Homeಕರ್ನಾಟಕಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಹಾಕಲು 10 ಕೋಟಿ ಹಣ ಆರೋಪ: ಜಮೀರ್ ಅಹ್ಮದ್‌ಗೆ ಪ್ರಶ್ನೆಗಳ ಸುರಿಮಳೆಗೈದ...

ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಹಾಕಲು 10 ಕೋಟಿ ಹಣ ಆರೋಪ: ಜಮೀರ್ ಅಹ್ಮದ್‌ಗೆ ಪ್ರಶ್ನೆಗಳ ಸುರಿಮಳೆಗೈದ ಕುಮಾರಸ್ವಾಮಿ

- Advertisement -
- Advertisement -

ಬಸವಕಲ್ಯಾಣ ಉಪಚುನಾವಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಬಿಸಿ ಬಿಸಿ ಚರ್ಚೆಗಳು ತಾರಕಕ್ಕೇರಿವೆ. ಅಲ್ಲಿ ಜೆಡಿಎಸ್ ವತಿಯಿಂದ ಮುಸ್ಲಿಂ ಅಭ್ಯರ್ಥಿ ಹಾಕಲು ಎಚ್.ಡಿ ಕುಮಾರಸ್ವಾಮಿಯವರು ಬಿಜೆಪಿಯಿಂದ 10 ಕೋಟಿ ಹಣ ಪಡೆದಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆರೋಪಕ್ಕೆ ಸಿಡಿಮಿಡಿಗೊಂಡಿರುವ ಕುಮಾರಸ್ವಾಮಿಯವರು ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಹಾಕಲು ನಾನು ಬಿಜೆಪಿಯಿಂದ ಹಣ ಪಡೆದಿರುವುದಾಗಿ ಮಿತ್ರರೊಬ್ಬರು ಹೇಳಿದ್ದಾರೆ. ಆಗಲಿ, 2005ರಲ್ಲಿ SM ಕೃಷ್ಣ ಅವರಿಂದ ತೆರವಾಗಿದ್ದ ಚಾಮರಾಜಪೇಟೆ ಉಪಚುನಾವಣೆಗೆ ಜೆಡಿಎಸ್‌ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಅವರ ಖರ್ಚು ವೆಚ್ಚಗಳಿಗೆ ಜೆಡಿಎಸ್‌ ಬಿಜೆಪಿಯಿಂದ ದುಡ್ಡು ತಂದಿತ್ತೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “2005ರ ಚಾಮರಾಜಪೇಟೆ ಉಪಚುನಾವಣೆಯ ಆ ‘ಮುಸ್ಲಿಂ ಅಭ್ಯರ್ಥಿ’ಗಾಗಿ ಮಾಜಿ ಪ್ರಧಾನಿ ದೇವೇಗೌಡರು ಗಲ್ಲಿಗಲ್ಲಿಗಳಲ್ಲಿ ಸುತ್ತಿದ್ದರು. ಬೆವರು ಹರಿಸಿದ್ದರು. ದೇವೇಗೌಡರಂಥವರು ಅಂದು ಅಷ್ಟು ಕಷ್ಟಪಟ್ಟು ಉಪಚುನಾವಣೆ ನಡೆಸಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? ಇದಕ್ಕೆ ಸನ್ಮಿತ್ರರು ಆತ್ಮಸಾಕ್ಷಿಯಿಂದ, ಮನದಾಳದಿಂದ, ಪ್ರಾಮಾಣಿಕ ಉತ್ತರ ಕೊಡಬಹುದೇ? ಎಂದು ಟಾಂಗ್ ನೀಡಿದ್ದಾರೆ.

ಚಾಮರಾಜಪೇಟೆ ಉಪಚುನಾವಣೆಯ ಮತದಾನಕ್ಕೆ ಇನ್ನು 2 ದಿನಗಳು ಬಾಕಿ ಉಳಿದಿವೆ ಎನ್ನುವಾಗ ನಮ್ಮ ‘ಮುಸ್ಲಿಂ ಅಭ್ಯರ್ಥಿ’ ಏಕಾಏಕಿ ಕಾಣೆಯಾಗಿದ್ದರು. ಕಾರಣ ಹುಡುಕಿದಾಗ ಹಣದ ಕೊರತೆ ಎಂಬ ಅಂಶ ಗೊತ್ತಾಯಿತು. ಅಂದು ಶಿವಮೊಗ್ಗ ಪ್ರವಾಸದಲ್ಲಿದ್ದ ನಾನು ಓಡೋಡಿ ಬಂದು ಸಾಲ ಮಾಡಿ ಹಣ ಹೊಂದಿಸಿಕೊಟ್ಟಿದ್ದೆ. ಅಂದು ನಾನು ತಂದ ಸಾಲ ಬಿಜೆಪಿಯ ಹಣವಾಗಿತ್ತೇ? ಎಂದು ಮತ್ತೊಂದು ಪ್ರಶ್ನೆ ಎಸೆದಿದ್ದಾರೆ.

