Homeಅಂತರಾಷ್ಟ್ರೀಯ'ಮಯನ್ಮಾರ್ ವಲಸಿಗರಿಗೆ ಆಹಾರ ಮತ್ತು ಆಶ್ರಯ ಕೊಡಬೇಡಿ': ಆದೇಶ ಹಿಂಪಡೆದ ಮಣಿಪುರ ಸರ್ಕಾರ

‘ಮಯನ್ಮಾರ್ ವಲಸಿಗರಿಗೆ ಆಹಾರ ಮತ್ತು ಆಶ್ರಯ ಕೊಡಬೇಡಿ’: ಆದೇಶ ಹಿಂಪಡೆದ ಮಣಿಪುರ ಸರ್ಕಾರ

- Advertisement -
- Advertisement -

ಮಯನ್ಮಾರ್ ವಲಸಿಗ ನಿರಾಶ್ರಿತರಿಗೆ ಆಹಾರ ಮತ್ತು ಆಶ್ರಯ ನೀಡಬಾರದು ಎಂದು ಮಣಿಪುರ ಸರ್ಕಾರ ನೀಡಿದ್ದ ಆದೇಶವನ್ನು ಈಗ ಹಿಂತೆಗೆದುಕೊಂಡಿದೆ ಎಂದು ವರದಿಯಾಗಿದೆ.

“ರಾಜ್ಯ ಸರ್ಕಾರವು ಮಾನವೀಯ ನೆಲೆಗಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಗಾಯಗೊಂಡ ಮಯನ್ಮಾರ್ ಪ್ರಜೆಗಳಿಗೆ ಚಿಕಿತ್ಸೆ ನೀಡಲು ಇಂಫಾಲ್‌ಗೆ ಕರೆದೊಯ್ಯುವುದು ಸೇರಿದಂತೆ ಎಲ್ಲಾ ಕ್ರಮಗಳನ್ನು ಇತ್ತೀಚೆಗೆ ತೆಗೆದುಕೊಳ್ಳಲಾಗಿದೆ. ರಾಜ್ಯ ಸರ್ಕಾರ ಎಲ್ಲಾ ನೆರವು ನೀಡುತ್ತಲೇ ಇದೆ” ಎಂದು ಮಣಿಪುರದ ವಿಶೇಷ ಗೃಹ ಕಾರ್ಯದರ್ಶಿ ಜ್ಞಾನ ಪ್ರಕಾಶ್ ಹೇಳಿದ್ದಾರೆ.

ಎಲ್ಲಾ ಜಿಲ್ಲಾ ಆಯುಕ್ತರಿಗೆ ಮಾರ್ಚ್ 26 ರಂದು ನೀಡಿದ ಪತ್ರವನ್ನು ತಪ್ಪಾಗಿ ಪರಿಗಣಿಸಲಾಗಿದೆ. ಆದ್ದರಿಂದ ತಪ್ಪು ತಿಳುವಳಿಕೆಯನ್ನು ಸರಿಪಡಿಸಲು ಅದನ್ನು ಹಿಂಪಡೆಯಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಆದರೆ ಈ ಮೊದಲು, ವಲಸೆಯನ್ನು ತಡೆಯಬೇಕು ಎಂದು ಹೇಳಿರುವ ಮಣಿಪುರದ ವಿಶೇಷ ಗೃಹ ಕಾರ್ಯದರ್ಶಿ ಹೆಚ್. ಜ್ಞಾನ ಪ್ರಕಾಶ್, ಈ ರೀತಿಯ ನಿರ್ದೇಶನಗಳನ್ನು ಗೌಪ್ಯ ಜ್ಞಾಪನ ಪತ್ರದ ಮೂಲಕ ನೀಡಿದ್ದಾರೆ. “ಮಯನ್ಮಾರ್‌ನಲ್ಲಿ ನಡೆಯುತ್ತಿರುವ ಘಟನೆಗಳ ಪರಿಣಾಮವಾಗಿ, ಆ ದೇಶದ ಪ್ರಜೆಗಳು ಮಣಿಪುರ ಸೇರಿದಂತೆ ಇತರೆ ಗಡಿ ರಾಜ್ಯಗಳ ಮೂಲಕ ಭಾರತವನ್ನು ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ. ಅದನ್ನು ತಡೆಯುವ ನಿಟ್ಟಿನಲ್ಲಿ, ಈ ಕೆಳಗಿನ ಕ್ರಮಗಳನ್ನು ಅಗತ್ಯವಾಗಿ ತೆಗೆದುಕೊಳ್ಳಲು ನನಗೆ ನಿರ್ದೇಶಿಸಲಾಗಿದೆ” ಎಂದು ಜ್ಞಾಪನ ಪತ್ರದಲ್ಲಿ ತಿಳಿಸಲಾಗಿತ್ತು.

