Homeಅಂತರಾಷ್ಟ್ರೀಯಬಂದರು ಗುತ್ತಿಗೆಗಾಗಿ ಮ್ಯಾನ್ಮಾರ್ ಮಿಲಿಟರಿ ನಿಯಂತ್ರಿತ ಕಂಪನಿಗೆ 30 ಮಿಲಿಯನ್ ಡಾಲರ್ ಹಣ ನೀಡಿದ ಅದಾನಿ...

ಬಂದರು ಗುತ್ತಿಗೆಗಾಗಿ ಮ್ಯಾನ್ಮಾರ್ ಮಿಲಿಟರಿ ನಿಯಂತ್ರಿತ ಕಂಪನಿಗೆ 30 ಮಿಲಿಯನ್ ಡಾಲರ್ ಹಣ ನೀಡಿದ ಅದಾನಿ ಗ್ರೂಪ್: ವರದಿ

- Advertisement -
- Advertisement -

ಒಂದೆಡೆ ಫೆಬ್ರವರಿ 1 ರ ದಂಗೆಯ ನಂತರ ಮ್ಯಾನ್ಮಾರ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದೇಶಿ ಕಂಪನಿಗಳ ಮೇಲೆ ಒತ್ತಡ ಹೆಚ್ಚಾಗುತ್ತದೆ ಮತ್ತು ಪ್ರತಿಭಟನಾಕಾರರ ಮೇಲೆ ಕ್ರೂರ ದಬ್ಬಾಳಿಕೆ ನಡೆಸುತ್ತಿದೆ. ಇನ್ನೊಂದೆಡೆ ಭಾರತದ ಅದಾನಿ ಗ್ರೂಪ್ ಮಿಲಿಟರಿ ನಿಯಂತ್ರಿತ ಮ್ಯಾನ್ಮಾರ್ ಎಕನಾಮಿಕ್ ಕಾರ್ಪೊರೇಶನ್‌ನೊಂದಿಗಿನ ಬಂದರು ಗುತ್ತಿಗೆ ಒಪ್ಪಂದಕ್ಕಾಗಿ ಹಣ ನೀಡಿದೆ ಎಂದು ಎಬಿಸಿ ನ್ಯೂಸ್ ವರದಿ ಮಾಡಿದೆ.

ಯಾಂಗೊನ್ ಪ್ರದೇಶ ಹೂಡಿಕೆ ಆಯೋಗದಿಂದ ಸೋರಿಕೆಯಾದ ದಾಖಲೆಗಳ ಪ್ರಕಾರ ಅದಾನಿ ಗ್ರೂಪ್ ಮ್ಯಾನ್ಮಾರ್ ಆರ್ಥಿಕ ನಿಗಮಕ್ಕೆ “ಭೂ ಗುತ್ತಿಗೆ ಶುಲ್ಕ” ದಲ್ಲಿ 30 ಮಿಲಿಯನ್ ಡಾಲರ್ ಪಾವತಿಸುತ್ತಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

ಕಳೆದ ತಿಂಗಳು ಅದಾನಿ ಗ್ರೂಪ್ ತನ್ನ ಹೇಳಿಕೆಯಲ್ಲಿ ಬಂದರಿನ ಅನುಮೋದನೆಗಾಗಿ ಮಿಲಿಟರಿ ನಾಯಕರೊಂದಿಗೆ ತೊಡಗಿಸಿಕೊಂಡಿಲ್ಲ ಎಂದು ಹೇಳಿತ್ತು. “ಈ ಅನುಮೋದನೆಯನ್ನು ಪಡೆಯುವಾಗ ಅಥವಾ ನಂತರ ಮಿಲಿಟರಿ ನಾಯಕತ್ವದೊಂದಿಗೆ ತೊಡಗಿಸಿಕೊಂಡಿದ್ದನ್ನು ನಾವು ಸ್ಪಷ್ಟವಾಗಿ ನಿರಾಕರಿಸುತ್ತೇವೆ” ಎಂದಿತ್ತು. ಆದರೆ ಸೋರಿಕೆಯಾದ ದಾಖಲೆಗಳು ಅದು ಸುಳ್ಳು ಎನ್ನುತ್ತಿವೆ.

