Homeಮುಖಪುಟಬಿಜೆಪಿಯೊಳಗಿನ ಮಹಿಳೆಯ ಹತ್ಯೆಗೆ ಅವರೇ ಸಂಚು ಹೂಡಿದ್ದಾರೆ: ಮಮತಾ ಬ್ಯಾನರ್ಜಿ ಆರೋಪ

ಬಿಜೆಪಿಯೊಳಗಿನ ಮಹಿಳೆಯ ಹತ್ಯೆಗೆ ಅವರೇ ಸಂಚು ಹೂಡಿದ್ದಾರೆ: ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲ ಎಂದು ಅಮಿತ್ ಶಾ ಆರೋಪಿಸಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣಾ ಪ್ರಚಾರಕ್ಕೆ ಮಂಗಳವಾರ ಕೊನೆಯ ದಿನವಾಗಿತ್ತು. ಈ ಹಿನ್ನೆಲೆ ಬಂಗಾಳದ ಚುನಾವಣಾ ಕೇಂದ್ರ ಬಿಂದುವಾಗಿರುವ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಮತ್ತು ಅಮಿತ್ ಶಾ ಪ್ರಚಾರ ನಡೆಸಿದ್ದಾರೆ. ಮಹಿಳಾ ಸುರಕ್ಷತೆಯನ್ನು ಆಧಾರವಾಗಿಟ್ಟುಕೊಂಡು ಎರಡು ಪಕ್ಷಗಳು ಪರಸ್ಪರ ಕೆಸರೆರಚಾಟ ನಡೆಸಿವೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆಯಿಲ್ಲ ಎಂದು ಅಮಿತ್ ಶಾ ಆರೋಪಿಸಿದರೆ, ಬಿಜೆಪಿ ಪಕ್ಷದಲ್ಲೇ ಅಲ್ಲಿನ ಓರ್ವ ಮಹಿಳೆಯ ಹತ್ಯೆ ನಡೆಸಲು ಸಂಚು ರೂಪಿಸಲಾಗಿದೆ ಎಂದು ಮಮತಾ ಬ್ಯಾನರ್ಜಿ ಗಂಭೀರ ಆರೋಪ ಮಾಡಿದ್ದಾರೆ.

ಬಂಗಾಳದಲ್ಲಿ ಟಿಎಂಸಿ ಬೆಂಬಲಿಗರಿಂದ ಹಲ್ಲೆಗೊಳಗಾಗಿದ್ದಾರೆ ಎಂದು ಆರೋಪಿಸಲಾಗಿದ್ದ ಬಿಜೆಪಿ ಕಾರ್ಯಕರ್ತೆಯೊಬ್ಬರ 85 ವರ್ಷದ ತಾಯಿಯ ಸಾವನ್ನು ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಪದೇ ಪದೇ ಪ್ರಸ್ತಾಪಿಸುತ್ತಿದೆ. ನಂದಿಗ್ರಾಮ್‌ನಲ್ಲಿ ರೋಡ್ ಶೋ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೊಮ್ಮೆ ಘಟನೆಯನ್ನು ಉಲ್ಲೇಖಿಸಿ ಟಿಎಂಸಿಯನ್ನು ಸೋಲಿಸಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಇನ್ನು 15 ದಿನ ರಾಜ್ಯದಲ್ಲಿ ಯಾವುದೇ ಪ್ರತಿಭಟನೆ, ರ್‍ಯಾಲಿ ನಡೆಸುವಂತಿಲ್ಲ- ಸಿಎಂ ಯಡಿಯೂರಪ್ಪ

ನಂದಿಗ್ರಾಮದಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ಅವರು (ಬಿಜೆಪಿ) ತಮ್ಮದೆ ಜನರನ್ನು ಕೊಲ್ಲುವ ಯೋಜನೆಯನ್ನು ಹೊಂದಿದ್ದಾರೆ. ಬಿಹಾರ ಮತ್ತು ಉತ್ತರ ಪ್ರದೇಶಗಳಿಂದ ಗೂಂಡಾಗಳನ್ನು ಕರೆಸಿದ್ದಾರೆ. ನಂತರ ಅದನ್ನು ನಮ್ಮ ಕಾರ್ಯಕರ್ತರ ಮೇಲೆ ಹಾಕುವ ಯೋಜನೆ ಹೊಂದಿದ್ದಾರೆ. ಈ ಬಗ್ಗೆ ನಮ್ಮಲ್ಲಿ ಮಾಹಿತಿ ಇದೆ. ಜಾಗರೂಕರಾಗಿರಿ” ಎಂದು ಆರೋಪಿಸಿದ್ದಾರೆ.

