Homeಅಂಕಣಗಳುಸಾಧ್ವಿ ಪ್ರಗ್ಯಾ ಭಯೋತ್ಪಾದನೆ ಮತ್ತು ದ್ವಂದ್ವಗಳು

ಸಾಧ್ವಿ ಪ್ರಗ್ಯಾ ಭಯೋತ್ಪಾದನೆ ಮತ್ತು ದ್ವಂದ್ವಗಳು

- Advertisement -
- Advertisement -

| ಗೌರಿ ಲಂಕೇಶ್ |
03 ಡಿಸೆಂಬರ್, 2008 ( ಕಂಡಹಾಗೆ ಸಂಪಾದಕೀಯದಿಂದ)

ಮೊದಲೇ ಒಂದು ಅಂಶವನ್ನು ಸ್ಪಷ್ಟಪಡಿಸಬೇಕಿದೆ. ಅದೇನೆಂದರೆ ಮಾಲೆಗಾಂವ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ಸಾಧ್ವಿ ಪ್ರಗ್ಯಾ, ಲೆಫ್ಟಿನೆಂಟ್ ಶ್ರೀಕಾಂತ್ ಪುರೋಹಿತ ಮತ್ತು ಇತರರ ಮೇಲೆ ಪೊಲೀಸ್ ದೌರ್ಜನ್ಯ ನಿಲ್ಲಬೇಕು. ಅವರೆಲ್ಲರಿಗೆ ಸೂಕ್ತ ಕಾನೂನು ನೆರವು ನೀಡಬೇಕು. ಅವರ ಮೇಲೆ ಪೊಲೀಸರು ಮಾಡಿರುವ ಆರೋಪಗಳನ್ನು ಸಾಬೀತುಪಡಿಸುವತ್ತ ಸರ್ಕಾರ ನೋಡಿಕೊಳ್ಳಬೇಕು. ಅಕಸ್ಮಾತ್ ಸಾಧ್ವಿ ಮತ್ತಾಕೆಯ ತಂಡ ನಿರ್ದೋಷಿಗಳಾಗಿದ್ದರೆ ಅದನ್ನೂ ಸಾಬೀತುಪಡಿಸಲು ಅವರಿಗೆ ಎಲ್ಲ ಅವಕಾಶಗಳನ್ನು ಮಾಡಿಕೊಡಬೇಕು. ಇದೆಲ್ಲ ಸರಿಯಾಗಿ ನಡೆದ ನಂತರ ಎಲ್ಲರೂ ನ್ಯಾಯಾಲಯದ ತೀರ್ಪಿಗೆ ಬದ್ಧರಾಗಿರಬೇಕು.

ನಾವಾಗಲಿ, ಕಾನೂನು ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿರುವವರಾಗಲಿ, ಮಾನವ ಹಕ್ಕುಗಳ ಹೋರಾಟಗಾರರಾಗಲಿ ಇದನ್ನು ಮೊದಲ ಬಾರಿ ಹೇಳುತ್ತಿಲ್ಲ. ಬಹಳ ವರ್ಷಗಳಿಂದ ನಮ್ಮೆಲ್ಲರ ನಿಲುವು ಇದೇ ಆಗಿದೆ. ಬಾಂಬ್ ಸ್ಪೋಟ ಆರೋಪಿಗಳ ಮೇಲೆ, ಸಿಮಿ ಸದಸ್ಯರು ಎಂಬ ಸಂಶಯದ ಮೇಲೆ, ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರಬಹುದು ಎಂಬ ನೆಪದಲ್ಲಿ ಸಾವಿರಾರು ಮುಸಲ್ಮಾನರನ್ನು ಪೊಲೀಸರು ಬಂಧಿಸಿದಾಗ ನಾವು ಹೇಳಿದ್ದು ಇದನ್ನೇ. ಈಗ ಸಾಧ್ವಿ, ಪುರೋಹಿತ್ ಮತ್ತು ಇತರರನ್ನು ಕುರಿತು ಹೇಳುವುದೂ ಇದೇ ಮಾತನ್ನೇ.