ಇದನ್ನೂ ಓದಿ: ಪ್ರಧಾನಿಯ ದಕ್ಷಿಣ ಭಾರತ ಭೇಟಿ: ‘ಗೋ ಬ್ಯಾಕ್ ಫ್ಯಾಸಿಸ್ಟ್‌ ಮೋದಿ’ ಟ್ವಿಟರ್‌ ಟ್ರೆಂಡ್!

ಮಣಿಪುರಕ್ಕೆ ಪ್ರವೇಶಿಸಲು/ಆಶ್ರಯಿಸಲು ಪ್ರಯತ್ನಿಸುವ ಜನರನ್ನು ದೂರವಿಡಬೇಕೆಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಅವರಿಗೆ ಯಾವುದೇ ಟೆಂಟ್ ಹಾಕಬಾರದು, ಊಟದ ವ್ಯವಸ್ಥೆ ಮಾಡಬಾರದು. ಸರ್ಕಾರ ಮಾತ್ರವಲ್ಲದೇ ಯಾವುದೇ ಸಂಘಸಂಸ್ಥೆಗಳು ಸಹ ಅವರಿಗೆ ಸಹಾಯ ಮಾಡಬಾರದು. ತಾತ್ಕಾಲಿಕವಾಗಿ ಆಧಾರ್ ನೋಂದಣಿಯನ್ನು ನಿಲ್ಲಿಸಬೇಕು. ಆದರೆ ವಲಸಿಗರಿಗೆ ಗಂಭೀರವಾದ ಗಾಯಗಳಿದ್ದಲ್ಲಿ, ಮಾನವೀಯ ನೆಲೆಯಲ್ಲಿ ಮಾತ್ರ ವೈದ್ಯಕೀಯ ಚಿಕಿತ್ಸೆ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಚಾಂಡೆಲ್, ತೆಂಗ್ನೌಪಾಲ್, ಕಮ್ಜಾಂಗ್, ಉಖ್ರುಲ್ ಮತ್ತು ಚುರಾಚಂದಪುರದ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದು, ಈ ಎಲ್ಲಾ ಜಿಲ್ಲೆಗಳು ಮಯನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿವೆ.

ಮಣಿಪುರ ಹೊರತಾಗಿ, ನಾಗಾಲ್ಯಾಂಡ್, ಮಿಜೋರಾಂ ಮತ್ತು ಅರುಣಾಚಲ ಪ್ರದೇಶಗಳೂ ಕೂಡ ಮಯನ್ಮಾರ್‌ನೊಂದಿಗೆ ಗಡಿಯನ್ನು ಹಂಚಿಕೊಂಡಿವೆ. ನೆರೆಯ ದೇಶದ 500 ಕ್ಕೂ ಹೆಚ್ಚು ಪ್ರಜೆಗಳು ಈಗಾಗಲೇ ಮಿಜೋರಾಂಗೆ ಕಾಲಿಟ್ಟಿದ್ದಾರೆ.

