Homeಮುಖಪುಟ'ರಾಹುಲ್ ಗಾಂಧಿ ಅವಿವಾಹಿತ, ಎಚ್ಚರಿಕೆಯಿಂದಿರಿ': ಮಾಜಿ ಸಂಸದನ ಹೇಳಿಕೆಗೆ ಭಾರಿ ವಿರೋಧ

‘ರಾಹುಲ್ ಗಾಂಧಿ ಅವಿವಾಹಿತ, ಎಚ್ಚರಿಕೆಯಿಂದಿರಿ’: ಮಾಜಿ ಸಂಸದನ ಹೇಳಿಕೆಗೆ ಭಾರಿ ವಿರೋಧ

- Advertisement -
- Advertisement -

ಕೆಲವು ದಿನಗಳ ಹಿಂದೆ ಕೇರಳದ ಚುನಾವಣಾ ಪ್ರಚಾರದ ವೇಳೆ ರಾಹುಲ್ ಗಾಂಧಿ ವಿರುದ್ಧ ಎಡಪಕ್ಷ ಸಿಪಿಎಂ ಬೆಂಬಲಿತ ಮಾಜಿ ಸಂಸದರು ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ಭಾರಿ ಆಕ್ರೋಶ ವ್ಯಕ್ತಪಡಿಸಿವೆ. ರಾಹುಲ್ ಗಾಂಧಿ ಅವಿವಾಹಿತ. ಅವರು ಮಹಿಳಾ ಕಾಲೇಜುಗಳಿಗೆ ತೆರಳುತ್ತಿದ್ದಾರೆ.. ಅವರಿಂದ ದೂರವಿರಿ ಎಂಬ ಹೇಳಿಕೆಗಳನ್ನು ನೀಡಿದ್ದರು.

ಉಡುಂಬಂಚೋಳ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ರಾಜ್ಯ ವಿದ್ಯುತ್ ಸಚಿವ ಎಂ.ಎಂ.ಮಣಿ ಅವರ ಚುನಾವಣಾ ರ್‍ಯಾಲಿಯಲ್ಲಿ ಇಡುಕ್ಕಿ ಕ್ಷೇತ್ರದ ಮಾಜಿ ಸ್ವತಂತ್ರ ಸಂಸದ ಜಾಯ್ಸ್ ಜಾರ್ಜ್ ಈ ಹೇಳಿಕೆಗಳನ್ನು ನೀಡಿದ್ದರು. ಈ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೇರಳದಲ್ಲಿ ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸಿದೆ.

ವಿವಾದಕ್ಕೆ ಪ್ರತಿಕ್ರಿಯಿಸಿರುವ, ಸಿಪಿಎಂ ಇಂತಹ ಹೇಳಿಕೆಗಳನ್ನು ನೀಡಬಾರದು ಎಂದು ಹೇಳುವ ಮೂಲಕ ವಿವಾದದಿಂದ ದೂರವಿರಲು ಪ್ರಯತ್ನಿಸಿದೆ.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

“ಅವರು (ರಾಹುಲ್ ಗಾಂಧಿ) ಮಹಿಳಾ ಕಾಲೇಜುಗಳಿಗೆ ಮಾತ್ರ ಭೇಟಿ ನೀಡುತ್ತಾರೆ. ಹುಡುಗಿಯರಿಗೆ ಹಲವು ಪಟ್ಟುಗಳನ್ನು ಹೇಳಿ ಕೊಡುತ್ತಾರೆ. ಆದರೆ, ನನ್ನ ಪ್ರೀತಿಯ ಮಕ್ಕಳೇ ಕೇಳಿ, ಅವರ ಮುಂದೆ ಬಾಗುವುದು ಮತ್ತು ತಿರುಗುವುದು ಮಾಡಬೇಡಿ. ಏಕೆಂದರೆ ಅವರು ಅವಿವಾಹಿತ” ಎಂದು ಎಚ್ಚರಿಕೆ ನೀಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಚುನಾವಣಾ ಪ್ರಚಾರಕ್ಕೆ ರಾಜ್ಯಕ್ಕೆ ತೆರಳಿದ್ದ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ, ಕೊಚ್ಚಿಯ ಪ್ರಸಿದ್ಧ ಸೇಂಟ್ ತೆರೇಸಾ ಕಾಲೇಜಿನಲ್ಲಿ ‘ಐಕಿಡೊ’ ಪಾಠ ಹೇಳಿಕೊಟ್ಟು, ಸಂವಾದ ನಡೆಸಿದ್ದರು. ಅಕಿಡೊ ಜಪಾನಿನ ಸಮರ ಕಲೆಯಾಗಿದೆ. ಇದನ್ನೇ ಇಟ್ಟುಕೊಂಡು ಜಾಯ್ಸ್ ಜಾರ್ಜ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

