Homeಅಂತರಾಷ್ಟ್ರೀಯಅಮೆರಿಕಾದ ಜಿಲ್ಲಾ ನ್ಯಾಯಾಲಯದ ಜಡ್ಜ್ ಆಗಲಿರುವ ಭಾರತೀಯ ಮೂಲದ ರೂಪಾ ರಂಗ

ಅಮೆರಿಕಾದ ಜಿಲ್ಲಾ ನ್ಯಾಯಾಲಯದ ಜಡ್ಜ್ ಆಗಲಿರುವ ಭಾರತೀಯ ಮೂಲದ ರೂಪಾ ರಂಗ

- Advertisement -
- Advertisement -

ಭಾರತ ಮೂಲದ ಇಂಡಿಯನ್-ಅಮೆರಿಕನ್ ರೂಪಾ ರಂಗ ಪುಟ್ಟಗುಂಟಾ ಅವರನ್ನು ಫೆಡರಲ್ ನ್ಯಾಯಾಧೀಶರನ್ನಾಗಿ ನೇಮಿಸುವ ಉದ್ದೇಶವನ್ನು ಅಮೆರಿಕ ಅಧ್ಯಕ್ಷ ಜೋ ಬಿಡನ್ ವ್ಯಕ್ತಪಡಿಸಿ, ನಾಮನಿರ್ದೇಶನ ಮಾಡಿದ್ದಾರೆ. ನ್ಯಾಯಾಂಗದ 10 ಉನ್ನತ ಸ್ಥಾನಗಳಿಗೆ ಅಧ್ಯಕ್ಷರು ನಾಮನಿರ್ದೇಶನ ಮಾಡಿದ್ದು, ಅದರಲ್ಲಿ ಭಾರತೀಯ-ಅಮೆರಿಕನ್, ಆಫ್ರಿಕನ್-ಅಮೆರಿಕನ್ ಮತ್ತು ಮುಸ್ಲಿಂ ಅಮೆರಿಕನ್ ಅಭ್ಯರ್ಥಿಗಳು ಇದ್ದಾರೆ.

10 ಫೆಡರಲ್ ಸರ್ಕ್ಯೂಟ್ ಮತ್ತು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ಹುದ್ದೆಗಳಿಗೆ ಮತ್ತು ಒಂದು ಕೊಲಂಬಿಯಾ ಜಿಲ್ಲೆಯ ಸುಪೀರಿಯರ್ ಕೋರ್ಟ್ ನ್ಯಾಯಾಧೀಶ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಲಾಗಿದೆ.

ಈ ಅರ್ಹ ಅಭ್ಯರ್ಥಿಗಳು ತಮ್ಮ ಹಿನ್ನೆಲೆ ಮತ್ತು ವೃತ್ತಿಪರ ಅನುಭವದಲ್ಲಿ ಅಮೆರಿಕಾದ ಜನರ ಸಂಪೂರ್ಣ ವೈವಿಧ್ಯತೆಯನ್ನು ಪ್ರತಿಬಿಂಬಿಸಬೇಕು ಎಂಬುದು ಅಧ್ಯಕ್ಷರ ಆಳವಾದ ನಂಬಿಕೆ ಎಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಅತ್ಯಾಚಾರ ಮತ್ತು ಬ್ಲ್ಯಾಕ್‌ಮೇಲ್‌‌‌‌: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ವಿರುದ್ದ ಪ್ರಕರಣ

ಯುಎಸ್ ಸೆನೆಟ್ ದೃಢಪಡಿಸಿದರೆ, ನ್ಯಾಯಾಧೀಶೆ ರೂಪಾ ರಂಗ ಪುಟ್ಟಗುಂಟಾ ಅಮೆರಿಕಾದ ಜಿಲ್ಲಾ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸಿದ ಮೊದಲ ಏಷ್ಯನ್ ಅಮೆರಿಕನ್ ಮತ್ತು ಪೆಸಿಫಿಕ್ ಐಲ್ಯಾಂಡರ್ (AAPI) ಮಹಿಳೆಯಾಗಲಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.

ರೂಪಾ ರಂಗ ಪುಟ್ಟಗುಂಟಾ ಅವರು 2007 ರಲ್ಲಿ ಓಹಿಯೋ ಸ್ಟೇಟ್ ಮೊರಿಟ್ಜ್ (Ohio State Moritz) ಕಾಲೇಜ್ ಆಫ್ ಲಾದಿಂದ ಪದವಿ ಪಡೆದಿದ್ದಾರೆ.  2008 ರಿಂದ 2010 ರವರೆಗೆ ವಾಷಿಂಗ್ಟನ್ ಡಿ.ಸಿ. ಸುಪೀರಿಯರ್ ಕೋರ್ಟ್‌ನ ನ್ಯಾಯಾಧೀಶ ವಿಲಿಯಂ ಎಂ. ಜಾಕ್ಸನ್‌ಗೆ ಕಾನೂನು ಸಹಾಯಕಿಯಾಗಿ ತಮ್ಮ ಕಾನೂನು ವೃತ್ತಿಜೀವನವನ್ನು ಪ್ರಾರಂಭಿಸಿದರು, ಜೊತೆಗೆ 2010 ರಿಂದ 2011 ರವರೆಗೆ ಡಿ.ಸಿ. ಮೇಲ್ಮನವಿ ನ್ಯಾಯಾಲಯದ ಹಿರಿಯ ನ್ಯಾಯಾಧೀಶೆಯಾಗಿದ್ದರು.

ನ್ಯಾಯಾಧೀಶೆ ಪುಟ್ಟಗುಂಟಾ ಪ್ರಸ್ತುತ ವಾಷಿಂಗ್ಟನ್ ಡಿ.ಸಿ. ಬಾಡಿಗೆ ವಸತಿ ಆಯೋಗದ ಆಡಳಿತಾತ್ಮಕ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2019 ರಲ್ಲಿ ಆಯೋಗಕ್ಕೆ ಸೇರುವ ಮೊದಲು, ನ್ಯಾಯಾಧೀಶೆ ಪುಟ್ಟಗುಂಟ ಅವರು 2013 ರಿಂದ 2019 ರವರೆಗೆ ಸ್ವಂತ ಪ್ರಾಕ್ಟೀಸ್ ಮಾಡುತ್ತಿದ್ದರು.


ಇದನ್ನೂ ಓದಿ: `1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...