ಆದರೆ ಆರ್‌ಎಸ್‌ಎಸ್, ಬಿಜೆಪಿ, ವಿಶ್ವಹಿಂದೂ ಪರಿಷತ್, ಭಜರಂಗದಳ, ಅಭಿನವ ಭಾರತ್ ಮತ್ತು ಸಂಘ ಪರಿವಾರದ ಇತರೆ ತುಂಡುಗಳು ಮಾತ್ರ ಮೊದಲಿನಿಂದಲೂ ಹೇಗೆ ವರ್ತಿಸಿವೆ ನೋಡಿ.

‘ಸಾಧ್ವಿ ಪ್ರಗ್ಯಾಗೆ ಪೊಲೀಸರು ದೈಹಿಕ ಹಿಂಸೆ ನೀಡಿದ್ದಾರೆ’ ಎಂದು ಅರಚಾಡುತ್ತಿರುವ ಚೆಡ್ಡಿಗಳಿಗೆ ಅದೇ ಪೊಲೀಸರು ಮುಸಲ್ಮಾನ ಆರೋಪಿಗಳ ಮೇಲೆ ದೌರ್ಜನ್ಯ ನಡೆಸಿದ್ದು ಕಾಣಿಸಲಿಲ್ಲ. ಈಗ ಪ್ರಗ್ಯಾಳಿಗೆ ಕಾನೂನು ನೆರವು ನೀಡಲು ವಕೀಲರ ಸಂಘಗಳನ್ನು ರೂಪಿಸಿರುವ, ಆಕೆಯ ಪರವಾಗಿ ಕಾನೂನು ಸಮರಕ್ಕೆ ಹಣ ಸಂಗ್ರಹಿಸುತ್ತಿರುವ ಚೆಡ್ಡಿಗಳು ಪ್ರಗ್ಯಾಳಂತೆಯೇ ಭಯೋತ್ಪಾದನೆ ಆರೋಪದ ಮೇಲೆ ಮುಸಲ್ಮಾನ ಯುವಕರನ್ನು ಬಂಧಿಸಿದಾಗ ಪ್ರತಿಕ್ರಿಯಿಸಿದ್ದು ಹೇಗೆ? ಅಫಜಲ್‌ಗುರು ಪರವಾಗಿ ಯಾವ ವಕೀಲನೂ ವಕಾಲತ್ತು ವಹಿಸಬಾರದೆಂದು ದೆಹಲಿಯ ವಕೀಲರ ಸಂಘ ಫತ್ವಾ ಹೊರಡಿಸಿತ್ತು. ಕೊನೆಗೆ ನ್ಯಾಯಾಲಯವೇ ಅಫಜಲ್‌ಗುರುಗೆ ಓರ್ವ ವಕೀಲನನ್ನು ನೇಮಿಸಿತ್ತಾದರೂ ಆತ ಎಂದೂ ಆಫಜಲ್‌ಗುರು ಪರವಾಗಿ ನ್ಯಾಯಾಲಯದಲ್ಲಿ ದನಿ ಎತ್ತಲಿಲ್ಲ. ಪರಿಣಾಮವಾಗಿ ಆತನಿಗೆ ಗಲ್ಲುಶಿಕ್ಷೆ ನೀಡಲಾಯ್ತು.

ಸಂಘ ಪರಿವಾರ ಯಾಕೆ ತನಗೊಂದು ನ್ಯಾಯ, ಇತರರಿಗೊಂದು ನ್ಯಾಯ ಎಂದು ವಾದಿಸುತ್ತದೆ?
ಬೆಂಗಳೂರಿನ ಡಾ.ಹನೀಫ್‌ರನ್ನು ಸುಳ್ಳು ಅರೋಪಗಳ ಮೇಲೆ ಆಸ್ಟ್ರೇಲಿಯಾದ ಪೊಲೀಸರು ಬಂಧಿಸಿದಾಗ ಹನೀಪರ ಹೆಂಡತಿ ಮತ್ತು ತಾಯಿ ಕಣ್ಣೀರಿಟ್ಟಿದ್ದನ್ನು ನೋಡಿ ತನಗೆ ನಿದ್ದೆ ಬರಲಿಲ್ಲ ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದರು. ಆ ವಾಕ್ಯವನ್ನು ಚೆಡ್ಡಿಗಳು ಹಲವಾರು ಬಾರಿ ಲೇವಡಿ ಮಾಡಿದ್ದಾರೆ. ಯಾವ ಪರಿ ಎಂದರೆ ಜೈಪುರದಲ್ಲಿ ಸರಣಿ ಬಾಂಬ್ ಸ್ಪೋಟಗೊಂಡಾಗ ‘ಈಗ ನಿಮಗೆ ನೆಮ್ಮದಿಯ ನಿದ್ರೆ ಬರುತ್ತಿದೆಯೇ?’ ಎಂದು ಹಂಗಿಸಿದ್ದರು. ವಾಸ್ತವವಾಗಿ, ಆ ಬಾಂಬ್ ಸ್ಪೋಟಗಳ ‘ಮಸ್ಟರ್ ಮೈಂಡ್’ಗಳೆಂದು ಬಂಧಿಸಲಾಗಿದ್ದ ಹತ್ತಾರು ಮುಸಲ್ಮಾನ ಯುವಕರ ವಿರುದ್ಧ ಯಾವ ಮಾಹಿತಿಯೂ ಇಲ್ಲ ಎಂದು ರಾಜಸ್ತಾನದ ಮುಖ್ಯಮಂತ್ರಿ ವಸುಂಧರ ರಾಜೆ ಅವರ ಬಿಜೆಪಿ ಸರ್ಕಾರವೇ ಬಿಡುಗಡೆಗೊಳಿಸಿದೆ.