ಇದನ್ನೂ ಓದಿ: ಜೂದಾಸ್ ಏಸು ಕ್ರಿಸ್ತನಿಗೆ ಮಾಡಿದಂತೆ ಕೇರಳದ ಎಡ ಸರ್ಕಾರ ರಾಜ್ಯಕ್ಕೆ ಮೋಸ ಮಾಡಿದೆ: ಮೋದಿ

ಇತ್ತೀಚೆಗೆ ಮಿಜೋರಾಂ ಸರ್ಕಾರವು, “ಮಯನ್ಮಾರ್ ನಿರಾಶ್ರಿತರ ಬಿಕ್ಕಟ್ಟನ್ನು ಮಾನವೀಯ ಆಧಾರದ ಮೇಲೆ ಪರಿಗಣಿಸಲು ಮತ್ತು ವಲಸೆ ಬರುವ ಜನರಿಗೆ ಭಾರತಕ್ಕೆ ಪ್ರವೇಶಿಸಲು ಅವಕಾಶ ನೀಡುವಂತೆ ಕೋರಿ” ಕೇಂದ್ರಕ್ಕೆ ಪತ್ರ ಬರೆದಿತ್ತು. ಆದರೆ ಮಯನ್ಮಾರ್‌ನಿಂದ ಒಳಹರಿವು ತಡೆಯಲು ಕೇಂದ್ರ ಸರ್ಕಾರ ಅಸ್ಸಾಂ ರೈಫಲ್ಸ್‌ಗೆ ನಿರ್ದೇಶನ ನೀಡಿತ್ತು.

ಭಾರತವು ಮಯನ್ಮಾರ್‌ನೊಂದಿಗೆ 1,643 ಕಿ.ಮೀ ಭೂ ಗಡಿಯನ್ನು ಹಂಚಿಕೊಂಡಿದೆ. ಮಯನ್ಮಾರ್‌ನ ಚಿನ್ ಸಮುದಾಯ ಮತ್ತು ಭಾರತದ ಮಿಜೋಸ್ ಸಮುದಾಯ ಒಂದೇ ಜನಾಂಗಕ್ಕೆ ಸೇರಿದವರಾಗಿದ್ದಾರೆ. ಚಿನ್ ಜನರು ಮಯನ್ಮಾರ್‌ನ ಚಿನ್ ರಾಜ್ಯದಲ್ಲಿ ನೆಲೆಸಿದ್ದಾರೆ. ಇದು ಮಿಜೋರಾಂನೊಂದಿಗೆ 404 ಕಿ.ಮೀ ಗಡಿಯನ್ನು ಹಂಚಿಕೊಂಡಿದೆ.

ಮಯನ್ಮಾರ್‌‌ನಲ್ಲಿ ಆಡಳಿತವನ್ನು ಸೇನೆಯು ಕ್ಷಿಪ್ರಕ್ರಾಂತಿ ಮೂಲಕ ವಶಕ್ಕೆ ಪಡೆದುಕೊಂಡಿದ್ದು, ಇದನ್ನು ವಿರೋಧಿಸಿ ಸಾವಿರಾರು ಪ್ರತಿಭಟನಾಕಾರರು ಮಯನ್ಮಾರ್‌‌ನಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಫೆ.1ರಿಂದಲೂ ಇಲ್ಲಿನ ಸೇನಾದಂಗೆ ವಿರುದ್ಧ ಜನರು ತೀವ್ರವಾಗಿ ಪ್ರತಿಭಟಿಸುತ್ತಿದ್ದಾರೆ. ಇದನ್ನು ಹತ್ತಿಕ್ಕಲು ಸೇನಾಡಳಿತವು ಯತ್ನಿಸುತ್ತಿದೆ. ಈ ಗಲಭೆಯಲ್ಲಿ ಈವರೆಗೆ ಸುಮಾರು 380ಕ್ಕೂ ಹೆಚ್ಚು ಪ್ರತಿಭಟನಾಕಾರರು ಹತರಾಗಿದ್ದಾರೆ.


ಇದನ್ನೂ ಓದಿ: ‘ರಾಹುಲ್ ಗಾಂಧಿ ಅವಿವಾಹಿತ, ಎಚ್ಚರಿಕೆಯಿಂದಿರಿ’: ಮಾಜಿ ಸಂಸದನ ಹೇಳಿಕೆಗೆ ಭಾರಿ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....