Homeಮುಖಪುಟ'ರಾಹುಲ್ ಗಾಂಧಿ ಅವಿವಾಹಿತ, ಎಚ್ಚರಿಕೆಯಿಂದಿರಿ': ಮಾಜಿ ಸಂಸದನ ಹೇಳಿಕೆಗೆ ಭಾರಿ ವಿರೋಧ

‘ರಾಹುಲ್ ಗಾಂಧಿ ಅವಿವಾಹಿತ, ಎಚ್ಚರಿಕೆಯಿಂದಿರಿ’: ಮಾಜಿ ಸಂಸದನ ಹೇಳಿಕೆಗೆ ಭಾರಿ ವಿರೋಧ

- Advertisement -
- Advertisement -

ಕೆಲವು ದಿನಗಳ ಹಿಂದೆ ಕೇರಳದ ಚುನಾವಣಾ ಪ್ರಚಾರದ ವೇಳೆ ರಾಹುಲ್ ಗಾಂಧಿ ವಿರುದ್ಧ ಎಡಪಕ್ಷ ಸಿಪಿಎಂ ಬೆಂಬಲಿತ ಮಾಜಿ ಸಂಸದರು ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳು ಭಾರಿ ಆಕ್ರೋಶ ವ್ಯಕ್ತಪಡಿಸಿವೆ. ರಾಹುಲ್ ಗಾಂಧಿ ಅವಿವಾಹಿತ. ಅವರು ಮಹಿಳಾ ಕಾಲೇಜುಗಳಿಗೆ ತೆರಳುತ್ತಿದ್ದಾರೆ.. ಅವರಿಂದ ದೂರವಿರಿ ಎಂಬ ಹೇಳಿಕೆಗಳನ್ನು ನೀಡಿದ್ದರು.

ಉಡುಂಬಂಚೋಳ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ರಾಜ್ಯ ವಿದ್ಯುತ್ ಸಚಿವ ಎಂ.ಎಂ.ಮಣಿ ಅವರ ಚುನಾವಣಾ ರ್‍ಯಾಲಿಯಲ್ಲಿ ಇಡುಕ್ಕಿ ಕ್ಷೇತ್ರದ ಮಾಜಿ ಸ್ವತಂತ್ರ ಸಂಸದ ಜಾಯ್ಸ್ ಜಾರ್ಜ್ ಈ ಹೇಳಿಕೆಗಳನ್ನು ನೀಡಿದ್ದರು. ಈ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೇರಳದಲ್ಲಿ ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸಿದೆ.

ವಿವಾದಕ್ಕೆ ಪ್ರತಿಕ್ರಿಯಿಸಿರುವ, ಸಿಪಿಎಂ ಇಂತಹ ಹೇಳಿಕೆಗಳನ್ನು ನೀಡಬಾರದು ಎಂದು ಹೇಳುವ ಮೂಲಕ ವಿವಾದದಿಂದ ದೂರವಿರಲು ಪ್ರಯತ್ನಿಸಿದೆ.

ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

“ಅವರು (ರಾಹುಲ್ ಗಾಂಧಿ) ಮಹಿಳಾ ಕಾಲೇಜುಗಳಿಗೆ ಮಾತ್ರ ಭೇಟಿ ನೀಡುತ್ತಾರೆ. ಹುಡುಗಿಯರಿಗೆ ಹಲವು ಪಟ್ಟುಗಳನ್ನು ಹೇಳಿ ಕೊಡುತ್ತಾರೆ. ಆದರೆ, ನನ್ನ ಪ್ರೀತಿಯ ಮಕ್ಕಳೇ ಕೇಳಿ, ಅವರ ಮುಂದೆ ಬಾಗುವುದು ಮತ್ತು ತಿರುಗುವುದು ಮಾಡಬೇಡಿ. ಏಕೆಂದರೆ ಅವರು ಅವಿವಾಹಿತ” ಎಂದು ಎಚ್ಚರಿಕೆ ನೀಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಚುನಾವಣಾ ಪ್ರಚಾರಕ್ಕೆ ರಾಜ್ಯಕ್ಕೆ ತೆರಳಿದ್ದ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ, ಕೊಚ್ಚಿಯ ಪ್ರಸಿದ್ಧ ಸೇಂಟ್ ತೆರೇಸಾ ಕಾಲೇಜಿನಲ್ಲಿ ‘ಐಕಿಡೊ’ ಪಾಠ ಹೇಳಿಕೊಟ್ಟು, ಸಂವಾದ ನಡೆಸಿದ್ದರು. ಅಕಿಡೊ ಜಪಾನಿನ ಸಮರ ಕಲೆಯಾಗಿದೆ. ಇದನ್ನೇ ಇಟ್ಟುಕೊಂಡು ಜಾಯ್ಸ್ ಜಾರ್ಜ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.