“ಮಾಜಿ ಸಂಸದ ಜಾಯ್ಸ್ ಜಾರ್ಜ್ ಅವರ ಹೇಳಿಕೆ ಅತ್ಯಂತ ಶೋಚನೀಯವಾಗಿದೆ. ಅವರು ರಾಷ್ಟ್ರೀಯ ನಾಯಕನ ವಿರುದ್ಧ ಇಂತಹ ಭಾಷೆಯನ್ನು ಬಳಸಿದ್ದಾರೆ. ಕೇರಳದಲ್ಲಿ ರಾಹುಲ್ ಗಾಂಧಿಯವರ ಕಾರ್ಯಕ್ರಮಗಳಲ್ಲಿ ಲಕ್ಷಾಂತರ ಜನರು ಭಾಗವಹಿಸುತ್ತಿರುವುದರಿಂದ ಸಿಪಿಎಂ ಆತಂಕಕ್ಕೊಳಗಾಗಿದೆ” ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ರಮೇಶ್ ಚೆನ್ನಿಥಾಲಾ ಹೇಳಿದ್ದಾರೆ.

ಇದನ್ನೂ ಓದಿ: 50ನೇ ವರ್ಷದಲ್ಲಿಯೂ ಫಿಟ್ನೆಸ್ ತೋರಿಸಿದ ರಾಹುಲ್ ಗಾಂಧಿ: ಪುಷ್-ಅಪ್ ವಿಡಿಯೋ ವೈರಲ್

“ಮಾಜಿ ಸಂಸದರ ಹೇಳಿಕೆ ಮಹಿಳೆಯರಿಗೆ ಮಾಡಿದ ಅವಮಾನ ಮಾತ್ರವಲ್ಲ, ಒಟ್ಟಾರೆಯಾಗಿ ಕೇರಳದ ಸಮಾಜಕ್ಕೆ ಮಾಡಿದ ಅವಮಾನ. ಸಿಪಿಎಂ ಮಹಿಳಾ ವಿರೋಧಿ ಹೇಳಿಕೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಕ್ಷಮೆಯಾಚಿಸಬೇಕು” ಎಂದು ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಹೇಳಿದ್ದಾರೆ.

ಆದರೆ, ತಾವು ಯಾವುದೇ ಮಹಿಳಾ ವಿರೋಧಿ ಟೀಕೆಗಳನ್ನು ಮಾಡಿಲ್ಲ. ರಾಹುಲ್ ಗಾಂಧಿ ಅವರನ್ನು ಮಾತ್ರ ಟೀಕಿಸಿದ್ದೇನೆ ಎಂದು ಸಂಸದ ಜಾರ್ಜ್ ಅವರ ಸಮರ್ಥನೆಯನ್ನು ಪಿಟಿಐ ಉಲ್ಲೇಖಿಸಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ “ರಾಹುಲ್ ಗಾಂಧಿಯನ್ನು ವೈಯಕ್ತಿಕ ಮಟ್ಟದಲ್ಲಿ ಟೀಕಿಸುವುದು ನಮ್ಮ ಶೈಲಿಯಲ್ಲ. ರಾಜಕೀಯವಾಗಿ, ನಾವು ಅಗತ್ಯವಿರುವ ಕಡೆ ಅವರನ್ನು ವಿರೋಧಿಸುವುದನ್ನು ಮುಂದುವರಿಸುತ್ತೇವೆ. ಆದರೆ ಈ ರೀತಿಯಲ್ಲಿ ಅಲ್ಲ” ಎಂದಿದ್ದಾರೆ.


ಇದನ್ನೂ ಓದಿ: ಕೇರಳದಲ್ಲಿನ ಏಕೈಕ ಬಿಜೆಪಿ ಖಾತೆಯನ್ನೂ ಕ್ಲೋಸ್ ಮಾಡುತ್ತೇವೆ: ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...