ಅದಾನಿ ಬಂದರುಗಳ ಮುಖ್ಯ ಕಾರ್ಯನಿರ್ವಾಹಕ ಕರಣ್ ಅದಾನಿ ಅವರು ಜುಲೈ 2019 ರಲ್ಲಿ ಚುನಾಯಿತ ಸರ್ಕಾರದ ವಿರುದ್ಧ ದಂಗೆಯನ್ನು ಮುನ್ನಡೆಸಿದ ಸೇನಾ ಮುಖ್ಯಸ್ಥ ಹಿರಿಯ ಜನರಲ್ ಮಿನ್ ಆಂಗ್ ಹ್ಲೇಂಗ್ ಅವರನ್ನು ಭೇಟಿಯಾದರು ಎಂದು ಎಬಿಸಿ ನ್ಯೂಸ್ ವೀಡಿಯೊಗಳು ಮತ್ತು ಫೋಟೋಗಳನ್ನು ಬಹಿರಂಗಪಡಿಸಿದೆ. 2017 ರಲ್ಲಿ ನಿರಾಶ್ರಿತರ ಬಿಕ್ಕಟ್ಟನ್ನು ಹುಟ್ಟುಹಾಕಿದ ರೋಹಿಂಗ್ಯಾ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧದ ಅಭಿಯಾನದಲ್ಲಿ ತಮ್ಮ ಪಾತ್ರಕ್ಕಾಗಿ ಹೇಲಿಂಗ್ ಸೇರಿದಂತೆ ಕೆಲವು ಜನರಲ್‌ಗಳು ಆಗಲೇ ಯುನೈಟೆಡ್ ಸ್ಟೇಟ್ಸ್ ಮಾನವ ಹಕ್ಕುಗಳ ನಿರ್ಬಂಧದಲ್ಲಿದ್ದರು.

ಈ ಅಂತರರಾಷ್ಟ್ರೀಯ ಬೆಳವಣಿಗೆಗಳ ಹೊರತಾಗಿಯೂ ಮ್ಯಾನ್ಮಾರ್ ಎಕನಾಮಿಕ್ ಕಾರ್ಪೊರೇಷನ್ ಬಂದರಿಗೆ “ಭೂ ಅನುಮತಿ ಶುಲ್ಕ” ವಾಗಿ ಮತ್ತೆ 22 ಮಿಲಿಯನ್ ಡಾಲರ್ ಪಡೆಯುವ ಸಾಧ್ಯತೆಯಿದೆ ಎಂದು ಆಸ್ಟ್ರೇಲಿಯನ್ ಸೆಂಟರ್ ಫಾರ್ ಇಂಟರ್ನ್ಯಾಷನಲ್ ಜಸ್ಟೀಸ್ ಮತ್ತು ಆಕ್ಟಿವಿಸ್ಟ್ ಗ್ರೂಫ್ ಜಸ್ಟಿಸ್ ಫಾರ್ ಮ್ಯಾನ್ಮಾರ್ ಜಂಟಿ ವರದಿ ತಿಳಿಸಿದೆ.

ಕಳೆದ ತಿಂಗಳು ನಡೆದ ದಂಗೆಯ ನಂತರ ದಾಖಲೆಗಳು ಸೋರಿಕೆಯಾಗಿವೆ ಎಂದು ವರದಿಯ ಲೇಖಕ ಮತ್ತು ಮಾನವ ಹಕ್ಕುಗಳ ವಕೀಲ ರಾವನ್ ಅರ್ರಾಫ್ ಎಬಿಸಿ ನ್ಯೂಸ್‌ಗೆ ತಿಳಿಸಿದ್ದಾರೆ.

