Homeಅಂತರಾಷ್ಟ್ರೀಯ'ಮಯನ್ಮಾರ್ ವಲಸಿಗರಿಗೆ ಆಹಾರ ಮತ್ತು ಆಶ್ರಯ ಕೊಡಬೇಡಿ': ಆದೇಶ ಹಿಂಪಡೆದ ಮಣಿಪುರ ಸರ್ಕಾರ

‘ಮಯನ್ಮಾರ್ ವಲಸಿಗರಿಗೆ ಆಹಾರ ಮತ್ತು ಆಶ್ರಯ ಕೊಡಬೇಡಿ’: ಆದೇಶ ಹಿಂಪಡೆದ ಮಣಿಪುರ ಸರ್ಕಾರ

- Advertisement -
- Advertisement -

ಮಯನ್ಮಾರ್ ವಲಸಿಗ ನಿರಾಶ್ರಿತರಿಗೆ ಆಹಾರ ಮತ್ತು ಆಶ್ರಯ ನೀಡಬಾರದು ಎಂದು ಮಣಿಪುರ ಸರ್ಕಾರ ನೀಡಿದ್ದ ಆದೇಶವನ್ನು ಈಗ ಹಿಂತೆಗೆದುಕೊಂಡಿದೆ ಎಂದು ವರದಿಯಾಗಿದೆ.

“ರಾಜ್ಯ ಸರ್ಕಾರವು ಮಾನವೀಯ ನೆಲೆಗಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಗಾಯಗೊಂಡ ಮಯನ್ಮಾರ್ ಪ್ರಜೆಗಳಿಗೆ ಚಿಕಿತ್ಸೆ ನೀಡಲು ಇಂಫಾಲ್‌ಗೆ ಕರೆದೊಯ್ಯುವುದು ಸೇರಿದಂತೆ ಎಲ್ಲಾ ಕ್ರಮಗಳನ್ನು ಇತ್ತೀಚೆಗೆ ತೆಗೆದುಕೊಳ್ಳಲಾಗಿದೆ. ರಾಜ್ಯ ಸರ್ಕಾರ ಎಲ್ಲಾ ನೆರವು ನೀಡುತ್ತಲೇ ಇದೆ” ಎಂದು ಮಣಿಪುರದ ವಿಶೇಷ ಗೃಹ ಕಾರ್ಯದರ್ಶಿ ಜ್ಞಾನ ಪ್ರಕಾಶ್ ಹೇಳಿದ್ದಾರೆ.

ಎಲ್ಲಾ ಜಿಲ್ಲಾ ಆಯುಕ್ತರಿಗೆ ಮಾರ್ಚ್ 26 ರಂದು ನೀಡಿದ ಪತ್ರವನ್ನು ತಪ್ಪಾಗಿ ಪರಿಗಣಿಸಲಾಗಿದೆ. ಆದ್ದರಿಂದ ತಪ್ಪು ತಿಳುವಳಿಕೆಯನ್ನು ಸರಿಪಡಿಸಲು ಅದನ್ನು ಹಿಂಪಡೆಯಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಆದರೆ ಈ ಮೊದಲು, ವಲಸೆಯನ್ನು ತಡೆಯಬೇಕು ಎಂದು ಹೇಳಿರುವ ಮಣಿಪುರದ ವಿಶೇಷ ಗೃಹ ಕಾರ್ಯದರ್ಶಿ ಹೆಚ್. ಜ್ಞಾನ ಪ್ರಕಾಶ್, ಈ ರೀತಿಯ ನಿರ್ದೇಶನಗಳನ್ನು ಗೌಪ್ಯ ಜ್ಞಾಪನ ಪತ್ರದ ಮೂಲಕ ನೀಡಿದ್ದಾರೆ. “ಮಯನ್ಮಾರ್‌ನಲ್ಲಿ ನಡೆಯುತ್ತಿರುವ ಘಟನೆಗಳ ಪರಿಣಾಮವಾಗಿ, ಆ ದೇಶದ ಪ್ರಜೆಗಳು ಮಣಿಪುರ ಸೇರಿದಂತೆ ಇತರೆ ಗಡಿ ರಾಜ್ಯಗಳ ಮೂಲಕ ಭಾರತವನ್ನು ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ. ಅದನ್ನು ತಡೆಯುವ ನಿಟ್ಟಿನಲ್ಲಿ, ಈ ಕೆಳಗಿನ ಕ್ರಮಗಳನ್ನು ಅಗತ್ಯವಾಗಿ ತೆಗೆದುಕೊಳ್ಳಲು ನನಗೆ ನಿರ್ದೇಶಿಸಲಾಗಿದೆ” ಎಂದು ಜ್ಞಾಪನ ಪತ್ರದಲ್ಲಿ ತಿಳಿಸಲಾಗಿತ್ತು.