ಭಾರತದಲ್ಲಿ ಸಂಭವಿಸುವ ಎಲ್ಲಾ ಭಯೊತ್ಪಾದಕ ಕೃತ್ಯಗಳ ಹಿಂದೆ ಮುಸಲ್ಮಾನರೇ ಇರುತ್ತಾರೆಂಬ ಭಾವನೆ ನಮ್ಮ ಪೊಲೀಸ್ ಮತ್ತು ಮಾಧ್ಯಮಗಳಲ್ಲಿ ಆಳವಾಗಿ ಬೇರುಬಿಟ್ಟಿದೆ. ಆದ್ದರಿಂದಲೇ ಹೈದರಾಬಾದಿನ ಮೆಕ್ಕಾ ಮಸೀದಿಯಲ್ಲಿ ಬಾಂಬ್ ಸ್ಪೋಟಗೊಂಡು ಆರು ಜನ ಮುಸಲ್ಮಾನರೆ ಸತ್ತರೂ, ಮಾಲೆಗಾಂವ್‌ನ ಮಸೀದಿಯ ಹತ್ತಿರ ಶುಕ್ರವಾರದ ನಮಾಜಿನ ಮೇಲೆ ಬಾಂಬ್ ಸ್ಪೋಟಿಸಿ 37 ಜನ ಮುಸಲ್ಮಾನರೇ ಸಾವಿಗೀಡಾಗಿದ್ದರೂ, ಸಂಜೋತಾ ಟ್ರೈನಿನಲ್ಲಿ ಸ್ಪೋಟ ಸಂಭವಿಸಿ ಸತ್ತ 68 ಜನರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸಲ್ಮಾನರೇ ಇದ್ದರೂ ಆ ಎಲ್ಲಾ ಪ್ರಕರಣಗಳ ಹಿಂದೆ ಮುಸಲ್ಮಾನ್ ಸಂಘಟನೆಗಳೇ ಇದ್ದವು ಎಂಬಂತೆ ಪೊಲೀಸರು ಮತ್ತು ಮಾಧ್ಯಮಗಳು ಬಿಂಬಿಸಿದ್ದವು. ಸಾಮಾನ್ಯ ಜ್ಞಾನ ಇದ್ದವನಿಗೂ ಕೂಡ ಮುಸಲ್ಮಾನ ಭಯೋತ್ಪಾದಕರೇ ಯಾಕೆ ತಮ್ಮ ಪ್ರರ್ಥನಾ ಸ್ಥಳಗಳನ್ನು ಸ್ಪೋಟಿಸುತ್ತಾರೆ. ತಮ್ಮ ಸಮುದಾಯದವರನ್ನು ಕೊಲ್ಲುತ್ತಾರೆ, ಇದರ ಹಿಂದೆ ಬೇರೆ ಸಂಘಟನೆಗಳ ಕೈವಾಡವಿದೆ ಎಂದು ಹೊಳೆಯುತ್ತದೆ. ಆದರೆ ಪೊಲೀಸರು ಮಾತ್ರ ಎಂದಿನಂತೆ ಸಿಮಿ, ಲಷ್ಕರ್, ಜೈಷ್, ತಾಲಿಬಾನ್ ಎಂದೇ ಬಾಯಿಬಡಿದುಕೊಳ್ಳುತ್ತಿರುತ್ತಾರೆ.