ಮ್ಯಾನ್ಮಾರ್ ಮಿಲಿಟರಿಯಿಂದ ನಿಯಂತ್ರಿಸಲ್ಪಡುವ ಮತ್ತು ಅದರ ಮಾಲೀಕತ್ವದಲ್ಲಿರುವ ‘ಮ್ಯಾನ್ಮಾರ್ ಎಕನಾಮಿಕ್ ಕಾರ್ಪೊರೇಷನ್’ಗೆ ಹಣ ಸಂದಾಯವಾಗಿದೆ ಎಂಬುದನ್ನು ಈ ದಾಖಲೆಗಳು ನಿರ್ದಿಷ್ಟವಾಗಿ ಬಹಿರಂಗಪಡಿಸುತ್ತವೆ. ಅದು ಸದ್ಯಕ್ಕೆ ಯುದ್ಧ ಅಪರಾಧಗಳು ಮತ್ತು ರೋಹಿಂಗ್ಯಾಗಳ ವಿರುದ್ಧದ ಅಪರಾಧಗಳು, ನರಮೇಧ ಸೇರಿದಂತೆ ಹಲವು ಆರೋಪಗಳ ಮೇಲೆ ಅಂತರರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಮತ್ತು ಇತರ ಕೋರ್ಟ್‌ನಲ್ಲಿ ತನಿಖೆ ಎದುರಿಸುತ್ತಿದೆ. ಈ ಕುರಿತು ಸಾಕಷ್ಟು ಬಾರಿ ಅದಾನಿಯವರ ಗಮನಕ್ಕೆ ತರಲಾಗಿದೆ. ಆದರೆ ಅವರು (ಎಂಇಸಿ) ಮ್ಯಾನ್ಮಾರ್ ಒಪ್ಪಂದದಿಂದ ಹೊರಗುಳಿಯಲು ನಿರಾಕರಿಸಿದ್ದಾರೆ ಮತ್ತು ಇದು ನಿಜವಾದ ಸಮಸ್ಯೆ ಎಂದು ಅರ್ರಾಫ್ ಹೇಳಿದ್ದಾರೆ.

ಅದಾನಿ ಗ್ರೂಪ್‌ನ ಹಣವನ್ನು ಮ್ಯಾನ್ಮಾರ್ ಮಿಲಿಟರಿಯು ಅಂತಾರಾಷ್ಟ್ರೀಯ ಅಪರಾಧಗಳಿಗೆ ಬಳಸಿಕೊಳ್ಳಬಹುದು ಎಂದು ಅರ್ರಾಫ್ ಆತಂಕ ವ್ಯಕ್ತಪಡಿಸಿದ್ದಾರೆ.

2019 ರ ವಿಶ್ವಸಂಸ್ಥೆಯ ವರದಿಯು ಮಿಲಿಟರಿ ಸಂಘಟನೆಯೊಂದಿಗೆ ತೊಡಗಿಸಿಕೊಂಡ ಕಂಪನಿಗಳಲ್ಲಿ ಅದಾನಿ ಪೋರ್ಟ್ಸ್‌ ಸಹ ಒಂದಾಗಿದೆ ಎಂದು ತಿಳಿಸಿತ್ತು. ಮಾನವ ಹಕ್ಕುಗಳ ಉಲ್ಲಂಘನೆಯಿಂದಾಗಿ ಮಿಲಿಟರಿಯೊಂದಿಗೆ ವ್ಯಾಪಾರ ಮಾಡದಂತೆ ವಿದೇಶಿ ಸಂಸ್ಥೆಗಳಿಗೆ ವರದಿ ಒತ್ತಾಯಿಸಿತ್ತು.

