವುದು ನಮಗೆ ಬೇಕಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಅಬ್ದುಲ್ ಬಾಸಿತ್ ಅವರು, “ಫ್ಯಾಸಿಸ್ಟರು ತಮ್ಮ ತಲೆಯ ಮೇಲೆ ಕೊಂಬುಗಳನ್ನು ಹೊಂದಿಲ್ಲ!” ಎಂದು ಹಿಟ್ಲರ್‌ ಪ್ರಧಾನಿ ಮೋದಿಯನ್ನು ಎತ್ತಿ ಹಿಡಿದಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಸೈಮನ್ ರಾಜ್ ಅವರು, ‘ಹಿಂದಿ ಬೇಕಿಲ್ಲ, ಹೊಸ ಶಿಕ್ಷಣ ನೀತಿ ಬೇಕಿಲ್ಲ, ನೀಟ್ ಬೇಕಿಲ್ಲ, ಸಿಎಎ ಬೇಕಿಲ್ಲ, ಅದೇ ರೀತಿ ಬಿಜೆಪಿಯು ಬೇಕಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಪ್ರಚಾರ: 8 ಪತ್ರಿಕೆಗಳಿಗೆ ಚುನಾವಣಾ ಆಯೋಗ ನೋಟಿಸ್

ಇದನ್ನೂ ಓದಿ: ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...