ಇದನ್ನೂ ಓದಿ: ಪ್ರಧಾನಿಯ ದಕ್ಷಿಣ ಭಾರತ ಭೇಟಿ: ‘ಗೋ ಬ್ಯಾಕ್ ಫ್ಯಾಸಿಸ್ಟ್‌ ಮೋದಿ’ ಟ್ವಿಟರ್‌ ಟ್ರೆಂಡ್!

ಮಣಿಪುರಕ್ಕೆ ಪ್ರವೇಶಿಸಲು/ಆಶ್ರಯಿಸಲು ಪ್ರಯತ್ನಿಸುವ ಜನರನ್ನು ದೂರವಿಡಬೇಕೆಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಅವರಿಗೆ ಯಾವುದೇ ಟೆಂಟ್ ಹಾಕಬಾರದು, ಊಟದ ವ್ಯವಸ್ಥೆ ಮಾಡಬಾರದು. ಸರ್ಕಾರ ಮಾತ್ರವಲ್ಲದೇ ಯಾವುದೇ ಸಂಘಸಂಸ್ಥೆಗಳು ಸಹ ಅವರಿಗೆ ಸಹಾಯ ಮಾಡಬಾರದು. ತಾತ್ಕಾಲಿಕವಾಗಿ ಆಧಾರ್ ನೋಂದಣಿಯನ್ನು ನಿಲ್ಲಿಸಬೇಕು. ಆದರೆ ವಲಸಿಗರಿಗೆ ಗಂಭೀರವಾದ ಗಾಯಗಳಿದ್ದಲ್ಲಿ, ಮಾನವೀಯ ನೆಲೆಯಲ್ಲಿ ಮಾತ್ರ ವೈದ್ಯಕೀಯ ಚಿಕಿತ್ಸೆ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಚಾಂಡೆಲ್, ತೆಂಗ್ನೌಪಾಲ್, ಕಮ್ಜಾಂಗ್, ಉಖ್ರುಲ್ ಮತ್ತು ಚುರಾಚಂದಪುರದ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದು, ಈ ಎಲ್ಲಾ ಜಿಲ್ಲೆಗಳು ಮಯನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿವೆ.

ಮಣಿಪುರ ಹೊರತಾಗಿ, ನಾಗಾಲ್ಯಾಂಡ್, ಮಿಜೋರಾಂ ಮತ್ತು ಅರುಣಾಚಲ ಪ್ರದೇಶಗಳೂ ಕೂಡ ಮಯನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿವೆ. ನೆರೆಯ ದೇಶದ 500 ಕ್ಕೂ ಹೆಚ್ಚು ಪ್ರಜೆಗಳು ಈಗಾಗಲೇ ಮಿಜೋರಾಂಗೆ ಕಾಲಿಟ್ಟಿದ್ದಾರೆ.

