Homeಮುಖಪುಟ'ಬಿರಿಯಾನಿ' ಚಿತ್ರ ಬಿಡುಗಡೆಗೆ ಥಿಯೇಟರ್ ಮಾಲೀಕರ ಹಿಂದೇಟು: ಮಲಯಾಳಂ ನಿರ್ದೇಶಕನ ಆಕ್ರೋಶ

‘ಬಿರಿಯಾನಿ’ ಚಿತ್ರ ಬಿಡುಗಡೆಗೆ ಥಿಯೇಟರ್ ಮಾಲೀಕರ ಹಿಂದೇಟು: ಮಲಯಾಳಂ ನಿರ್ದೇಶಕನ ಆಕ್ರೋಶ

- Advertisement -
- Advertisement -

ಥಿಯೇಟರ್ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಮಲಯಾಳಂ ಚಿತ್ರನಿರ್ದೇಶಕ ಸಾಜಿನ್ ಬಾಬು, ‘ಅವರು ಸೂಪರ್ ಸೆನ್ಸಾರ್ ಬೋರ್ಡ್‌ಗಳಂತೆ ವರ್ತಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ. ತಮ್ಮ ಬಿರಿಯಾನಿ ಚಿತ್ರದ ಬಿಡುಗಡೆಗೆ ಒಪ್ಪದ ಥಿಯೇಟರ್ ಮಾಲೀಕರು ನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

“ಚಿತ್ರದಲ್ಲಿ ಲೈಂಗಿಕ ದೃಶ್ಯಗಳಿವೆ ಎಂದು ಸ್ವತಃ ಇವರೇ ಜನರನ್ನು ದಾರಿತಪ್ಪಿಸುತ್ತಿದ್ದಾರೆ. ನಂತರ, ಜನರು ಥಿಯೇಟರ್‌ಗೆ ಬರುವುದಿಲ್ಲ ಹಾಗಾಗಿ ಈ ಚಿತ್ರವನ್ನು ತಮ್ಮ ಥಿಯೇಟರ್‌ನಲ್ಲಿ ಬಿಡುಗಡೆ ಮಾಡುವುದಿಲ್ಲ ಎಂದು ಮಾಲೀಕರು ಹೇಳುತ್ತಿದ್ದಾರೆ” ಎಂದು ಸಾಜಿನ್ ಬಾಬು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಿರುವನಂತಪುರಂನ ಕೇಸರಿ ಸ್ಮಾರಕ ಭವನದಲ್ಲಿ ಆಯೋಜಿಸಿದ್ದ ‘ಮೀಟ್ ದಿ ಡೈರೆಕ್ಟರ್’ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “67 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಅಂತರರಾಷ್ಟ್ರೀಯ ಮೆಚ್ಚುಗೆ ಮತ್ತು ವಿಶೇಷ ತೀರ್ಪುಗಾರರ ಮೆಚ್ಚುಗೆ ಪಡೆದಿದ್ದ ಬಿರಿಯಾನಿ ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ‘ವಯಸ್ಕರಿಗೆ ಮಾತ್ರ’ (A) ಪ್ರಮಾಣಪತ್ರ ನೀಡಿತ್ತು. ಈ ಚಿತ್ರವು ಶುಕ್ರವಾರ ರಾಜ್ಯದಾದ್ಯಂತ ಹಲವಾರು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

“ಈ ಚಿತ್ರವು ಮೊದಲು ಕೋಳಿಕೋಡ್‌ನ ಚಿತ್ರಮಂದಿರಗಳಿಂದ ವಿರೋಧವನ್ನು ಎದುರಿಸಿತು. ಶೀಘ್ರದಲ್ಲೇ, ಇನ್ನೂ ಕೆಲವರು ಇದನ್ನೇ ಅನುಸರಿಸಿದರು. ಚಿತ್ರದಲ್ಲಿ ಸ್ಪಷ್ಟವಾದ ಲೈಂಗಿಕ ದೃಶ್ಯಗಳಿವೆ ಎಂದು ಥಿಯೇಟರ್ ಮಾಲೀಕರು ರಹಸ್ಯವಾಗಿ ಜನರಿಗೆ ಹೇಳುತ್ತಿದ್ದಾರೆ. ಅವರು ನೈತಿಕ ಪೊಲೀಸ್‌ಗಿರಿ ಮಾಡುತ್ತಿರುವುದನ್ನು ನೋಡಿ ನಿರಾಶೆಯಾಗಿದೆ. ಇದು ಸಮಸ್ಯೆಗೆ ಸಿಲುಕಿರುವ ನಮ್ಮ ಸಾಂಸ್ಕೃತಿಕ ಸನ್ನಿವೇಶವನ್ನು ಸೂಚಿಸುತ್ತದೆ” ಎಂದು ಅವರು ಹೇಳಿದರು.

ಇಟಲಿಯ ಏಷ್ಯಾಟಿಕ್ ವಿಶ್ವ ಚಲನಚಿತ್ರೋತ್ಸವದಲ್ಲಿ ಪ್ರಥಮ ಪ್ರದರ್ಶನವನ್ನು ನೀಡಿದ್ದ ಬಿರಿಯಾನಿ ಚಿತ್ರದ ಅತ್ಯುತ್ತಮ ಮಹಿಳಾ ನಟನೆಗಾಗಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ ಕನಿ ಕುಶ್ರುತಿಗೆ ರಾಜ್ಯ ಚಲನಚಿತ್ರ ಪ್ರಶಸ್ತಿ ದೊರೆತಿದೆ. ಈ ಚಿತ್ರ ಮುಂದಿನ ವಾರ ಹೊರ ರಾಜ್ಯಗಳಲ್ಲಿ ಬಿಡುಗಡೆಯಾಗಲಿದೆ.

ಶೀಘ್ರದಲ್ಲೇ ಆನ್‌ಲೈನ್ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆ ಮಾಡಲು ಯೋಜಿಸಿರುವ ಸಾಜಿನ್, ಇದನ್ನು ಆನ್‌ಲೈನ್‌ನಲ್ಲಿ ನೋಡುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.

2020 ರ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಬಿರಿಯಾನಿ ಚಿತ್ರವು ಪ್ರದರ್ಶನಗೊಂಡು ತೀರ್ಪುಗಾರರ ಮೆಚ್ಚುಗೆ ಪಡೆದ ಚಿತ್ರ ಎಂಬ ಹೆಗ್ಗಳಿಕೆ ಗಳಿಸಿತ್ತು. ಕೇರಳದಲ್ಲಿನ ಬಡ ಮುಸ್ಲಿಂ ಕುಟುಂಬದ ಮಹಿಳೆಯೊಬ್ಬಳು ಅನುಭವಿಸುವ ನರಕಯಾತನೆ, ಮಾಧ್ಯಮಗಳು ಮತ್ತು ಸಮಾಜ ನೋಡುವ ರೀತಿ, ಭಯೋತ್ಪಾದನೆಯ ಆಪಾದನೆ ಇತ್ಯಾದಿ ವಿಷಯಗಳನ್ನು ನಿರ್ದೇಶಕ ಸಾಜಿನ್ ಈ ಚಿತ್ರದಲ್ಲಿ ವಿವರಿಸಿದ್ದಾರೆ.


ಇದನ್ನೂ ಓದಿ: ಹಾಲಿವುಡ್ ನಿರ್ದೇಶಕರು ಹೊಗಳಿದ 87 ಸೆಕೆಂಡಿನ ಈ ವಿಡಿಯೊ ಹೇಗಿದೆ; ನೀವೇ ನೋಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...