ಹಿಂದೂತ್ವವಾದಿಗಳ ಭಂದತನ ಯಾವ ಮಟ್ಟದ್ದೆಂದರೆ ಅದರ ಮುಖವಾಣಿಯಾದ ಪಾಂಚಜನ್ಯದ ಸಂಪಾದಕ ತರುಣ್ ವಿಜಯ್ ಎಂಬಾತ ‘ಒಬ್ಬನೇ ಒಬ್ಬ ಹಿಂದೂ ಕೂಡ ಭಯೋತ್ಪಾದನೆಯನ್ನು ಸಮರ್ಥಿಸುವುದಿಲ್ಲ. ಅದು ನಮ್ಮ ವಂಶವಾಹಿಯಲ್ಲೇ ಇಲ್ಲ. ಈ ವಿಷಯದಲ್ಲಿ ನಮ್ಮ ರಕ್ತವರ್ಗವೇ ಬೇರೆಯದ್ದು’ ಎಂದು ವಾದಿಸಿದ್ದಾನೆ. ಅಷ್ಟೇ ಅಲ್ಲದೆ ‘ಸಾಧ್ವಿ ಪ್ರಗ್ಯಾ ಈಗ ಹೀರೋ ಆಗಿದ್ದಾಳೆ’ ಎಂದು ಹೇಳಿದ್ದಾನೆ. ಇ ತರುಣ್ ವಿಜಯ್‌ನನ್ನು ಯಾರಾದರೂ ಪ್ರಶ್ನಿಸಬೇಕಿದೆ: ‘ನೀಣೇ ಹೇಳಿರುವಂತೆ ಹಿಂದೂಗಳ ಅನುವಂಶದಲ್ಲಿ ಮತ್ತು ರಕ್ತವರ್ಗದಲ್ಲಿ ಭಯೋತ್ಪಾದನೆ ಇಲ್ಲ ಎಂಬುಬು ನಿಜವಾದರೆ, ಭಯೋತ್ಪಾದನೆ ಇಲ್ಲ ಎಂಬುದು ನಿಜವಾದರೆ, ಬಯೋತ್ಪಾದನೆ ಆರೊಪ ಹೊತ್ತಿರುವ ಪ್ರಗ್ಯಾ ಹಿಂದೂ ಅಲ್ಲ ಎಂದಾಯಿತಲ್ಲವೇ?’

ಈತನಂತೆ ಇನ್ನೊಬ್ಬ ಹಿಂದೂತ್ವವಾದಿ ನಾನಾ ವಾಡೇಕರ್ ಎಂಬಾತ, ಈಗ ಭಾರತ ಸೇನೆಗೆ ಕಳಂಕದಂತಾಗಿರುವ ಲೆಫ್ಟಿನೆಂಟ್ ಕರ್ನಲ್ ಪುರೋಹಿತನನ್ನು ಕ್ರಾಂತಿಕಾರಿ ಮಂಗಲ್ ಪಾಂಡೆಗೆ ಹೋಲಿಸಿದ್ದಾನಲ್ಲದೆ, ‘ಪ್ರಗ್ಯಾ ಮತ್ತು ಪುರೋಹಿತ್ ಬಾಂಬ್ ಸ್ಫೊಟದಲ್ಲಿ ಭಾಗವಹಿಸಿದ್ದು ನಿಜವಾದರೆ ಅವರ ಬಗ್ಗೆ ನಾವು ಹೆಮ್ಮೆಪಡುತ್ತೇವೆ’ ಎಂದಿದ್ದಾನೆ. ಅಮಾಯಕರನ್ನು ಕೊಲ್ಲುವುದು ಅದು ಹೇಗೆ ಹೆಮ್ಮೆಯ ವಿಷಯವಾಗುತ್ತದೆ? ಆದರೆ ತರುಣ್ ವಿಜಯ್ ಮತ್ತು ವಾಡೇಕರ್ ತರಹದವರು ಭೈರಪ್ಪ ಮತ್ತು ಚಿಮೂನ ಸಂತತಿಯವರೇ ಆಗಿರುವುದರಿಂದ ಇವೆಲ್ಲ ಅವರಿಗೆ ಅರ್ಥವಾಗುವುದಿಲ್ಲ ಬಿಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...