ಅಂದು ಚಾಮರಾಜಪೇಟೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಜೆಡಿಎಸ್‌ ‘ಮುಸ್ಲಿಂ ಅಭ್ಯರ್ಥಿ’ಯನ್ನು ಗುರುತಿಸಿತ್ತೇ? ಅಂದು ಬಿಜೆಪಿಯನ್ನು ಗೆಲ್ಲಿಸಲೆಂದು ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದಿದ್ದರೆ ಇಂದು ನನ್ನ ವಿರುದ್ಧ ಆರೋಪ ಮಾಡಲು ಆ ನಾಯಕರೇ ಇರುತ್ತಿರಲಿಲ್ಲ. ಜೆಡಿಎಸ್‌ ಪಕ್ಷದ ತ್ಯಾಗಕ್ಕಾಗಿ ಕಿಂಚಿತ್ತು ಕೃತಜ್ಞತೆ ಉಳಿಯದಿದ್ದರೆ ಹೇಗೆ? ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸನ್ಮಿತ್ರರು ನಮ್ಮಲ್ಲಿದ್ದಾಗ ಅವರನ್ನು ಬೆಂಗಳೂರು ಕೇಂದ್ರ ಲೋಕಸಭೆಗೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಅವರ ಸೋದರನನ್ನು ಚಿಕ್ಕಪೇಟೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಇದೆಲ್ಲ ಮಾಡಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? ಜೆಡಿಎಸ್‌ ಪಕ್ಷ ಮತ್ತು ಇದರ ಕಾರ್ಯಕರ್ತರು ಎಲ್ಲರನ್ನೂ ಬೆಳೆಸಿದೆ. ಹೊರಗೆ ಹೋದವರನ್ನು ಹರಸಿದೆ. ಕೃತಜ್ಞತೆ ಇರಲಿ ಎಂದು ತಿಳಿಸಿದ್ದಾರೆ.

2008ರ ಆಪರೇಷನ್‌ ಕಮಲದ ನಂತರ ನಡೆದ 20ಕ್ಕೂ ಹೆಚ್ಚು ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಒಂದು ಸ್ಥಾನ ಗೆಲ್ಲದೇ ಮುಖಭಂಗ ಅನುಭವಿಸಿತ್ತು. ಅದರ ಹಿಂದೆ ಯಾವ ನಾಯಕರು ಇದ್ದರು? ಎಷ್ಟು ಹಣ ಪಡೆದಿದ್ದರು? ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂಬುದನ್ನು ಸನ್ಮಿತ್ರರು ತಿಳಿಯಲಿ. ಹೇಗೂ ಅವರ ಅಕ್ಕಪಕ್ಕದಲ್ಲೆ ಇದ್ದೀರಲ್ಲ… ಕೇಳಿ ನೋಡಿ ಎಂದು ವ್ಯಂಗ್ಯವಾಡಿದ್ದಾರೆ.

ಬಸವಕಲ್ಯಾಣದಲ್ಲಿ ಬಿಜೆಪಿಯಿಂದ ಶರಣು ಸಲಗರ, ಕಾಂಗ್ರೆಸ್‌ನಿಂದ ಮಾಲಾ ನಾರಾಯಣರಾವ್ ಮತ್ತು ಜೆಡಿಎಸ್‌ನಿಂದ ಸೈಯದ್ ಅಶ್ರಬ್ ಅಲಿಖಾನ್ ಸ್ಪರ್ಧಿಸಲಿದ್ದಾರೆ. ಏಪ್ರಿಲ್‌ 17ರಂದು ಮತದಾನ ನಡೆಯಲಿದ್ದು, ಮೇ 2ರಂದು ಮತ ಏಣಿಕೆ ನಡೆಯಲಿದೆ.


ಇದನ್ನೂ ಓದಿ: ಮಸ್ಕಿ ಬೆವರು ಬೆಂಗಳೂರಿನಲ್ಲಿ: ಬಸವಕಲ್ಯಾಣದಲ್ಲಿ ನಾರಾಯಣರಾವ್ ಸರಳತೆ ಉಳಿಯುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...