ಮ್ಯಾನ್ಮಾರ್‌ಗೆ 2019 ರಲ್ಲಿ ಭೇಟಿ ನೀಡಿದ್ದ ವಿಶ್ವಸಂಸ್ಥೆಯ ಸತ್ಯ-ಶೋಧನಾ ತಂಡದ ಭಾಗವಾಗಿದ್ದ ಆಸ್ಟ್ರೇಲಿಯಾದ ವಕೀಲ ಕ್ರಿಸ್ ಸಿಡೋಟಿ “ನಾವು ಮ್ಯಾನ್ಮಾರ್ ಮಿಲಿಟರಿಯ ಪುಷ್ಟೀಕರಣಕ್ಕೆ ಕೊಡುಗೆ ನೀಡುವ ಕಂಪನಿಗೆ ಆತಿಥ್ಯ ನೀಡಲು ಬಯಸುತ್ತೇವೆಯೇ? ಆಸ್ಟ್ರೇಲಿಯಾ ಮತ್ತು ಆಸ್ಟ್ರೇಲಿಯನ್ನರು ಉತ್ತರಿಸಬೇಕು” ಎಂದು ಕೇಳಿದ್ದರು. ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್‌ನಲ್ಲಿರುವ ಅಬಾಟ್ ಪಾಯಿಂಟ್ ಕಲ್ಲಿದ್ದಲು ಟರ್ಮಿನಲ್‌ ಎಂಬ ಮತ್ತೊಂದು ಅಂತರರಾಷ್ಟ್ರೀಯ ಯೋಜನೆಯಲ್ಲಿ ಅದಾನಿ ಪೋರ್ಟ್ಸ್‌ ತೊಡಗಿಸಿಕೊಳ್ಳಲು ನೋಡುತ್ತಿರುವುದುನ್ನು ಅವರು ಉಲ್ಲೇಖಿಸುತ್ತಿದ್ದರು.

“ಅದಾನಿ ಗ್ರೂಪ್‌ನಲ್ಲಿ ಹೂಡಿಕೆ ಮಾಡುತ್ತಿರುವವರಿಗೆ ಪ್ರಶ್ನೆಯೆಂದರೆ ಅವರು ಮ್ಯಾನ್ಮಾರ್ ಮಿಲಿಟರಿಯ ಕಾರ್ಯಾಚರಣೆಗಳಿಗೆ ಧನಸಹಾಯ ನೀಡಲು ಬಯಸುತ್ತಾರೆಯೇ? ಏಕೆಂದರೆ ಅದಾನಿಯಲ್ಲಿ ಹೂಡಿಕೆ ಮಾಡುವ ಮೂಲಕ ಅವರು ಪರೋಕ್ಷವಾಗಿ ಏನು ಮಾಡುತ್ತಿದ್ದಾರೆ?” ಎಂದು ಸಿಡೋಟಿ ಪ್ರಶ್ನಿಸಿದ್ದರು.

ಯುಎಸ್ ನಿರ್ಬಂಧಗಳು ಆಸ್ಟ್ರೇಲಿಯಾ ಸರ್ಕಾರವು ಅದಾನಿ ಪೋರ್ಟ್‌ನಲ್ಲಿ 3.2 ಮಿಲಿಯನ್ ಹೂಡಿಕೆಯನ್ನು ರದ್ದುಗೊಳಿಸುವಂತೆ ಒತ್ತಡ ಹೇರಿವೆ. ಆದರೆ ಭವಿಷ್ಯದ ನಿಧಿಯ ವಕ್ತಾರರು ಈ ಒಪ್ಪಂದವನ್ನು ಕೈಬಿಡುವ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಹೇಳಿದರು.


ಇದನ್ನೂ ಓದಿ: ಭಾರತ-ಆಸ್ಟ್ರೇಲಿಯಾ ಏಕದಿನ ಪಂದ್ಯ: ಮೈದಾನಕ್ಕೆ ನುಗ್ಗಿ ‘ಸ್ಟಾಪ್ ಅದಾನಿ’ ಎಂದ ಪ್ರತಿಭಟನೆಗಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...