“ಮಾಜಿ ಸಂಸದ ಜಾಯ್ಸ್ ಜಾರ್ಜ್ ಅವರ ಹೇಳಿಕೆ ಅತ್ಯಂತ ಶೋಚನೀಯವಾಗಿದೆ. ಅವರು ರಾಷ್ಟ್ರೀಯ ನಾಯಕನ ವಿರುದ್ಧ ಇಂತಹ ಭಾಷೆಯನ್ನು ಬಳಸಿದ್ದಾರೆ. ಕೇರಳದಲ್ಲಿ ರಾಹುಲ್ ಗಾಂಧಿಯವರ ಕಾರ್ಯಕ್ರಮಗಳಲ್ಲಿ ಲಕ್ಷಾಂತರ ಜನರು ಭಾಗವಹಿಸುತ್ತಿರುವುದರಿಂದ ಸಿಪಿಎಂ ಆತಂಕಕ್ಕೊಳಗಾಗಿದೆ” ಎಂದು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ರಮೇಶ್ ಚೆನ್ನಿಥಾಲಾ ಹೇಳಿದ್ದಾರೆ.

ಇದನ್ನೂ ಓದಿ: 50ನೇ ವರ್ಷದಲ್ಲಿಯೂ ಫಿಟ್ನೆಸ್ ತೋರಿಸಿದ ರಾಹುಲ್ ಗಾಂಧಿ: ಪುಷ್-ಅಪ್ ವಿಡಿಯೋ ವೈರಲ್

“ಮಾಜಿ ಸಂಸದರ ಹೇಳಿಕೆ ಮಹಿಳೆಯರಿಗೆ ಮಾಡಿದ ಅವಮಾನ ಮಾತ್ರವಲ್ಲ, ಒಟ್ಟಾರೆಯಾಗಿ ಕೇರಳದ ಸಮಾಜಕ್ಕೆ ಮಾಡಿದ ಅವಮಾನ. ಸಿಪಿಎಂ ಮಹಿಳಾ ವಿರೋಧಿ ಹೇಳಿಕೆಯನ್ನು ಹಿಂತೆಗೆದುಕೊಳ್ಳಬೇಕು ಮತ್ತು ಕ್ಷಮೆಯಾಚಿಸಬೇಕು” ಎಂದು ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಹೇಳಿದ್ದಾರೆ.

ಆದರೆ, ತಾವು ಯಾವುದೇ ಮಹಿಳಾ ವಿರೋಧಿ ಟೀಕೆಗಳನ್ನು ಮಾಡಿಲ್ಲ. ರಾಹುಲ್ ಗಾಂಧಿ ಅವರನ್ನು ಮಾತ್ರ ಟೀಕಿಸಿದ್ದೇನೆ ಎಂದು ಸಂಸದ ಜಾರ್ಜ್ ಅವರ ಸಮರ್ಥನೆಯನ್ನು ಪಿಟಿಐ ಉಲ್ಲೇಖಿಸಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ “ರಾಹುಲ್ ಗಾಂಧಿಯನ್ನು ವೈಯಕ್ತಿಕ ಮಟ್ಟದಲ್ಲಿ ಟೀಕಿಸುವುದು ನಮ್ಮ ಶೈಲಿಯಲ್ಲ. ರಾಜಕೀಯವಾಗಿ, ನಾವು ಅಗತ್ಯವಿರುವ ಕಡೆ ಅವರನ್ನು ವಿರೋಧಿಸುವುದನ್ನು ಮುಂದುವರಿಸುತ್ತೇವೆ. ಆದರೆ ಈ ರೀತಿಯಲ್ಲಿ ಅಲ್ಲ” ಎಂದಿದ್ದಾರೆ.


ಇದನ್ನೂ ಓದಿ: ಕೇರಳದಲ್ಲಿನ ಏಕೈಕ ಬಿಜೆಪಿ ಖಾತೆಯನ್ನೂ ಕ್ಲೋಸ್ ಮಾಡುತ್ತೇವೆ: ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...