ಇದನ್ನೂ ಓದಿ: ಜೂದಾಸ್ ಏಸು ಕ್ರಿಸ್ತನಿಗೆ ಮಾಡಿದಂತೆ ಕೇರಳದ ಎಡ ಸರ್ಕಾರ ರಾಜ್ಯಕ್ಕೆ ಮೋಸ ಮಾಡಿದೆ: ಮೋದಿ

ಇತ್ತೀಚೆಗೆ ಮಿಜೋರಾಂ ಸರ್ಕಾರವು, “ಮಯನ್ಮಾರ್ ನಿರಾಶ್ರಿತರ ಬಿಕ್ಕಟ್ಟನ್ನು ಮಾನವೀಯ ಆಧಾರದ ಮೇಲೆ ಪರಿಗಣಿಸಲು ಮತ್ತು ವಲಸೆ ಬರುವ ಜನರಿಗೆ ಭಾರತಕ್ಕೆ ಪ್ರವೇಶಿಸಲು ಅವಕಾಶ ನೀಡುವಂತೆ ಕೋರಿ” ಕೇಂದ್ರಕ್ಕೆ ಪತ್ರ ಬರೆದಿತ್ತು. ಆದರೆ ಮಯನ್ಮಾರ್‌ನಿಂದ ಒಳಹರಿವು ತಡೆಯಲು ಕೇಂದ್ರ ಸರ್ಕಾರ ಅಸ್ಸಾಂ ರೈಫಲ್ಸ್‌ಗೆ ನಿರ್ದೇಶನ ನೀಡಿತ್ತು.

ಭಾರತವು ಮಯನ್ಮಾರ್‌ನೊಂದಿಗೆ 1,643 ಕಿ.ಮೀ ಭೂ ಗಡಿಯನ್ನು ಹಂಚಿಕೊಂಡಿದೆ. ಮಯನ್ಮಾರ್‌ನ ಚಿನ್ ಸಮುದಾಯ ಮತ್ತು ಭಾರತದ ಮಿಜೋಸ್ ಸಮುದಾಯ ಒಂದೇ ಜನಾಂಗಕ್ಕೆ ಸೇರಿದವರಾಗಿದ್ದಾರೆ. ಚಿನ್ ಜನರು ಮಯನ್ಮಾರ್‌ನ ಚಿನ್ ರಾಜ್ಯದಲ್ಲಿ ನೆಲೆಸಿದ್ದಾರೆ. ಇದು ಮಿಜೋರಾಂನೊಂದಿಗೆ 404 ಕಿ.ಮೀ ಗಡಿಯನ್ನು ಹಂಚಿಕೊಂಡಿದೆ.

ಮಯನ್ಮಾರ್‌‌ನಲ್ಲಿ ಆಡಳಿತವನ್ನು ಸೇನೆಯು ಕ್ಷಿಪ್ರಕ್ರಾಂತಿ ಮೂಲಕ ವಶಕ್ಕೆ ಪಡೆದುಕೊಂಡಿದ್ದು, ಇದನ್ನು ವಿರೋಧಿಸಿ ಸಾವಿರಾರು ಪ್ರತಿಭಟನಾಕಾರರು ಮಯನ್ಮಾರ್‌‌ನಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಫೆ.1ರಿಂದಲೂ ಇಲ್ಲಿನ ಸೇನಾದಂಗೆ ವಿರುದ್ಧ ಜನರು ತೀವ್ರವಾಗಿ ಪ್ರತಿಭಟಿಸುತ್ತಿದ್ದಾರೆ. ಇದನ್ನು ಹತ್ತಿಕ್ಕಲು ಸೇನಾಡಳಿತವು ಯತ್ನಿಸುತ್ತಿದೆ. ಈ ಗಲಭೆಯಲ್ಲಿ ಈವರೆಗೆ ಸುಮಾರು 380ಕ್ಕೂ ಹೆಚ್ಚು ಪ್ರತಿಭಟನಾಕಾರರು ಹತರಾಗಿದ್ದಾರೆ.


ಇದನ್ನೂ ಓದಿ: ‘ರಾಹುಲ್ ಗಾಂಧಿ ಅವಿವಾಹಿತ, ಎಚ್ಚರಿಕೆಯಿಂದಿರಿ’: ಮಾಜಿ ಸಂಸದನ ಹೇಳಿಕೆಗೆ ಭಾರಿ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...