ಇತ್ತ, ಮತ್ತೊಂದು ರ್‍ಯಾಲಿಯಲ್ಲಿ ಮಾತನಾಡಿರುವ ಅಮಿತ್ ಶಾ, ‘ನಾನಿಲ್ಲಿಗೆ ತಲುಪಿದ ಕೂಡಲೇ ಒಂದು ದುಃಖದ ಸುದ್ದಿ ಕೇಳಿದೆ. ಮಮತಾ ಬ್ಯಾನರ್ಜಿ ಅವರು ಇರುವ ಸ್ಥಳದ 5 ಕಿ.ಮೀ ವ್ಯಾಪ್ತಿಯೊಳಗೆ ಮಹಿಳೆಯೊಬ್ಬರು ಅತ್ಯಾಚಾರಕ್ಕೆ ಒಳಗಾಗಿದ್ದಾರೆ. ಮುಖ್ಯಮಂತ್ರಿ ಇರುವ ಪ್ರದೇಶದಲ್ಲಿಯೇ ಅತ್ಯಾಚಾರ ನಡೆದಿದೆ ಎಂದಾದರೆ ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತವಾಗಿರಲು ಹೇಗೆ ಸಾಧ್ಯ’ ಎಂದು ಅಮಿತ್ ಶಾ ಪ್ರಶ್ನಿಸಿದ್ದಾರೆ.

ಮಹಿಳೆಯರು ಸುರಕ್ಷತೆಯಿಂದ ಇರಬೇಕೆಂದರೆ, ಬಂಗಾಳದಲ್ಲಿ ಬದಲಾವಣೆ ತರಬೇಕೆಂದರೆ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲುವುದನ್ನು ಮುಖ್ಯ ಎಂದು ಅಮಿತ್ ಶಾ ಹೇಳಿದ್ದಾರೆ. ಒಟ್ಟಾರೆ ಏಪ್ರಿಲ್ 2 ರಂದು ನಡೆಯಲಿರುವ ನಂದಿಗ್ರಾಮ ಚುನಾವಣೆ ಮೇಲೆ ಎಲ್ಲ ಕಣ್ಣು ನೆಟ್ಟಿದೆ.

ಆದರೆ ಮಧ್ಯಪ್ರದೇಶದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನೊಬ್ಬ ಅತ್ಯಾಚಾರದ ಆರೋಪದಲ್ಲಿ ಬಂಧಿತನಾಗಿದ್ದಾನೆ. ಇಲ್ಲಿ ಬಿಜೆಪಿ ಬೇರೆಯವರಿಗೆ ಪಾಠ ಹೇಳುತ್ತಿದೆ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

ಟಿಎಂಸಿ ಸಂಸದ ಡೆರೆಕ್ ಓ’ಬ್ರಿಯಾನ್ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಿಡಿಕಾರಿದ್ದಾರೆ. “ಅವರು ಮೊದಲ ಬಾರಿಗೆ ನಂದಿಗ್ರಾಮಕ್ಕೆ ಭೇಟಿ ನೀಡಿದರು, ರೋಡ್ ಶೋ ನಡೆಸಿದರು, ಮಾಧ್ಯಮಗಳೊಂದಿಗೆ ಮಾತನಾಡಿದರು. ಅವರು ಮತ್ತೆಂದು ನಂದಿಗ್ರಾಮದಲ್ಲಿ ತಮ್ಮ ಮುಖ ತೋರಿಸಲಾರರು” ಎಂದು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಕೇರಳ: ಆಸ್ಪತ್ರೆಗೆ ತೆರಳುತ್ತಿದ್ದ ಗರ್ಭಿಣಿಯ ಕಾರನ್ನು ತಡೆದು ಪತಿಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...